ವಿಷಯದ ವಿವರಗಳಿಗೆ ದಾಟಿರಿ

Archive for

22
ಜನ

ನಾಯಕತ್ವದ ಬೆಲೆ

– ಮಧು ಚಂದ್ರ ಎಚ್ ಬಿ ಭದ್ರಾವತಿ

2007041912020501ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ  ವಿಧಾನ ಸಭೆಯ ಅಧಿವೇಶನ ನಡೆಯುತ್ತಿದ್ದ ಸಂಧರ್ಭದಲ್ಲಿ , ಸುವರ್ಣ ವಿಧಾನ ಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ರೈತ ವಿಠ್ಠಲ ಭೀಮಪ್ಪ ಅರಭಾವಿ ಆತ್ಮಹತ್ಯೆ ಮಾಡಿ ಕೊಂಡಿದ್ದು ನಿಮಗೆಲ್ಲ ತಿಳಿದೇ ಇದೆ. ಕಾರಣ ಸಹ ನಿಮಗೆ    ತಿಳಿದೇ ಇದೆ ಸರ್ಕಾರ ರೈತರ ಹೋರಾಟಕ್ಕೆ ಸೂಕ್ತ ಪರಿಹಾರ ಹುಡುಕದೆ , ಸ್ಪಂದಿಸಲು ವಿಳಂಬ ಮಾಡಿತು.ಅದಕ್ಕೆ ಸರ್ಕಾರ  ತೆತ್ತ ಬೆಲೆ ನೇಗಿಲ ಯೋಗಿಯ ಆತ್ಮಹತ್ಯೆ. ಇದು ಕೇವಲ ನಮ್ಮ ರಾಜ್ಯದಲ್ಲಿ ಅಲ್ಲ ಮಾನವರಿರುವ ಪ್ರತಿಯೊಂದು ಸ್ಥಳದಲ್ಲಿ ಸಮಸ್ಯೆ ಇದ್ದೆ ಇದೆ.

ನಮ್ಮಲ್ಲಿ ಸಮಸ್ಯೆಯನ್ನು ಅರಿತು, ಸ್ಪಂದಿಸಿ ಸೂಕ್ತ ಪರಿಹಾರ ಕಂಡು ಹಿಡಿಯುವ ಮಾರ್ಗ ಹುಡುಕುವುದು ದೊಡ್ಡದೊಂದು ಅನಾಹುತವಾದ ಮೇಲೆಯೇ.ಇದಕ್ಕೆ ಎಲ್ಲ ಕಾರ್ಯಕ್ಷೇತ್ರಗಳು, ವರ್ಗ ಮತ್ತು ಪರಿವಾರಗಳು ಬರುತ್ತವೆ. ಇದ್ದಕ್ಕೆ ಮುಖ್ಯ ಕಾರಣ  ನಾಯಕನ ದೂರ ದೃಷ್ಟಿ ಹಾಗು ಸಮಸ್ಯೆ ಬಗೆಹರಿಸುವ ಕಲೆಯ ಕೊರತೆ ಎನ್ನಬಹುದು. ಇಂದು ಕೇವಲ ಅಧಿಕಾರ ಸಿಕ್ಕರೆ ಸಾಕು ಎನ್ನುವ ನಾಯಕರು ಇರುವಾಗ ಇವೆಲ್ಲವೂ ದೂರದ ಮಾತೆ ಸರಿ.