ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೮
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
‘ಆವರಣ’ ಎಂಬ ವಿ-ಕೃತಿ — ಸಂಗ್ರಹ : ಗೌರಿ ಲಂಕೇಶ್ (ಭಾಗ–೩)
————————————————————————
‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನದಲ್ಲಿ ಒಟ್ಟು ಇಪ್ಪತ್ತೊಂದು ಲೇಖನಗಳಿವೆ. ಇವುಗಳಲ್ಲಿ ಎಂಟು ಲೇಖನಗಳ ಬಗ್ಗೆ ಈಗಾಗಲೇ ಎರಡು ಭಾಗಗಳಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದಾಗಿದೆ. ಇನ್ನು ಉಳಿದಿರುವ ಹದಿಮೂರು ಲೇಖನಗಳು ಎರಡು ರೀತಿಯವು. (೧) ‘ಆವರಣ’ ಕಾದಂಬರಿಗೆ ನೇರವಾಗಿ ಸಂಬಂಧಿಸಿರುವಂತಹವು. (೨) ‘ಆವರಣ’ ಕಾದಂಬರಿಯನ್ನು ನೆಪ ಮಾತ್ರಕ್ಕೆ ಇಟ್ಟುಕೊಂಡು ಭೈರಪ್ಪನವರ ನಡೆ-ನುಡಿಗಳನ್ನು ಹೇಳುವಂತಹವುಗಳು.
‘ಆವರಣ’ ಕಾದಂಬರಿಗೆ ಸಂಬಂಧಿಸಿರುವಂತಹ ಲೇಖನಗಳಲ್ಲಿ ಸಹ ಈ ಹಿಂದಿನ ಎರಡು ಭಾಗಗಳಲ್ಲಿ ಚರ್ಚಿತವಾದ ವಿಷಯಗಳನ್ನು ಬಿಟ್ಟು ವಿಶೇಷವಾದ,ಹೊಸದಾದ ಅಂಶಗಳು ಇಲ್ಲ. ಆದ್ದರಿಂದ ಅವುಗಳ ಬಗ್ಗೆ ವಿವರವಾದ ಚರ್ಚೆ ಪುನರುಕ್ತಿಯಾಗುತ್ತದೆ. ಪುನರುಕ್ತಿಯಾಗದಂತಹ ಕೆಲವು ಅಂಶಗಳ ಬಗ್ಗೆ ಮಾತ್ರ ಈ ಭಾಗದಲ್ಲಿ ಒತ್ತು ನೀಡಲಾಗಿದೆ.
ಹಿಂದಿನದನ್ನೆಲ್ಲ ‘ಆವರಣ’ದಲ್ಲಿ ಪೇರಿಸುವ ಪ್ರಯತ್ನ ಲೇಖನ ಬರೆದಿರುವ ಬಿ. ಎಸ್. ವೆಂಕಟಲಕ್ಷ್ಮಿಯವರಿಗೆ ‘…… ಕಾದಂಬರಿಯೊಂದನ್ನು ಉಲ್ಲಾಸಕ್ಕಾಗಿಯೋ ಅಥವಾ ತಮ್ಮ ವೈಚಾರಿಕತೆಯನ್ನು ಹಿಗ್ಗಿಸಿಕೊಳ್ಳುವ ಸಲುವಾಗಿಯೋ ಕೈಗೆತ್ತಿಕೊಳ್ಳುವ ಸಾಮಾನ್ಯ ಓದುಗರಿಗೆ ಕಾದಂಬರಿಯೊಂದು ಸಹಜವಾಗಿ ಓದಿಸಿಕೊಂಡಾಗ ಮಾತ್ರ ಒಂದು ಬಗೆಯ ತೃಪ್ತಿ …….. ಸಾರ್ಥಕ ಭಾವನೆ ಮೂಡುತ್ತದೆ……… ‘ಆವರಣ’ದಲ್ಲಿ ಯಾವೊಂದು ಕಥೆಯನ್ನೂ ಸುಸೂತ್ರವಾಗಿ ಹೇಳದೆ ಅಹಿತಕರ ಘಟನೆಗಳಿಗೆ ಮಾತ್ರ ಒತ್ತುಕೊಟ್ಟಿದೆ ‘ ಎಂಬ ಅಸಮಾಧಾನ. ಉಲ್ಲಾಸ, ಸುಸೂತ್ರವಾದ ಕಥೆ ಇವುಗಳ ಜತೆ ವೈಚಾರಿಕತೆಯನ್ನೂ ಬಯಸುವುದು ತೀರಾ ದುಬಾರಿಯಾಗುತ್ತದೆ. ಕಾದಂಬರಿಯೊಂದರಲ್ಲಿ ‘ವೈಚಾರಿಕತೆ’ ಎಂಬುದು ವಿಶಾಲ ವ್ಯಾಪ್ತಿಯ ಚರ್ಚೆಯನ್ನು ಬೇಡುವಂತಹುದು. ಈಗಾಗಲೇ ಭೈರಪ್ಪನವರ ಮೇಲೆ ಅವರು ತಮ್ಮ’ ವೈಚಾರಿಕತೆ ‘ಯನ್ನು ಓದುಗರಿಗೆ ಹೇಳುವುದುಕ್ಕೊಸ್ಕರ ಕಾದಂಬರಿಯನ್ನು ಒಂದು ಸಾಧನವನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಆರೋಪ ನಮ್ಮ ಸಾಹಿತ್ಯವಲಯದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಓದುಗ ಬಯಸುವ ‘ವೈಚಾರಿಕತೆ’ ಯಾವ ರೀತಿಯದು ಎಂಬುದು ಸ್ಪಷ್ಟವಾಗಿಲ್ಲ. ‘ಆವರಣ’ದಮಟ್ಟಿಗೆ ಹೇಳುವುದಾದರೆ ವೆಂಕಟಲಕ್ಷ್ಮಿ ಅವರ ದೃಷ್ಟಿಯಲ್ಲಿ ಅಹಿತಕರ ಘಟನೆಗಳನ್ನು ಹೇಳುವುದು ವೈಚಾರಿಕತೆ ಅಲ್ಲ ಎಂಬುದು ಸ್ಪಷ್ಟವಾಗಿದೆ. ಕಾದಂಬರಿಯೊಂದರ ಓದು ಕಾಲ ಕಳೆಯಲು ಅಲ್ಲ ಎಂದು ಭಾವಿಸಿರುವವರಿಗೆ ವೆಂಕಟಲಕ್ಷ್ಮಿ ಅವರ ವಿಚಾರಗಳು ತೀರಾ ತೆಳುವಾದವುಗಳು ಎಂದು ಅನಿಸುತ್ತದೆ.
ಶೈಕ್ಷಣಿಕ ಸಾಲವೆಂಬ(Educational loan) ಶೂಲದ ಸುತ್ತ ಮುತ್ತ ..!
– ದರ್ಶನ್ ಕುಮಾರ್
ಸಾಲ ಎಂಬ ಸುಳಿಯಲ್ಲಿ ಸಿಕ್ಕಿಲ್ಲದೆ ಇರುವವರು ಯಾರಾದರು ಇದ್ದಾರೆಯೇ? ಹೀಗೊಂದು ಯೋಚನೆ , ನನ್ನ ತಲೆಯಲ್ಲಿ ಮಿಂಚಿನಂತೆ ಆಗಾಗ ಬಂದು ಹೋಗುತ್ತಿತ್ತು.
ಸರಿ, ಆ ನಮ್ಮ ಆರಾಧ್ಯ ದೇವ ತಿಮ್ಮಪ್ಪನೆ ಸಾಲ ಮಾಡಿದ್ದಾನೆ ನಮ್ಮದು ಏನು ಮಹಾ! ಅಲ್ವಾ, ಅಂತ ಯೋಚನೆ ಎಲ್ಲರಂತೆ ನನಗೂ ಕೂಡ ಅನ್ನಿಸಿ ಸುಮ್ಮನಾಗವುದರೊಳಗೆ ನೆನಪಾಗಿದ್ದು – ಆತ ಸಾಲ ಮಾಡಿದ್ದು ಮದುವೆಯಾಗಲೇ ಹೊರತು ನಮ್ಮ ನಿಮ್ಮ ಹಾಗೆ ಓದಲು ಅಲ್ಲಾ !
ಇಂದು ನಾವು ಪಡೆಯುವ ಶೈಕ್ಷಣಿಕ ಸಾಲಗಳ ಬಡ್ಡಿ, ಗೃಹ(Home loan) ಸಾಲಗಳಿಗಿಂತ ಅಧಿಕ ಮತ್ತು ಅದು ವ್ಯೆಯಕ್ತಿಕ (Personal loan) ಸಾಲಗಳಿಗೆ ವಿಧಿಸುವಷ್ಟೇ ಬಡ್ಡಿ ! ಏನಿದು ವಿಪರ್ಯಾಸ ಅಲ್ಲವಾ?
ದೇಶದ ಪ್ರಗತಿ, ಏನಾದರೂ ವೇಗವಾಗಿ ಆಗಬೇಕಂದರೆ ಅದು ಶೈಕ್ಷಣಿಕ ಕ್ಷೇತ್ರದಿಂದ ಸಾಧ್ಯವೇ ಹೊರತು ಮತ್ಯಾವ ಬೇರೆ ಕ್ಷೇತ್ರದಿಂದ ಅಲ್ಲಾ ಎನ್ನುವುದು ನನ್ನ ಅಭಿಪ್ರಾಯ. ಇಂತಹ ಕ್ರಾಂತಿಯಾಗಬೇಕಿದ್ದಲ್ಲಿ ಅತಿ ಹೆಚ್ಚು ಪ್ರೋತ್ಸಾಹದ ಅವಶ್ಯಕತೆಯಿದೆ, ಅದರಲ್ಲೂ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ. ಕಾರಣ ನಮ್ಮ ದೇಶದಲ್ಲಿ ಸುಮಾರು 70% ಜನರು ಹಳ್ಳಿಗಳಲ್ಲಿ ವಾಸಿಸುತ್ತಾರೆ ಅದರಲ್ಲೂ ಇವರೆಲ್ಲಾ ಭಾಗಶಹ ಕೃಷಿಕರು. ಇಂದಿನ ಕೃಷಿಕರ ಸ್ಥಿತಿ ತಿಳಿದೇ ಇದೆ, ಮಳೆ ಬಂದರೆ ಬೆಳೆ, ಬೆಳೆಯಾದರೆ ಸಿಗದ ಬೆಂಬಲ ಬೆಲೆ, ಮಳೆ ಜಾಸ್ತಿಯಾದರೆ ಅತಿವೃಷ್ಟಿ ಇಲ್ಲವಾದರೆ ಅನಾವೃಷ್ಟಿ, ಈ ಅನಿಶ್ಚಿತತೆಯಲ್ಲಿರುವ ನಮ್ಮ ರೈತರು ಹೇಗೆ ತಾನೇ ತಮ್ಮ ಮಕ್ಕಳನ್ನು ಉನ್ನತ ವ್ಯಾಸಂಗಕ್ಕೆ ಕಳಸಿಯಾರು?
ಸರಿ ಶೈಕ್ಷಣಿಕ ಸಾಲ (Education Loan) ಪಡೆದು ಯಾರು ಬೇಕಾದರೂ ಓದಬಹುದು ಅಲ್ಲವಾ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು, ಕೇಳಿ ನನ್ನ ಒಂದು ಕಥೆಯನ್ನು..
ಇತಿಹಾಸ ಮರು ಕಲಿಸಬೇಕೇ?
-ಅ.ಸು.ರವೀಂದ್ರ,ಶಿವಮೊಗ್ಗ
History Repeats. ಇತಿಹಾಸ ಮರುಕಳಿಸುತ್ತಿದೆ. ಯಾವುದೇ ಮಹತ್ತರ ಘಟನೆ ಪುನರಾವರ್ತನೆಗೊಂಡಾಗ ಮಾಧ್ಯಮಗಳಲ್ಲಿ ಕೇಳಿ ಬರುವ ಪದಗಳಿವು. ಆದರೆ ಈಗಿನ ಚರ್ಚೆಯ ವಿಷಯ ಇತಿಹಾಸವನ್ನು ಮರು `ಕಲಿಸುವ` ಬಗ್ಗೆ. ಕೇಂದ್ರದಲ್ಲಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಭಾ.ಜ.ಪ. ಸರ್ಕಾರ ಅಧಿಕಾರಕ್ಕೆ ಬರುತ್ತಲೆ ಸರ್ಕಾರ ತನ್ನ ಗುಪ್ತ ಕಾರ್ಯಸೂಚಿಯ ಪ್ರಕಾರ ಇತಿಹಾಸದ ಪಾಠಗಳನ್ನು ತಿದ್ದಬಹುದೆಂಬ ಹುಯಿಲು ಎಡಪಂಥೀಯ ಹಾಗೂ ಮೆಕಾಲೆ ಗೋತ್ರಜರಿಂದ ಆರಂಭವಾಗಿದೆ. ಎನ್.ಡಿ.ಎ. ಸರ್ಕಾರದ ಅಧಿಕಾರದ ಸಂದರ್ಭದಲ್ಲಿಯೇ ಆಗಿನ ಸಚಿವ ಶ್ರೀ ಮುರಳಿ ಮನೋಹರ ಜೋಷಿಯವರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದರಾದರೂ ಹೆಚ್ಚಿನ ಯಶ ಕಂಡಿರಲಿಲ್ಲ. ಆಗ ಹುಸಿ ಜಾತ್ಯಾತೀತ ವಾದದ ಭ್ರಮೆ ನಮ್ಮ ರಾಜಕೀಯ ಕ್ಷೇತ್ರವನ್ನು ಆವರಿಸಿದ್ದ ಕಾಲ. ಮೈತ್ರಿಕೂಟದ ಮಿತ್ರ ಪಕ್ಷಗಳೂ ಈ ವಿಚಾರದಲ್ಲಿ ಭಾ.ಜ.ಪ.ವನ್ನು ಬೆಂಬಲಿಸಲು ತಯಾರಿರಲಿಲ್ಲ. ಬೌದ್ಧಿಕ ಕ್ಷೇತ್ರದಲ್ಲಿ ದಶಮಾನಗಳಿಂದ ಪ್ರತಿಷ್ಠಾಪಿಸಿದ್ದ ವರ್ಗಕ್ಕೆ ಇತಿಹಾಸ, ಪರಂಪರೆ, ಸ್ವಾಭಿಮಾನಿ ರಾಷ್ಟ್ರ ಭಕ್ತಿಯಂತಹ ವಿಷಯಗಳು ಹೇಗೂ ವರ್ಜ್ಯವಾಗಿದ್ದವು. ಇವರ ತಾಳಕ್ಕೆ ಕುಣಿಯುವ ಮಾಧ್ಯಮಗಳು ಶಿಕ್ಷಣವನ್ನು ಕೇಸರೀಕರಣಗೊಳಿಸಲಾಗುತ್ತಿದೆ ಎಂದು ಬೊಬ್ಬೆ ಹಾಕಿ ಈ ವಿಷಯದ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಯಲು ಅವಕಾಶವನ್ನೇ ಕೊಡಲಿಲ್ಲ. ಸ್ವಯಂ ಬಹುಮತವಿಲ್ಲದ ಪಕ್ಷ ದಿಟ್ಟ ನಿರ್ಧಾರಗಳನ್ನು ಏಕ ಪಕ್ಷೀಯವಾಗಿ ಕೈಗೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಆದರೆ ಕಳೆದ ಹದಿನೈದು ವರ್ಷಗಳಲ್ಲಿ ಗಂಗೆ ಯಮುನೆಯರಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಥಾಪಿತ ಎಲ್ಲಾ ಸೈದ್ಧಾಂತಿಕ ಮಿಥ್ಯೆಗಳನ್ನು ನಿವಾಳಿಸಿ ಮತದಾರ ತೀರ್ಪು ನೀಡಿದ್ದಾನೆ, ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಬದಲಿಸಿ ಹೊಸ ಶಕೆಯನ್ನು ಆರಂಭಿಸುವ ಆಡಳಿತ ಪಕ್ಷದ ಭರವಸೆಗಳನ್ನು ನಂಬಿ ಆದೇಶ ನೀಡಿದ್ದಾನೆ.
ಈಗ ಪ್ರಶ್ನೆ ಎದ್ದಿರುವುದು ನಮಗೆ ಇಂತಹ ಇತಿಹಾಸದ ಪಾಠಗಳ ಪುನರ್ವಿಮರ್ಶೆ ಅಗತ್ಯವಿದೆಯೋ ಇಲ್ಲವೋ ಎಂಬುದು. ಇದೆ ಎಂದಾದಲ್ಲಿ ಹಿಂದಿನ ವ್ಯವಸ್ಥೆಯ ಲೋಪವನ್ನು ಒಫ್ಫಿಕೊಂಡು ಸರಿಪಡಿಸಿಕೊಳ್ಳಬೇಕು. ಇಲ್ಲವೆಂದಾದಲ್ಲಿ ಈವರೆಗೆ ಅನುಸರಿಸಿದ ಕ್ರಮಗಳಿಂದ ನಾವು ಸಾಧಿಸಿರುವುದಾದರೂ ಏನು ಎಂಬುದರ ಮೌಲ್ಯಮಾಪನ ಆಗಬೇಕು. ೧೯೪೭ ರಲ್ಲಿ ಭಾರತ ಬ್ರಿಟಿಷರ ದಾಸ್ಯದಿಂದ ಬಿಡುಗಡೆ ಹೊಂದಿದಾಗಲೇ ಇಂತಹ ಕ್ರಮದ ಅಗತ್ಯ ಇತ್ತು. ಆಗ ನಮಗೆ ರಾಜಕೀಯ ಸ್ವಾತಂತ್ರ್ಯವೇನೋ ಸಿಕ್ಕಿತ್ತು. ಆದರೆ ಎರಡು ಶತಮಾನಗಳ ಅವರ ಆಡಳಿತದ ಪ್ರಭಾವದಿಂದಾಗಿ ನಮ್ಮ ವೈಚಾರಿಕ, ಸಾಂಸ್ಕೃತಿಕ ವಿಚಾರಗಳ ದಾಸ್ಯದ ಮನಸ್ಥಿತಿ ಬದಲಾಗಲೇ ಇಲ್ಲ. ಪಂಡಿತ್ ನೆಹರೂರವರು ಮನಸ್ಸು ಮಾಡಿದಲ್ಲಿ ಒಂದು ಸ್ವತಂತ್ರ ಸ್ವಾಭಿಮಾನಿ ರಾಷ್ಟ್ರಕ್ಕೆ ಅಗತ್ಯವಾಗಿದ್ದ, ತನ್ನ ಸಂಸ್ಕೃತಿ ಪರಂಪರೆಯ ಬಗ್ಗೆ ಅಭಿಮಾನವುಳ್ಳ, ಅಂತಹ ಧೀಃಶಕ್ತಿಯನ್ನು ಪ್ರೇರೇಪಿಸಬಲ್ಲ ನವಪೀಳಿಗೆಯನ್ನು ಬೆಳೆಸಬಹುದಿತ್ತು. ಸ್ವಾತಂತ್ರ್ಯ ಪಡೆದ ಘಳಿಗೆಯಲ್ಲಿನ ಜನಮಾನಸದ ಹುಮ್ಮಸ್ಸು, ಮನಸ್ಥಿತಿ, ಅಂತಹ ಕ್ರಮಗಳಿಗೆ ಪೂರಕವಾಗಿ ಸ್ಪಂದಿಸುವುದರಲ್ಲಿ ಅನುಮಾನವಿರಲಿಲ್ಲ. ಅವರ ಅಂದಿನ ಆಡಳಿತಾತ್ಮಕ ಕ್ರಮಗಳು ಪ್ರಜಾ ಸಂಕುಲಕ್ಕೆ ಹೊಟ್ಟೆ ಬಟ್ತೆ ನೀಡುವ ಮಟ್ಟಿಗೆ ಸೀಮಿತವಾಗಿದ್ದವು ಅನ್ನಿಸುತ್ತವೆ. ದೇಶವೊಂದರ ಚುಕ್ಕಾಣಿ ಹಿಡಿದ ನಾಯಕತ್ವಕ್ಕೆ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಳ್ಳಬಲ್ಲ ಯುವಪೀಳಿಗೆಗೆ ಸೂಕ್ತ ಮಾರ್ಗದರ್ಶನ ಮಾಡಬೇಕಾದ ಆದ್ಯತೆಗಳೂ ಇರುತ್ತವೆ ಎಂಬುದನ್ನು ಅಂದಿನ ಸರ್ಕಾರ ಮರೆತಿದ್ದೇ ನಾವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಅನುಭವಿಸುತ್ತಿರುವ ಅನಾಥ ಪ್ರಜ್ಞೆಗೆ ಕಾರಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ.
ಒಳ್ಳೆಯ ದಿನಗಳು ಉಚಿತವಾಗಿ ಬರುವುದಿಲ್ಲ!
– ಅನಿಲ್ ಚಳಗೇರಿ
2014ರ ಚುನಾವಣೆಯಲ್ಲಿ ಬಿಜೆಪಿಯ ಪಂಚ್ ಲೈನ್ ಎನ್ನಬಹುದಾದ “ಅಚ್ಛೆ ದಿನ್ ಅನೆ ವಾಲೆ ಹೈ’ (ಒಳ್ಳೆಯ ದಿನಗಳು ಬರಲಿವೆ) ಸುತ್ತಮುತ್ತಲೂ ಕಳೆದ ಒಂದು ತಿಂಗಳಿಂದ ವಿವಾದವೊಂದು ಸೃಷ್ಟಿಯಾಗಿದೆ. ಮೋದಿಯವರು ಆಡಳಿತ ರೀತಿಯನ್ನು ಬಿಗಿಗೊಳಿಸಿ ಇಡೀ ದೇಶದ ಪರಿಸ್ಥಿತಿಯನ್ನು ಹತೋಟಿಯಲ್ಲಿ ತರಬೇಕಾದಾರೆ ಕೆಲವು ಗಟ್ಟಿ ನಿರ್ಧಾರ(ಸದ್ಯಕ್ಕೆ ನಮಗೆ ಇಷ್ಟವಾಗದಿರುವ) ತೆಗೆದುಕೊಳ್ಳಲೇಬೇಕು. ಕಳೆದ ಒಂದು ದಶಕದಲ್ಲಿ ಯುಪಿಎ ಸರ್ಕಾರ ಮಾಡಿದ ಆವಾಂತರಗಳನ್ನು ಮೊದಲು ಸರಿಪಡಿಸಿ ಆಮೇಲೆ ಅಭಿವೃದ್ಧಿಯ ಕಡೆಗೆ ಹೋಗುವ ಜವಾಬ್ದಾರಿ ಹೊಸ ಸರ್ಕಾರದ ಮೇಲಿದೆ. ಅಷ್ಟಕ್ಕೂ ಈ ಅಭಿವೃದ್ಧಿಯ ಹಾದಿ ಮೊದಲ ದಿನದಿಂದಲೇ ಪ್ರಾರಂಭವಾಗಿದೆ. ಇದನ್ನು ಅಚ್ಛೆ ದಿನ್ ಅಂದರೂ ತಪ್ಪಾಗದು. ಅಷ್ಟಕ್ಕೂ ಮೋದಿಯವರು ಉಚಿತ ದಿನ್ ಎಂದು ಹೇಳಿಲ್ಲ!
ದೆಹಲಿಯಲ್ಲಿನ ವಿದ್ಯುತ್ ಅಭಾವದಿಂದ ಹಿಡಿದು ರೈಲ್ವೆ ದರ ಏರಿಕೆಯವರೆಗಿನ ವಿಷಯವನ್ನು ಹಿಡಿದುಕೊಂಡು ಅಚ್ಛೇ ದಿನ್ ಅಂದರೆ ಇದೇನಾ ಅನ್ನುವಷ್ಟು ಕನ್ಫ್ಯೂಷನ್ ಹುಟ್ಟಿಬಿಟ್ಟಿದೆ. “ಒಮ್ಮಿಂದೊಮ್ಮೇಲೆ ಮಧ್ಯಮ ವರ್ಗದ ವಿರೋಧಿಯಾದರೆ ನರೇಂದ್ರ ಮೋದಿ?” ಎನ್ನುವ ಪ್ರಶ್ನೆಗಳು ನಮ್ಮನ್ನು ಕಾಡುತ್ತಿವೆ. ಯುಪಿಎ ನೀತಿಯಂತೆ ರಾಜಕೀಯ ಹಿತಾಸಕ್ತಿಗೆ ಸರ್ಕಾರದ ಬೊಕ್ಕಸವನ್ನು ಬರಿದಾಗಿಸುವುದು ಸರಿಯೇ? ಎಂದು ನಮ್ಮನ್ನು ನಾವು ಒಮ್ಮೆ ಕೇಳಿಕೊಂಡರೆ ಬಹುಶಃ ನಿಮಿಷಾರ್ಧದಲ್ಲೇ ನಮಗೆ ಉತ್ತರ ಸಿಕ್ಕು ಬಿಡಬಹುದು.
ನಮ್ಮ ಸರ್ಕಾರಗಳಿಗೆ ರೈಲ್ವೆ ಸ್ಟೇಷನ್ ಸ್ವಚ್ಛವಿಡಲು ಏನು ಸಮಸ್ಯೆ? ಸರಿಯಾದ ಸಮಯಕ್ಕೆ ತತ್ಕಾಲ್ ಟಿಕೆಟ್ ಬುಕ್ ಆಗುವದಿಲ್ಲ, ರೈಲ್ವೆ ಪ್ಲಾಟ್ ಫಾರಂ ಸ್ವಚ್ಛವಿರುವುದಿಲ್ಲವೆಂದು ದೂರುತ್ತಾ ಬೇರೆ ದೇಶದ ರೈಲ್ವೆ ವ್ಯವಸ್ಥೆಯನ್ನು ಹೊಗಳುತ್ತೇವೆ. ರೈಲ್ವೆ ಇಲಾಖೆ 26 ಸಾವಿರ ಕೋಟಿಗಳ ನಷ್ಟ ಅನುಭವಿಸುತ್ತಿದೆ, ಪ್ರತಿ ದಿನ 30 ಕೋಟಿಯಷ್ಟು ನಷ್ಟ ಭರಿಸಬೇಕಾಗುತ್ತಿದೆ, ಅದರಲ್ಲೂ ಸರಕು ಸಾಗಣಿಕೆಯಲ್ಲಿ ಸ್ವಲ್ಪ ಲಾಭ ಮಾಡುವದನ್ನು ಬಿಟ್ಟರೆ, ಪ್ರಯಾಣಿಕರ ರೈಲುಗಳಿಂದಲೇ ಅಧಿಕ ನಷ್ಟ ಎದುರಾಗುತ್ತಿದೆ ಎನ್ನುತ್ತದೆ ರೈಲ್ವೆ ಇಲಾಖೆಯ ಅಂಕಿ ಅಂಶಗಳು. ಇಷ್ಟೆಲ್ಲಾ ನಷ್ಟಗಳ ಮಧ್ಯೆ ಸರ್ಕಾರ ಒಳ್ಳೆಯ ರೈಲ್ವೆ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವದಾದರು ಹೇಗೆ? ಅದಕ್ಕಾಗಿಯೇ ಈ ರೈಲ್ವೆ ದರ ಏರಿಕೆ. ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆ ತನ್ನ ನಷ್ಟಗಳನ್ನೆಲ್ಲ ಸಂಪೂರ್ಣವಾಗಿ ಕಡಿಮೆ ಮಾಡಿ ಆಮೇಲೆ ನವೀಕರಣದ ಬಗ್ಗೆ ವಿಚಾರ ಮಾಡಬೇಕು, ಫ್ರೀ ಬೀ(ಉಚಿತ ಕೊಡುಗೆಗಳನ್ನು) ಸರ್ಕಾರಗಳು ಕೊಡಬಾರದೆನ್ನುವ ನಾವು ದಿನಕ್ಕೆ 30 ಕೋಟಿ ನಷ್ಟವಾದರೂ ಪರವಾಗಿಲ್ಲ, ನಮ್ಮ ಜೇಬಿಗೆ ಮಾತ್ರ ಕತ್ತರಿ ಬೀಳಬಾರದು ಎನ್ನುತ್ತಿದ್ದೇವೆ! ಅಷ್ಟಕ್ಕೂ, ಒಂದು ಉತ್ತಮ ರೈಲ್ ವ್ಯವಸ್ಥೆಯಿಂದ ಅತೀ ಹೆಚ್ಚು ಲಾಭ ಪಡೆಯುವವರು ಯಾರು? ನಾವೇ ಅಲ್ಲವೇ? ಇಲ್ಲವೆಂದರೆ, ರೈಲ್ವೆ ಇಲಾಖೆಯು ಮುಂದೊಂದು ದಿನ ಏರ್ ಇಂಡಿಯಾ ಥರ ದೊಡ್ಡ ನಷ್ಟಕ್ಕೆ ಒಳಗಾಗಬಹುದು. ಲಾಭಗಳಿಸುವ ರೈಲ್ವೆ ಇಲಾಖೆಯಿಂದ ಮಾತ್ರ ಜಪಾನ್ ಮತ್ತು ಯುರೋಪ್ ರಾಷ್ಟ್ರಗಳಂಥ ರೈಲ್ವೆ ಸಂಪರ್ಕ ಒದಗಿಸಲು ಸಾಧ್ಯ.
ಸಾಹಿತ್ಯಕ್ಷೇತ್ರದ ಒಳಹೊರಗು – 4
– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ
ಡಿವಿಜಿ ಹೇಳಿದರು: ಹಳೆ ಬೇರು ಹೊಸ ಚಿಗುರು ಕೂಡಿರಲು ಮರಸೊಗಸು! ಎಂಥಾ ಮಾತು! ಇದನ್ನು ಸಮಾಜ-ಕುಟುಂಬ ಸೇರಿದಂತೆ ಯಾವ ಕ್ಷೇತ್ರಕ್ಕೂ ಅನ್ವಯಿಸಬಹುದು. ಹಾಗೆಯೇ ಸಂಗೀತ, ಸಾಹಿತ್ಯಕ್ಕೂ ಅನ್ವಯಿಸಿ ನೋಡಬಹುದು. ಇದರಿಂದ ನಿರಾಸೆ ಕಾದಿದ್ದರೂ ಅಚ್ಚರಿ ಇಲ್ಲ.
ಮೈಸೂರಿನಲ್ಲಿ ವರ್ಷಗಳ ಹಿಂದೆ ಒಂದು ಕಾರ್ಯಕ್ರಮ. ಖ್ಯಾತ ನೃತ್ಯಗುರು, ಹಿರಿಯ ಕಲಾವಿದೆ ಡಾ. ವಸುಂಧರಾ ದೊರೆಸ್ವಾಮಿ ಅವರಿಗೆ ಶಿಷ್ಯವೃಂದದಿಂದ ಅಭಿನಂದನೆ. ಆಮೇಲೆ ಅವರು ಮಾತನಾಡುತ್ತ, ನನ್ನ ಬಳಿ ಭರತ ನಾಟ್ಯ ಕಲಿಯಲು ಉತ್ಸಾಹದಿಂದಲೇ ಹೊಸಬರು ಬರುತ್ತಾರೆ. ನಾಲ್ಕಾರು ಹೆಜ್ಜೆಗಳನ್ನು, ಒಂದಿಷ್ಟು ಅಂಗಾಭಿನಯ ಕಲಿತು ವಿದೇಶಕ್ಕೆ ಹೋಗಿಬಿಡುತ್ತಾರೆ. ಹಣ ಮಾಡುವ ಹುಮ್ಮಸ್ಸು. ನಾಟ್ಯ, ನಟುವಾಂಗಗಳ ಬಗ್ಗೆ ಸಮಗ್ರ ಪರಿಜ್ಞಾನ ಪಡೆಯುವ ವ್ಯವಧಾನವೇ ಇಂದಿನ ತಲೆಮಾರಿನಲ್ಲಿ ಇಲ್ಲ ಎಂದು ಹೇಳಿದರು. ಅಸಾಧಾರಣ ಕಲಾವಿದೆಯಾದ ಅವರು ವಿಷಾದದಿಂದಲೇ ಈ ಮಾತು ಹೇಳಿದ್ದರು. ಕಲಿಕೆಯಲ್ಲಿನ ಶ್ರದ್ಧೆ ಕುರಿತ ಇದೇ ಮಾತು ಸಾಹಿತ್ಯಕ್ಕೂ ಸಲ್ಲುತ್ತದೆ. ಸಾಹಿತ್ಯ ಕ್ಷೇತ್ರ ಪ್ರವೇಶಿಸುವವರೆಲ್ಲ ವಿದೇಶಕ್ಕೆ ಹೋಗಿಬಿಡುವುದಿಲ್ಲ. ಕನ್ನಡ ಸಾಹಿತ್ಯ ಓದುದವವರ ಕಾರ್ಯವ್ಯಾಪ್ತಿಯೂ ದೇಶ, ಭಾಷೆಗಳ ಕಾರಣದಿಂದ ಸೀಮಿತವಾಗಿಹೋಗಿದೆ; ಅಥವಾ ಹಾಗೆ ಭಾವಿಸಲಾಗಿದೆ; ಅಥವಾ ತಮಗೆ ತಾವೇ ಮಿತಿಯನ್ನು ಇವರೇ ವಿಧಿಸಿಕೊಂಡುಬಿಡುತ್ತಾರೆ. ಸ್ನಾತಕೋತ್ತರ ಪದವಿ ಅಥವಾ ಪಿಎಚ್.ಡಿ ಪದವಿಯಲ್ಲಿ ಭಾಷಾ ಪ್ರಯೋಗವನ್ನು ಅರ್ಧಂಬರ್ಧ ಕಲಿತು ತಾವು ಚಿಂತಕರೆಂದೋ ಸಾಹಿತಿಗಳೆಂದೋ ಇಲ್ಲವಾದಲ್ಲಿ ಕೊನೆಗೆ ಲೇಖಕರೆಂದೋ ಬೋರ್ಡು ಹಾಕಿಕೊಂಡೇಬಿಡುತ್ತಾರೆ. ಜೊತೆಗೆ ಪತ್ರಿಕೆ, ಟಿವಿ ಕಾರ್ಯಕ್ರಮ ಇತ್ಯಾದಿಗಳ ಲಾಬಿ ಶುರು ಮಾಡಿ ಪ್ರಚಾರದ ಹಿಂದೆ ಹೋಗುತ್ತಾರೆ. ಅಲ್ಲಿಗೆ ಅವರ ಕಲಿಕೆ ಮುಗಿದಂತೆ. ಹಳೆಯದನ್ನು ತಿರುಗಿಯೂ ನೋಡದೇ ಹೊಸದನ್ನು ಅರಗಿಸಿಕೊಳ್ಳದೇ ಕಲಿತಷ್ಟೇ ವಿದ್ಯೆಯನ್ನು ತಿರುಚುತ್ತ ಚಾಲ್ತಿಯಲ್ಲಿ ಇರಲು ಬಯಸುತ್ತಾರೆ. ಇದು ಯುವ ಸಾಹಿತ್ಯಾಸಕ್ತರ ಒಂದು ಮುಖ.
ಮೂರ್ತಿಪೂಜೆಯ ಕುರಿತ ಆಧುನಿಕರ ಗೊಂದಲಗಳು
ಪ್ರೊ.ರಾಜಾರಾಮ ಹೆಗಡೆ, ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
“ನಾನು ದೇವರ ನಿರಾಕಾರ ರೂಪವನ್ನು ಒಪ್ಪುತ್ತೇನೆ, ಆದರೆ ಅವುಗಳಿಗೆ ಆಕಾರ ಕೊಡುವುದನ್ನು ವಿರೋಧಿಸುತ್ತೇನೆ.” “ಒಂದು ಶಕ್ತಿ ಈ ಪ್ರಪಂಚವನ್ನು ಆಳುತ್ತಿದೆ ಎಂದು ನಂಬುತ್ತೇನೆ ಆದರೆ ಈ ದೇವತೆಗಳು, ಪುರಾಣಗಳು ಎಲ್ಲ ಸುಳ್ಳು, ಅವನ್ನು ನಂಬಬಾರದು” ಎಂಬ ಧೋರಣೆ ಬಹಳಷ್ಟು ಆಧುನಿಕ ಚಿಂತಕರಲ್ಲಿ ಇದೆ. ಈ ಹೇಳಿಕೆಯನ್ನು ಮಾಡುವವರು ತಾವು ಭಾರತೀಯ ಅಧ್ಯಾತ್ಮ ಸಂಪ್ರದಾಯದ ಸತ್ಯವನ್ನೇ ಹೇಳುತ್ತಿದ್ದೇವೆ ಎಂದುಕೊಂಡಿದ್ದಾರೆ. ಏಕೆಂದರೆ ನಮ್ಮ ಅಧ್ಯಾತ್ಮ ಸಂಪ್ರದಾಯಗಳು ಪರಮಾತ್ಮನ ನಿಜಸ್ವರೂಪವು ನಿರಾಕಾರವೇ ಆಗಿದೆ ಎಂದು ಹೇಳುತ್ತವೆ. ಹಾಗೂ ಅವುಗಳಲ್ಲಿ ಕೆಲವಂತೂ ಮೂರ್ತಿಪೂಜೆಯ ನಿರರ್ಥಕತೆಯ ಕುರಿತು ಸಾಧಕರನ್ನು ಎಚ್ಚರಿಸುತ್ತವೆ. ಅಷ್ಟಾದರೂ ಕೂಡ ಅವನ ಸಾಕಾರೋಪಾಸನೆಯನ್ನು ಅವು ವಿರೋಧಿಸುವುದಿಲ್ಲ, ಸಾಕಾರೋಪಾಸನೆ ಅಧ್ಯಾತ್ಮ ಸಾಧನೆಯಲ್ಲಿ ದಾರಿತಪ್ಪಿಸುವ ಮೋಸ, ಅದನ್ನು ಮಾಡಲೇಬೇಡಿ ಎಂದು ಎಲ್ಲಿಯೂ ಹೇಳುವುದಿಲ್ಲ. ಸಾಕಾರೋಪಾಸನೆಯು ನಿರಾಕಾರ ತತ್ವವನ್ನು ತಿಳಿಯಲಿಕ್ಕೆ ದಾರಿಯಾಗಿದೆ. ಈ ಕಾರಣದಿಂದಲೇ ಸಾಕಾರೋಪಾಸನೆಯಲ್ಲೇ ತೃಪ್ತಿಪಟ್ಟುಕೊಂಡ ಸಾಧಕರನ್ನು ಟೀಕಿಸಿ ಎಚ್ಚರಿಸುವ ಸಂದರ್ಭದಲ್ಲಿ ಮೂರ್ತಿರೂಪಗಳ ಮಿತಿಯನ್ನು ತಿಳಿಸಿಕೊಡುವ ಕೆಲಸವನ್ನು ಅವು ಮಾಡುತ್ತವೆ. ಅಜ್ಞಾನದಲ್ಲಿ ಬಂಧಿತನಾದ ಮನುಷ್ಯನ ಬುದ್ಧಿಗೆ ಏಕಾಏಕಿಯಾಗಿ ನಿರಾಕಾರ ತತ್ವವನ್ನು ಅರಿಯಲು ಅಸಾಧ್ಯ. ಅಂಥವನಿಗೆ ಮೂರ್ತಿಪೂಜೆ ಒಂದು ಸಾಧನ. ಜನಸಾಮಾನ್ಯರ ಮನೋಸ್ಥಿತಿಯ ಹೀಗೇ ಇರುವುದರಿಂದ ನಮ್ಮಲ್ಲಿ ಎಲ್ಲಾ ಸಂಪ್ರದಾಯಗಳೂ ಮೂರ್ತಿಪೂಜೆಯ ಉಪಾಯವನ್ನು ಕಲ್ಪಿಸಿವೆ ಎನ್ನುತ್ತವೆ. ಹಾಗಾಗಿ ಈ ಮೇಲಿನ ಹೇಳಿಕೆಗಳನ್ನು ನೀಡುವವರು ಭಾರತೀಯ ಅಧ್ಯಾತ್ಮ ಸಂಪ್ರದಾಯದ ವಕ್ತಾರರಂತೂ ಅಲ್ಲ.
“ದೇವರೆಂಬವನೇ ಇಲ್ಲ, ಹಾಗಾಗಿ ಈ ಮೂರ್ತಿಪೂಜೆ ಒಂದು ಪುರೋಹಿತರ ಕಣ್ಕಟ್ಟು” ಎಂಬ ಮತ್ತೊಂದು ಥರದ ಹೇಳಿಕೆಗಳೂ ಇವೆ. ಈ ಹೇಳಿಕೆಯನ್ನು ಮಾಡುವವರು ತಾವು ನಾಸ್ತಿಕರು ಎಂದು ಕರೆದುಕೊಳ್ಳಲು ಹೆಮ್ಮೆ ಪಡುತ್ತಾರೆ ಹಾಗೂ ಮೂರ್ತಿಪೂಜೆಯನ್ನು ತೊಡೆಯುವುದೇ ನಮ್ಮ ಸಮಾಜದ ಉದ್ಧಾರಕ್ಕೆ ಮಾರ್ಗ ಎನ್ನುತ್ತಾರೆ. ಅಷ್ಟೇ ಅಲ್ಲ ಅವರನ್ನು ವಿರೋಧಿಸುವವರೂ ಕೂಡ ಅವರನ್ನು ನಾಸ್ತಿಕರೆಂದು ಪದೇ ಪದೇ ಜರಿಯುವುದು ಕೂಡ ಕಂಡುಬರುತ್ತದೆ. ಆದರೆ ಹಾಗೆ ಅವರನ್ನು ಕರೆಯುವು ತಪ್ಪು. ನಮ್ಮಲ್ಲಿ ನಾಸ್ತಿಕರಾದ ಬೌದ್ಧರು ಹಾಗೂ ಜೈನರು ಕೂಡಾ ಮೂರ್ತಿಪೂಜೆಯನ್ನು ಅಳವಡಿಸಿಕೊಂಡಿದ್ದಾರೆ. ಜೈನ ಬೌದ್ಧರು ಪರಮಾತ್ಮ ತತ್ವವನ್ನು ಒಪ್ಪುವುದಿಲ್ಲ. ಹಾಗಾಗೇ ಅವರನ್ನು ನಾಸ್ತಿಕರೆಂದು ಹೇಳಲಾಗುತ್ತದೆ. (ಅಸ್ತಿ=ಇದೆ; ನಾಸ್ತಿ=ಇಲ್ಲ. ಆಸ್ತಿಕ ನೆಂದರೆ ಆ ತತ್ವ ಇದೆ ಎಂದು ಒಪ್ಪುವವನು, ನಾಸ್ತಿಕನು ಅದು ಇಲ್ಲ ಎನ್ನುವವನು. ಈ ಪರಿಭಾಷೆಗಳಿಗೆ ಅಧ್ಯಾತ್ಮದ ಸಂದರ್ಭದ ಹಿನ್ನೆಲೆಯಿದೆ). ಆದರೆ ನಾಸ್ತಿಕರಾದವರು ಮೂರ್ತಿಪೂಜೆಯನ್ನು ನಿರಾಕರಿಸಬೇಕೆಂದಿಲ್ಲ. ನಾಸ್ತಿಕರ ಪರಮ ಜ್ಞಾನವನ್ನು ಹೊಂದಲು ಕೂಡ ಮೂರ್ತಿ ಪೂಜೆ ಸಹಕರಿಸಿದೆ. ಅದಿಲ್ಲದಿದ್ದರೆ ಅವೇಕೆ ಸಾವಿರಾರು ವರ್ಷ ಮೂರ್ತಿಪೂಜೆಯನ್ನು ಆಚರಿಸಿಕೊಂಡು ಬರುತ್ತಿದ್ದವು? ಆಸ್ತಿಕ ಹಾಗೂ ನಾಸ್ತಿಕ ಸಂಪ್ರದಾಯಗಳೆರಡೂ ಕೂಡ ತಂತಮ್ಮ ಗುರಿ ಸಾಧನೆಗೆ ಮೂರ್ತಿಪೂಜೆ ಸಾಧನವಾಗಿದೆ ಎಂದು ಒಪ್ಪಿಕೊಂಡಿದ್ದವು. ಹಾಗಾಗಿ ದೇವರಿಲ್ಲವೆಂದು ನಂಬಿದಾಕ್ಷಣ ಮೂರ್ತಿಪೂಜೆ ನಿಲ್ಲಬೇಕೆಂಬ ವಾದವು ನಾಸ್ತಿಕ ದೃಷ್ಟಿಯೂ ಅಲ್ಲ. ಮತ್ತಷ್ಟು ಓದು
ಕಲ್ಬುರ್ಗಿ,ಕಲ್ಲು ಮತ್ತು Colonial Consciousness
– ರಾಕೇಶ್ ಶೆಟ್ಟಿ
ಬೆಂಗಳೂರಿನ ವಿಜ್ಞಾನ ಭವನದಲ್ಲಿ ಜೂನ್ ೯ರ ಸೋಮವಾರ ನಡೆದ ಮೌಢ್ಯಮುಕ್ತ ಸಮಾಜ, ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ವಯಸ್ಸಿನಲ್ಲಿ ಹಿರಿಯರಾದ (ಕೇವಲ ವಯಸ್ಸಿನಲ್ಲಷ್ಟೇ) ಪ್ರೊ.ಎಂ.ಎಂ. ಕಲ್ಬುರ್ಗಿಯವರು, ” ದೇವರ ವಿಗ್ರಹಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗದು. ಅವುಗಳಿಗೆ ಕಾಯುವ ಶಕ್ತಿಯೂ ಇಲ್ಲ, ಕಾಡುವ ಶಕ್ತಿಯೂ ಇಲ್ಲ. ದೇವತೆ, ದೇವಾಲಯಗಳ ವಿರುದ್ಧ ಚಳವಳಿ ನಡೆಯಬೇಕು.” ಅಂತೆಲ್ಲ ಬಡಬಡಿಸಿ ಎಲ್ಲರಿಂದ ತಪರಾಕಿ ಹಾಕಿಸಿಕೊಂಡ ಮೇಲೆ “ನಾ ಹಂಗೇ ಹೇಳೇ ಇಲ್ಲಾರೀ, ನಾನು ಹಿಂದೂ ಇದ್ದೀನಿ, ನಾನ್ಯಾಕೇ ಮೂತ್ರ ಮಾಡಿ ಅಂತ ಹೇಳ್ತೀರ್ರೀ… ಅನಂತಮೂರ್ತಿ ಹಿಂಗ್ ಬರ್ದಾರಾ ಅಂತ ನಾನ್ ಸಭಿಯೋಳಗ ಹೇಳಿನ್ರೀ… ತಪ್ಪ್ ತಿಳಿ ಬ್ಯಾಡರ್ರೀ…” ಅಂತೆಲ್ಲ ಸೃಷ್ಟೀಕರಣ ಕೊಟ್ಟರು.
ನಿಜವಾಗಿ ಕಲ್ಬುರ್ಗಿಯವರ ಮನಸ್ಸಿನಲ್ಲಿದ್ದಿದ್ದು “ಮೂರ್ತಿ”ಗಳ ಮೇಲೆ ಮೂತ್ರ ಮಾಡಿದ ಹೊರೆ ಹೊರಿಸಿ ಅದರ ಜೊತೆಗೆ ಮೂರ್ತಿ ಪೂಜೆ ಮಾಡುವ ಜನರ “ಮೌಢ್ಯ” (ಅವರ ಮಂದ ಬುದ್ದಿಯ ಪ್ರಕಾರ) ನಿವಾರಿಸುವುದಾಗಿತ್ತು ಅನ್ನಿಸುತ್ತದೆ.ಕಲ್ಬುರ್ಗಿಯವರು ಹೀಗೆ ಹೇಳಿಕೆ ಕೊಡುವುದರಿಂದ ಒಂದೇ ಕಲ್ಲಿಗೆ ಎರಡು ಹಕ್ಕಿ (“ಮೂರ್ತಿ” ಮತ್ತು “ಮೌಢ್ಯ”) ಹೊಡೆಯುವ ಆಲೋಚನೆಯಲ್ಲಿದ್ದರೇನೋ.ಪಾಪ!
“ಮೂರ್ತಿ”ಗಳ ಮೇಲೆ ಕಲ್ಬುರ್ಗಿಯವರಿಗೆ ಈ ವಿಶೇಷ ಮಮತೆ ಯಾಕೆ? ಪ್ರಜಾವಾಣಿಯಲ್ಲಿ “ಮೂರ್ತಿ”ಗಳಿಗೆ ೧೦ ಲಕ್ಷ ಸರ್ಕಾರಿ ಕಾಣಿಕೆ ಕೊಟ್ಟದ್ದನ್ನು ವಿರೋಧಿಸಿ ಸೋತುಹೋಗಿದ್ದ ಕಲ್ಬುರ್ಗಿಗಳು,”ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ಏನೂ ಆಗುವುದಿಲ್ಲ” ಅನ್ನುವ ಮೂಲಕ ಸೇಡು ತೀರಿಸಿಕೊಂಡರು, ಅನ್ನುವಲ್ಲಿಗೆ ಅವರ ಹೇಳಿಕೆಯ ಮೊದಲನೇ “ಹಕ್ಕಿ” ಯಾವುದೆಂದು ಹೊಳೆಯುತ್ತದೆ.
ಅಸಲಿಗೆ ತಪ್ಪೆಲ್ಲ ಆಯ್ಕೆ ಸಮಿತಿಯದ್ದು!
“ಪರಾವಲಂಬಿ ಜೀವಿ”ಗಳ ನಡುವೆ “ಪ್ರಶಸ್ತಿ/ಹಣ”ವನ್ನು ಸಮನಾಗಿ ಹಂಚಿದ್ದರೆ ಮೂತ್ರ,ಮೂರ್ತಿ ಇತ್ಯಾದಿ ವಿವಾದಗಳೇ ಆಗ್ತಿರ್ಲಿಲ್ಲ ಮಾರ್ರೆ. ಎಲ್ಲವನ್ನೂ ಒಬ್ಬರಿಗೆ ಕೊಟ್ಟರೆ.ಇನ್ನೊಬ್ಬರಿಗೆ (ತಮಗಾದ) ಅನ್ಯಾಯವನ್ನು ಪ್ರಶ್ನಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ(!) ಇದ್ದೇ ಇರುತ್ತದಪ್ಪ… (ಸೂ : “ಪರಾವಲಂಬಿ ಜೀವಿ”ಗಳನ್ನು ಕೆಲವರು “ಬುದ್ಧಿಜೀವಿ”ಗಳು ಅನ್ನುತ್ತಾರೆ.ನಾನು ಇನ್ಮುಂದೆ ಪ್ರೀತಿಯಿಂದ “ಪರಾವಲಂಬಿ ಜೀವಿ” ಎನ್ನುತ್ತೇನೆ)
ಅಮರು ಶತಕದೊಳಗೊಂದು ಇಣುಕುನೋಟ
– ಹಂಸಾನಂದಿ
ಅಮರುಕ ಎಂಟನೇ ಶತಮಾನದಲ್ಲಿದ್ದ ಒಬ್ಬ ಸಂಸ್ಕೃತ ಕವಿ. ಈಗ ಕಾಶ್ಮೀರದ ರಾಜನೆಂದೂ, ಮಾಹಿಷ್ಮತಿಯ ರಾಜನೆಂದೂ ಪ್ರತೀತಿಯಿದೆ. ಇವನು ಅಮರುಶತಕ ವೆಂಬ ಹೆಸರಿನಲ್ಲಿ ಪ್ರಖ್ಯಾತವಾಗಿರುವ ಒಂದು ನೂರು ಪದ್ಯಗಳನ್ನು ಸಂಸ್ಕೃತದಲ್ಲಿ ಬರೆದಿದ್ದಾನೆ. ಈ ಪದ್ಯಗಳ ವಿಷಯವೆಂದರೆ ಗಂಡು ಹೆಣ್ಣಿನ ನಡುವಿನ ಪ್ರೇಮ. ಅಮರುಕನ ಒಂದೊಂದು ಬಿಡಿಪದ್ಯವೇ ಒಂದೊಂದು ಕಾವ್ಯದಷ್ಟು ರಸವತ್ತಾಗಿರುತ್ತದೆಂದು ನಂತರದ ಕವಿಗಳು, ವಿಮರ್ಶಕರು ಹೊಗಳಿದ್ದಾರೆ. ಗಂಡು ಹೆಣ್ಣಿನ ನಡುವಿನ ನವಿರಾದ ಪ್ರೇಮ ವಿರಹ ದುಗುಡ ಮೊದಲಾದ ಎಲ್ಲ ಭಾವನೆಗಳನ್ನು ಚಿತ್ರಿಸುವುದರಲ್ಲಿ ಅಮರುಕನಿಗೆ ಅವನೇ ಸಾಟಿ. ಇವನ ಕಾವ್ಯದ ಹಲವು ಹಸ್ತಪ್ರತಿಗಳು ದೊರತಿದ್ದು ಮುಖ್ಯವಾಗಿ ಮೂರು ಪಾಠಾಂತರಗಳಿವೆ – ಇವುಗಳಲ್ಲಿ ಇರುವ ಪದ್ಯಗಳೆಲ್ಲ ಎಲ್ಲವೂ ಒಂದೇ ಆಗಿಲ್ಲ. ಅಲ್ಲದೆ, ನಂತರದ ಕೆಲವು ಕವಿಗಳೂ ಅಮರುಕನದ್ದೆಂದು ಕೆಲವು ಪದ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಉದಾಹರಿಸಿಯೂ ಇದ್ದಾರೆ. ಇವೆಲ್ಲಾ ಸೇರಿಸಿ, ಅಮರುಕನದ್ದೆಂದು ಹೇಳಲಾಗುವ ಸುಮಾರು ೧೬೦ ಪದ್ಯಗಳಿವೆ.
ಇವನ ಬಗ್ಗೆ ಇನ್ನೊಂದು ಕಥೆಯೂ ಇದೆ. ಮಂಡನಮಿಶ್ರರ ಹೆಂಡತಿ ಉಭಯಭಾರತಿಯ ಜೊತೆ ಆದಿಶಂಕರರ ವಾದ ನಡೆಯುತ್ತಿದ್ದಾಗ ಆಕೆ ಸಾಂಸಾರಿಕ ಜೀವನದ ಬಗ್ಗೆ ಪ್ರಶ್ನೆ ಮಾಡಲು, ಬಾಲ ಸನ್ಯಾಸಿಯಾಗಿದ್ದ ಶಂಕರರು ತಮ್ಮ ಅನುಭವದಿಂದಲೇ ಆ ಪ್ರಶ್ನೆಗೆ ಉತ್ತರಿಸಲು ಅಕಾಲದಲ್ಲಿ ಸತ್ತು ಹೋಗಿದ್ದ ಅಮರುಕನ ದೇಹದಲ್ಲಿ ಪರಕಾಯ ಪ್ರವೇಶಮಾಡಿದ್ದರೆಂದೂ, ಆ ಸಮಯದಲ್ಲಿ ಅವರು ಬರೆದ ಪದ್ಯಗಳೇ ಈ ಅಮರುಶತಕವೆಂದೂ ಕೆಲವು ಶಂಕರ ವಿಜಯ ಕಾವ್ಯಗಳು ಹೇಳುತ್ತವೆ. ಇವುಗಳ ಸತ್ಯಾಸತ್ಯತೆ ಹೇಗೇ ಇರಲಿ – ಅಮರು ಬರೆದ ಪದ್ಯಗಳು ಸಾವಿರದಿನ್ನೂರು ವರ್ಷಗಳ ನಂತರವೂ ರಸಿಕರ ಮನ ಸೆಳೆಯುತ್ತಿವೆ. ಅಂದ ಹಾಗೆ , ಎಸ್ ಎಲ್ ಭೈರಪ್ಪ ಅವರ ’ಸಾರ್ಥ’ ಕಾದಂಬರಿಯನ್ನು ಓದಿದ್ದವರಿಗೆ ಅದರಲ್ಲಿ ಬರುವ ಅಮರುಕನ ಪಾತ್ರ ನೆನಪಾದರೂ ಆಗಬಹುದೇನೋ.
ಅಮರುಕನ ಪದ್ಯಗಳು ಅವುಗಳ ಲಾಲಿತ್ಯಕ್ಕೆ ಹೆಸರುವಾಸಿ. ಹಾಗಾಗಿ ಅವುಗಳ ಅನುವಾದ ಸ್ವಲ್ಪ ಕಷ್ಟವೇ ಆದರೂ, ಮನಸ್ಸಿಗೆ ಬಹಳ ತೃಪ್ತಿ ಕೊಡುವಂತಹವು. ನಾನು ಮಾಡಿರುವ ಅನುವಾದಗಳಲ್ಲಿ ಕೆಲವನ್ನು ಇಲ್ಲಿ ಕೊಟ್ಟಿದ್ದೇನೆ.
****
ಯಾವಾಗಲೋ ಒಮ್ಮೆ ನಾಯಕಿ ತನ್ನ ನಲ್ಲನಲ್ಲಿ ಹುಸಿಮುನಿಸು ತೋರಿದಳು. ಆದರೆ ಅದು ಸುಳ್ಳು ಎಂದರಿಯದ ಅವನು ದೂರವಾಗಿಬಿಟ್ಟ. ಈಗ ಇವಳಿಗೆ ಉಳಿದಿದ್ದೇನು? ಬರೀ ಒಂಟಿತನ. ತನ್ನ ಕೊರಗನ್ನು ಹೇಳಿಕೊಳ್ಳುವುದಕ್ಕೆ ಒಬ್ಬ ಗೆಳತಿಯಿದ್ದಾಳಲ್ಲ, ಸದ್ಯ! ಇಲ್ಲದಿದ್ದರೆ ಇವಳ ಪಾಡು ಏನಾಗುತ್ತಿತ್ತೋ! (ಅಮರುಶತಕ: ೧೫)
ಯಾವುದೋ ಹುಸಿಮುನಿಸಿನಲಿ ನಾ ಸುಮ್ಮನೇ ಹೋಗೆನ್ನಲು
ಕಲ್ಲು ಮನದಾ ನಲ್ಲ ತಟ್ಟನೆ ಸಜ್ಜೆ ಯಿಂದಲಿ ಎದ್ದು ತಾ
ಭರದಿ ಪ್ರೇಮವ ಗೆಳತಿ ಹೇವದಿ ಮುರಿಯುತಲಿ ದೂರಾದರೂ
ನಾಚದೀ ಮನವವನೆಡೆಗೆ ಹೋಗುವುದಕೇನನು ಮಾಡಲೇ?
ಹದಿಮೂರರ ಪೋರಿಯೂ ನಮಗೆ ಬದುಕು ಕಲಿಸಬಲ್ಲಳು!
– ಸಹನಾ ವಿಜಯಕುಮಾರ್. ಬೆಂಗಳೂರು
ಹದಿಮೂರು ವರ್ಷದ ಚುರುಕು ಹುಡುಗಿಯೊಬ್ಬಳು ಸತತವಾಗಿ ಎರಡು ವರ್ಷಗಳ ಕಾಲ ಹೊರಪ್ರಪಂಚದ ಸಂಪರ್ಕ ಕಡಿದುಕೊಂಡು ತನ್ನ ಕುಟುಂಬದೊಂದಿಗೆ ಅಜ್ಞಾತವಾಸದಲ್ಲಿರಬೇಕಾಗಿ ಬಂದರೆ ಏನಾಗಬಹುದು? ಹಣೆಬರಹವನ್ನು ಹಳಿಯುತ್ತ ದಿನದೂಡಬಹುದು. ತನಗೆ ಈ ದುರ್ಗತಿಯನ್ನು ತಂದಿತ್ತ ದೇವರನ್ನು ಶಪಿಸುತ್ತ ಕಣ್ಣೀರಿಡಬಹುದು ಅಥವಾ ಸುಮ್ಮನೆ ಕೊರಗಿ ಖಿನ್ನತೆಗೊಳಗಾಗಬಹುದು. ಅದೆಲ್ಲ ಬಿಟ್ಟು ತನ್ನ ನೋವು ಸಂಕಟ ತೊಳಲಾಟಗಳನ್ನು, ಆ ದಿನಗಳ ಚಿತ್ರಣವನ್ನು ತನ್ನ ಡೈರಿಯಲ್ಲಿ ಯಥಾವತ್ತಾಗಿ ದಾಖಲಿಸಿಟ್ಟು ಸಾವಿನ ನಂತರವೂ ಸ್ಮರಣೀಯಳಾಗಬಹುದೇ? ವ್ಯತಿರಿಕ್ತ ಪರಿಸ್ಥಿತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟು, ಸಣ್ಣ-ಪುಟ್ಟದ್ದಕ್ಕೆಲ್ಲ ಧೃತಿಗೆಡುವವರಿಗೆ ಸ್ಫೂರ್ತಿಯಾಗಿ ವಿಶ್ವಕ್ಕೇ ಮಾನವೀಯತೆಯ ಪಾಠ ಕಲಿಸುವ ಗುರುವಾಗಬಹುದೇ? ಹೌದು ಎನ್ನುತ್ತದೆ ಇತಿಹಾಸ. ತನ್ನ ಪುಟ್ಟ ಬದುಕನ್ನು ಡೈರಿಯ ಪುಟಗಳಲ್ಲಿ ಸ್ಫುಟವಾಗಿ ಬರೆದಿಟ್ಟು, ಸತ್ತ ಮೇಲೂ ತನ್ನ ಬರಹದಿಂದಲೇ ಬದುಕಿರುವ ಈ ಬಾಲೆಯ ಹೆಸರು ‘ಆನ್ ಫ್ರ್ಯಾಂಕ್’.
ಆನ್ ಹುಟ್ಟಿದ್ದು 1929ನೇ ಇಸವಿಯ ಜೂನ್ 12ರಂದು, ಜರ್ಮನಿಯ ಫ್ರಾಂಕ್ಫರ್ಟ್ ಎಂಬಲ್ಲಿ. ಅಪ್ಪ ಓಟ್ಟೊ ಫ್ರ್ಯಾಂಕ್, ಅಮ್ಮ ಎಡಿತ್ ಹಾಗೂ ಅಕ್ಕ ಮಾರ್ಗೋಟ್ರನ್ನೊಳಗೊಂಡ ಸಣ್ಣ ಯಹೂದಿ ಕುಟುಂಬ ಇವರದ್ದು. ಅಪ್ಪ ಪುಸ್ತಕ ಪ್ರಿಯನಾದ್ದರಿಂದ ಮನೆಯಲ್ಲೇ ದೊಡ್ಡ ಗ್ರಂಥಾಲಯವಿತ್ತು. ಮಕ್ಕಳಿಗೂ ಪುಸ್ತಕಗಳನ್ನು ಓದಲು ಬಹಳ ಉತ್ತೇಜನವಿತ್ತು. ‘ಆನ್’ಗೆ ನಾಲ್ಕು ವರ್ಷಗಳಾಗುವವರೆಗೂ ಎಲ್ಲ ಮಾಮೂಲಾಗಿಯೇ ಇತ್ತು. ಆದರೆ 1933ರ ಮಾರ್ಚ್ 13ರಂದು ನಡೆದ ಚುನಾವಣೆಯಲ್ಲಿ ಹಿಟ್ಲರ್ನ ನಾಜಿ ಪಕ್ಷ ಗೆದ್ದೊಡನೆ ಯಹೂದಿಗಳಲ್ಲಿ ಸಣ್ಣ ಸಂಚಲನ ಶುರುವಾಯಿತು. ಚಾನ್ಸೆಲರ್ ಆಗಿ ನಿಯುಕ್ತನಾದ ಹಿಟ್ಲರ್ ನಿರೀಕ್ಷಿಸಿದ್ದಂತೆಯೇ ದೌರ್ಜನ್ಯಕ್ಕಿಳಿದ. ಅವನು ಮಾಡಿದ ಮೊತ್ತ ಮೊದಲ ಕೆಲಸ Concentration Camp ಎಂದು ಕರೆಯಲ್ಪಡುತ್ತಿದ್ದ ಸಮರ ಶಿಬಿರ(ಯುದ್ಧದ ಸೆರೆಯಾಳುಗಳನ್ನು ಕೂಡಿಡುವ ಶಿಬಿರ)ಗಳನ್ನು ಶುರುಮಾಡಿ ಒಂದು ವರ್ಷದಲ್ಲೇ ಸುಮಾರು 45 ಸಾವಿರ ಜನರನ್ನು ಅಲ್ಲಿಗೆ ದೂಡಿದ್ದು. ಆಗ ಜರ್ಮನಿಯನ್ನು ತೊರೆದ ಸುಮಾರು 3 ಲಕ್ಷ ಯಹೂದಿ ಕುಟುಂಬಗಳಲ್ಲಿ ‘ಆನ್’ಳ ಕುಟುಂಬವೂ ಸೇರಿತ್ತು.
ಹೀಗೆ ಜರ್ಮನಿ ಬಿಟ್ಟು ಆಶ್ರಯ ಹುಡುಕಿಕೊಂಡು ಹೊರಟ ಈ ಕುಟುಂಬ ನೆಲೆ ಕಂಡುಕೊಂಡದ್ದು ಹಾಲೆಂಡ್ನಲ್ಲಿ. ಐದಾರು ವರ್ಷಗಳು ನೆಮ್ಮದಿಯಾಗಿ ಉರುಳಿದ್ದವೇನೋ, 1940ರ ಮೇ ತಿಂಗಳಿನಲ್ಲಿ ಹಾಲೆಂಡ್ನ ಮೇಲೆ ದಾಳಿ ನಡೆಸಿದ ಹಿಟ್ಲರ್ನ ಸೈನ್ಯ ಅದನ್ನು ಸುಲಭವಾಗಿ ವಶಪಡಿಸಿಕೊಂಡಿತು. ದುರುಳ ಹಿಟ್ಲರ್ನ ಯಹೂದಿ ವಿರೋಧಿ ಚಟುವಟಿಕೆಗಳು ಇಲ್ಲಿಯೂ ಗರಿಗೆದರಿದವು. ಯಹೂದಿಗಳೆಲ್ಲ ಹೆಸರು ನೋಂದಣಿ ಮಾಡಿಸುವುದು ಕಡ್ಡಾಯವಾಯಿತು. ಅಪ್ಪ ಓಟ್ಟೊ ತನ್ನ ಉದ್ಯಮವನ್ನು ಗೆಳೆಯರ ಹೆಸರಿಗೆ ಹಸ್ತಾಂತರಿಸಿದರೆ, ಓದಿನಲ್ಲಿ ಮುಂದಿದ್ದ ಅಕ್ಕ-ತಂಗಿಯರು ತಾವು ಹೋಗುತ್ತಿದ್ದ ಪ್ರತಿಷ್ಠಿತ ಶಾಲೆಗಳನ್ನು ಬಿಟ್ಟು ಯಹೂದಿಯರಿಗೆ ಮೀಸಲಿದ್ದ ಶಾಲೆ ಸೇರಬೇಕಾಯಿತು. ಅಕ್ಕ ಮಾರ್ಗೋಟ್ ತುಂಬಾ ಮೆದು ಸ್ವಭಾವದ ಅಂತರ್ಮುಖಿಯಾಗಿದ್ದರೆ ತಂಗಿ ಆನ್ ವಾಚಾಳಿ ಹಾಗೂ ನಿರ್ಭೀತ ವ್ಯಕ್ತಿತ್ವದವಳಾಗಿದ್ದಳು. ಹಿಟ್ಲರ್ನ ಸೇನೆ ಹೇರಿದ್ದ ನೂರೆಂಟು ನಿರ್ಬಂಧಗಳ ನಡುವೆಯೂ ಬದುಕು ಹೇಗೋ ಸಾಗುತ್ತಿತ್ತು. 1943ನೇ ಇಸವಿಯ ಜೂನ್ 12 ‘ಆನ್’ಳ 13ನೆಯ ಹುಟ್ಟುಹಬ್ಬ. ಅಂದು ತಾನು ಬಹಳ ದಿನಗಳಿಂದ ಬಯಸಿದ್ದ ಕೆಂಪು-ಬಿಳಿ ಚೌಕಗಳಿದ್ದ ಆಟೋಗ್ರಾಫ್ ಪುಸ್ತಕವೊಂದನ್ನು ಉಡುಗೊರೆಯಾಗಿ ಪಡೆದಳು. ಅದನ್ನು ಡೈರಿಯಂತೆ ಬಳಸುವ ನಿಶ್ಚಯ ಮಾಡಿ ಪ್ರತಿದಿನ ನಡೆಯುತ್ತಿದ್ದ ಘಟನೆಗಳನ್ನು ದಾಖಲಿಸತೊಡಗಿದಳು.
ಇಪ್ಪತ್ತನೇ ಶತಮಾನದ ಭಾರತದಲ್ಲಿ ಯೋಗದ ಪುನರುತ್ಥಾನ
– ಶರತ್ ಹರಿಹರಪುರ ಸತೀಶ್
ಪದ್ಮಾಸನದಲ್ಲಿ (ಸಾಧ್ಯವಾದರೆ) ಕುಳಿತು, ಕಣ್ಣು ಮುಚ್ಚಿ ‘ಯೋಗ’ ಎಂಬುದನ್ನು ಮನಸಿನಲ್ಲೇ ಕಲ್ಪಿಸಿಕೊಂಡರೆ ನಿಮ್ಮ ಕಣ್ಣು ಮುಂದೆ ಬರುವ ಚಿತ್ರ ಯಾವುದು? ಟಿವಿಯಲ್ಲಿ ಬರುವ ಒಬ್ಬ ಭಾರತದ ವ್ಯಕ್ತಿಯಾಗಿರಬಹುದು (ಬಾಬಾ ರಾಮದೇವ್, ಫಿಲಂ ತಾರೆ, ಇತ್ಯಾದಿ) ಅಥವಾ ಒಬ್ಬ ಪಾಶ್ಚಾತ್ಯ ದೇಶದ ವ್ಯಕ್ತಿಯೇ ಆಗಿರಬಹುದು ……. ಅಲ್ಲವೇ? ಭಾರತದ ಓರ್ವ ಮಹಾನ್ ವ್ಯಕ್ತಿಯ ಮುಖಚಿತ್ರ ಯಾರಿಗೂ ಕಾಣಿಸುವುದಿಲ್ಲ. ಏಕೆಂದರೆ ಅಂತಹ ಮನುಷ್ಯ ಇದ್ದರು ಎನ್ನುವುದು ಅನೇಕರಿಗೆ ಗೊತ್ತೆಇಲ್ಲ.
ಪತಂಜಲಿ ಮಹರ್ಶಿಗಳು ಯೋಗ ಸೂತ್ರಗಳನ್ನು ಬರೆದು ಸುಮಾರು 2400 ವರ್ಷಗಳೇ ಆಗಿರಬಹುದು. ಮೊದಲಿಗೆ ಮುಸ್ಲಿಮರು, ನಂತರ ಬ್ರಿಟಿಷರ ದಬ್ಬಾಳಿಕೆಯಲ್ಲಿ ನಮ್ಮ ಗುರುಕುಲ ಶಿಕ್ಷಣ ಪದ್ಧತಿ ನಾಶವಾಯಿತು. ಇದರ ಜೊತೆಗೆ ಯೋಗಾಸನದ ವಿದ್ಯೆಯು ಕ್ಷೀಣವಾಯಿತು. ಇಪ್ಪತ್ತನೇ ಶತಮಾದಲ್ಲಿ ಅದಕ್ಕೆ ಪುನರ್ಜೀವ ನೀಡಿದವರೇ ‘ಶ್ರೀ ತಿರುಮಲೈ ಕೃಷ್ಣಮಾಚಾರ್ಯ’. ಇಡೀ ವಿಶ್ವದಲ್ಲಿ ಕೋಟ್ಯಾಂತ ಜನರು ವಿವಿಧ ಶೈಲಿಗಳಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಮೂಲ 125ಕ್ಕೂ ಹೆಚ್ಚು ವರುಷಗಳ ಹಿಂದೆ ಜನಿಸಿದ ಕೃಷ್ಣಮಾಚಾರ್ಯರು.
ಚಿತ್ರದುರ್ಗದಲ್ಲಿ ಜನಿಸಿದ ಕೃಷ್ಣಮಾಚಾರ್ಯರು (18 ನವೆಂಬರ್ 1888 – 28 ಫೆಬ್ರುವರೀ 1989) ಸಂಸ್ಕೃತ ಮತ್ತು ವೇದಗಳ ಜೊತೆಗೆ, ತಮ್ಮ ತಂದೆಯವರಾದ ‘ಶ್ರೀ ತಿರುಮಲೈ ಶ್ರೀನಿವಾಸ ತಾತಾಚಾರ್ಯ’ ಅವರಿಂದ ಯೋಗ ಹಾಗೂ ಪ್ರಾಣಾಯಾಮವನ್ನು ಕಲಿತರು. ಮೈಸೂರು, ಪಟ್ನಾ ಹಾಗೂ ಕಾಶಿಯಲ್ಲಿ ಶಡ್ದರ್ಶನಗಳಲ್ಲಿ ಪಾಂಡಿತ್ಯ ಪಡೆದರು. ಮಾನಸ ಸರೋವರದ ಬಳಿ ಒಂದು ಗುಹೆಯಲ್ಲಿ ವಾಸವಾಗಿದ್ದ ‘ರಾಮ ಮೋಹನ ಬ್ರಹ್ಮಚಾರಿ’ ಅವರಿಂದ ಕೂಡ ವಿದ್ಯೆ ಸ್ವೀಕರಿಸಿದರು.
ನಂತರ ಮೈಸೂರಿಗೆ ಹಿಂದುರಿಗಿ ಶ್ರೀಕೃಷ್ಣ ರಾಜ ಒಡೆಯರ್-೪ ಅವರ್ ಆಸ್ಥಾನ ವಿದ್ವಾಂಸರಾದರು. ಮಹಾರಾಜರ ಪ್ರೋತ್ಸಾಹದಲ್ಲಿ ಭಾರತದಾದ್ಯಂತ ಉಪನ್ಯಾಸಗಳನ್ನು ನೀಡುವುದರ ಜೊತೆಗೆ ಯೋಗಾಸವನ್ನೂ ಪ್ರದರ್ಶಿಸಿದರು. ಇದರ ಮಧ್ಯೆ ಆಚಾರ್ಯರು ಅನೇಕ ಪುಸ್ತಕಗಳನ್ನು ಬರೆದರು. ಅದರಲ್ಲಿ ಮುಖೈವಾದುದು ‘ಯೋಗ ಮಕರಂದ’, ‘ಯೊಗಾಸನಗಳು’, ‘ಯೋಗ ರಹಸ್ಯ’ ಮತ್ತು ‘ಯೋಗವಲ್ಲಿ’. 1933ರಲ್ಲಿ ಜಗನ್ಮೋಹನ ಅರಮನೆಯಲ್ಲಿ ಯೋಗಾಶಾಲೆಯೊಂದನ್ನೂ ಆರಂಭಿಸಿದರು. ದುರಾದ್ರುಷ್ಟವಶ ಈ ಯೋಗಾಶಾಲೆಯನ್ನು ಸ್ವಾತಂತ್ರ ಭಾರತದ ಮೈಸೂರಿನ ಮೊದಲ ಮುಖ್ಯ ಮಂತ್ರಿಯಾದ ಕೆ.ಸಿ.ರೆಡ್ಡಿಯವರು ಮುಚ್ಚಿಸಿದರು. ಅದರ ಕಾರಣ ಆಚಾರ್ಯರು ಮೈಸೂರಿನಿಂದ ಬೆಂಗಳೂರಿಗೆ ಅನಂತರ ಮದ್ರಾಸಿಗೆ ತೆರಳಿದರು. ಮದ್ರಾಸಿನಲ್ಲಿ ಕೆಲ ಕಾಲ ವಿವೇಕಾನಂದ ಕಾಲೆಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. 1989ರಲ್ಲಿ ತಮ್ಮ ಪಾರ್ಥಿವ ಶರೀರವನ್ನು ತ್ಯಜಿಸಿದರು.