ವಿಷಯದ ವಿವರಗಳಿಗೆ ದಾಟಿರಿ

Archive for

7
ಮೇ

ಪಂಕ್ತಿ ಭೋಜನದ ಸುತ್ತಮುತ್ತ

-ಪ್ರಜ್ಞಾ ಆನಂದ್

ಪ್ರತ್ಯೇಕ ಪಂಕ್ತಿ ಬೇಧಉಡುಪಿಯಲ್ಲಿ ಊಟದ ಮಧ್ಯೆ ಬ್ರಾಹ್ಮಣಳಲ್ಲವೆಂಬ ಕಾರಣಕ್ಕೆ ಓರ್ವ ಮಹಿಳೆಯನ್ನು ಊಟದ ಪಂಕ್ತಿಯಿಂದ ಹೊರಹಾಕಿದ ಘಟನೆ ಬಹಳ ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ ಆ ಘಟನೆಯನ್ನು ವಿಶ್ಲೇಶಿಸುವ ಸಂದರ್ಭದಲ್ಲಿ ಪರ ಹಾಗೂ ವಿರೋಧದ ಬಗ್ಗೆ ನಡೆದ ಚರ್ಚೆಗಳು ತೀರ ಬಾಲಿಶವಾಗಿಯೂ, ಅನುಚಿತವಾಗಿಯೂ ಇದ್ದಂತೆ ಕಂಡುಬಂದಿತು;ಒಂದು ರೀತಿಯಲ್ಲಿ ನಿಷ್ಪ್ರಯೋಜಕವೂ ಹೌದು.ಪರವಾಗಿ ವಾದಿಸಿದ ಬಹುತೇಕರು ಹೇಳಿದ್ದೇನೆಂದರೆ ಊಟ ಎನ್ನುವದು ಬ್ರಾಹ್ಮಣರಿಗೆ ಯಜ್ಞ ಇದ್ದಂತೆ ಹಾಗೂ ಅನೇಕ ವಿಧಿ ವಿಧಾನಗಳನ್ನು ಅನುಸರಿಸಬೇಕಾದ್ದರಿಂದ ಬ್ರಾಹ್ಮಣರಿಗೆ ಬೇರೆಯದೆ ಪಂಕ್ತಿಭೋಜನ ಸರಿ ಎಂದು. ಇದನ್ನು ವಿರೋಧಿಸಿ ಹೇಳಿದವರಲ್ಲಿ ಇದೊಂದು ಅಮಾನವೀಯ, ಹಿಂದೂ ಧರ್ಮಕ್ಕೆ ತೊಡಕು, ಜಾತ್ಯಾತೀತವಲ್ಲ ಇತ್ಯಾದಿ ಹೇಳಿಕೆಗಳು. ಬಹುತೇಕವಾಗಿ ಎಲ್ಲರೂ ಜಾತ್ಯಾತೀತದ ಆಧಾರದ ಮೇಲೆ ಇದನ್ನು ವಿರೋದಿಸಿದ್ದಾರೆ. ಬ್ರಾಹ್ಮಣ, ಶೂದ್ರ ಇತ್ಯಾದಿಯಾಗಿ ಹೈಪೊಥೆಟಿಕಲ್ ಥಿಯರಿಯನ್ನು ಹೊಂದಿದ್ದವನಿಗೆ ಈ ಘಟನೆ ಹೊಸ ಫಾರ್ಮುಲಾದ ಅವಿಷ್ಕಾರವನ್ನು ನೀಡಿರಬಹುದು. ಇದಕ್ಕೂ ಮೀರಿದ ರೀತಿಯಲ್ಲಿ ಪಂಕ್ತಿಭೇದದ ಬಗ್ಗೆ ವಿವರಣೆಯನ್ನು ನೀಡಬಹುದಾದರೆ ನೈಜತೆಯ ಬಗ್ಗೆ ಪರಿಶೀಲಿಸಲು ಅನುಕೂಲವಾಗಬಹುದು.

ಪಂಕ್ತಿಭೇದದ ಪರ ವಾದಿಸುವವರನ್ನು ತೆಗೆದುಕೊಂಡರೆ ಅವರ ಪ್ರಕಾರ ಬ್ರಾಹ್ಮಣರ ಊಟ ಎಂಬುದು ಯಜ್ಞ.ಈ ವಿಧಿ ವಿಧಾನದ ಆಚರಣೆಗೋಸ್ಕರ ಪ್ರತ್ಯೇಕ ಪಂಕ್ತಿಭೋಜನದ ಅಗತ್ಯತೆಯನ್ನು ವಿವರಿಸುತ್ತಾರೆ. ಆದರೆ ಅದು ನಿಜವಾದಲ್ಲಿ, ಎಲ್ಲಾ ಬ್ರಾಹ್ಮಣರೂ ಎಲ್ಲಾ ಪ್ರದೇಶದಲ್ಲಿಯೂ, ಎಲ್ಲಾ ಸಂದರ್ಭದಲ್ಲಿಯೂ ಅಂತಹ ಆಚರಣೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇಂತಹ ಆಚರಣೆಗಳನ್ನು ಕಟ್ಟುನಿಟ್ಟಾಗಿ ಆಚರಿಸುವ ಬ್ರಾಹ್ಮಣರು ತೀರ ಅತ್ಯಲ್ಪ;ದೇವಾಲಯ, ಮಠಗಳಲ್ಲಿರುವ ಕೆಲವೇ ಮಂದಿ ಮಾತ್ರ. ಉಳಿದವರು ಕಟ್ಟುನಿಟ್ಟಾಗಿ ಆಚರಣೆಗಳನ್ನು ಪಾಲಿಸುವವರಲ್ಲ. ಎಷ್ಟೋ ಸಮಯದಲ್ಲಿ ಹೊಟೆಲ್ ಗಳಲ್ಲಿ ತಿನ್ನುವದು ಸಾಮಾನ್ಯವೆ. ಅಲ್ಲೆಲ್ಲಾ ಪಂಕ್ತಿಬೇದಗಳೂ ಲೆಕ್ಕಕ್ಕಿರುವದಿಲ್ಲ, ಅಡುಗೆ ಮಾಡಿದ ಜನರ ಕುಲ ಗೋತ್ರಗಳೂ ಲೆಕ್ಕಕ್ಕಿರುವದಿಲ್ಲ. ಊಟದ ಆಚರಣೆ/ಪದ್ದತಿಗಳೂ ಅನುಸರಿಸಲೇಬೇಕಾದ ಯಜ್ಞವೆಂಬಂತೆ ಎಲ್ಲಾ ಬ್ರಾಹ್ಮಣರಿಗೆ ತೋರುವದೂ ಇಲ್ಲ. ಕೆಲವು ದಿವಸಗಳಲ್ಲಿ, ಕೆಲವು ಸಂದರ್ಭಗಳಲ್ಲಿ, ಕೆಲವು ಸ್ಥಳಗಳಲ್ಲಿ ಮಾತ್ರ ಆ ಸ್ಥಳದ ಸಂಪ್ರದಾಯ ಎಂಬಂತೆ ಪಾಲಿಸುತ್ತಾರೆ.ಹಾಗಾಗಿ, ಉಡುಪಿ ಮಠದಲ್ಲಿನ ಪಂಕ್ತಿಭೇದ ಆ ಸ್ಥಳಕ್ಕೆ, ಸಂದರ್ಭಕ್ಕೆ ಮಾತ್ರ ಸೀಮಿತವಾಗಿರುವದೇ ಹೊರತು, ಬ್ರಾಹ್ಮಣ ಆಚರಣೆ/ವಿಧಿ ವಿಧಾನಗಳು, ಯಜ್ಞ ಎಂಬೆಲ್ಲಾ ಕಾರಣ ಕೊಟ್ಟು ಸಮರ್ಥಿಸುವದು ಹಾಸ್ಯಾಸ್ಪದ.

ಮತ್ತಷ್ಟು ಓದು »