ವಿಷಯದ ವಿವರಗಳಿಗೆ ದಾಟಿರಿ

Archive for

12
ಮಾರ್ಚ್

‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ

-ಕ.ವೆಂ.ನಾಗರಾಜ್

ತುರ್ತು ಪರಿಸ್ಥಿತಿಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.

ಮತ್ತಷ್ಟು ಓದು »