ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ 4
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ಲಿಂಗಾಯತರನ್ನು ಅಥವಾ ವೀರಶೈವರನ್ನು (ಪ್ರಸ್ತುತದಲ್ಲಿ ‘ಲಿಂಗಾಯತರು ಮತ್ತು ವೀರಶೈವರು ಬೇರೆ ಬೇರೆ ಅವೆರಡು ಒಂದೆ ಅಲ್ಲ’ ಎಂಬಂತಹ ವಾದಗಳು ಅಥವಾ ಚರ್ಚೆಗಳು ಮಾಧ್ಯಮಗಳಲ್ಲಿ ಕೇಳಿಬರುತ್ತಿವೆ. ಈ ಕುರಿತು ಮೂರು ರೀತಿಯ ಅಭಿಪ್ರಾಯಗಳಿರುವುದನ್ನು ನೋಡಬಹುದು. ಅವುಗಳೆಂದರೆ, ಒಂದನೆಯದಾಗಿ, ವೀರಶೈವ ಪರಂಪರೆಯು ಹಿಂದೂ ಧರ್ಮದ ಭಾಗವಾಗಿದೆ, ಭಾರತೀಯ ಆಧ್ಯಾತ್ಮ ಚಿಂತನೆಗೆ ಅಪೂರ್ವ ಕೊಡುಗೆಯನ್ನು ನೀಡಿರುವ ಹಾಗೂ ಆಧ್ಯಾತ್ಮ ಮಾರ್ಗದ ಮೂಲಕ ಹೊಸದೊಂದು ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣ ಪರಂಪರೆಯ ಚಿಂತನೆ ಮತ್ತು ಅವರ ಆಚರಣೆಗಳು ಕಾರಣವಾಗಿವೆ. ಹಾಗೆಯೇ ಎರಡನೆಯದಾಗಿ, ಕೆಲವು ಚಿಂತನೆಗಳು ಹಿಂದೂ ಧರ್ಮವನ್ನು ಪ್ರತಿಭಟಿಸಿ, ಸಮಾಜದಲ್ಲಿರುವ ಅನಿಷ್ಠಗಳನ್ನು ವಿರೋಧಿಸಿ, ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು, ಈ ಸಮಾಜದಲ್ಲಿ ಕಲುಷಿತಗೊಂಡಿರುವ ಧಾರ್ಮಿಕ, ಸಾಮಾಜಿಕ ಪರಿಸರದ ವಿರುದ್ಧ ಹೋರಾಡಿದ, ಅನೀತಿಯುತವಾದ ಜಾತಿ ವ್ಯವಸ್ಥೆಯನ್ನು ನಾಶಮಾಡಿ ಉತ್ತಮ ಸಮಾಜವನ್ನು ರಚಿಸಬೇಕು ಎಂಬ ಗುರಿಯನ್ನು ಇಟ್ಟುಕೊಂಡು ಹುಟ್ಟಿದ ಸ್ವತಂತ್ರ್ಯ ಮತ/ಧರ್ಮವೇ ವೀರಶೈವ ಧರ್ಮವಾಗಿದೆ. ಇದಕ್ಕೆ ಪೂರಕವಾಗಿ ಜಿ.ಎಸ್.ಶಿವರುದ್ರಪ್ಪನವರು ಹೇಳುವಂತೆ, ಕನ್ನಡನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ 12ನೇ ಶತಮಾನ ಒಂದು ಸಂಕ್ರಮಣ ಕಾಲ, ಈ ಸಂಕ್ರಮಣಕ್ಕೆ ಮುಖ್ಯ ಪ್ರೇರಣೆ ವೀರಶೈವ ಧರ್ಮವಾಗಿದೆ ಹಾಗೂ ಇದು ವಿಶಾಲ ಅರ್ಥವನ್ನು ಒಳಗೊಂಡಿದೆ. ಎಂಬಂತಹ ವಿವರಣೆ. ಮತ್ತು ಮೂರನೆಯದಾಗಿ ಕಂಡುಬರುವ ಚಿತ್ರಣಗಳಲ್ಲಿ ಮೇಲಿನ ಎರಡೂ ಮಾರ್ಗಗಳನ್ನು ಒಳಗೊಂಡಿರುವ ವಿವರಣೆಯನ್ನು ನೋಡಬಹುದು. ಅಂದರೆ, ವೀರಶೈವ ಪರಂಪರೆ ಮತ್ತು ವಚನಗಳು ಭಾರತೀಯ ಆಧ್ಯಾತ್ಮ ಮಾರ್ಗಕ್ಕೆ ಕೊಡುಗೆಯನ್ನು ನೀಡಿರುವುದರ ಜೊತೆಗೆ ಸಾಮಾಜಿಕ ಅನಿಷ್ಠಗಳ ವಿರುದ್ಧವೂ ಹೋರಾಡಿದೆ. ತಮ್ಮ ಭಕ್ತಿಯೊಂದಿಗೆ ಸಮಾಜದ ಪಿಡುಗುಗಳ ವಿರುದ್ಧ ಪ್ರತಿಭಟಿಸಿದೆ.
ವಚನ ಸಂಸ್ಕೃತಿಯು ಅತ್ಯಂತ ಸೂಕ್ಷ್ಮವೂ, ಸಂಕೀರ್ಣವೂ, ಬಹುಮುಖಿಯೂ, ಬಹುಸ್ತರೀಯವೂ ಆದ ಒಂದು ಸಾಮಾಜಿಕ ಪ್ರಕ್ರಿಯೆ-ಗತಿಶೀಲತೆಯಾಗಿತ್ತು. ಎಂದು ಹೇಳುವ ಮೂಲಕ ಆಧ್ಯಾತ್ಮ ಹಾಗೂ ಸಾಮಾಜಿಕ ಎಂಬ ಎರಡು ವಲಯಗಳನ್ನು ತಳುಕು ಹಾಕುವ ವಿವರಣೆಗಳನ್ನು ನೋಡಬಹುದು. ಈ ಮೂರು ರೀತಿಯ ವಿವರಣೆಗಳಲ್ಲಿ ಪ್ರಸ್ತುತ ಅಧ್ಯಯನಕ್ಕೆ ಸಂಬಂಧಿಸಿದಂತೆ ನಾವು ಮೊದಲೆರಡು ಅಂಶಗಳನ್ನು ತೆಗೆದುಕೊಂಡು ಗಮನಿಸುವುದಾದರೆ, ಪರಸ್ಪರ ವಿರುದ್ಧವಿರುವ ಎರಡು ರೀತಿಯ ಚಿಂತನೆಗಳು ವಿದ್ವತ್ ವಲಯದಲ್ಲಿ, ರಾಜಕೀಯ ವಲಯದಲ್ಲಿ, ಲಿಂಗಾಯತರು ತಮ್ಮನ್ನು ತಾವು ಗುರುತಿಸಿಕೊಳ್ಳುವಲ್ಲಿ, ಮುಖಾ-ಮುಖಿ ಆಗುತ್ತಿವೆ. ಉದಾಹರಣೆಗೆ, ಚಿದಾನಂದ ಮೂರ್ತಿ ಹಾಗೂ ಕಲ್ಬುರ್ಗಿ. ವಿರಕ್ತ ಪೀಠ/ಮಠಗಳು ಹಾಗೂ ಪಂಚಚಾರಿಪೀಠಗಳು, ಪ್ರಗತಿಪರರು ಹಾಗೂ ಸಾಂಪ್ರದಾಯವಾದಿಗಳು ಮುಂತಾದ ಚಿಂತನೆಗಳು. ಆದರೂ ಪರಸ್ಪರ ವಿರುದ್ಧವಿರುವ ಅಭಿಪ್ರಾಯಗಳು ಒಂದಾಗುತ್ತಿವೆ. ಅಂದರೆ, ಎರಡು ಮಾರ್ಗಗಳು ತಮ್ಮನ್ನು ಲಿಂಗಾಯತರು ಎಂದೇ ಹೇಳಿಕೊಳ್ಳುತ್ತಿದ್ದಾರೆ. ಲಿಂಗಾಯಿತರಲ್ಲಿರುವ ಹತ್ತು ಹಲವು ಜಾತಿಗಳ ನಡುವೆ ಸಮಾನ ಅಂಶ ಯಾವುದು? ಆ ಎಲ್ಲ ಜಾತಿಗಳು ಒಟ್ಟಾಗಿ ಲಿಂಗಾಯಿತ ಅಸ್ಮಿತೆಯನ್ನು ಕಂಡುಕೊಳ್ಳಲು ಸಾಧ್ಯವೆ? ಎನ್ನುವ ಪ್ರಶ್ನೆಗಳಿಗೆ ಉತ್ತರಿಸುವುದು ಕಷ್ಟ ಸಾಧ್ಯ. ವಿಭಿನ್ನ ಆಚರಣೆ, ವಿಭಿನ್ನ ಕಟ್ಟು ಕಟ್ಟಲೆಗಳು, ಇರುವ ಹಲವು ಜಾತಿಗಳ ನಡುವೆ ಇರುವ ಸಾಮ್ಯತೆ ಏನು ಎನ್ನುವುದನ್ನು ಸ್ಪಷ್ಟಪಡಿಸಲು ಸಾಧ್ಯವಾಗುವುದೇ ಇಲ್ಲ. ಲಿಂಗಧಾರಣೆಯೂ ಸಹ ಸಮಾನ ಆಂಶವಾಗುವುದಿಲ್ಲ ಏಕೆಂದರೆ ಲಿಂಗಾಯಿತರಲ್ಲದ ಕೆಲವು ಜಾತಿಗಳಲ್ಲೂ ಲಿಂಗಧಾರಣೆಯ ಪದ್ಧತಿ ಇದೆ. ಮತ್ತಷ್ಟು ಓದು
ನಿಶ್ಯಬ್ದ …!
– ರಾಘವೇಂದ್ರ ಎಂ. ಸುಬ್ರಹ್ಮಣ್ಯ
ಕಲಾಸಿಪಾಳ್ಯ/ಕೆ.ಆರ್ ಮಾರ್ಕೆಟ್ ಕಡೆ ಹೋದವರಿಗೆ ಗೌಜು ಗದ್ದಲದ ನಿಜಾರ್ಥ ತಿಳಿದಿರುತ್ತೆ. ಹಾಗೆಯೇ ಕೊಡಚಾದ್ರಿ/ಕುಮಾರಪರ್ವತ ಚಾರಣಮಾಡಿದವರಿಗೆ ನಿಶ್ಯಬ್ದದ ಅನುಭವ ಆಗಿರುತ್ತೆ. ಈಗ ಪ್ರಶ್ನೆ ಏನಂದರೇ ಶಬ್ದಕ್ಕೆ ಮತ್ತಷ್ಟು ಶಬ್ದ ಸೇರಿಸಿ ಮತ್ತಷ್ಟು ಹೆಚ್ಚು ಶಬ್ದ ಮಾಡಬಹುದು. ಆದರೆ ನಿಶ್ಯಬ್ದವನ್ನು ಮತ್ತಷ್ಟು ಕಡಿಮೆ ಮಾಡಲು ಸಾಧ್ಯವೇ?
ಬೆಂಗಳೂರಿನ ನಾಲ್ಕು ರಸ್ತೆಗಳು ಸೇರುವಲ್ಲಿ ಗಣಪತಿ ಪೆಂಡಾಲ್ ಹಾಕಿ, ಸಂಜೆ ಕರ್ಣಭಯಂಕರ ಚಿತ್ರಗೀತೆಗಳನ್ನು ಹಾಕಿ, ಅದರ ಮೇಲೆ ಪಟಾಕಿ ಹೊಡೆದು, ಬೆಳಕಿಗಾಗಿ ಜನರೇಟರ್ ಇಟ್ಟು….ಹೇಗೆ ಶಬ್ದಕ್ಕೆ ಶಬ್ದಗಳನ್ನು ಸೇರಿಸುತ್ತಲೇ ಹೋಗಬಹುದು….ಶಬ್ದಮಾಲಿನ್ಯವನ್ನು ತಾರಕಕ್ಕೆ ತೆಗೆದುಕೊಂಡು ಹೋಗಬಹುದು. ಆದರೆ ಅದೇ ತರಹ ಅದರ ವಿರುದ್ದದೆಡೆಗೆ ಹೋಗುತ್ತಾ ಹೋದರೆ, ಅಂದರೆ ಗಣಪತಿ ಹಬ್ಬದ ಕೊನೆಯದಿನದ ಕಾರ್ಯಕ್ರಮಗಳೆಲ್ಲಾ ಮುಗಿದ ಮೇಲೆ ರಾತ್ರಿ 2:35ಕ್ಕೆ ಪೂರ್ತಿ ನಿಶ್ಯಬ್ದವನ್ನು ನೋಡಬಹುದು. ಆದರೆ ಅದು ಪೂರ್ತಿ ನಿಶ್ಯಬ್ದವಲ್ಲವಷ್ಟೇ? ಎಲ್ಲೋ ಒಂದು ನಾಯಿ ಓಳಿಡುತ್ತಿರುತ್ತದೆ. ಆ ನಾಯಿಯನ್ನು ಓಡಿಸಿದರೆ….ಇನ್ನಷ್ಟೂ ನಿಶ್ಯಬ್ದ. ಆದರೆ ಇನ್ನೆಲ್ಲೋ ಒಂದು ಜೀರುಂಡೆ ಕಿರ್ರೆನ್ನುತ್ತಿರುತ್ತದೆ. ಆ ಶಬ್ಧವನ್ನೂ ಇಲ್ಲವಾಗಿಸಿದರೆ…..ಹೀಗೆ ನಾವು ಎಷ್ಟರಮಟ್ಟಿಗಿನ ನಿಶ್ಯಬ್ದವನ್ನು ಸಾಧಿಸಬಹುದು!? ಶಬ್ದ ಪರಿವಹನಕ್ಕೆ ಯಾವುದೇ ಮಾಧ್ಯಮವಿಲ್ಲ ಬಾಹ್ಯಾಕಾಶ ಹೇಗಿರಬಹುದು? ಎಷ್ಟು ನಿಶ್ಯಬ್ದವಾಗಿರಬಹುದು!?
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ –೧
ವಿನಯಲಾಲ್ ಮತ್ತು ಅಶೀಶ್ ನಂದಿಯವರ ಸಂಪಾದಕತ್ವದಲ್ಲಿ “ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು” ಎಂಬ ಪುಸ್ತಕವನ್ನು ಅಕ್ಷರ ಪ್ರಕಾಶನದವರು (ಹೆಗ್ಗೋಡು ಸಾಗರ; ಮೊದಲ ಮುದ್ರಣ ೨೦೦೭ ಮತ್ತು ಎರಡನೇ ಮುದ್ರಣ ೨೦೧೦) ಪ್ರಕಟಿಸಿದ್ದಾರೆ. ಈ ಪುಸ್ತಕದ ಬಗ್ಗೆ ಪ್ರಕಾಶಕರು ‘ಬೌದ್ಧಿಕ ಸಿದ್ಧ ಮಾದರಿಗಳ ನಿರಾಕರಣೆ’ ಎಂಬ ಶೀರ್ಷಿಕೆಯಡಿಯಲ್ಲಿ ಹೇಳಿರುವುದನ್ನು ಅವರದೇ ಮಾತುಗಳಲ್ಲಿ ಈ ರೀತಿ ಸಂಕ್ಷೇಪಿಸಿ ಹೇಳಬಹುದು.”… ಕನ್ನಡ ಅಕಾರಾದಿಯಲ್ಲಿ ಜೋಡಿಸಲ್ಪಟ್ಟಿರುವ ಈ ಪರಿಭಾಷಾ ಕೋಶದಲ್ಲಿ (ಅಂದರೆ ಪ್ರಸ್ತುತ ಪುಸ್ತಕದಲ್ಲಿ) ‘ಅರ್ಥಶಾಸ್ತ್ರ’ ದಿಂದ ‘ಬಾಲಿವುಡ್’ ನವರೆಗೆ, ‘ಇಸ್ಲಾಂ’ನಿಂದ ‘ಕೋಕಾಕೋಲಾ’ವರೆಗೆ, ‘ಮಾರ್ಕ್ಸ್ ವಾದ’ ದಿಂದ, ‘ಯಾಹೂ(yahoo)’ ,ದವರೆಗೆ ನಾನಾ ವಿಚಾರ ಕುರಿತ ಕಿರುಲೇಖನಗಳಿವೆ…ಆಧುನಿಕ ಜೀವನಕ್ರಮದಲ್ಲಿ ನಾವಿವತ್ತು ಹಲವು ಪದಗಳನ್ನೂ ಮತ್ತು ಆ ಪದಗಳೊಂದಿಗೆ ಅಂತರ್ಗತವೂ ಆಗಿರುವ ವಿಚಾರಗಳನ್ನು ‘ಸಾಮಾನ್ಯಜ್ಞಾನ’ವಾಗಿ ತುಂಬ ಸಹಜವೂ ಪರಿಚಿತವೂ ಎಂದು ಭಾವಿಸಿ ಸ್ವೀಕರಿಸಿದ್ದೇವೆ. ಉದಾಹರಣೆಗೆ ಶಿಕ್ಷಣ,ಬಡತನ,ಅಥವಾ ಅರ್ಥಶಾಸ್ತ್ರ ಮೊದಲಾದವು…ಈಗ ಈ ಪದವು ಚಾಲ್ತಿಯಲ್ಲಿ ಪಡೆದಿರುವ ಅರ್ಥವನ್ನಾಗಲೀ …ಆ ವ್ಯಾಖ್ಯಾನದ ಹಿನ್ನೆಲೆಯಲ್ಲಿರುವ ಸಿದ್ಧಾಂತವನ್ನಾಗಲಿ ಮೂಲಭೂತವಾಗಿಯೇ ಪ್ರಶ್ನಿಸುವ ಸಾಹಸಕ್ಕೆ ನಾವು ಕೈ ಹಾಕುವುದು ಅಪರೂಪ.
… ಬದಲು ಬದಲಾಗುತ್ತಲೇ ಇರುವ ಬೌದ್ಧಿಕ ಜಗತ್ತಿನೊಳಗೊಂದು ಕಿರುನೋಟವನ್ನು ಕೊಡುವ ಮೂಲಕ ಓದುಗರಿಗೆ ತುಂಬ ಪರಿಚಿತವೆಂದು ಭಾವಿತವಾದದ್ದು, ಎಷ್ಟು ಅಪರಿಚಿತವೆಂಬುದನ್ನೂ ಹಾಗೂ ಅಪರಿಚಿತವೇ ಎಷ್ಟು ಪರಿಚಿತವೆಂಬುದನ್ನೂ ಕಾಣಿಸಿ ಕೊಡುವ ಒಂದು ಪ್ರಯತ್ನ ಇಲ್ಲಿದೆ. ಅಲ್ಲದೆ ಇಲ್ಲಿ ಸಂಕಲಿತವಾಗಿರುವ ಎಲ್ಲ ಲೇಖನಗಳಲ್ಲಿ ಶೈಕ್ಷಣಿಕ ಶಿಸ್ತಿನ ಬಿಗಿಯಾದ ಜಡ ನಿರೂಪಣೆಗಿಂತ ಹಗುರವಾದ ಪ್ರಬಂಧರೂಪಿ ಲಾಲಿತ್ಯದ ಶೈಲಿ ಕಾಣಿಸಿಕೊಂಡಿರುವುದು ಕೂಡಾ ಇಂಥ ಪ್ರಯತ್ನದ ಒಂದು ಅಂಗವಾಗಿಯೇ …ಈ ಎಲ್ಲ ಲೇಖನಗಳು,ತಮ್ಮ ವಸ್ತು -ವಿನ್ಯಾಸಗಳೆರಡರಲ್ಲೂ ಪಾಶ್ಚಿಮಾತ್ಯ ರೂಢಿಯಲ್ಲಿ ಯಾವುದನ್ನು ‘ಅಕೆಡೆಮಿಕ್ ಬರಹ‘ ಎನ್ನಲಾಗುತ್ತದೆಯೋ ಅದಕ್ಕಿಂತ ಭಿನ್ನವಾದ ಹೊಸತನಕ್ಕಾಗಿ ಹವಣಿಸುತ್ತಿವೆ …”
ಇನ್ನು ನಾನು ಮಾಡಲು ಪ್ರಯತ್ನಿಸಿರುವ ಈ ಪುಸ್ತಕದ ಪರಿಚಯದ ರೀತಿಯ ಬಗ್ಗೆ ಒಂದೆರೆಡು ಮಾತುಗಳು. ‘ನಿಲುಮೆ’ಯ ಓದುಗರಲ್ಲಿ ಹಲವರು ಈಗಾಗಲೇ ಈ ಪುಸ್ತಕವನ್ನು ಓದಿರಬಹುದು ಮತ್ತು ಕೆಲವರ ಗಮನಕ್ಕೆ ಬರದೆ ಹೋಗಿರಬಹುದು. ಪ್ರಸ್ತುತ ಪುಸ್ತಕದಲ್ಲಿರುವ ಲೇಖನಗಳ ಅರ್ಥಕ್ಕೆ ಭಂಗ ಬರದಂತೆ ಅವುಗಳ ‘ಸಾರಾಂಶ’ವನ್ನು ನೀಡಲು ನಾನು ಪ್ರಯತ್ನಿಸಿದ್ದೇನೆ.ಈ ಲೇಖನಗಳಲ್ಲಿ ಆಗಾಗ ‘ನಾನು’, ‘ನಾವು’ ಎಂಬ ಪದಗಳು ಬರುತ್ತವೆ. ಅವು ಆ ಮೂಲ ಲೇಖಕರೇ ಹೊರತು ಸಾರಾಂಶ ಬರೆದಿರುವ ”ನಾನಲ್ಲ” ಎಂಬುದನ್ನು ಓದುಗರು ಗಮನಕ್ಕೆ ತರಲು ಇಚ್ಚಿಸುತ್ತೇನೆ.
ನಮ್ಮ ದೇಶದ ಕಥೆ ಇಷ್ಟೇ ಕಣರೋಪ್ಪು!!!
– ಮಧು ಚಂದ್ರ , ಭದ್ರಾವತಿ
ಅವುಲ್ ಪಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಮ್ ಯಾರಿಗೆ ಗೊತ್ತಿಲ್ಲ ಹೇಳಿ , ನಮ್ಮ ದೇಶದ ಮಾಜಿ ರಾಷ್ಟ್ರಪತಿ ಹಾಗು ಕ್ಷಿಪಣಿ ಗಳ ಜನಕ ಎಂದೇ ಪ್ರಸಿದ್ಧರು.
ಕಲಾಂ ಅವರು ಇಸ್ರೋ ಸಂಸ್ಥೆಯ ಉಪಗ್ರಹ ಉಡಾವಣ ವಾಹನಗಳ ಯೋಜನೆಯ ಕಾರ್ಯದಲ್ಲಿ ತೊಡಗಿದ್ದಾಗ, ಅವರಿಗೆ ಬೆರಿಲಿಯಮ್ ಡಯಾ ಫಾರ್ಮ್ಗಳ ಅವಶ್ಯಕತೆ ಇತ್ತು. ಬೇರಿಲಿಂ ಡಯಾ ಫಾರ್ಮ್ಗಳನ್ನು ವಿಮಾನ, ರಾಕೆಟ್ ಹಾಗು ಕ್ಷಿಪಣಿಗಳ ಭ್ರಮಣ ದಿಕ್ಸೂಚಿಗಳಲ್ಲಿ ಬಳಸುತ್ತಾರೆ. ಭ್ರಮಣ ದಿಕ್ಸೂಚಿಗಳಿಂದ ವಿಮಾನ , ರಾಕೆಟ್ ಹಾಗು ಕ್ಷಿಪಣಿಗಳು ನೆಲದ ಮೇಲೆ ಎಷ್ಟು ಎತ್ತರದಲ್ಲಿ ಹಾರುತ್ತಿವೆ ಎಂದು ಸೂಚಿಸುತ್ತವೆ.
ಅಂದು ನಮ್ಮ ದೇಶದಲ್ಲಿ ಉತ್ಪಾದನೆ ಮಾಡಲು ಯಾವುದೇ ಉದ್ಯಮಗಳು ಇಲ್ಲದೆ ಇರುವುದರಿಂದ , ಇದನ್ನು ಅಮೇರಿಕದಿಂದ ಅಮದು ಮಾಡಿಕೊಳ್ಳುತ್ತಿದ್ದರು . ಇಸ್ರೋದಿಂದ ನಮ್ಮ ಯೋಜನೆಗೆ ನಮಗೆ ಇಷ್ಟು ಡಯಾ ಫಾರ್ಮ್ಗಳು ಬೇಕು ಎಂದು ಅಮೆರಿಕಕ್ಕೆ ಬೇಡಿಕೆ ಇಟ್ಟರು.
ಮೂರು ತಿಂಗಳ ನಂತರ ಅಮೆರಿಕವು, ಭಾರತವು ಖಂಡಾಂತರ ಕ್ಷಿಪಣಿಗಳ ಅಭಿರುದ್ದಿಯಲ್ಲಿ ಬೇರಿಲಿಂ ಡಯಾ ಫಾರ್ಮ್ಗಳನ್ನು ಬಳಸುತ್ತಾರೆ ಎಂದು ಬೇಡಿಕೆ ಪೂರೈಸಲು ನಿರಾಕರಿಸಿತು.
ನಮ್ಮ ಮಕ್ಕಳಿಗೆ ಎಂಥ ಶಿಕ್ಷಣ ಕೊಡಬೇಕು?
ವಲವಿ, ಬಿಜಾಪೂರ
೧೯೮೩ ಅಥವಾ ೧೯೮೪ ನೇ ಇಸ್ವಿ ಇರಬಹುದೇನೋ? ಸರಿಯಾಗಿ ನೆನಪಿಲ್ಲ. ನಮ್ಮ ಶಾಲೆಯಲ್ಲಿ (ಆಗ ನಾನು ೮/೯ ತರಗತಿಯಲ್ಲಿ ಒದುತ್ತಿರಬಹುದು ) ಪೈಥಾಗೋರಸನ ಪ್ರಮೇಯವನ್ನು ನನ್ನ ಗುರುಗಳು ಹೇಳುತ್ತಾ ಈ ಸೂತ್ರವನ್ನು ಪೈಥಾಗೊರಸನಕ್ಕಿಂತಲೂ ಮೊದಲು ಹೇಳಿದವನು ಭಾಸ್ಕರಾಚಾರ್ಯ ಎಂದು ವಿವರಿಸುತ್ತಾ ಅವನ ಲೀಲಾವತಿ ಗ್ರಂಥದಲ್ಲಿ ಈ ಸಾಲುಗಳನ್ನು ಹೇಳಲಾಗಿದೆ ಎಂದು ಪೈಥಾಗೋರಸನ ಪ್ರಮೇಯದ ರೀತಿಯಲ್ಲಿ ಬಿಡಿಸಬಹುದಾದ ಒಂದು ಲೆಕ್ಕವನ್ನು ತಿಳಿಸಿದ್ದರು. ಆಗ ನಾನು, ಸರ್ ಹಾಗಿದ್ದರೆ ಅದನ್ನು ಪುಸ್ತಕದಲ್ಲೇಕೆ ಬರೆದಿಲ್ಲ?? ಎಂದು ಸಹಜವಾಗಿ ಕೇಳಿದ್ದೆ. ಆಗವರು ನಮ್ಮನ್ನು ನಾವು(ಭಾರತೀಯರನ್ನು) ಹೊಗಳಿಕೊಳ್ಳುವ ಜಾಯಮಾನ ನಮಗಿಲ್ಲ ಎಂದಿದ್ದರು. ಅವರು ವ್ಯಂಗವಾಗಿ ಇದನ್ನು ಹೇಳಿದರೋ ಸಹಜವಾಗಿ ಹೇಳಿದರೋ ನನಗಂತೂ ಅರ್ಥವಾಗಿರಲಿಲ್ಲ.
ಮುಂದೆ ನಾನು ಶಿಕ್ಷಕಿಯಾಗಿ ಗಣಿತ ವಿಷಯದ ತರಬೇತಿಗಾಗಿ ಹೋದಾಗ ಶ್ರೀಮತಿ ಮಂಜುಳಾ ಜೋಷಿ ಎನ್ನುವ ತರಬೇತುದಾರರು ಇದೇ ವಿಷಯವನ್ನು ಮತ್ತು ಭಾಸ್ಕರಾಚಾರ್ಯರ ಅವೇ ಸಾಲುಗಳನ್ನು ಪೈಥಾಗೊರಸನ ಪ್ರಮೇಯ ಕುರಿತು ಹೇಳುವಾಗ ಪುನಃ ಹೇಳಿದರು. (ಬಹುಶಃ ೨೦೦೨/೨೦೦೩ ರಲ್ಲಿ ಹೇಳಿರಬಹುದು.) ಆಗಲೂ ನಾನು ಮೇಲಿನ ಪ್ರಶ್ನೆ ಕೇಳಿದೆ. ಆಗ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಬದಲಾವಣೆ ಮಾಡಲು ಹೊರಟು ಕೇಸರೀಕರಣಗೊಳಿಸುತ್ತಿದೆ ಎಂಬ ಬೊಬ್ಬೆ ಎಲ್ಲೆಡೆ ಶುರುವಾಗಿತ್ತು. ಹಾಗಾಗಿ ಶ್ರೀಮತಿ ಜೋಷಿಯವರು ನಾವು ಹಾಗೆ ಹೇಳಿಕೊಳ್ಳಲು ಬಿಡುತ್ತಿಲ್ಲ ಸರ್ಕಾರವೇನು ಮಾಡಬೇಕು? ಎಂದು ಪ್ರಶ್ನಿಸಿ ಚರ್ಚೆಯನ್ನು ಹುಟ್ಟುಹಾಕಿದ್ದರು. ಬಹುತೇಕ ಶಿಕ್ಷಕರು ನಮ್ಮ ಪೂರ್ವಿಕರ ಸಾಧನೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವದರಿಂದ ಅವರು ಸ್ಪೂರ್ತಿಗೊಳ್ಳುತ್ತಾರೆ ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾರೆಂದು ವಾದಿಸಿದರು. ಅಂದರೆ ತರಬೇತಿಗೆ ಹಾಜರಾಗಿದ್ದ ೧೦೦ ಶಿಕ್ಷಕರಲ್ಲಿ ಸುಮಾರು ೮೦/೯೦ ಜನ ಹೀಗೆ ವಾದಿಸಿದರೆಂದರೆ ಜನರಿಗೆ ತಮ್ಮ ಪೂರ್ವಿಕರ ಮಹತ್ವದ ಲಸ ಸಂಶೋಧನೆಗಳನ್ನು ತಮ್ಮ ಪರಂಪರೆಯನ್ನು ಮುಂದಿನ ಪೀಳಿಗೆ ತಿಳಿಯಲಿ ಎಂಬ ಆಶಯ ಇದೆ ಎಂದಾಯ್ತು. ಆದರೂ ಅಂಥ ಕೆಲಸಗಳು ನಡೆದಾಗ ಕೆಲವರು ನಿಲ್ಲಿಸಲು ಕೇಸರೀಕರಣವೆಂದು ಬೊಬ್ಬೆ ಹೊಡೆಯುತ್ತಾರೆ. ಪುರೋಹಿತಶಾಹಿಯ ಹುನ್ನಾರವೆಂದು, ಇನ್ನು ಕೆಲವರು ಬ್ರಾಹ್ಮಣಿಕೆಯ ಹೇರಿಕೆ ಎಂದೂ ಏನೇನೋ ಅಲ್ಲಸಲ್ಲದ ಅಪಪ್ರಚಾರ ಮಾಡುತ್ತಾರೆ. ಅದು ಹ್ಯಾಗೋ ಇವರ ದನಿ ಮೇಲಾಗಿ ಪಠ್ಯಪುಸ್ತಕಗಳಲ್ಲಿ ಅದೇ ಬ್ರಿಟೀಷರನ್ನು ಯುರೋಪಿಯನ್ನರನ್ನು ಹೊಗಳುವಂಥ ಪಾಠಗಳೇ ಪಠ್ಯ ಪುಸ್ತಕದಲ್ಲಿ ಬಂದು ಬಿಡುತ್ತವೆ.
ಮತ್ತಷ್ಟು ಓದು
ವಿಡಂಬನೆ : ರಾಮನ್ ದೇವನ್ ಟೀ!
– ತುರುವೇಕೆರೆ ಪ್ರಸಾದ್
ಗುದ್ಲಿಂಗ ತನ್ನ ಗುಡ್ಲು ಹೋಟ್ಲಲ್ಲಿ ಪುಕ್ಕಟೆ ಟೀ ಕೊಡ್ತಿದಾನೆ ಅಂತ ಊರೆಲ್ಲಾ ಗುಲ್ಲಾಗಿತ್ತು. ಎಂಜಲು ಕೈಲಿ ಕಾಗೆ ಓಡಿಸ್ದೋನು, ಟೀಗೆ ಹುಣಿಸೇಬೀಜ ಕುಟ್ ಹಾಕಿ ಬೇಸ್ ಕೊಡ್ತಿದ್ದೋನು, ಮೂರು ದಿನದ ಹಿಂದಿನ ಒಡೆದ ಹಾಲಿಗೆ ಸೋಡಾ ಹಾಕ್ತಿದ್ದೋನು ಪುಕ್ಕಟೆ ಟೀ ಕೊಡೋಕೆ ಹೇಗೆ ಸಾಧ್ಯ ಅಂತ ಅಚ್ಚರಿ ಪಟ್ಟು ಪರ್ಮೇಶಿ ಪಟಾಲಂ ಗುದ್ಲಿಂಗನ ಟೀ ಹೋಟ್ಲು ಹತ್ರ ದೌಡಾಯಿಸುದ್ರು. ಗುದ್ಲಿಂಗನ ಹೋಟ್ಲು ತುಂಬಾ ಜನವೋ ಜನ! ಎಲ್ಲಾ ಪುಕ್ಕಟೆ ಟೀ ಹೀರ್ತಿದ್ರು, ಹಾಗೇ ಗುದ್ಲಿಂಗನ ಟೀ ಬಗ್ಗೆ, ರಾಜಕೀಯದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆದಿದ್ವು. ಎಲ್ಲಾ ಬೆಕ್ಕಸ ಬೆರಗಾಗಿ ನೋಡುದ್ರು.
‘ಏನೋ ಗುದ್ಲಿಂಗ? ಬಿಟ್ಟಿ ಟೀ ಸಮಾರಾಧನೆ ಮಾಡ್ತಿದೀಯ..’ಕೇಳಿದ ಪರ್ಮೇಶಿ
‘ ಹೂ ಕಣ್ರೋ! ಯಾವ್ದೋ ಕಂಪನಿಯೋರು ಸ್ಯಾಂಪಲ್ಗೆ ಅಂತ ಟೀ ಕೊಟ್ಟಿದ್ರು. ಅದನ್ನ ನಾನ್ಯಾಕೆ ದುಡ್ಡಿಗೆ ಮಾರ್ಕೊಬೇಕು ಅಂತ ಜನಕ್ಕೆ ಫ್ರೀ ಟೀ ಕೊಡ್ತಿದೀನಿ. ಕೆರೆಯ ನೀರನು ಕೆರೆಗೆ ಚೆಲ್ಲಿ’ ಅಂತಾರಲ್ಲ ಹಾಗೆ ಎಂದು ಹಲ್ಕಿರಿದ.
ರಾಜಿನಾಮೆ ಕೊಡಲು ಸಿದ್ಧ !
– ನವೀನ್ ನಾಯಕ್
ರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !
ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ 3
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ಜಾತಿ ವರ್ಗೀಕರಣದ ಬಗ್ಗೆ ಅನೇಕ ಜನಾಂಗ ಅಧ್ಯಯನಕಾರರು ಮತ್ತು ಸಮಾಜಶಾಸ್ತ್ರಜ್ಞರುಗಳು ವಿವರಣೆಗಳನ್ನು ನೀಡಿದರೂ ಸಹ ಅದರ ಬಗೆಗಿನ ಅಸ್ಪಷ್ಟತೆ ಹಾಗೆಯೇ ಮುಂದುವರೆದಿದೆ. ಈ ಸಂಗತಿಯ ಬಗ್ಗೆ ಅಧ್ಯಯನಕಾರರು ನೀಡಿರುವ ವಿವರಣೆಗಳನ್ನು ನೋಡುತ್ತಾ ಹೋದಂತೆ ಮುಖ್ಯವಾದ ಕೆಲವು ಸಮಸ್ಯೆಗಳಿರುವುದು ಕಂಡುಬರುತ್ತವೆ. ಅವುಗಳನ್ನು ಕೆಳಗಿನಂತೆ ನೋಡೋಣ.
ಜಾತಿ, ಉಪ-ಜಾತಿ – ರಚನಾಂಶದ ಸಮಸ್ಯೆ: ಜನಾಂಗ ಮತ್ತು ಸಮಾಜಶಾಸ್ತ್ರ ಅಧ್ಯಯನಕಾರರು ಜಾತಿ, ಉಪ-ಜಾತಿಯ ರಚನಾಂಶಕ್ಕೆ ಸಂಬಂಧಿಸಿದಂತೆ ವಿವರಣೆಗಳನ್ನು ನೀಡುವಾಗ ಒಳವಿವಾಹ ಪದ್ಧತಿ(Endogamy)ಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಿದ್ದಾರೆ, ಮತ್ತು ಇಂದಿನ ಸಮಾಜಶಾಸ್ತ್ರಜ್ಞರುಗಳು ಜಾತಿ, ಉಪ-ಜಾತಿಯ ರಚನಾಂಶವೆಂದರೆ ಒಳವಿವಾಹ ಪದ್ಧತಿ ಎಂದೇ ನಿಖರವಾಗಿ ಹೇಳುತ್ತಾರೆ. ಅಧ್ಯಯನಕಾರರು ಇಷ್ಟು ನಿಖರತೆಯಿಂದ ಹೇಳಿದರೂ ಸಹ ಜಾತಿಯ ರಚನಾಂಶದ ಕುರಿತಂತೆ ಸ್ಪಷ್ಟತೆಯಿಲ್ಲ. ಒಳವಿವಾಹ ಪದ್ಧತಿಯು ಜಾತಿಯ ರಚನಾಂಶ ಎಂದು ಒಬ್ಬ ಅಧ್ಯಯನಕಾರನು ತನ್ನ ಅಧ್ಯಯನದ ತಿರುಳನ್ನು ಮುಂದಿಟ್ಟರೆ, ಇಲ್ಲ ಒಳವಿವಾಹ ಪದ್ಧತಿಯು ಉಪ-ಜಾತಿಯ ನಿರ್ಣಾಯಕ ರಚನಾಂಶ ಎಂದು ಮತ್ತೊಬ್ಬ ಅಧ್ಯಯನಕಾರನು ಪ್ರತಿವಾದವನ್ನು ಮುಂದಿಡುವುದು ಕಂಡುಬರುತ್ತದೆ. ಇದರ ಜೊತೆಗೆ (ಏಕಕಾಲದಲ್ಲಿಯೇ) ಜಾತಿ, ಉಪ-ಜಾತಿ ಎರಡು ಘಟಕಗಳೂ ಸಹ ಒಳ ವಿವಾಹ ಪದ್ಧತಿಯ ಗುಂಪುಗಳು ಎಂಬ ವಾದಗಳೂ ಕೂಡ ಲಭ್ಯವಿದೆ. ಅಧ್ಯಯನಕಾರರ ವಿವರಣೆಗಳನ್ನು ಗಮನಿಸಿದರೆ ಒಳವಿವಾಹ ಪದ್ಧತಿಯು ಜಾತಿ, ಉಪ-ಜಾತಿ ಮತ್ತು ಕೆಲವೊಮ್ಮೆ ಉಪ-ಉಪ-ಜಾತಿಯ ರಚನಾಂಶವೂ ಸಹ ಆಗುತ್ತದೆ. ಹಾಗೂ ಏಕಕಾಲದಲ್ಲಿಯೇ ಇದು ಜಾತಿ ಮತ್ತು ಅದರ ಉಪ-ಜಾತಿಗಳ ರಚನಾಂಶವೂ ಸಹ ಆಗುತ್ತದೆ. ಈ ವಿವರಣೆಗಳು ಮುಂದಿನ ಪ್ರಶ್ನೆಗಳಿಗೆ ದಾರಿ ಮಾಡಿಕೊಡುತ್ತಿವೆ; ಜಾತಿಯು ಒಳವಿವಾಹ ಪದ್ಧತಿಯ ಘಟಕವಾಗಿ ಮತ್ತು ಅದರ ಉಪ-ಜಾತಿಗಳೂ ಸಹ ಒಳವಿವಾಹ ಪದ್ಧತಿಯ ಘಟಕಗಳಾದರೆ ಜಾತಿಯು ಅದರ ಉಪ-ಜಾತಿಗಳೊಡನೆ ಯಾವ ರೀತಿಯ ಸಂಬಂಧ ಹೊಂದಿರುತ್ತದೆ? ಹಾಗೆಯೇ ಒಂದು ಜಾತಿಯ, ಉಪ-ಜಾತಿಗಳು ಮಧ್ಯೆ ವೈವಾಹಿಕ ಸಂಬಂಧ ಏರ್ಪಡುವುದಿಲ್ಲ ಎಂದಾದ ಮೇಲೆ ಉಪ-ಜಾತಿಗಳು ಪರಸ್ಪರ ಯಾವ ರೀತಿಯ ಸಂಬಂಧವನ್ನು ಹೊಂದಿರುತ್ತವೆ? ಆದ್ದರಿಂದ ಯಾವ ನಿರ್ದಿಷ್ಟ ಅಂಶವು ಒಂದು ಜನಗುಂಪನ್ನು ‘ಜಾತಿ’ಯನ್ನಾಗಿಸುತ್ತದೆ ಎಂಬುದರ ಕುರಿತಾಗಲೀ ಅಥವಾ ಯಾವ ಇನ್ನೊಂದು ನಿರ್ದಿಷ್ಟ ಅಂಶವು ಒಂದು ಜನಗುಂಪನ್ನು ‘ಉಪ-ಜಾತಿ’ಯನ್ನಾಗಿಸುತ್ತದೆ ಎಂಬುದರ ಕುರಿತಾಗಲೀ ಸ್ಪಷ್ಟತೆಯಿಲ್ಲ. ಮತ್ತಷ್ಟು ಓದು
ಕಾನೂನಿನ ಶಂಖದಿಂದ ಪರಿಹಾರದ ತೀರ್ಥ ಬರುತ್ತದೆಯೇ?
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಪ್ರಕಟವಾದ ಸುದ್ದಿಗಳಲ್ಲಿ ಬಹುವಾಗಿ ಕಾಡಿದ್ದು,ವಿಜಯವಾಣಿಯಲ್ಲಿ ಜನವರಿ ೨೯ರಂದು ಮತ್ತೆ ಫೆಬ್ರವರಿ ೫ರಂದು ಪ್ರಕಟವಾದ ೨ ಸುದ್ದಿಗಳು.ಒಂದು ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರುವ ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ವರದಿಯಾದ ಮಲಹೊರುವ ಪ್ರಕರಣ ಮತ್ತು ಇನ್ನೊಂದು ಮಂಡ್ಯದ ಕಾಂಗ್ರೆಸ್ಸ್ ಕಛೇರಿಗೆ ಸಂಬಂಧಿಸಿದ ಮ್ಯಾನ್ ಹೋಲ್ ಅನ್ನು ಪೌರಕಾರ್ಮಿಕನೊಬ್ಬ ಬರಿಗೈಯಿಂದ ಸ್ವಚ್ಚ ಮಾಡುತಿದ್ದ ವರದಿ.
ಆನೇಕಲ್ಲಿನ ಪ್ರಕರಣ ವರದಿಯಾದ ಮೇಲೆ ಸರ್ಕಾರ ಎಚ್ಚೆತ್ತುಕೊಂಡು, ‘ಮಲಹೊರುವಂತೆ ಪ್ರೇರೆಪಿಸಿದ’ ಮತ್ತು ‘ಜಾತಿನಿಂದನೆ’ಯ (ಇದರಲ್ಲಿ ಜಾತಿ ನಿಂದನೆಯಾಗಿದ್ದು ಹೇಗೆ ಅನ್ನುವುದು ತಿಳಿಯಲಿಲ್ಲ) ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ ಫಾಲೋ-ಅಪ್ ಸುದ್ದಿಯೂ ಪತ್ರಿಕೆಯಲ್ಲಿ ಬಂದಿತ್ತು. ಆದರೆ,ಸರಿಯಾದ ಒಳಚರಂಡಿ ವ್ಯವಸ್ಥೆಯನ್ನು ರೂಪಿಸದ ಸರ್ಕಾರ ಇಂತ ಪ್ರಕರಣದಲ್ಲಿ ಮೊದಲ ಆರೋಪಿಯಾಗಬೇಕೆ ಅಥವಾ ವ್ಯವಸ್ಥೆಯ ನಿರ್ಲಕ್ಷ್ಯದ ಅನಿವಾರ್ಯತೆಗೆ ಬಿದ್ದು,ಕಾರ್ಮಿಕರಿಂದ ಮಲಹೊರಿಸುವ ಸ್ಥಿತಿಗೆ ಬಂದು ನಿಲ್ಲುವವರು ಆರೋಪಿಗಳಾಗಬೇಕೆ?
ಅತ್ಯಾಧುನಿಕ ಉಪಕರಣಗಳು ಆಯಾ ಪಾಲಿಕೆ/ನಗರಸಭೆ/ಪುರಸಭೆ/ಗ್ರಾಮಪಂಚಾಯಿತಿ ಗಳಲ್ಲಿ ಲಭ್ಯವಿದ್ದೂ ಮತ್ತು ಅವುಗಳನ್ನು ಬಳಸುವ ಬಗ್ಗೆ ಜನರಿಗೆ ಅರಿವು ಮೂಡಿಸಿ,ಅವು ಸುಲಭವಾಗಿ ದಕ್ಕುವಂತೆ ಸರ್ಕಾರ ಮಾಡಿದ್ದರೆ,ಒಬ್ಬರು ಜೈಲಿಗೆ ಹೋಗುವುದನ್ನು ತಪ್ಪಿಸಬಹುದಿತ್ತಲ್ಲವೇ?
ಆರ್.ಕೆ ಶ್ರೀಕಂಠನ್ ಅವರೊಂದಿಗಿನ ಮಾತುಕತೆಯ ನೆನಪು
ಕರ್ನಾಟಕ ಸಂಗೀತದ ಹಿರಿಯ ಗಾಯಕರಾದ ಆರ್.ಕೆ ಶ್ರೀಕಂಠನ್ ಅವರು ನಿನ್ನೆ ವಿಧಿವಶರಾದರು.ತಮ್ಮ ೯೪ರ ವಯಸ್ಸಿನಲ್ಲೂ ಸಂಗೀತ ಕಛೇರಿಯನ್ನು ನಡೆಸಿಕೊಡುತಿದ್ದ ಶ್ರೀಕಂಠನ್ ಅವರ ಬಗ್ಗೆ ಹಂಸಾನಂದಿ ಹಾಗೂ ಪ್ರಭುಮೂರ್ತಿಯವರು ಉತ್ತರ ಕ್ಯಾಲಿಫೋರ್ನಿಯಾ ಕನ್ನಡಕೂಟದ ಪರವಾಗಿ ೨೦೦೮ರಲ್ಲಿ ನಡೆಸಿದ ಸಂದರ್ಶನವನ್ನು ಪ್ರಕಟಿಸುತಿದ್ದೇವೆ – ನಿಲುಮೆ
ಒಂದು ಮಾಘದ ತಂಪಿನಿರುಳಲಿ
ನಂದನದಿ ಸೇರಿರಲು ಸುರಗಣ
ಚಂದದಲಿ ತಲೆದೂಗಲಿಕೆ ನಾರದನ
ಗಾಯನಕೆ
ಇಂದದೇಕೋ ತನ್ನ ಹಾಡ
ಲ್ಲೊಂದು ಸೊಗಸೂ ಕಾಣದೆಯೆ ಕರೆ
ತಂದನೈ ಹಾಡಲಿಕೆ ಕರ್ನಾಟಕದ
ಕೋಗಿಲೆಯ!