ವಿಷಯದ ವಿವರಗಳಿಗೆ ದಾಟಿರಿ

Archive for

17
ಜನ

ವಿಡಂಬನೆ:ಕಟ್ಟುವೆವು ಕಸದ ನಾಡೊಂದನು!

ತುರುವೇಕೆರೆ ಪ್ರಸಾದ್

dantavillada_kathegalu_nilumeಮೊನ್ನೆ ಮೊನ್ನೆ ನಿಧಾನಸೌಧದದಲ್ಲಿ ಮಂತ್ರಿಗಳೊಬ್ಬರು ತಮ್ಮ ಕಛೇರಿಯ ಗೋಡೆ ಒಡೆದ ಹಿನ್ನಲೆಯಲ್ಲಿ ಹಲವರು ಮತ್ಸದ್ದಿಗಳ ತರ್ಕ-ಕುತರ್ಕಗಳ ಸಾರಾಂಶ ಇಲ್ಲಿದೆ:

ಅನುಮಾನುಲು : ನಿಧಾನ ಸೌಧದ ಗೋಡೆ ಒಡೆದಿದ್ರಲ್ಲಿ ತಪ್ಪೇನೂ ಇಲ್ಲ. ನಾವು ಏನಾದ್ರೂ ಒಡುದ್ರೆ ದೊಡ್ಡ ಇಶ್ಯೂ ಮಾಡ್ತೀರಿ.ಆದ್ರೆ ನೀವು ದೊಡ್ ದೊಡ್ಡೋರು ಎಲ್ಲಾ ಉರುಳುಸ್ತಿದ್ರೂ ಕೇಳೋರೇ ಇಲ್ಲ..ಈಗ ಗೋಡೆ ಒಡೆದಿದ್ರಿಂತ ಏನು ಆಕಾಶ ತಲೆ ಮೇಲೆ ಬಿದ್ದಿದೆಯಾ?ಡಿಶ್ಕುಂ ಕುಮಾರ್ ನನ್ ರೂಂ ಮೇಲೆ ಕಣ್ ಹಾಕಿದ್ರು. ಅವರು ಗೋಡೆ ಒಡೀದೆ ಬಿಡ್ತಿದ್ರಾ? ಶತಶತಮಾನಗಳಿಂದ ಕಟ್ಟಿರೋ ಜಾತಿ, ಮತ,ಪಂಥಗಳ ಗೋಡೆಯನ್ನು ಒಡೀರಿ, ಎಲ್ಲಾ ಈಚೆ ಬನ್ನಿ  ಅಂತ ನಮ್ ಸಾಹಿತಿಗಳು ಹೇಳ್ತಾನೇ ಇರಲ್ವಾ? ನಾಲ್ಕು ಗೋಡೆ ಶಿಕ್ಷಣ ಅಂತ ಹೀಗಳೆಯಲ್ಲವಾ? ಏನೇ ಸುಧಾರಣೆ ಆದ್ರೂ ಮೊದ್ಲು ನಿಧಾನಸೌಧದಿಂದ ಆಗ್ಬೇಕು ಅಂತ ಹೇಳಲ್ವಾ? ಗೋಡೆ ಒಡೆಯೋದನ್ನೂ ಅಲ್ಲಿಂದಲೇ ಶುರು ಮಾಡಿದೀವಿ..ಇದೂ ಒಂದು ಆದರ್ಶ ಅಂತ ನಿಮಗ್ಯಾಕನಿಸಲ್ಲ..?

ಮತ್ತಷ್ಟು ಓದು »