ವಿಷಯದ ವಿವರಗಳಿಗೆ ದಾಟಿರಿ

Archive for

4
ಏಪ್ರಿಲ್

ಜೋಶಿಯವರು ಕಂಡಂತೆ.. ಉಳಿದವರು ಕಂಡಂತೆ.. ಹೀಗಂತೆ…

-ಶ್ರೀವತ್ಸ ಜೋಶಿ

ಉಳಿದವರು ಕಂಡಂತೆಬೇಡಾ ನಂಬಬೇಡಾ… ಜೀವ ಹೋದರೂ ಕನ್ನಡ ಪತ್ರಿಕೆಗಳಲ್ಲಿನ ಚಿತ್ರವಿಮರ್ಶೆಗಳನ್ನು ನಂಬಬೇಡ.

‘ಉಳಿದವರು ಕಂಡಂತೆ’ ಬಗ್ಗೆ ಅವು ಬರೆದಿರೋ ವಿಮರ್ಶೆಯನ್ನಂತೂ ದೇವರಾಣೆಗೂ ನಂಬಬೇಡ.

ಅದರಲ್ಲೂ ಕಪ್ರ, ಪ್ರವಾ, ವಿಕ, ವಿವಾ ಗಳ ಪ್ರಲಾಪವನ್ನು ಕೇಳಲೇಬೇಡ. ಉದಯವಾಣಿಯಲ್ಲಿನ ವಿಮರ್ಶೆಯನ್ನು ಓದದೆ ಬಿಡಬೇಡ.

ಇದು, ಸದಭಿರುಚಿಯ ಕನ್ನಡ ಸಿನೆಮಾ ಪ್ರೇಕ್ಷಕನಿಗೆ ವಾಷಿಂಗ್ಟನ್ ಡಿಸಿಯಿಂದ ಒಬ್ಬ ಶ್ರೀ(ವತ್ಸ)ಸಾಮಾನ್ಯ ಕನ್ನಡಿಗನ ಕಿವಿಮಾತು.

ಭಾನುವಾರ (ಮಾರ್ಚ್ 30) ಬೆಳಿಗ್ಗೆ ಹತ್ತು ಗಂಟೆಗೆ ಇಲ್ಲಿನ AMC ಸಿನೆಮಾ ಕಾಂಪ್ಲೆಕ್ಸ್‌ನಲ್ಲಿ ’ಉಳಿದವರು ಕಂಡಂತೆ’ ಸಿನೆಮಾ ಪ್ರದರ್ಶನ ಇತ್ತು. ಅಮೆರಿಕದ ಇತರ ನಾಲ್ಕು ಕಡೆಗಳಲ್ಲಿ (ನ್ಯೂಜೆರ್ಸಿ, ಶಿಕಾಗೊ, ಡೆಟ್ರಾಯಿಟ್ ಮತ್ತು ಕ್ಯಾಲಿಫೋರ್ನಿಯಾ) ಸಹ ಈ ಚಿತ್ರ ಬಿಡುಗಡೆಯಾಯ್ತು. ಕನ್ನಡ ಚಲನಚಿತ್ರ ಪ್ರದರ್ಶನ ಇಲ್ಲಿ ಅಪರೂಪವೆಂದೇ ಹೇಳಬೇಕು, ಅದರಲ್ಲೂ ’ಉಳಿದವರು ಕಂಡಂತೆ’ಯಂಥ ವಿಭಿನ್ನ ವಿಶಿಷ್ಟ, “ಈರೀತಿಯದು ಕನ್ನಡದಲ್ಲಿ ಇದೇ ಮೊದಲು” ಎನ್ನಲಾದ ಚಿತ್ರ, ಅಲ್ಲಿ ಕರ್ನಾಟಕದಲ್ಲಿ ಬಿಡುಗಡೆಯಾದಾಗಲೇ ಇಲ್ಲೂ ಪ್ರದರ್ಶನ ಕಾಣುತ್ತಿರುವುದು ನಮಗೆಲ್ಲ ಸಂತೋಷದ, ಹೆಮ್ಮೆಯ ವಿಚಾರ. ವಾಷಿಂಗ್ಟನ್ ಡಿಸಿಯಲ್ಲಿನ ಚಿತ್ರಮಂದಿರ ಹೆಚ್ಚೂಕಡಿಮೆ ಭರ್ತಿಯಾಗಿತ್ತು, ಇತ್ತೀಚೆಗೆ ಇಲ್ಲಿಗೆ ಬಂದ ನವಯುವಕರು, ಐಟಿಹುಡುಗರು ತುಂಬಿಕೊಂಡಿದ್ರು. ನಾವೆಲ್ಲ ಚಿತ್ರವನ್ನು ತುಂಬ ಇಷ್ಟಪಟ್ಟೆವು.

’ಉಳಿದವರು ಕಂಡಂತೆ’ ಚಿತ್ರದ ವಿಮರ್ಶೆ ಕನ್ನಡದ ಪ್ರಮುಖ ದಿನಪತ್ರಿಕೆಗಳ ಶನಿವಾರದ ಸಂಚಿಕೆಗಳಲ್ಲಿ ಪ್ರಕಟವಾಗಿದ್ದನ್ನು ನಾನು ಗಮನಿಸಿದ್ದೆ, ಓದಿದ್ದೆ. ಅದೇನೂ ನನ್ನ ಮೇಲೆ ಪ್ರಭಾವ ಬೀರಿತ್ತು ಅಂತಲ್ಲ. ಆದರೆ ನಾನೇ ಸಿನೆಮಾ ನೋಡಿ ಬಂದಮೇಲೆ ಆ ವಿಮರ್ಶೆಗಳು (ಒಂದನ್ನು ಹೊರತುಪಡಿಸಿ) ಎಂಥ ಪ್ರಮಾಣದಲ್ಲಿ ದಾರಿತಪ್ಪಿಸುವಂಥವಾಗಿವೆ, ವಾಸ್ತವಕ್ಕೆ ಅದೆಷ್ಟು ದೂರವಾಗಿವೆ ಎಂದು ಅರಿತು ಆಘಾತವಾಯಿತು. ’ಉಳಿದವರು ಕಂಡಂತೆ’ಯಂಥ ಒಂದು ಉತ್ತಮ ಪ್ರಯತ್ನ/ಪ್ರಯೋಗದ ಉನ್ನತ ಮಟ್ಟದ ಮೌಲ್ಯವನ್ನು ಅರಿಯಲಾರದೆ “ದ್ರಾಕ್ಷಿ ಹುಳಿಯಾಗಿದೆ” ಎಂದು ಮುಖ ಸಿಂಡರಿಸಿ ಓಡಿದ ನರಿಯನ್ನು ಅವು ನನಗೆ ನೆನಪಿಸಿದವು.

ಮತ್ತಷ್ಟು ಓದು »

4
ಏಪ್ರಿಲ್

“ಉಳಿದವರು ಕಂಡಂತೆ” – ಅವರಿವರು ಕಂಡಂತೆ

– ವಸಂತ ಗಿಳಿಯಾರ್ ಕಂಡಂತೆ

ಉಳಿದವರು ಕಂಡಂತೆ ಅವರಿವರು ಕಂಡಂತೆ “ಉಳಿದವರು ಕಂಡಂತೆ” ಚಿತ್ರ ಹೇಗಿದೆಯೋ ಎಂಬುದರ ಬಗ್ಗೆ ನಾನು ಮಂಡೆಕೆಡಿಸಿಕೊಳ್ಳಲಾರೆ.. ತಾಂತ್ರಿಕವಾಗಿ ಮೊದಲ ನಿರ್ದೇಶನದಲ್ಲೆ ಗೆದ್ದಿದ್ದಾರೆ ರಕ್ಷಿತ್ ಎಂದು ನೇರವಾಗಿ ಮಾರ್ಕ್ ಕೊಡುತ್ತಿದ್ದೇನೆ. ಮಿಕ್ಕುಳಿದಂತೆ ಭಾಷೆ ಅರ್ಥವಾಗುವುದಿಲ್ಲ ಎಂದು ಮಗುಮ್ಮಾಗಿ ದೂರುವವರಿಗೆ ನಾನು ಕೇಳುವುದು ಇಷ್ಟನ್ನೆ ಒಂದು ಚೂರೂ ಅರ್ಥವಾಗದಿದ್ದರೂ ಕೆಲವರು english,ತಮಿಳು,ತೆಲುಗು ಚಿತ್ರವನ್ನ ನೋಡುವುದಿಲ್ಲವೇ? ಇದು ನಮ್ಮದೇ ರಾಜ್ಯದ ಒಂದು ಪ್ರದೇಶದ ವಿಶಿಷ್ಟವಾದಂತ ಚಂದದ ಕುಂದಗನ್ನಡವೆಂಬ ಭಾಷೆ. ಅರ್ಥವಾಗದಿದ್ದರೂ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿ.. ನಿಮ್ಮ ಪ್ರಯತ್ನ ವ್ಯರ್ಥವಾಗದು..ಯಾಕೆಂದರೇ ನಮ್ಮದೇ ರಾಜ್ಯದಲ್ಲಿ ಕನ್ನಡ ಭಾಷೆ ಯಾವ ಯಾವ ರೀತಿಯಲ್ಲಿದೆ ಎಂಬುದು ನಿಮ್ಮ ಗ್ರಹಿಕೆಗೆ ನಿಲುಕುತ್ತದೆ.. “ಉಳಿದವರು ಕಂಡಂತೆ” ಚಿತ್ರ ನನಗೆ ನನ್ನ ಬಾಲ್ಯದ ಬದುಕನ್ನ ನೆನಪಿಸಿತು.. ರಿಚ್ಚಿ ಪಾತ್ರವನ್ನ ಕಂಡು ನನಗೆ ನನ್ನ ಬಾಲ್ಯದ ಗೆಳೆಯ ಹಂದಾಡಿಯ ರಾಬರ್ಟ್ ನೆನಪಾದ. ಡೆಮಕ್ರಶಿ ನನ್ನ ಬಾಲ್ಯದ ಅವತಾರದ ಚಿತ್ರಣವೆಂದೆನಿಸಿತು..

“ಪೇಪರ್ ಪೇಪರ್ ಮೆಡಿಸಿನ್ ಪೇಪರ್” ಎಂಬ ಹಾಡು ಬಾಲ್ಯದಲ್ಲಿ ದನಕಾಯುವಾಗ ನಮ್ಮ ಗುಂಪಿನಲ್ಲಿ ನಾವು ಹಾಡಿಕೊಳ್ಳುತ್ತಿದ್ದ ಚಲನಚಿತ್ರ ಗೀತೆಯ ನೆನಪು ತಂದರೆ ವಿಟ್ಲಪಿಂಡಿಯ ಹುಲಿವೇಶ ಕಣ್ಣ ಮುಂದೆ ಹಾದು ಹೋದಂತಾಯಿತು.. ಊರಿಗೆ ಕೇವಲ ೪೦೦ ಕಿಲೋಮೀಟರ್ ದೂರದಲ್ಲಿರುವ ನನಗಿಂತ ಸಾವಿರಾರು ಕಿಲೋಮೀಟರ್ ದೂರದಲ್ಲಿರುವವರಿಗೆ ಅಥವ ಊರಿನಿಂದ ದೂರವೆ ಉಳಿದವರಿಗೆ ಇದು ಮತ್ತಷ್ಟು ಆಪ್ತವಾಗಿ ಕಾಣಿಸ ಬಹುದು. ಕಥೆಯೆ ಬಗ್ಗೆ ನಾನು ಹೆಚ್ಚು ತಲೆಕೆಡಿಸಿ ಕೊಳ್ಳಲಿಲ್ಲ ಘಟಿಸುವ ಘಟನೆಗಳು ಒಂದನ್ನೊಂದು ಬೆನ್ನತ್ತುವ ರೀತಿ ಸೊಗಸಾಗಿದ. ಚಿತ್ರ ಮುಗಿಸಿ ಹೊರಬಂದ ಮೇಲೆ ನನ್ನೊಳಗೆ ಕಥೆ ಆರಂಭವಾಗಲು ಆರಂಬಿಸಿತು.. ಒಂದೊಂದು ಪಾತ್ರದಲ್ಲು ಒಂದೊಂದು ಕಥೆ ಅರಳ ತೊಡಗಿತು. ಚಿತ್ರ ಒಳಗೊಂಡ ಸಂಗೀತ ಸಾಹಿತ್ಯ ನವಿರು ಭಾವದ ಅಲರು ಕಂಪನವನ್ನ ಹುಟ್ಟಿಸುತ್ತದೆ..” ಮಳೆ ಮರೆತು ಹಸಿರಾಗಿ ನಿಂತಾಗ ಈ ಭೂಮಿ ..ಸಲಹೇನೆ ಕೊಡಬೇಡ ದೇವರೆ ನೀನಿಲ್ಲಿ ಹಂಗಾಮಿ.. ಹಾಡು ಗುಂಗಿನಂತೆ ಕಾಡುತಿದೆ.. ಹೌದು ಉಳಿದವರು ಕಂಡಂತೆ ಒಂದು ಉತ್ತಮವಾದ ಚಿತ್ರ.. ಕನ್ನಡಕ್ಕೊಂದು ಪ್ರಯೋಗಾತ್ಮಕ ಚಿತ್ರ ಎಂದು ಹೇಳಬಲ್ಲೆ.. ರಕ್ಷಿತ್ ಮತ್ತು ತಂಡಕ್ಕೆ ನನ್ನದೂಂದು ಅಭಿನಂದನೆ…

*** *** *** ಮತ್ತಷ್ಟು ಓದು »