ನಾಡು- ನುಡಿ: ಮರುಚಿಂತನೆ- ಪ್ರಜಾಪ್ರಭುತ್ವ ಹಾಗೂ ಪ್ರತಿನಿಧಿಗಳು- ಭಾಗ:೧
-ಶ್ರೀ. ಆಯನೂರು ಮಂಜುನಾಥ್, ರಾಜ್ಯಸಭಾ ಸದಸ್ಯರು (-ಅಕ್ಷರಕ್ಕೆ ಇಳಿಸಿದವರು: ಸಂತೋಷ ಈ. ಕುವೆಂಪು.ವಿ.ವಿ, ಶಂಕರಘಟ್ಟ)
ರಾಜಕಾರಣಿಗಳಾದ ನಾವು ಒಂದು ತರಹ ವಿಚಿತ್ರವಾದ ಪರಿಸ್ಥಿತಿಯಲ್ಲಿ ಇದ್ದೇವೆ. ಹೊರಜಗತ್ತಿನಲ್ಲಿ ನಾವು ಬರುತ್ತಿರವಾಗ ನಮಸ್ಕಾರ ಎನ್ನುತ್ತಾರೆ. ನಾವು ದಾಟಿದ ಮೇಲೆ ನಮ್ಮನ್ನು ಬಯ್ಯುತ್ತಾರೆ. ನನ್ನಿಂದ ಅವನಿಗೆ ಏನೋ ಆಗಬೇಕು ಆದ್ದರಿಂದ ಅವನು ನಮಗೆ ಬಹಳ ಗೌರವ ಕೊಡುತ್ತಾನೆ. ಇಲ್ಲವಾದರೆ ನಮಗೆ ಗೌರವ ಕೊಡುವುದಿಲ್ಲ. ಇಂದು ಸಮಾಜದಲ್ಲಿ ನಮ್ಮ ಬಗ್ಗೆ ಗೌರವಗಳು, ಪ್ರೀತಿಗಳು ಪ್ರಾಮಾಣಿಕವಾಗಿ ಪ್ರಕಟವೆ ಆಗುತ್ತಿಲ್ಲ. ಜನರಿಗೆ ನಮ್ಮ ವಿರುದ್ಧವಾದ ಭಾವನೆಗಳು ಇದ್ದಲ್ಲಿ ಅ ಭಾವನೆಗಳನ್ನು ನಮ್ಮ ವಿರುದ್ಧ ವ್ಯಕ್ತಪಡಿಸಿದರೆ ನಾವು ನಮ್ಮ ತಪ್ಪನ್ನು ತಿದ್ದುಕೊಳ್ಳವುದಕ್ಕೆ, ಅದನ್ನು ಸರಿಪಡಿಸಿಕೊಳ್ಳವುದಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬಹುದು. ಅಥವಾ ನಾವು ಒಳ್ಳೆಯ ಕೆಲಸ ಮಾಡಿದಾಗ ಅದನ್ನು ನೇರವಾಗಿ ಹೇಳಿದರೆ ಮತ್ತಷ್ಟು ಪುಷ್ಟಿಕರಿಸಿಕೊಂಡು ಬೆಳೆಸಬಹುದು. ಆದರೆ ಸಮಾಜವೇ ಹೈ ಡಿಗ್ರಿಯ ಹಿಪೋಕ್ರಟಿಕ್ ಪರಿಸರದಲ್ಲಿ ಬದುಕುತ್ತಿದೆ. ಜನರು ತಮಗೆ ನೇರವಾಗಿ ಅನ್ನಿಸಿದ್ದನ್ನು ಹೇಳುತ್ತಿಲ್ಲ. ಹಿಪೋಕ್ರಟಿಕ್ ಜನರ ಮಧ್ಯೆ ಬೆಳದು ಬರುವ ನನ್ನಂತ ರಾಜಕಾರಣಿ ಇನ್ನೂ ಎಷ್ಟು ಹಿಪ್ರೋಕ್ರಟಿಕ್ ಆಗಿರಬಹುದು ನೀವೆ ಯೋಚನೆ ಮಾಡಿ.
ಈ ಜನರ ಮಧ್ಯೆಯೇ ರಾಜಕಾರಣಿಗಳಾದ, ನಾವು ಇರಬೇಕು. ವಿದ್ಯಾವಂತ ಅವಿದ್ಯಾವಂತರ ಮಧ್ಯೆ, ಜಾತಿ ಪ್ರೇಮಿಗಳ ಮಧ್ಯೆ, ಜಾತಿ ಮೀರದವರ ಮಧ್ಯೆ, ನಾನು ಅನ್ನುವವರ ಮಧ್ಯೆ, ಊರು ಅನ್ನುವವರ ಮಧ್ಯೆ, ಅನ್ಯಾಯವನ್ನ ಮಾಡುವವರ ಮಧ್ಯೆ, ಅನ್ಯಾಯವನ್ನು ವಿರೋಧಿಸುವವರ ಮಧ್ಯೆ, ಈ ರೀತಿಯ ವ್ಯವಸ್ಥೆಯ ಮಧ್ಯೆ ಜನಪ್ರತಿನಿಧಿ ಬೆಳೆದುಬರಬೇಕಾದರೆ, ಭವಿಷ್ಯ ನಮ್ಮ ಕಷ್ಟ ಅ ದೇವರಿಗೆ ಪ್ರೀತಿ. ಇತ್ತೀಚೆಗೆ ಬಹಳ ಸುಲಭವಾಗಿದೆ. ಸಮಾಜ ಹೇಗೆ ಭ್ರಷ್ಟವಾಗುತ್ತದೆಯೋ ಅದರ ಮಧ್ಯೆ ಅದೇ ರೀತಿಯ ಪ್ರತಿನಿಧಿಯು ಹುಟ್ಟಿಬರುತ್ತಿದ್ದಾನೆ. ಮತ್ತಷ್ಟು ಓದು