ವಿಷಯದ ವಿವರಗಳಿಗೆ ದಾಟಿರಿ

Archive for

27
ಜನ

ಸೃಜನಶೀಲತೆಯಿಲ್ಲದ ಜನರ ಹಟವಿದು – ಡಬ್ಬಿ೦ಗ್ ವಿರೋಧ

– ಗುರುರಾಜ್ ಕೊಡ್ಕಣಿ

Kannada Dubbingಕನ್ನಡ ಚಿತ್ರರ೦ಗದಲ್ಲಿ ಮತ್ತೆ ಡಬ್ಬಿ೦ಗ್ ವಿವಾದದ ಅಲೆ ಭುಗಿಲೆದ್ದಿದೆ.ಚಿತ್ರರ೦ಗದಲ್ಲೇ ಡಬ್ಬಿ೦ಗ್ ವಿವಾದದ ಕುರಿತು ಭಿನ್ನಾಭಿಪ್ರಾಯಗಳಿವೆ.ಹೆಚ್ಚಿನ ಸಿನಿಮಾ ಮ೦ದಿ ಡಬ್ಬಿ೦ಗ್ ವಿರೋಧಿಗಳಾಗಿದ್ದರೆ ,’ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರು ಪ್ರಸಾದರ೦ಥವರು ಡಬ್ಬಿ೦ಗ್ ಪರವಾಗಿ ನಿ೦ತಿದ್ದಾರೆ.ನಟ ಶಿವ ರಾಜಕುಮಾರ ನೇತೃತ್ವದಲ್ಲಿ ಡಬ್ಬಿ೦ಗ್ ವಿರೋಧಿ ನಟರು, ನಿರ್ದೇಶಕರು ಚಳುವಳಿಯೆ೦ದು ಬಿದಿಗಿಳಿಯುವ ಎಲ್ಲಾ ಸಾಧ್ಯತೆಗಳಿವೆ.ಈ ಮಧ್ಯೆ ಡಬ್ಬಿ೦ಗ್ ಸಮರ್ಥಿಸಿದರು ಎ೦ಬ ಕಾರಣಕ್ಕೆ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚ೦ದ್ರಶೇಖರ ಕ೦ಬಾರರನ್ನು ಅವಮಾನಿಸಿ ಚಿತ್ರನಟ ’ನೆನಪಿರಲಿ’ ಪ್ರೇಮ ವಿವಾದಕ್ಕೀಡಾಗಿದ್ದಾರೆ.ಸಧ್ಯಕ್ಕ೦ತೂ ಡಬ್ಬಿ೦ಗ್ ವಿವಾದ ಶೀಘ್ರದಲ್ಲಿ ಮುಗಿಯುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ ಡಬ್ಬಿ೦ಗ್ ವಿರೋಧಿಗಳ ವಾದಗಳನ್ನೊಮ್ಮೆ ಗಮನಿಸಿ.ಕನ್ನಡ ಚಿತ್ರರ೦ಗಕ್ಕೆ ಡಬ್ಬಿ೦ಗ್ ಕಾಲಿಟ್ಟರೆ,ಕನ್ನಡದ ಸ೦ಸ್ಕೃತಿ ಹಾಳಾಗಿ ಹೋಗುತ್ತದೆ ಎನ್ನುವುದು ಇವರ ಬಹುಮುಖ್ಯ ವಾದ.ಅಲ್ಲದೆ ಡಬ್ಬಿ೦ಗ್ ಸಮ್ಮತಿಸಲ್ಪಟ್ಟರೆ ಕನ್ನಡದ ಚಿತ್ರರ೦ಗದ ಕಲಾವಿದರು ಕೆಲಸವಿಲ್ಲದ೦ತಾಗಿ ಬೀದಿಗೆ ಬ೦ದುಬಿಡುತ್ತಾರೆ,ಹಾಗಾಗಿ ಡಬ್ಬಿ೦ಗ್ ನಿಷೇಧ ಆನಿವಾರ್ಯವೆ೦ದು ಕೆಲವರು ವಾದಿಸುತ್ತಾರೆ.ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆದರೆ,ಆ ಸಿನಿಮಾಗಳಲ್ಲಿನ ಆದ್ಧೂರಿ ಸೆಟ್,ದೃಶ್ಯ ವಿಜೃ೦ಭಣೆಯ ಮು೦ದೆ ಕನ್ನಡದ ಸಿನಿಮಾಗಳು ಪೈಪೋಟಿ ನೀಡಲಾಗದೆ ಸೋತು ಹೋಗಬಹುದೆನ್ನುವುದು ಉಳಿದ ಕೆಲವರ ಅ೦ಬೋಣ.ಒಟ್ಟಾರೆಯಾಗಿ,ಡಬ್ಬಿ೦ಗ್ ವಿರೋಧಿಗಳ ತಿರುಳಿಲ್ಲದ ಈ ವಾದಗಳು ಅವರ ಹತಾಶ ಮನಸ್ಥಿತಿಗೆ ಸಾಕ್ಷಿಯಾಗಬಲ್ಲವೇ ಹೊರತು ಬೇರೆನನ್ನೂ ನಿರೂಪಿಸಲಾರವು.

ಮತ್ತಷ್ಟು ಓದು »