ವಿಷಯದ ವಿವರಗಳಿಗೆ ದಾಟಿರಿ

Archive for

19
ಮಾರ್ಚ್

ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!

– ರಾಜೇಶ್ ರಾವ್

ಸಿಂಧು ರಕ್ಷಕ್ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.

ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.

ಮತ್ತಷ್ಟು ಓದು »