ವಿಷಯದ ವಿವರಗಳಿಗೆ ದಾಟಿರಿ

Archive for

10
ಜನ

ಸಂಸ್ಕಾರ ಮತ್ತು ದಾಟು ಕಾದಂಬರಿಗಳಲ್ಲಿ ಜಾತಿ ಸಮಸ್ಯೆಗಳು

– ಮು ಅ ಶ್ರೀರಂಗ ಬೆಂಗಳೂರು

ದಾಟು - ಭೈರಪ್ಪಈ ಲೇಖನವನ್ನು ನಾನು ಭೈರಪ್ಪನವರ ಕಾದಂಬರಿಗಳನ್ನು ಕುರಿತ ವಿಮರ್ಶೆಗಳ ಲೇಖನಮಾಲೆ ಮುಗಿದ ನಂತರ ಬರೆಯೋಣವೆಂದುಕೊಂಡಿದ್ದೆ. ಆದರೆ ಆ ಲೇಖನಗಳ ಸರಣಿಯಲ್ಲಿ ಇನ್ನು ಚರ್ಚಿಸಬೇಕಾದ ಕಾದಂಬರಿಗಳು “ಆವರಣ” ಮತ್ತು “ಕವಲು” ಮಾತ್ರ. ಇವುಗಳಲ್ಲಿ ಜಾತಿಯ ಸಮಸ್ಯೆಗಳ ಪ್ರಸ್ತಾಪವಿಲ್ಲದಿರುವುದರಿಂದ ಈಗಲೇ ಬರೆಯುವುದು ಸೂಕ್ತವೆನಿಸಿದೆ.

ಸಂಸ್ಕಾರ ಮತ್ತು ದಾಟು ಕಾದಂಬರಿಗಳನ್ನು ಕುರಿತಂತೆ ನಡೆದ ಚರ್ಚೆಗಳು ಪ್ರಾರಂಭದಲ್ಲಿ ವಿಚಾರಗಳ ವಿನಿಮಯದಂತೆ ಕಂಡರೂ ನಂತರದಲ್ಲಿ ಕವಲು ದಾರಿ ಹಿಡಿದವು. ಇದಕ್ಕೆ ನನಗನಿಸುವಂತೆ ಬಹುಶಃ ಜಾತಿ ಸಮಸ್ಯೆಯನ್ನು ಸಾಹಿತ್ಯವು ಅರಿಯಲು ನಡೆಸುವ ಪ್ರಯತ್ನಕ್ಕೂ ಅದೇ ಸಮಸ್ಯೆಯನ್ನು ಆಧಾರ,ಸಿದ್ಧಾಂತ,ಊಹೆ,ತರ್ಕ ಇತ್ಯಾದಿಗಳ ಮೂಲಕ ಬಿಡಿಸಲು ಪ್ರಯತ್ನಿಸುವ ಮಾನವಿಕ ಶಾಸ್ತ್ರಗಳಿಗೂ ಇರುವ ಮೂಲಭೂತ ವ್ಯತ್ಯಾಸವನ್ನು ಮನಗಾಣಿಸುವುದರಲ್ಲಿ ಆ ಚರ್ಚೆಗಳು ನಡೆಯದೇ ಹೋದದ್ದು. ಇದುವರೆಗೆ ಮಾನವಿಕ ಶಾಸ್ತ್ರಗಳು ತಮ್ಮ ಅಧ್ಯಯನದ ಮೂಲಕ ಕಂಡುಕೊಂಡಿರುವ ನಮ್ಮ ಸಮಾಜದ ಬಗೆಗಿನ ತಿಳುವಳಿಕೆಗಳನ್ನು ಆಧರಿಸಿ ಆ ಚೌಕಟ್ಟಿಗೆ ಈ ಸಾಹಿತ್ಯ ಕೃತಿಗಳು ಹೊಂದುವುದಿಲ್ಲ ಎಂದು ಒಂದೇ ಏಟಿಗೆ ಪಕ್ಕಕ್ಕೆ ಸರಿಸುವುದನ್ನು ಸಾಹಿತ್ಯದ ಒಬ್ಬ ಓದುಗನಾಗಿ ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಮತ್ತಷ್ಟು ಓದು »