ವಿಷಯದ ವಿವರಗಳಿಗೆ ದಾಟಿರಿ

Archive for

24
ಡಿಸೆ

ಕೇವಲ ಬ್ರಾಹ್ಮಣರ ಟೀಕೆಗೆ ಮಾತ್ರ ಮೀಸಲೇ ಈ ಪತ್ರಿಕೆ?

– ವಿದ್ಯಾ ಕುಲಕರ್ಣಿ

ಬ್ರಾಹ್ಮಣನವೆಂಬರ್ 18 ನೇ ತಾರೀಖಿನಿಂದ ಇವತ್ತಿನ ವರೆಗೆ ವಾತಾ೯ಭಾರತಿ ಪತ್ರಿಕೆಯಲ್ಲಿನ ಅಂಕಣಗಳನ್ನು ನಾನು ಓದುತ್ತಿದ್ದೇನೆ. ಸುಮಾರು ನಾಲ್ಕೈದು ಅಂಕಣಗಳು ಕಾರಣವಿಲ್ಲದೇ ಬ್ರಾಹ್ಮಣರ ಟೀಕೆಯನ್ನು ಮಾಡಿವೆ. ಯಾಕೆ ಹೀಗೆ ಇವರೆಲ್ಲ ಕಾರಣವಿಲ್ಲದೇ ಬ್ರಾಹ್ಮಣರನ್ನು ಹುರಿದು ಮುಕ್ಕುತ್ತಿದ್ದಾರೆ ? ಮನನೊಂದು ಈ ಲೇಖನ ಬರೆಯುತ್ತಿದ್ದೇನೆ.

ಯಾವ ಲೇಖನಗಳಲ್ಲಿ ಬ್ರಾಹ್ಮಣರನ್ನು ಎಳೆದು ತರುವ ಅವಶ್ಯಕತೆಯೇ ಇಲ್ಲವೋ ಅಲ್ಲೆಲ್ಲ ವಿನಾಕಾರಣ ಬ್ರಾಹ್ಮಣರನ್ನು ಎಳೆದು ತಂದು ಗೂಬೆ ಕೂರಿಸಿದ್ದಾರೆ . ಕೆಳಗಿನ ಉಧಾಹರಣೆಗಳಿಂದ ನೀವಿದನ್ನು ತಿಳಿಯಬಹುದು.

1) ವಿಜಯಾ ಮಹೇಶ್ ಎಂಬುವವರು ‘ ರಾಜ ಕನಕನಾಯಕ ಕನಕದಾಸನಾದ ಕಥೆ’ ಎಂಬ ಅಂಕಣದಲ್ಲಿ ಕನಕದಾಸರ ಕೃತಿಗಳ ಬಗ್ಗೆ ವಿಮಶಾ೯ತ್ಮಕವಾಗಿ ಬರೆಯಬಹುದಿತ್ತು. ಆ ಮೂಲಕ ಕನಕರ ಕೆಲವು ಕೃತಿಗಳ ಬಗ್ಗೆ ಸಾಮಾನ್ಯ ಜನತೆಗೆ ವಿಷಯ ತಿಳಿಯುತ್ತಿತ್ತು. ಹೆಚ್ಚಿನ ಜನ ಕನಕರ ಕೃತಿಯಾದ ‘ರಾಮಧಾನ್ಯ ಚರಿತೆ’ಯನ್ನು ‘ರಾಮಧ್ಯಾನ ಚರಿತೆ’ ಎಂದು ತಪ್ಪಾಗಿ ಓದುತ್ತಾರೆ. ಇನ್ನು ಈ ಕೃತಿಗೆ ಅಷ್ಟಾಗಿ ವಿಮಶೆ೯ ಬಂದಿಲ್ಲವೆಂದು ಓದುಗ ವಲಯದಲ್ಲಿ ಅಪಸ್ವರವಿದೆ. ಈ ಎಲ್ಲವನ್ನು ಲೇಖಕಿ ಈ ಅಂಕಣದಲ್ಲಿ ವಿಮಶಿ೯ಸಬಹುದಿತ್ತು. ಆದರೆ ಇವರು ತಮ್ಮ ಲೇಖನವನ್ನು ಕನಕರ ಕೃತಿ ವಿಮಶೆ೯ಗೆ ಅಥವಾ ಅವರ ಜೀವನ ವಿಮಶೆ೯ಗೆ ಮೀಸಲಿಡದೇ ಕೇವಲ ಬ್ರಾಹ್ಮಣರ ಟೀಕೆಗೆ ಮೀಸಲಾಗಿರಿಸಿದ್ದಾರೆ. ಅವರು ಹೇಳುತ್ತಾರೆ ; ಕೃಷ್ಣದೇವರಾಯನ ಒಂದು ಯುದ್ಧದಲ್ಲಿ ಕನಕರ ಅಪಾರ ಶ್ರಮದಿಂದ ಸೋಲುವ ಹಂತದಲ್ಲಿದ್ದ ರಾಯ ಗೆಲುವು ಸಾಧಿಸಿದನಂತೆ.ಗೆಲುವಿನ ಸುದ್ದಿ ಕೇಳಿದ ವ್ಯಾಸರಾಯರು ಕನಕನನ್ನು ಯಾವುದೇ ರೀತಿಯಿಂದ ಗೌರವಿಸದೇ ಇತ್ತ ಕೃಷ್ಣದೇವರಾಯನೂ ಗೌರವಿಸದೆ ಕನಕರು ಬುದ್ಧಿಭ್ರಮಣರಾದರಂತೆ.

ಮತ್ತಷ್ಟು ಓದು »