ವಿಷಯದ ವಿವರಗಳಿಗೆ ದಾಟಿರಿ

Archive for

15
ಜನ

ವಿಧಿ 370 – ಚರ್ಚೆ

– ಪ್ರವೀಣ್ ಪಟವರ್ಧನ್

Jammu Kashmir- Debate on Article 370ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು  ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.

ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?

ಮತ್ತಷ್ಟು ಓದು »