Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ
ಮುಂದಿನ ಹಾದಿ
ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.
ಸಲಿಂಗ ಕಾಮ ಕಾನೂನು ಬಾಹಿರ ಯಾಕೆ?
-ಬಾಲಚಂದ್ರ ಭಟ್
ಸಲಿಂಗ ಕಾಮದ ಬಗ್ಗೆ ಸುಪ್ರೀಮ್ ಕೋರ್ಟ್ ಕೊಟ್ಟ ಬಹಳ ಕಾರಣಗಳಿಗಾಗಿ ಹುಬ್ಬೇರಿಸುವಂತೆ ಮಾಡಿದೆ. ಬಹಳಷ್ಟು ಜನರು ತೀರ್ಪಿನ ಬೆಂಬಲಕ್ಕಿದ್ದರೆ, ಇನ್ನು ಕೆಲವರು ಇದು ಸಲಿಂಗಿಗಳ ಹಕ್ಕು ಚ್ಯುತಿ ಎಂದು ತರ್ಕಿಸುತ್ತಿದ್ದಾರೆ. ಮೂಲತಹ ಸಲಿಂಗ ಕಾಮವೆಂಬುದು ಪೌರಾತ್ಯ, ಹಾಗೂ ಅರಬ್ ದೇಶಗಳಲ್ಲಿ ನಿಷೇಧಕ್ಕೊಳಗಾಗಲು ಮುಖ್ಯ ಕಾರಣ ಅಲ್ಲಿನ ರಿಲಿಜಿಯನ್ ಸಂಸ್ಕೃತಿ. ಮುಸ್ಲೀಮ್ ಕ್ರಿಶ್ಚಿಯನ್ ಮತ್ತಿತರ ಅಬ್ರಾಹಮಿಕ್ ಧರ್ಮಗ್ರಂಥಗಳು ಸಲಿಂಗ ಕಾಮವನ್ನು ಧರ್ಮವಿರೋಧಿ ಎಂದು ಬೋಧಿಸುತ್ತವೆಯಾದ್ದರಿಂದ ಅದನ್ನು ಅಪರಾಧ ಎಂದು ಸ್ವೀಕರಿಸಲಾಗಿತ್ತು. ವೈಜ್ನಾನಿಕ ಎಂದು ಹೇಳಲ್ಪಡುವ ನಾಸ್ತಿಕರ ರಾಜಕೀಯ ಪಕ್ಷ ಕಮ್ಯುನಿಸ್ಮ್ ಕೂಡ ಸಲಿಂಗ ಕಾಮದ ಬಗೆಗೆ ಬೇರೆಯದೆ ನಿರ್ಧಾರವನ್ನು ಹೊಂದಿರಲಿಲ್ಲ. ಬದಲಾಗಿ ರಿಲಿಜಿಯನ್ ಗಳು ಕೊಟ್ಟ ತೀರ್ಪನ್ನೆ ಸಲಿಂಗಿಗಳ ಮೇಲೆ ಹೇರಿತು. ಆದರೆ ಕಾರಣದ ವ್ಯಾಖ್ಯಾನವನ್ನಷ್ಟೆ ಬದಲು ಮಾಡಿತು. ಇದು ‘ಅನಾಗರಿಕ’ ಎಂಬ ಕಾರಣಕ್ಕೆ ಸ್ಟಾಲಿನ್ ನ ರಾಜಕಾರಣದಲ್ಲಿ ಅಪರಾಧವೆಂದು ಪರಿಗಣಿಸಲಾಗಿತ್ತು. (ಅನಾಗರಿಕ ಎಂದು ತೀರ್ಮಾನಿಸುವಲ್ಲಿ ವೈಜ್ನಾನಿಕ ಧೋರಣೆಯೇ ಇಲ್ಲದಿದ್ದದ್ದು ಕಮ್ಯುನಿಸ್ಮ್ ನ ವೈಜ್ನಾನಿಕ ನಿಲುವನ್ನು ಅನುಮಾನಪಡುವಂತಾಗಿದೆ).
ಬೆಂಗಳೂರು ಸುಂದರವಾಗಬೇಕೇ – ಹಾಗಿದ್ದರೆ, ಒಂದು ಸಣ್ಣ SMS ಕಳುಹಿಸಿ!
- ನಿಮಗೆ ಬೆಂಗಳೂರಿನ ಕಿತ್ತು ಹೋಗಿರುವ ರಸ್ತೆಗಳನ್ನು ನೋಡಿ ಬೇಸರವಾಗಿದೆಯೇ?
- ನಿಮಗೆ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಚೆಲ್ಲಿರುವ ಕಸವನ್ನು ಕಂಡು ರೋಸಿ ಹೋಗಿದೆಯೇ?
- ಬೆಂಗಳೂರಿನಲ್ಲಿ BBMP ಕೆಲಸ ಮಾಡುತ್ತಿದೆಯೋ ಇಲ್ಲವೋ ಎನಿಸುತ್ತಿದೆಯೇ?
ಇದನ್ನೆಲ್ಲಾ ಸರಿಪಡಿಸಲು ನಾವು ಏನೂ ಮಾಡುವುದು ಬೇಡವೇ? ಎಲ್ಲಾ ಜವಾಬ್ದಾರಿಯನ್ನು BBMP ಮೇಲೆ ಹೊರಿಸಿ, ನಾವು ಮನೆಯಲ್ಲಿ ಕಣ್ಮುಚ್ಚಿ ಹಾಯಾಗಿ ನಿದ್ದೆ ಹೋದರೆ, ಎಲ್ಲವೂ ಸರಿ ಹೋಗುತ್ತದೆಯೇ? ಕನಿಷ್ಠ ಪಕ್ಷ ನಮ್ಮ ದೂರುಗಳನ್ನಾದರೂ BBMPಗೆ ತಲುಪಿಸುವುದನ್ನು ಮಾಡಿದ್ದೇವೆಯೇ? ಮನೆಯಲ್ಲೇ ಕುಳಿತು ಗೊಣಗಿದರೆ, ಗೋಳಾಡಿದರೆ, ಏನು ಪ್ರಯೋಜನ? ಅದನ್ನಾದರೂ ರಸ್ತೆಯಲ್ಲಿ ಮಾಡಿದರೆ ಸುದ್ದಿಯಾಗುತ್ತದೆ.
ನಮ್ಮೆಲ್ಲಾ ತೊಂದರೆಗಳನ್ನೂ ನಮ್ಮ ಮೇಯರ್ ಅವರಿಗೆ ತಿಳಿಸೋಣ. ಒಂದು ಸಣ್ಣ SMS ಕಳುಹಿಸಿದರೂ ಸಾಕು. ಅವರು, ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಜನರು ತಮ್ಮ ತೊಂದರೆಗಳನ್ನು ತಮಗೇ ನೇರವಾಗಿ ತಿಳಿಸಬಹುದೆಂದು ಹೇಳಿದ್ದಾರೆ.ಅವರು ಹೇಗೆ ಎಲ್ಲವನ್ನು ಸರಿಪಡಿಸುತ್ತಾರೋ ಗೊತ್ತಿಲ್ಲ. ಕನಿಷ್ಠಪಕ್ಷ ನಮ್ಮ ದೂರನ್ನಾದರೂ ಅವರಿಗೆ ತಿಳಿಸೋಣ.
ಸೆಕ್ಯುಲರ್ ಮೀಡಿಯಾದ ನವಕಣ್ಮಣಿ ’ಕೇಜ್ರಿವಾಲ್’
– ಪ್ರಹ್ಲಾದ್ ಜೋಷಿ
ಇನ್ನು 6 ತಿಂಗಳಲ್ಲಿಯೇ ಲೋಕಸಭಾ ಚುನಾವಣೆ ಬರಲಿದೆ ಬಹುತೇಕ ಎಲ್ಲ ಪಕ್ಷಗಳು ಇದಕ್ಕೆ ತಯಾರಿ ನಡೆಸಿವೆ, ದೇಶದ ೨ ಪಕ್ಷಗಳಾದ ಕಾಂಗ್ರೆಸ್ ಇಲ್ಲವೇ ಬಿಜೆಪಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿವೆ. ಕಾಂಗ್ರೆಸ್ಸಿನ ಜನ ವಿರೋಧಿ ನೀತಿಗಳು ಅಧಿಕಾರ ಹಿಡಿಯಲು ಮುಳುವಾಗಿದೆ, ಇನ್ನು ಬಿಜೆಪಿ ಮೋದಿಯನ್ನು ಅಖಾಡಕ್ಕೆ ಇಳಿಸುತ್ತಿದೆ ಇನ್ನು ಮೊನ್ನೆ ನಡೆದ ಚುನಾವಣಾ ಫಲಿತಾಂಶ ನೋಡಿದರೆ ಮೋದಿಯ ಕಾರ್ಯತಂತ್ರ ಫಲ ಕೊಟ್ಟಿದೆ, ಇದು ಇನ್ನು ಕಾಂಗ್ರೆಸ್ಸಗೆ ಚಿಂತೆಗಿಡುಮಾಡಿದೆ.ಮೋದಿಯ ಜನಪ್ರಿಯತೆ ಕಾಂಗ್ರೆಸ್ಸಿಗೆ ಚಿಂತೆ ಉಂಟು ಮಾಡಿದೆ, ಇಂತಹ ಸ್ಥಿತಿಯನ್ನು ಕಾಂಗ್ರೆಸ್ ಮೊದಲೇ ಊಹೆ ಮಾಡಿತ್ತು.
ಮೋದಿ ಮಾಡಿದ ಅಭಿವೃದ್ಧಿ ಯಾವಾಗ ಜನರ ತಲುಪಿತೋ ಯಾವಾಗ ಮೋದಿಯನ್ನು ಮುಸ್ಲಿಮರು ಬೆಂಬಲಿಸಿದರೋ ಕಾಂಗ್ರೆಸ್ ನಾಯಕರು ಸಣ್ಣದಾಗಿ ಬೆವರತೊಡಗಿದರು, ಮೋದಿಯ ಸಮನಾದ ನಾಯಕರನ್ನು ಹುಡುಕತೊಡಗಿದರು, ರಾಹುಲನಿಂದ ಉತ್ತರ ಪ್ರದೇಶ ಅದಾಗಲೇ ಸೋತಾಗಿತ್ತು, ಮೋದಿಯ ಮುಂದೆ ರಾಹುಲ್ ನಿಲ್ಲುವುದಿಲ್ಲ ಎಂಬುದು ಕಾಂಗ್ರೆಸ್ಸಿಗೆ ಚೆನ್ನಾಗಿ ಗೊತ್ತಿತ್ತು, ಕಾಂಗ್ರೆಸ್ಸಿನ ಹಗರಣಗಳು ಜನರನ್ನು ಕಾಂಗ್ರೆಸ್ಸಿನಿಂದ ದೂರಮಾಡುತ್ತಿದ್ದವು, ಕಾಂಗ್ರೆಸ್ ಒಬ್ಬ ಸಮರ್ಥ ನಾಯಕನಿಗೆ ಹುಡುಕುತ್ತಿತ್ತು ಆಗ ಕಂಡವರೇ ಅರವಿಂದ ಕೇಜ್ರಿವಾಲ್.
ಸೆಮಿಫೈನಲ್ ಮತ್ತು ಫೈನಲ್
-ನವೀನ್ ನಾಯಕ್
ಭಾರತದ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚರಾಜ್ಯಗಳ ಚುನಾವಣೆ ಹಲವು ಹೊಸ ವಿಚಾರಗಳನ್ನು ತೆರೆದಿಟ್ಟಿದೆ.
1) ನೋಟ ( none of the above ) ಬಳಸಲು ಮೊದಲು ಶುರು ಮಾಡಿದ್ದು.
2) ಜನಲೋಕಪಾಲ್ ಹೋರಾಟದಿಂದ ಬಂದ ರಾಜಕೀಯ ಪಕ್ಷ ಆಪ್
3) ಇನ್ನಾರು ತಿಂಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳಿಗೆ ಪೂರ್ವ ತಯಾರಿಗೆ ಜನರ ನಾಡಿ ಮಿಡಿತ ತಿಳಿಯಲು ಸಿಕ್ಕ ಒಂದು ಅವಕಾಶ.
4) ಮೋದಿ ಮತ್ತು ಕಾಂಗ್ರೆಸ್ ಹಣಾಹಣಿ.
ಇಡೀ ದೇಶದ ಪ್ರಜೆಗಳನ್ನು ಡಿಸೆಂಬರ್ 8 ಕ್ಕೆ ಗಮನೀಯವಾಗುವಂತೆ ಮಾಡಿದ್ದು ಈ ನಾಲ್ಕು ಕಾರಣಗಳಿಗಾಗಿ. ಪ್ರಸಕ್ತ ರಾಜಕಾರಣದ ವೈಫಲ್ಯದಿಂದಾಗಿ ಹೈರಾಣಾಗಿರುವ ಜನರು ರಾಜಕೀಯಕ್ಕೆ ಯಾವ ಪಾಠ ಕಲಿಸಬಹುದೆಂದು ಎಲ್ಲರೂ ತಿಳಿಯಲು ಬಯಸುತಿದ್ದರು. ಮತದಾರ ಪ್ರಭು ಇಲ್ಲಿ ಯಾವ ಅಂಶ ಮುಖ್ಯವಾಗಿ ಗಣನೆಗೆ ತೆಗೆದುಕೊಳ್ಳಬಹುದು, ಆತನ ಸಧ್ಯದ ಮನಸ್ಥಿತಿ ಏನು. ಇದು ಆಯಾ ರಾಜ್ಯಕ್ಕೆ ಸಂಬಂದಪಟ್ಟರೂ ದೇಶಕ್ಕೆ ಖಂಡಿತಾ ಮೇಲಿನ ನಾಲ್ಕು ಕಾರಣಗಳಿಗಾಗಿ ಮಾರ್ಗದರ್ಶಿಯಾಗಿದೆ.
1) ನೋಟ- ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಸುಪ್ರೀಂ ತೀರ್ಪಿನ ಅನ್ವಯ ವೋಟಿಂಗ್ ಮೆಷೀನಲ್ಲಿ ಬಳಸಲಾಯಿತು. ಇದೊಂದು ಕ್ರಾಂತಿಕಾರಕ ಬದಲಾವಣೆಯಾದರೂ ಅಭ್ಯರ್ಥಿಗಳ ಮೇಲೆ ಇದರ ಪ್ರಭಾವ ಬೀರದಂತಿದೆ. ಚುನಾವಣ ಆಯೋಗ ಇದನ್ನು ಬೆಲೆ ಇಲ್ಲದ ಮತಗಳು ಎಂದು ಪರಿಗಣಿಸಿವೆ. ಏಕೆಂದರೆ ನೋಟದ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನಗಳನ್ನು ಆಯೋಗ ಕಂಡುಕೊಂಡಿಲ್ಲ. ಅದೇನೆ ಇರಲಿ, ಇದರಿಂದ ನಿಂತಿರುವವರೆಲ್ಲ ಕಳ್ಳರೇ ನಂಗೆ ಯಾರೂ ಇಷ್ಟವಿಲ್ಲದ ಕಾರಣ ಮತದಾನ ಮಾಡುತ್ತಿಲ್ಲ ಎಂದು ನೆಪವೊಡ್ಡಿ ನಿರ್ಲಕ್ಷ್ಯವಹಿಸುತಿದ್ದ ಸುಶಿಕ್ಷಿತರ ಪ್ರತಿಕ್ರಿಯೆ ತಿಳಿಯಬಹುದಿತ್ತು. ನಾಲ್ಕು ರಾಜ್ಯದಲ್ಲಿ 11.53 ಕೋಟಿ ಮತ ಚಲಾವಣೆಯಾಗಿದೆ ಅದರಲ್ಲಿ 1.31 ಶೇಕಡಾ ಮತದಾರರು ಈ ವ್ಯವಸ್ತೆಯನ್ನು ಬಳಸಿದ್ದಾರೆ.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ
370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6 ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988, ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.
ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.
ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು
– ರಾಕೇಶ್ ಶೆಟ್ಟಿ
ಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.
ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
– ಮು.ಅ ಶ್ರೀರಂಗ, ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧ 
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :
ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ. ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು 
ಕಥೆ: ಸ೦ದರ್ಶನ
– ಗುರುರಾಜ ಕೊಡ್ಕಣಿ,ಯಲ್ಲಾಪುರ
ಪ್ರಕಾಶ್ ಹೊರಟಿರಾ ಇ೦ಟರ್ವ್ಯೂ ಗೆ ..? ’ಎ೦ದು ಕೇಳಿದರು ಬಾಸ್ ಪ್ರಕಾಶನಿಗೆ,
’ಯಸ್ ಬಾಸ್,ಆನ ದಿ ವೆ’ ಎ೦ದ ಪ್ರಕಾಶ ,ಬೈಕಿನ ಪಕ್ಕೆಗೊ೦ದು ಒದೆಯುತ್ತಾ…
’ಓಕೆ .ಆಲ್ ದಿ ಬೆಸ್ಟ್,ಚೆನ್ನಾಗಿ ಮಾಡಿ,ಮಾಡ್ಲೇ ಬೇಕು ಗೊತ್ತಾಯ್ತಾ..’? ಎ೦ದರು ಬಾಸ್.
’ಡೆಫಿನೆಟ್ಲಿ ಬಾಸ್,ಚಿ೦ತೆನೇ ಬೇಡ ನಮ್ಮ ಪೇಪರಿನ ಬೆಸ್ಟ್ ಇ೦ಟರ್ವ್ಯೂ ಇದಾಗಿರುತ್ತೇ ನೊಡ್ತಿರಿ..’ ಎ೦ದವನೇ ಅಕ್ಸಲರೇಟರ್ ಹೆಚ್ಚಿಸಿ ,ಸೊ೦ಯ್ಯನೇ ಹೊರಟ.
ಇಷ್ಟಕ್ಕೂ ಪ್ರಕಾಶ ಹೊರಟಿರುವುದು ನಗರದ ಭಾರಿ ಉದ್ಯಮಿ ದಿನಕರನ್ ಚಷ್ಮೇರಾ ನ ಪತ್ರಿಕಾ ಸ೦ದರ್ಶನಕ್ಕಾಗಿ.ದಿನಕರನ್ ಚಷ್ಮೇರಾ: ಆ ಹೆಸರೇ ಒ೦ದು ಸ೦ಚಲನ .ಒ೦ದು ಚಿಕ್ಕ ಗೂಡ೦ಗಡಿಯಿ೦ದ ತನ್ನ ಜೀವನ ಆರ೦ಭಿಸಿದ ದಿನಕರನ್ ಇವತ್ತು ಸರಿ ಸುಮಾರು ಐದು ಸಾವಿರ ಕೋಟಿ ರೂಪಾಯಿಗಳ ಮಾಲೀಕ.ಇಡಿ ದೇಶದ ತು೦ಬೆಲ್ಲಾ ಆತನ ಉದ್ದಿಮೆಗಳಿವೆ.ಆತ ಯಾವ ಉದ್ದಿಮೆಗೆ ಕೈ ಹಾಕಿದರೂ ಸೋಲು ಕ೦ಡವನಲ್ಲ.ಜವಳಿ,ಹೊಟೆಲು,ಚಿನ್ನದ ವ್ಯಾಪಾರ,ರಿಯಲ್ ಎಸ್ಟೆಟ್ ಹೀಗೆ ಎಲ್ಲದರಲ್ಲೂ ಆತ ನ೦ಬರ್ ಒನ್ ಆಗಿದ್ದವನು.ಈಗ ತನ್ನ ಕೆಲಸದಿ೦ದ ಸ್ವಯ೦ ನಿವೃತ್ತನಾಗಿದ್ದಾನೆ.ಈಗ ತನ್ನ ಕೆಲಸದಿ೦ದ ಸ್ವಯ೦ ನಿವೃತ್ತನಾಗಿದ್ದಾನೆ. ಅವನ ಉದ್ದಿಮೆಗಳನ್ನೆಲ್ಲಾ ಈಗ ಅವನ ಮಗ ಕುಲಸೇಕರನ್ ನೋಡಿಕೊಳ್ಳುತ್ತಿದ್ದಾನೆ
ದೀಪವೂ ನಿನ್ನದೇ ಗಾಳಿಯೂ ನಿನ್ನದೇ ಆರದಿರಲಿ ಬೆಳಕೂ
– ಮು.ಅ. ಶ್ರೀರಂಗ,ಬೆಂಗಳೂರು
ನಾವುಗಳೆಲ್ಲರೂ “ಭೂತದ ಬಂಗಲೆ”ಯೊಳಗೆ ಬಂಧಿತರಾಗಿರುವಂತಹ ವ್ಯಕ್ತಿಗಳು. ಸೆಕೆಂಡು ಸೆಕೆಂಡುಗಳು ಜಾರಿದಂತೆ “ವರ್ತಮಾನ’ ಕಳೆದು “ಭೂತದ ಉಗ್ರಾಣಕ್ಕೆ “ಸೇರಿಹೋಗುತ್ತದೆ ಗೋಪಾಲ ಕೃಷ್ಣ ಅಡಿಗರ ಕವಿತೆಯ ಈ ಸಾಲು –. “ವರ್ತಮಾನ ಪತ್ರಿಕೆಯ ತುಂಬಾ ಭೂತದ ಸುದ್ದಿಗಳೇ” — ಆಗಾಗ ನೆನಪಿಗೆ ಬರುತ್ತಿರುತ್ತದೆ. ನಮ್ಮೆಲ್ಲರ ನೆನಪಿನ ಪೆಟ್ಟಿಗೆ ತೆರೆದಿಟ್ಟರೆ ಕೆಲವು ಸಿಹಿ ಹಲವು ಕಹಿ ನೆನಪುಗಳು ಹೊರಕ್ಕೆ ಬರಲು ನಾ ಮುಂದು ತಾ ಮುಂದು ಎಂದು ಪೈಪೋಟಿ ನಡೆಸುತ್ತವೆ. ನನ್ನ ಆ ಪೆಟ್ಟಿಗೆ ತರೆದು ಒಂದಷ್ಟನ್ನು ನಿಮ್ಮ ಜತೆ ಹಂಚಿಕೊಳ್ಳಬೇಕೆಂಬ ಆಸೆಯ ಫಲವೇ ಈ “ನಿನ್ನೆಗೆ ನನ್ನ ಮಾತು”.
ಸುಮಾರು ಮೂವತ್ತು ವರ್ಷಗಳ ಹಿಂದೆ ನಾನು ರಾಮನಗರದಲ್ಲಿ ಕೆಲಸ ಮಾಡುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ಹೇಳಿದ “we are all misplaced in our life”ಎಂಬ ಮಾತು ನನಗೆ ಆಗಾಗ ನೆನಪಿಗೆ ಬರುತ್ತಿರುತ್ತದೆ. ಇದು ಒಂದು ರೀತಿಯಲ್ಲಿ “ಅತೃಪ್ತಿಯ” ಸಂಕೇತವಾಗಿರಲೂಬಹುದು. ಈ ಅನುಮಾನದ ಪಿಶಾಚಿ ನಮ್ಮನ್ನು ಕಾಡದಿದ್ದರೆ ಆರಾಮವಾಗಿರಬಹುದು. ಅದೇ ಸರಿ ಎಂದು ಅನಿಸುತ್ತದೆ. ಆದರೆ ಆ ಅತೃಪ್ತಿ ನಮ್ಮ ಮುಂದಿನ ಸಾಧನೆಗೆ,ದಾರಿ ದೀಪವಾಗಬೇಕೇ ಹೊರತು ಇತರರ ಅಭಿವೃದ್ದಿಯನ್ನು ಕಂಡು ನಮ್ಮನ್ನು ನಾವೇ ಸುಟ್ಟಿಕೊಳ್ಳುವಂತಹ ಕಿಚ್ಚಾಗಬಾರದು.





