ವಿಷಯದ ವಿವರಗಳಿಗೆ ದಾಟಿರಿ

Archive for

29
ಮೇ

ತನ್ನದೇ ಮನಸ್ಸು(ಮಾನಸ), ಶಿರ(ಕೈಲಾಸ)ವನ್ನು ಹೊಂದಿರುವ ತನ್ನ ಮಗುವನ್ನು ಭಾರತ ಮರಳಿ ಪಡೆದೀತೇ?

– ರಾಜೇಶ್ ರಾವ್

ಕೈಲಾಸ ಮಾನಸ ಸರೋವರ“ಅಮೇರಿಕಾದಲ್ಲಿ ನಾವು ಆಶ್ರಯ ಪಡೆದಿದ್ದರೆ ನನ್ನ ಸಂಗಾತಿಗಳೂ ಅಮೇರಿಕರನ್ನರಾಗಿ ನಮ್ಮಲ್ಲೂ ಟಿಬೆಟ್ ತನ ಮಾಯವಾಗುತ್ತಿತ್ತು. ಭಾರತದ ಸಹಿಷ್ಣುತೆಯೇ ಜಗತ್ತಿನಲ್ಲಿ ನಾವು ನಮ್ಮತನವನ್ನು ಉಳಿಸಿಕೊಂಡಿದ್ದೇವೆ”-ದಲಾಯಿ ಲಾಮ.  ಹಿಂದೂಗಳ ಸಹಿಷ್ಣುತೆಯ ಮನೋಭಾವನೆಯನ್ನು ವಿಶ್ವವೇ ಕೊಂಡಾಡುತ್ತದೆ. ಆದರೆ ಸಹಿಷ್ಣುಗಳಾಗುವ ಭರದಲ್ಲಿ ನಮ್ಮ ಭದ್ರತೆಗೆ ನಾವೇ ಕೊಳ್ಳಿ ಇಟ್ಟುಕೊಂಡಿರುವುದು ಅಷ್ಟೇ ಸತ್ಯ! ಬಂದವರಿಗೆಲ್ಲರಿಗೂ ಆಶ್ರಯ ಕೊಟ್ಟೆವು. ಕೆಲವರು ನಮ್ಮೊಂದಿಗೆ ಕಲೆತರು, ಕಲಿತರು. ಇನ್ನು ಕೆಲವರು ನಮ್ಮ ಬುಡಕ್ಕೇ ಕೊಳ್ಳಿ ಇಟ್ಟರು,ಇಡುತ್ತಲೇ ಇದ್ದಾರೆ! ಆಶ್ರಯ ಬೇಡಿ ಬಂದ ದಲಾಯಿ ಲಾಮರಿಗೇನೋ ಆಶ್ರಯ ಕೊಟ್ಟೆವು. ಆದರೆ ಭಾರತದ ರತ್ನ ಖಚಿತ ಕಿರೀಟವನ್ನೇ(ಟಿಬೆಟ್) ಕಳೆದುಕೊಂಡು ಬಿಟ್ಟೆವು!
ಸಹಸ್ರಾರು ವರ್ಷಗಳ ಕಾಲ ಭಾರತದ ಭಾಗವಾಗಿದ್ದು ಕೈಲಾಸ ಮಾನಸ ಸರೋವರಗಳನ್ನೊಳಗೊಂಡ ಟಿಬೆಟ್ ಮಂಗೋಲಿಯಾ, ಚೀನಾದ ರಾಜರುಗಳು ಹಾಗೂ ಬ್ರಿಟಿಷರ ಆಕ್ರಮಣಗಳಿಗೆ ತುತ್ತಾಗಿದ್ದರೂ ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಂಡಿತ್ತು. ಆದರೆ 1950ರಲ್ಲಿ ಟಿಬೆಟನ್ನು ಚೀನಾ ಆಕ್ರಮಣ ಮಾಡಿದ ನಂತರ ಟಿಬೆಟಿಯನ್ನರು ತಮ್ಮ ಸ್ವಾತಂತ್ರ್ಯ ಸಾರ್ವಭೌಮತೆಗಳನ್ನು ಕಳೆದುಕೊಂಡುಬಿಟ್ಟರು. ಎರಡನೇ ವಿಶ್ವಯುದ್ಧದ ಕಾಲದಲ್ಲಿ ತನಗೆ ಸಮುದ್ರ ತೀರಗಳಿಲ್ಲದ ಹಿನ್ನೆಲೆಯಲ್ಲಿ ಜಪಾನ್ ಒಡ್ಡಿದ ಸವಾಲಿಗೆ ಮುಖಾಮುಖಿಯಾಗಿ ನಿಲ್ಲುವ ಸಂದರ್ಭದಲ್ಲಿ ಭಾರತದಿಂದ ಅವಶ್ಯಕ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲು ಟಿಬೆಟ್ ಮಾರ್ಗದ ಅನುಮತಿ ಕೇಳಿದಾಗ ಚೀನಾದ ವಿಸ್ತರಣಾವಾದಿ ನೀತಿ ಹಾಗೂ ಗೋಮುಖವ್ಯಾಘ್ರತನವನ್ನು ಅರಿತಿದ್ದ ಟಿಬೆಟ್ ಅನುಮತಿ ನಿರಾಕರಿಸಿತ್ತು.

ಕಳೆದ ಶತಮಾನದ ಆರಂಭದಲ್ಲಿ ಸುಮಾರು 65ಲಕ್ಷದಷ್ಟು ಜನಸಂಖ್ಯೆ ಟಿಬೆಟಿನಲ್ಲಿತ್ತು. ಆದರೆ ಟಿಬೆಟನ್ನು ಆಕ್ರಮಿಸಿದ ಚೀನಾ 15ಲಕ್ಷದಷ್ಟು ಜನರ ಮಾರಣಹೋಮ ನಡೆಸಿತು. ಚೀನಾದ ಪಾಶವೀಯತೆ ಯಾವ ಪರಿ ಇತ್ತೆಂದರೆ ಲಿಥಾಂಗ್ ವಿಹಾರದ ಮೇಲೆ ಬಾಂಬು ಹಾಕಿದಾಗ ವಿಹಾರದೊಳಗಿದ್ದ 6500 ಜನರ ಪೈಕಿ 4500ಕ್ಕೂ ಹೆಚ್ಚು ಜನರು ಹೆಣವಾಗಿ ಬಿದ್ದರು. 1959ರಲ್ಲಿ ದಲಾಯಿ ಲಾಮ ಸ್ವಯಂ ಗಡಿಪಾರಾಗಿ ಭಾರತದ ಆಶ್ರಯ ಪಡೆದರು. ಆದರೆ ಟಿಬೆಟಿಯನ್ನರ ಪರಿಸ್ಥಿತಿ ಮತ್ತಷ್ಟು ಶೋಚನೀಯವಾಯಿತು. ಟಿಬೆಟನ್ನರು ದಲಾಯಿ ಲಾಮ ಭಾವಚಿತ್ರ ಇಟ್ಟುಕೊಳ್ಳುವುದು, ಬೌದ್ಧವಿಹಾರಗಳಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುವುದು ಇವೆಲ್ಲಾ ಚೀನಾ ಆಕ್ರಮಿತ ಟಿಬೆಟಿನಲ್ಲಿ ಅಪರಾಧಗಳಾಗಿವೆ. ಟಿಬೆಟಿನಲ್ಲೇ ಇರುವ ಮಾನಸ ಸರೋವರ ಕೈಲಾಸಗ ಪರ್ವತಗಳಿಗೆ ಹೋಗಬೇಕಾದರೂ ಟಿಬೆಟಿಯನ್ನರು ಚೀನಾ ಸರಕಾರದ ಅನುಮತಿ ಪಡೆಯಬೇಕು. TAR ಮಾನ್ಯ ಮಾಡಿರುವ ಧಾರ್ಮಿಕ ಉತ್ಸವಗಳನ್ನು ಮಾತ್ರ ಟಿಬೆಟನ್ನರು ಆಚರಿಸಬೇಕು. ಬೌದ್ಧ ಸನ್ಯಾಸಿಗಳು ಇತರ ವಿಹಾರಗಳಿಗೆ ಭೇಟಿ ನೀಡುವಂತಿಲ್ಲ. ಚೀನಾ ಸರಕಾರ ನಿಗದಿಪಡಿಸಿರುವಷ್ಟೇ ಸಂಖ್ಯೆಯ ಸನ್ಯಾಸಿಗಳು ವಿಹಾರಗಳಲ್ಲಿರಬೇಕು. ಅಲ್ಲದೆ ಅವುಗಳಲ್ಲಿ ಕಡ್ಡಾಯವಾಗಿ ‘ದೇಶಭಕ್ತಿ ಶಿಕ್ಷಣದ’ ತರಗತಿ, ಚೀನಾದ ಆಡಳಿತ ಸಾಧನೆ ಕಂಠಪಾಠ ಮಾಡುವ ತರಗತಿಗಳಿಗೆ ಹಾಜರಾಗುವುದು, “ವಿಶಾಲ ತಾಯ್ನಾಡಿಗೆ” ಗೌರವ ಅರ್ಪಿಸುವ ಪ್ರಮಾಣ ಮಾಡುವುದು ಕಡ್ಡಾಯ. ಪ್ರವಾಸಿಗರು ಸ್ಥಳೀಯ ಟಿಬೆಟನ್ನರೊಂದಿಗೆ ಮಾತಾಡುವುದಾಗಲೀ, ಟಿಬೆಟ್ ಕಾಲೊನಿಗಳಿಗೆ ಹೋಗುವುದಾಗಲೀ ನಿಷಿದ್ದ! ಚೀನಾ ವಿರೋಧಿ ಚಟುವಟಿಕೆಗಳನ್ನು ನಡೆಸುವವರನ್ನು ಅವರ ಕುಟುಂಬದವರೇ ಸಾರ್ವಜನಿಕವಾಗಿ ಕಲ್ಲೆಸೆಯುವಂತಹ ಶಿಕ್ಷೆ ನೀಡಲಾಗುತ್ತದೆ. ಅಲ್ಲದೆ ಅಣ್ವಸ್ತ್ರ ಪರೀಕ್ಷೆಗೂ ಟಿಬೆಟ್ ನೆಲವನ್ನು ಬಳಸಲಾಗುತ್ತಿದೆ.
ಮತ್ತಷ್ಟು ಓದು »