ವಿಷಯದ ವಿವರಗಳಿಗೆ ದಾಟಿರಿ

Archive for

1
ಮಾರ್ಚ್

ಒಂದು ಊರಿನ ಕಥೆ

– ಹಂಸಾನಂದಿ

ಅಡುಗೆಒಂದೂರಿತ್ತಂತೆ. ಅಲ್ಲಿ ಹಲವು ಬಗೆಯ ಜನರು ಇದ್ದರು, ಒಬ್ಬರಿಗೆ ಹುಣಿಸೇ ಹಣ್ಣಿನ ಗೊಜ್ಜು ಇಷ್ಟ ಆದರೆ ಇನ್ನೊಬ್ಬರಿಗೆ ಬದನೇಕಾಯಿ ಪಲ್ಯ ಇಷ್ಟ. ಒಬ್ಬರಿಗೆ ಚಿತ್ರಾನ್ನ ಇಷ್ಟ ಆದರೆ ಮತ್ತೊಬ್ಬರಿಗೆ ಗೊಡ್ಡುಸಾರು. ಲೋಕೋ ಭಿನ್ನ ರುಚಿಃ ಅಂತ ಅದೇನೋ ಹೇಳ್ತಾರಲ್ಲ ಹಾಗೆ.  ಎಲ್ರೂ ಅವರವರ ಮನೆಯಲ್ಲಿ ಅಡುಗೆ ತಕ್ಕ ಮಟ್ಟಿಗೆ ಚೆನ್ನಾಗೇ ಮಾಡಿ ಊಟ  ಬಡಿಸ್ತಿದ್ದರಂತೆ.

ಆಗ ಊರಿಗೊಬ್ಬ ಹೊಸ ಡೊಣೆ ನಾಯಕ ಬಂದು ಠರಾವು ಮಾಡಿದನಂತೆ. ಈಗ ಇರೋ ಅಡುಗೆಗೆಳಲ್ಲಿ ಪೌಷ್ಟಿಕತೆ ಸಾಲದು. ಯಾವ ಅಡಿಗೇಭಟ್ಟರಿಗೂ ಒಂದು ಚೂರೂ ಹೊಸತು ಮಾಡೋ ಆಸೆಯಾಗಲಿ, ಕ್ರಿಯಾಶೀಲತೆಯಾಗಲೀ ಒಂದೂ ಇಲ್ಲ. ಅದಲ್ಲದೆ ಇದು ಪೀಟ್ಜ್ಝಾ ಬರ್ಗರ್ ಕಾಲ. ನಾವೂ ಎಲ್ಲರ ಸಮಕ್ಕೆ ಇರಬೇಕಾದರೆ ಹೊಸತನ್ನೇನಾದರೂ ತರಲೇ ಬೇಕು. ಅದು ಬಿಟ್ಟು  ಅಪ್ಪ ಹಾಕಿದ ಆಲದ ಮರ ಅಂತ ಬರೀ ಇಡ್ಲಿ ಸಾಂಬಾರ್ ತಿನ್ನುತ್ತಾ ಇರಬೇಕೇನು? ಪ್ರಪಂಚದಲ್ಲಿ ಇರೋದೆಲ್ಲ ನಾವು ಮಾಡೋಕಾಗ್ದೇನು?   ನಾವು ಒಂದು ಹೊಸ ಆಡಿಗೇ ಕಾರ್ಖಾನೆಯನ್ನೇ ತೆಗೆಯೋಣ ಅಂದನಂತೆ. ಹಲವಾರು  ಜನ ಚಪ್ಪಾಳೆ ತಟ್ಟಿದರಂತೆ.  ಒಂದಷ್ಟು ಜನ ಅವನನ್ನೂ ಹಿಂಬಾಲಿಸಿದರಂತೆ. ಒಂದಷ್ಟು ಜನ ಸುಮ್ಮನೇ ಕುತೂಹಲದಿಂದ ನೋಡಿದರಂತೆ. ಒಂದಷ್ಟು ಜನ ಈ ಡೊಣೆನಾಯಕಂದೇನು, ನಾವೇ ನೋಡ್ಕೋತೀವಿ ನಮ್ಮ ನಮ್ಮ ಅಡಿಗೇ ಮನೇಲೇನೇ, ಅಕ್ಕಿ ರೊಟ್ಟಿ ಬದಲು ಜೋಳದ ರೊಟ್ಟಿ ಮಾಡ್ತೀವಿ. ಮೆಣಸಿನ ಕಾಯಿ ಬದಲು ಕಾಳು ಮೆಣಸು ಹಾಕಿ ಕೂಟಿನ ರುಚಿ ಚೆನ್ಣಾಗಿರತ್ತೋ ಇಲ್ವೋ ಅಂತ. ಅದಕ್ಕೆ ಕಾರ್ಖಾನೆ ಯಾಕೆ ಬೇಕು ಅಂದರಂತೆ. ಆದರೆ ಗುಂಪಿನ ಗದ್ದಲದಲ್ಲಿ ಅವರ ಮಾತು ಯಾರಿಗೂ ಕೇಳಲಿಲ್ಲವಂತೆ.

ಮತ್ತಷ್ಟು ಓದು »