ವಿಷಯದ ವಿವರಗಳಿಗೆ ದಾಟಿರಿ

Archive for

1
ಜನ

ಕನ್ನಡದ ನಾಡಿಮಿಡಿತ ಅರಿತ ಕಥೆಗಾರ: ‘ನಾಡಿ’

– ರಾಘವೇಂದ್ರ ಅಡಿಗ ಎಚ್ಚೆನ್

೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ*ಮಡಿಕೇರಿಯಲ್ಲಿ ಬರುವ ಜನವರಿ 7 ರಿಂದ 9 2014ರ ವರೆಗೆ ನಡೆಯಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾಡಿನ ಖ್ಯಾತ ಸಾಹಿತಿ ನಾ. ಡಿಸೋಜರವರು ಆಯ್ಕೆಗೊಂಡಿದ್ದಾರೆ. ಸಾಮಾಜಿಕ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು ಇವರು ಸೃಷ್ಟಿಸಿರುವ ಅನೇಕ ಕಥೆ-ಕಾದಂಬರಿಗಳು ಜನಮಾನಸವನ್ನು ಸೂರೆಗೂಂಡಿವೆ. ಅದರಲ್ಲಿ ಕೆಲವಷ್ಟು ಚಲನಚಿತ್ರಗಳಾಗಿಯೂ ಹೆಸರು ಮಾಡಿವೆ. ಇಂತಹಾ ಅಪೂರ್ವ ಸಾಹಿತಿಯೊಬ್ಬರಿಗೆ ಕನ್ನಡ ಸಮ್ಮೇಳನದ
ಅಧ್ಯಕ್ಷಗಿರಿ ಪ್ರಾಪ್ತವಾದ ಹಿನ್ನೆಲೆಯಲ್ಲಿ ಅವರ ಬದುಕು-ಬರಹದ ಕುರಿತ ಕಿರುನೋಟವೊಂದು ಇಲ್ಲಿದೆ.*

ಈ ಬಾರಿ ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ನಡೆಯಲಿರುವ ಎಂಭತ್ತನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸಾಹಿತಿ ನಾ ಡಿಸೋಜಾರವರಿಗೆ ಈ ಮೂಲಕ ನನ್ನ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ.

ಕನ್ನಡ ಭಾಷೆ, ಸಾಹಿತ್ಯ ಉಳಿಯಬೇಕು. ಸರ್ಕಾರ ಕನ್ನಡ ಮಾದ್ಯಮವನ್ನು ಕಡ್ಡಾಯಗೊಳಿಸಬೇಕು,ಇದೇ ಮುಂತಾದ ಹೇಳಿಕೆಗಳನ್ನು ನೀಡುತ್ತಾ ತಾವು ಹಿಂದಿನಿಂದ ಆಂಗ್ಲ ಸಾಹಿತ್ಯ, ಭಾಷೆಗೆ ಕುಮ್ಮಕ್ಕು ನೀಡುತ್ತಿರುವ, ಜತೆಗೆ ಆಡಳಿತಾರೂಢ ಸರ್ಕಾರಗಳಿಂದ ತಮಗೆ ಬೇಕಾದ ಅನುಕೂಲಗಳನ್ನು ಪಡೆದುಕೊಳ್ಳುವ ಸಲುವಾಗಿ ತಮ್ಮನ್ನು ತಾವು ಸಾಹಿತಿಗಳೆಂದು ಬಿಂಬಿಸಿಕೊಳ್ಳುವ ಒಂದು ವರ್ಗವೇ ನಮ್ಮ ನಡುವಿರುವ ಈ ದಿನಗಳಲ್ಲಿ ತಾವು ಬದುಕಿ ಬಾಳಿದ ಮಲೆನಾಡಿನ ಐಸಿರಿಯ ನಡುವಿನ ಪುಟ್ಟ ಊರು ಸಾಗರದ ಸುತ್ತ ಮುತ್ತ ನಡೆವ ಬೆಳವಣಿಗೆಗಳಿಂದ ಸ್ಪೂರ್ತಿಗೊಂಡು ಅತಿ ಸಾಮಾನ್ಯ ವಸ್ತುವನ್ನಿಟ್ಟುಕೊಂಡು ಓದುಗರಮನಸ್ಸಿಗೆ ತಟ್ಟುವಂತೆ ಕಥೆ ಹೆಣೆಯಬಲ್ಲ ಜಾಣ ಕಥೆಗಾರರಾದ ನಾ.ಡಿಸೋಜಾರಂಥವರು ಯಾವುದೇ ಪ್ರಚಾರವನ್ನು ಬಯಸದೆ ತಮ್ಮ ಪಾಡಿಗೆ ತಾವು  ಕನ್ನಡದ ಕೆಲಸದಲ್ಲಿ ತೊಡಗಿರುವಂತಹವರೂ ನಮ್ಮೊಡನಿರುವುದು ನಮಗೆಲ್ಲರಿಗೂ ನಿಜಕ್ಕೂ ಖುಷಿಯ ಸಂಗತಿ. ಇಂತಹಾ ಅಪ್ಪಟ ಕನ್ನಡ ಪ್ರೇಮಿಯೊಬ್ಬರಿಗೆ ಈ ಬಾರಿ ಕನ್ನಡಮ್ಮನ ತೇರನ್ನೆಳೆಯುವ ಅವಕಾಶ ದೊರೆತಿರುವುದು ನಿಜಕ್ಕೂ ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ನಾ. ಡಿಸೋಜಾರವರ ಬದುಕು-ಬರಹಗಳ ಕುರಿತ ಸಂಕ್ಷಿಪ್ತ ನೋಟ ಇಲ್ಲಿದೆ.

ಮತ್ತಷ್ಟು ಓದು »