ವಿಷಯದ ವಿವರಗಳಿಗೆ ದಾಟಿರಿ

Archive for

4
ಡಿಸೆ

Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧

ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್

Jammu Kashmir- Debate on Article 370ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !

ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.

ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.

ಮತ್ತಷ್ಟು ಓದು »

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »

3
ಡಿಸೆ

6-5=2 ಚಿತ್ರ ವಿಮರ್ಶೆ

-ಡಾ.ಅಶೋಕ್ ಕೆ ಆರ್

6-5=2ಎರಡು ವಾರದ ಮುಂಚೆ 6-5=2 ಎಂಬ ವಿಚಿತ್ರ ಹೆಸರಿನ ಚಿತ್ರದ ಪೋಸ್ಟರನ್ನು ಪತ್ರಿಕೆಗಳಲ್ಲಿ ನೋಡಿ ನಕ್ಕುಬಿಟ್ಟಿದ್ದೆ! ‘ಏನ್ ಕರ್ಮಾರೀ ಏನೇನೋ ಹೆಸರಿಟ್ಟು ಫಿಲ್ಮ್ ತೆಗೀತಾರೆ’ ಎಂದು ನಗಾಡಿದ್ದೆ! ನಾಲ್ಕು ದಿನದ ಹಿಂದೆ ಮತ್ತೆ ಅದೇ ಚಿತ್ರದ ಜಾಹೀರಾತನ್ನು ಪತ್ರಿಕೆಯಲ್ಲಿ ನೋಡಿದಾಗ ಗಮನಿಸಿದೆ, ಸ್ವರ್ಣಲತಾ ಪ್ರೊಡಕ್ಷನ್ಸ್ ಮತ್ತು A video shot by Late Ramesh ಎಂಬೆರಡು ವಾಕ್ಯಗಳನ್ನು ಬಿಟ್ಟರೆ ಜಾಹೀರಾತಿನಲ್ಲಿ ಮತ್ತೇನೂ ಇರಲಿಲ್ಲ! ಅಲಲಾ! ಇದೇನೋ ಹೊಸ ಗಿಮಿಕ್ ಮಾಡ್ತಿದ್ದಾರಲ್ಲ ಈ ಫಿಲಮ್ನೋರು ಎಂಬ ಸಣ್ಣ ಕುತೂಹಲ ಹುಟ್ಟಿತು. ನಿರ್ದೇಶಕರ ಹೆಸರಿಲ್ಲ, ತಂತ್ರಜ್ಞರ ಹೆಸರಿಲ್ಲ, ಕಲಾವಿದರ ಹೆಸರಿಲ್ಲ, ನೈಜ ವೀಡೀಯೋವೊಂದು ದೊರಕಿದ್ದು ಅದನ್ನೇ ಚಿತ್ರಮಂದಿರದಲ್ಲಿ ಪ್ರದರ್ಶಿಸುತ್ತಿದ್ದೇವೆ ಎಂಬ ಸಾಲುಗಳು ಬೇರೆ. ಮ್… ಇವರು ಮಾಡಿರೋ ಗಿಮಿಕ್ಕಿಗಾದರೂ ಚಿತ್ರವನ್ನೊಮ್ಮೆ ನೋಡಬೇಕು ಎಂದು ನಿರ್ಧರಿಸಿದೆ.
ಎರಡು ಘಂಟೆಯ 6-5=2 ಚಿತ್ರ ಪ್ರೀತಿ ಪ್ರೇಮದ ಚಿತ್ರಗಳ ಗುಂಗಿನಲ್ಲಿ ಕಳೆದುಹೋದ ಪ್ರೇಕ್ಷಕರನ್ನು ಖಂಡಿತ ಹೊಡೆದೆಬ್ಬಿಸುತ್ತದೆ! ಬಹುಶಃ ಉಪೇಂದ್ರ ನಿರ್ದೇಶನದ ಶ್ ಚಿತ್ರದ ನಂತರ ಕನ್ನಡದಲ್ಲಿ ಬಂದ ಪರಿಣಾಮಕಾರಿ ‘ದೆವ್ವದ’ ಚಿತ್ರ ಎಂದರೆ ತಪ್ಪಲ್ಲ. ಕೊನೇಪಕ್ಷ ಶ್  ಸಿನಿಮಾದಲ್ಲೂ ಪ್ರೀತಿ ಪ್ರೇಮ ಕಾಮ ಹಾಡು ಫೈಟುಗಳಿದ್ದವು. ಈ ಚಿತ್ರದಲ್ಲಿ ಅದೂ ಇಲ್ಲ. ಆರು ಮಂದಿ ಟ್ರೆಕ್ಕಿಂಗಿಗೆಂದು ಹೋಗುತ್ತಾರೆ, ಕಾಡಿನ ಪರಿಸರ ಗಮನಿಸಿದರೆ ಗುಂಡ್ಯ, ಬಿಸಿಲೆ, ಕುಮಾರಪರ್ವತವಿರಬೇಕು. ಆ ಆರು ಜನರಲ್ಲಿ ಒಬ್ಬ ಸಿನಿಮಾದಲ್ಲಿ ಕ್ಯಾಮೆರಾಮೆನ್ ಆಗಬೇಕೆಂಬ ಕನಸನ್ನೊತ್ತವನು. ತನ್ನ ಗುರುವಿನಿಂದ ಒಂದು ಕ್ಯಾಮೆರಾ ತರುತ್ತಾನೆ ಟ್ರೆಕ್ಕಿಂಗಿನ ಪ್ರತಿ ಘಟ್ಟವನ್ನು ಚಿತ್ರಿಸಬೇಕೆಂಬ ಆಸೆಯೊಂದಿಗೆ. ಇಡೀ ಚಿತ್ರ ಆ ಕ್ಯಾಮೆರಾದಲ್ಲಿ ಚಿತ್ರಿತವಾದ ‘ನೈಜ’ ದೃಶ್ಯಗಳಷ್ಟೇ! ಟ್ರೆಕ್ಕಿಂಗಿನ ಸಮಯದಲ್ಲಿ ನಡೆದ ತಮಾಷೆ ಸಿಟ್ಟು ಸೆಡವು ದುರ್ಘಟನೆಗಳು ಅಲ್ಲಿನ ರಮ್ಯ ಪರಿಸರವೆಲ್ಲ ಲೇಟ್ ರಮೇಶನ ಕ್ಯಾಮೆರಾದಲ್ಲಿ ಹಸಿಹಸಿಯಾಗಿ ಬಂಧಿಯಾಗಿದೆ. ಚಾರಣಕ್ಕೆಂದು ಬಂದವರ ಮೇಲೆ ಆ ಪರಿಸರದಲ್ಲಿನ ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡುತ್ತವೆ. ಬದುಕುವರ್ಯಾರು, ಸಾಯುವವರ್ಯಾರು, ಕಾಣೆಯಾಗುವವರ್ಯಾರು ಎಂಬುದೇ ಚಿತ್ರದ ಹೂರಣ. ಕ್ರುದ್ಧ ಶಕ್ತಿಗಳು ಆಕ್ರಮಣ ಮಾಡಲು ಕಾರಣವೇನು ಎಂಬುದರ ವಿವರವಿಲ್ಲ, ಮನದಲ್ಲಿ ಮೂಡುವ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡುವ ಯಾವ ವಿವರಗಳೂ ಚಿತ್ರದಲ್ಲಿಲ್ಲ! ಯಾಕೆಂದರೆ ಸ್ವರ್ಣಲತಾ ಪ್ರೊಡಕ್ಷನ್ನಿನ ಜಾಹೀರಾತು ತಿಳಿಸುವಂತೆ ಇದು ಚಲನಚಿತ್ರವಲ್ಲ! ನೈಜ ವಿಡಿಯೋ ಅಷ್ಟೇ!!
2
ಡಿಸೆ

ಇಷ್ಟಕ್ಕೂ ,ಚುನಾವಣೆಯೆನ್ನುವುದೂ ಕ್ರಿಕೆಟ್ ಆಟದ೦ತಲ್ಲ ಎನ್ನುವುದು ನೆನಪಿರಲಿ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Voteಇನ್ನೇನು ಕೆಲವೇ ತಿ೦ಗಳುಗಳಲ್ಲಿ ರಾಜಕೀಯದ ಇನ್ನೊ೦ದು ಅ೦ಕಕ್ಕೆ ತೆರೆಬೀಳಲಿದೆ.ಚುನಾವಣೆಯೆ೦ಬ ಮತ್ತೊ೦ದು ಮಹಾಪರ್ವಕ್ಕೆ ದೇಶ ಸಜ್ಜಾಗುತ್ತಿದೆ.ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರಕ್ಕೆ ರಣತ೦ತ್ರಗಳನ್ನು ರೂಪಿಸಿವೆ,ಪ್ರಚಾರ ಆರ೦ಭಿಸಿವೆ.ಈ ಬಾರಿ ದೇಶದ ಜನತೆಯೂ ಅಷ್ಟೇ ಉತ್ಸಾಹದಿ೦ದ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ.ಸಾಮಾಜಿಕ ತಾಣಗಳಲ್ಲಿ ನೆಚ್ಚಿನ ನಾಯಕರ ಬಗ್ಗೆ ಬಿಸಿ ಬಿಸಿ ಚರ್ಚೆಗಳಾಗುತ್ತಿವೆ,ವಾಗ್ವಾದಗಳಾಗುತ್ತಿವೆ.ದಿನ ಪತ್ರಿಕೆಗಳಲ್ಲಿ ಪು೦ಖಾನುಪು೦ಖವಾಗಿ ಪ್ರತಿಯೊ೦ದು ರಾಜಕೀಯ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಪರ ವಿರೋಧ ಲೇಖನಗಳು ಪ್ರಕಟವಾಗುತ್ತಿವೆ.ಇರಲಿ,ದೇಶದ ಮಹಾನಾಯಕನ ಆಯ್ಕೆಗಾಗಿ ನಡೆಯುವ ಚುನಾವಣೆಯೆ೦ದ ಮೇಲೆ ಈ ಬಿಸಿ,ಈ ರೋಚಕತೆ ಇರಬೇಕಾದದ್ದೇ. ಮತದಾನವೆನ್ನುವುದು ಪ್ರಜೆಗಳ ವೈಯಕ್ತಿಕ ವಿಷಯವೆ೦ಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.ಗೋಪ್ಯತೆ ಕಾಪಾಡಿಕೊಳ್ಳುವ೦ತಹ ಮಹತ್ವದ ವಿಚಾರವೂ ಹೌದು.ಸುಮ್ಮನೆ ಮತದಾನದ ಗೌಪತ್ಯೆಯನ್ನು ಪಕ್ಕಕ್ಕಿಟ್ಟು ನಿಮ್ಮ ಸುತ್ತಮುತ್ತಲಿನವರನ್ನು ’ಈ ಬಾರಿ ಯಾರಿಗೆ ಮತದಾನ ಮಾಡಲಿದ್ದೀರಿ ಮತ್ತು ಆ ಪಕ್ಷ ಅಥವಾ ವ್ಯಕ್ತಿಗೆ ಮತ ಹಾಕಲು ಕಾರಣಗಳೇನು..’? ಎ೦ದು ಕೇಳಿ ನೋಡಿ.ನಿಮಗೆ ತರಹೇವಾರಿ ಉತ್ತರಗಳು ಸಿಗಬಹುದು.

ಮತ್ತಷ್ಟು ಓದು »

1
ಡಿಸೆ

‘ಹಾಚಿ’ !

– ಪ್ರಶಾಂತ್ ಯಾಳವಾರಮಠ

ಆ ದೇವರು ಪ್ರೀತಿ ವಿಶ್ವಾಸವನ್ನು ಎಲ್ಲಿ.. ಹೇಗೆ.. ಯಾಕೆ..ಸೃಷ್ಟಿಸುತ್ತಾನೋ.. ಅದು ಅವನಿಗೇ ಗೊತ್ತು!

ಪ್ರೊಫೆಸರ್ ಹೈದೆಸಬುರೋ ಯುನೋ ತಮ್ಮ ದೈನಂದಿನ ಕೆಲಸವಾದ ನೃತ್ಯ ಕಲಿಸುವುದನ್ನು ಮುಗಿಸಿ ಎಂದಿನಂತೆ ದಿನಾಲೂ ಬರುವ ಟ್ರೆನಿನಿಂದ ಸಂಜೆ ತಮ್ಮ ಮನೆಯ ಕಡೆಗೆ ಹೊರಟರು. ತಮ್ಮ ಸ್ಟೇಷನ್ ಬಂದಮೇಲೆ ಇಳಿದು ಇನ್ನೇನು ಹೊರಗೆ ಹೋಗಬೇಕೆನ್ನುವಸ್ಟರಲ್ಲಿ ಅವರ ಕಾಲುಗಳ ಹತ್ತಿರ ಒಂದು ಅಚ್ಚರಿ!! ಒಂದು ಮುದ್ದು ಮುದ್ದಾದ ನಾಯಿ ಮರಿ ಅವರ ಕಾಲುಗಳ ಹತ್ತಿರ ಓಡಾಡುತ್ತಿತ್ತು. ತುಂಬಾ ಮುದ್ದಾದ ನಾಯಿ ಮರಿಯ ಮುಗ್ದತೆ ಮತ್ತು ಸೌಂದರ್ಯಕ್ಕೆ ಮನಸೋತ ಪ್ರೊಫೆಸರ್ ಅದನ್ನ ಎತ್ತಿ ಮುದ್ದಾಡಿದರು. ಮುಂದೆ ಅಯ್ಯೋ ಇದು ಇದರ ಮಾಲಿಕನಿಂದ ಕಣ್ ತಪ್ಪಿಸಿಕೊಂಡಿರಬೇಕೆಂದು ಸ್ಟೇಷನ್ನಲ್ಲಿ ಎಲ್ಲರನ್ನು ವಿಚಾರಿಸಿದರು ಕೊನೆಗೆ ಸ್ಟೇಷನ್ ಮಾಸ್ತರ್ ಹತ್ತಿರನು ವಿಚಾರಿಸಿದರು ಯಾವುದೇ ಸುಳಿವು ಸಿಗಲಿಲ್ಲ. ಸ್ಟೇಷನ್ ಮಾಸ್ತರನು ಎಲ್ಲರೂ ಇಲ್ಲಿ ಊಟದ ಡಬ್ಬಿಗಳನ್ನು ಇಡುತ್ತಾರೆ ಅದ್ದರಿಂದ ನಾನು ಇದನ್ನು ಇಲ್ಲಿ ಇರಿಸಿಕೊಳ್ಳಲಿಕ್ಕೆ ಆಗೋದಿಲ್ಲ ಎಂದು ಹೇಳಿ ನೀವು ಬೇಕಾದರೆ ಇವತ್ತು ಇದನ್ನು ಮನೆಗೆ ತೆಗೆದುಕೊಂಡು ಹೋಗಿ ನಾಳೆ ಯಾರಾದರು ಇದರ ಮಾಲಿಕರು ಬರುತ್ತಾರೆನೋ ನೋಡೋಣ ಎಂದನು. ಅಸ್ಟು ಮುದ್ದಾದ ಆ ಮರಿಯೇನ್ನು ಅಲ್ಲಿಯೇ ಎಲ್ಲಾದರು ಬಿಟ್ಟು ಹೋಗಲಿಕ್ಕೆ ಪ್ರೊಫೆಸರ್ ಗೆ ಮನಸ್ಸಾಗಲಿಲ್ಲ. ಮರಿಯನ್ನು ತೆಗೆದುಕೊಂಡು ಮನೆಗೆ ಹೋದರು. ಆದರೆ ಮನೆಯಲ್ಲೊಂದು ತೊಂದರೆ! ಏನೆಂದರೆ ಪ್ರೊಫೆಸರ್ ಪತ್ನಿಗೆ ನಾಯಿಗಳು ಅಂದರೆ ಆಗ್ತಾ ಇರಲಿಲ್ಲ.ಇನ್ನು ಇ ಮರಿಯೇನ್ನು ಅವಳಿಗೆ ತಿಳಿಯದ ಹಾಗೆ ಬಚ್ಚಿಟ್ಟು ನಾಳೆ ಸ್ಟೇಷನ್ ಗೆ ತೆಗೆದುಕೊಂಡು ಹೋಗಿ ಅದರ ಮಾಲಿಕರಿಗೆ ಕೊಟ್ಟರಾಯಿತು ಎಂದು ತಿಳಿದರು. ನಿದಾನವಾಗಿ ಮನೆಯೊಳಗೇ ಹೋಗಿ ಇ ಮುದ್ದಾದ ಮರಿಯೇನ್ನು ಒಂದು ಮುಚ್ಚಳವಿಲ್ಲದ ಕಟ್ಟಿಗೆಯ ಬಾಕ್ಸ್ ನಲ್ಲಿ ಮಲಗಿಸಿದರು. ಆದರೆ ಆ ಮರಿ ಎಸ್ಟೊಂದು ಚೂಟಿಯಾಗಿತ್ತು ಅಂದರೆ ಕಟ್ಟಿಗೆಯ ಬಾಕ್ಸ್ ನಿಂದ ಹೊರಗೆ ಬಂದು ಬಿಡುತಿತ್ತು! ಅದನ್ನು ಮತ್ತೆ ಅದರಲ್ಲೇ ಬಚ್ಚಿಟ್ಟರು… ಅಷ್ಟರಲ್ಲಿ ಅವರ ಪತ್ನಿ ಅವರಲ್ಲಿಗೆ ಬಂದು ಊಟಕ್ಕೆ ಕರೆದಳು.. ಪ್ರೊಫೆಸರ್ ಊಟವಾದ ಮೇಲೆ ಮಲಗಲು ತೆರಳಿದರು. ಆ ನಾಯಿ ಮರಿಯು ರಾತ್ರಿ ಬಾಕ್ಸ್ ನಿಂದ ಹೊರಗೆ ಬಂದು ನೇರವಾಗಿ ಪ್ರೊಫೆಸರ್ ಮಲಗಿರುವ ಕೊನೆಗೆ ಹೋಗಲು ಅದರಬಗ್ಗೆ ಪ್ರೊಫೆಸರ್ ಪತ್ನಿಗೆ ತಿಳಿದು ಹೋಯಿತು. ಸಿಟ್ಟಿನಲ್ಲಿದ್ದ ಪತ್ನಿಗೆ ವಿಷಯ ತಿಳಿಸಿ ನಡೆದದ್ದನ್ನು ಹೇಳಿ ಕೇವಲ ಒಂದು ದಿನ ಅಷ್ಟೇ ಎಂದು ಸಮಜಾಯಿಸಿದರು.

ಮತ್ತಷ್ಟು ಓದು »