ವಿಷಯದ ವಿವರಗಳಿಗೆ ದಾಟಿರಿ

Archive for

11
ಏಪ್ರಿಲ್

‘ದೇಶ ಮೊದಲು’ ಎಂದ ಕದನ ಕಲಿಗಳ ಆತ್ಮ ಸಮ್ಮಾನವನ್ನು ದೇನಿಸುತ್ತಾ….

– ರಾಘವೇಂದ್ರ ಅಡಿಗ ಎಚ್ಚೆನ್

ಕಾರ್ಗಿಲ್ ಯುದ್ಧಯಾರೇ ಒಬ್ಬ ವ್ಯಕ್ತಿ ಸೈನ್ಯಕ್ಕೆ ಸೇರುತ್ತಾನೆಂದರೆ ಆ ವ್ಯಕ್ತಿಯ ಜಾತಿ, ಧರ್ಮಗಳೇನು ಎನ್ನುವುದನ್ನು ಯಾರೊಬ್ಬರೂ ಕೇಳುವುದಿಲ್ಲ. ಬದಲಾಗಿ ಅವನಿಗಿರುವ ದೇಶಾಭಿಮಾನಕ್ಕೆ ದೇಶವಾಸಿಗಳೆಲ್ಲಾ ತಲೆದೂಗುತ್ತಾರೆ. ಸೈನ್ಯಕ್ಕೆ ಸೇರ್ಬಹುದಾದ ವ್ಯಕ್ತಿ ಯಾರೇ ಆದರೂ ಅವನ ಬಗ್ಗೆ ಇಡಿ ದೇಶವೇ ಹೆಮ್ಮೆ ಪಡುತ್ತದೆ ಏಕೆಂದರೆ ಭಾರತೀಯ ಸೇನೆ ನಿರ್ವಹಿಸುವ ಕಾರ್ಯ ಅಂತಹುದು. ಮಳೆ, ಚಳಿ, ಶೀತ ಮಾರುತ, ಬಿರು ಬಿಸಿಲು ಎನ್ನುವುದನ್ನೂ ಲೆಕ್ಕಿಸದೆ ಹಗಲಿರುಳೂ ದೇಶದ ಗಡಿ ಕಾಯುವ ಯೋಧರ ದೇಶ ನಿಷ್ಠೆಯಿಂದಾಗಿಯೇ ಇಂದು ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ.

ಅದು 1999 ಮೇ ತಿಂಗಳು, ಪಾಕಿಗಳು ಕಾರ್ಗಿಲ್‌ನ, ಪೂರ್ವ ಬಟಾಲಿಕ್‌ನ ಮತ್ತು ದ್ರಾಸ್‌ನ ಉತ್ತರ ದಿಕ್ಕಿನ ಬೆಟ್ಟಗಳನ್ನು ಏರತೊಡಗಿದರು. ಗಟ್ಟಿ ಮುಟ್ಟಾಗಿದ್ದ ಬಂಕರುಗಳನ್ನು ತಮ್ಮೊಂದಿಗಿಟ್ಟುಕೊಂಡಿದ್ದ ಅವರು ಭಾರತೀಯದ ಸರ್ವ ರೀತಿಯ ಧಾಳಿಗೂ ಸನ್ನದ್ದರಾಗಿದ್ದರು. ಹಳ್ಳಿಗಾಡಿನ ದನಗಾಹಿಗಳಿಂದ ಪಾಕಿಸ್ತಾನದ ಈ ಕುಟಿಲೋಪಾಯವನ್ನರಿತ ನಮ್ಮ ಸೇನೆ ವರದಿ ತರಲೆಂದು ಸೌರಭ್ ಕಾಲಿಯಾ ನೇತೃತ್ವದಲ್ಲಿ ಐವರನ್ನು ಗುಡ್ಡ ಹತ್ತಿಸಿತು. ಶತ್ರುಪಡೆಗಳ ಸಾಮರ್ಥ್ಯದ ಅಂದಾಜಿಲ್ಲದ ನಮ್ಮವರು ಬೆಟ್ಟ ಹತ್ತಿ ಪಾಕ್ ನ ಮತಾಂಧ ಸೈನಿಕರ ಕೈಯಲ್ಲಿ ಸಿಕ್ಕಿಹಾಕಿಕೊಂಡು ಕ್ರೂರವಾದ ಹಿಂಸೆಗೆ ತುತ್ತಾದರು. ಅಷ್ಟೆ ಅಲ್ಲ ಅವರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಭಾರತೀಯ ಸೇನಾ ಶಿಬಿರಕ್ಕೆ ಹಿಂತಿರುಗಿಸಲಾಯಿತು.

ಅಂದಿನ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರವು ತಕ್ಷಣವೇ ‘ಆಪರೇಷನ್ ವಿಜಯ್’ ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆ ನಡೆಸಲು ಆದೇಶ ನೀಡಿತು. ಆದರೆ ಅಂತಹಾ ಸೂಕ್ಷ್ಮ ಸ್ಥಿತಿಯಲ್ಲಿ ದೇಶದ ಗಡಿ ಕಾಯುತ್ತಿದ್ದ ಸೈನಿಕರ ಬಳಿ ಸರಿಯಾದ ಆಧುನಿಕ ಶಸ್ತ್ರಾಸ್ತ್ರಗಳೂ ಇರಲಿಲ್ಲ! ದೇಹ ರಕ್ಷಣೆಗೆ ಅವಷ್ಯವಾದ ಬಟ್ಟೆಗಳೂ ಇರಲಿಲ್ಲ! ಮತ್ತಷ್ಟು ಓದು »