ವಿಷಯದ ವಿವರಗಳಿಗೆ ದಾಟಿರಿ

Archive for

5
ಜನ

ಮೋಕ್ಷದ ಹುಡುಕಾಟದಲ್ಲಿ ಕಳೆದುಹೋದ “ಸಿದ್ಧಾರ್ಥ”

– ಡಾ ಅಶೋಕ್ ಕೆ ಆರ್

Siddharthaಜರ್ಮನ್ ಲೇಖಕ ಹರ್ಮನ್ ಹೆಸ್ಸೆ (Hermann Hesse) 1922ರಲ್ಲಿ ಬರೆದ ಕಾದಂಬರಿ ‘ಸಿದ್ಧಾರ್ಥ’. ಹಲವು ವರುಷಗಳು ಕಳೆದ ನಂತರ ಪುಸ್ತಕವೊಂದರ ಕಾಪಿರೈಟ್ ಮುಗಿದುಹೋಗುತ್ತದೆ. ಅಂಥಹ ಪುಸ್ತಕಗಳನ್ನು ‘ಗುಟೆನ್ ಬರ್ಗ್’ ಎಂಬ ಅಂತರ್ಜಾಲ ತಾಣ ಮೊಬೈಲ್, ಟ್ಯಾಬ್ಲೆಟ್, ಕಂಪ್ಯೂಟರುಗಳಲ್ಲಿ ಓದಲನುಕೂಲವಾಗುವಂತೆ ಮಾಡುತ್ತಿದೆ. ‘ಗುಟೆನ್ ಬರ್ಗಿನ’ ಗೃಂಥಾಲಯದಲ್ಲಿ ಸಾವಿರಾರು ಪುಸ್ತಕಗಳು ಲಭ್ಯವಿದೆ. ‘ಸಿದ್ಧಾರ್ಥ’ ಎಂಬ ಶೀರ್ಷಿಕೆ ನೋಡಿ ‘ಬುದ್ಧ’ನ ಬಗೆಗೆ ಪಾಶ್ಚಿಮಾತ್ಯ ಚಿಂತನೆಯ ಪುಸ್ತಕವಿರಬೇಕು, ಪಶ್ಚಿಮದವರಿಗೆ ಕಂಡ ಬುದ್ಧನ ರೂಪ ಯಾವುದಿರಬೇಕೆಂಬ ಕುತೂಹಲದಿಂದ ಪುಸ್ತಕವನ್ನು ಓದಲಾರಂಭಿಸಿದೆ.

ಇಲ್ಲಿ ಬುದ್ಧನಿದ್ದಾನೆ; ಆದರವನು ‘ಸಿದ್ಧಾರ್ಥ’ನಲ್ಲ ‘ಗೌತಮ’. ಬುದ್ಧನನ್ನೇ ಧಿಕ್ಕರಿಸಿ ನಡೆಯುವ ಸಿದ್ಧಾರ್ಥನಿದ್ದಾನೆ. ಕಾದಂಬರಿಯ ನಾಯಕ ‘ಸಿದ್ಧಾರ್ಥ’ ಬ್ರಾಹ್ಮಣನೊಬ್ಬನ ಮಗ. ‘ಅರಿವು’ ಪಡೆದು ಮುಕ್ತಿ ಪಡೆಯಲೋಸಗ ಮನೆ ತೊರೆದು ಜ್ಞಾನಿಗಳೆಂದು ಹೆಸರಾದ ಸಮಾನರೊಡನೆ ಹೋಗುವ ಸಂಕಲ್ಪ ಮಾಡುತ್ತಾನೆ. ಸಿದ್ಧಾರ್ಥನ ತಂದೆ ಒಪ್ಪುವುದಿಲ್ಲ. ಸಿದ್ಧಾರ್ಥ ಹಟ ಬಿಡುವುದಿಲ್ಲ, ಅನುಮತಿ ಕೊಡುವವರೆಗೂ ನಿಂತ ಸ್ಥಳದಿಂದ ಅಲುಗಾಡುವುದಿಲ್ಲ. ಮಗನ ಕಾಠಿಣ್ಯವನ್ನು ನೋಡಿ ಬೆಚ್ಚಿ ಬೇಸರದಿಂದಲೇ ಮಗನನ್ನು ಆಶೀರ್ವದಿಸಿ ಕಳುಹಿಸುತ್ತಾರೆ. ತನ್ನ ಗೆಳೆಯ ಗೋವಿಂದನ ಜತೆಗೆ ಅರಿವಿನ ಪಯಣ ಪ್ರಾರಂಭಿಸುತ್ತಾನೆ. ಕೆಲವು ದಿನಗಳಲ್ಲೇ ಪಡೆದ ಜ್ಞಾನ ತನ್ನನ್ನು ತಾನೇ ಅರಿಯುವುದಕ್ಕೆ ಸಾಲುತ್ತಿಲ್ಲವೆನ್ನಿಸಿ ಮನೋಕ್ಷೋಬೆಗೊಳಗಾಗುತ್ತಾನೆ. ರಾಜತ್ವವನ್ನು ತೊರೆದು ಜ್ಞಾನೋದಯ ಪಡೆದ ಗೌತಮ ಬುದ್ಧನ ಹೆಸರು ಪ್ರಖ್ಯಾತವಾಗುತ್ತಿದ್ದ ಕಾಲವದು. ಗೆಳೆಯ ಗೋವಿಂದನ ಜೊತೆಗೆ ಬುದ್ಧನ ತತ್ವಗಳನ್ನರಿಯಲು ಹೊರಡುತ್ತಾನೆ ಸಿದ್ಧಾರ್ಥ. ಬುದ್ಧನ ಉಪದೇಶಗಳಿಂದ ಈರ್ವರೂ ಪ್ರಭಾವಿತರಾಗುತ್ತಾರೆ. ‘ಸಮಾನ’ರು ತಿಳಿಸಿಕೊಟ್ಟದ್ದಕ್ಕಿಂತ ಹೆಚ್ಚಿನ ಅರಿವು ಬೌದ್ಧ ಧರ್ಮದಲ್ಲಿದೆ ಎಂದು ಮನವರಿಕೆಯಾದರೂ ಸಿದ್ಧಾರ್ಥ ಬುದ್ಧನ ಶಿಷ್ಯನಾಗಲು ಆಶಿಸುವುದಿಲ್ಲ.

ಮತ್ತಷ್ಟು ಓದು »