ವಿಷಯದ ವಿವರಗಳಿಗೆ ದಾಟಿರಿ

Archive for

30
ಜೂನ್

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೮

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭

‘ಆವರಣ’ ಎಂಬ ವಿ-ಕೃತಿ  —   ಸಂಗ್ರಹ : ಗೌರಿ ಲಂಕೇಶ್   (ಭಾಗ–೩)
————————————————————————
‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನದಲ್ಲಿ ಒಟ್ಟು ಇಪ್ಪತ್ತೊಂದು ಲೇಖನಗಳಿವೆ. ಇವುಗಳಲ್ಲಿ ಎಂಟು ಲೇಖನಗಳ ಬಗ್ಗೆ ಈಗಾಗಲೇ ಎರಡು ಭಾಗಗಳಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದಾಗಿದೆ. ಇನ್ನು ಉಳಿದಿರುವ ಹದಿಮೂರು ಲೇಖನಗಳು ಎರಡು ರೀತಿಯವು. (೧) ‘ಆವರಣ’ ಕಾದಂಬರಿಗೆ ನೇರವಾಗಿ ಸಂಬಂಧಿಸಿರುವಂತಹವು. (೨) ‘ಆವರಣ’ ಕಾದಂಬರಿಯನ್ನು ನೆಪ ಮಾತ್ರಕ್ಕೆ ಇಟ್ಟುಕೊಂಡು ಭೈರಪ್ಪನವರ ನಡೆ-ನುಡಿಗಳನ್ನು ಹೇಳುವಂತಹವುಗಳು.

‘ಆವರಣ’ ಕಾದಂಬರಿಗೆ ಸಂಬಂಧಿಸಿರುವಂತಹ ಲೇಖನಗಳಲ್ಲಿ ಸಹ ಈ ಹಿಂದಿನ ಎರಡು ಭಾಗಗಳಲ್ಲಿ ಚರ್ಚಿತವಾದ ವಿಷಯಗಳನ್ನು ಬಿಟ್ಟು ವಿಶೇಷವಾದ,ಹೊಸದಾದ ಅಂಶಗಳು ಇಲ್ಲ. ಆದ್ದರಿಂದ ಅವುಗಳ ಬಗ್ಗೆ ವಿವರವಾದ ಚರ್ಚೆ ಪುನರುಕ್ತಿಯಾಗುತ್ತದೆ. ಪುನರುಕ್ತಿಯಾಗದಂತಹ ಕೆಲವು ಅಂಶಗಳ ಬಗ್ಗೆ ಮಾತ್ರ ಈ ಭಾಗದಲ್ಲಿ ಒತ್ತು ನೀಡಲಾಗಿದೆ.

ಹಿಂದಿನದನ್ನೆಲ್ಲ ‘ಆವರಣ’ದಲ್ಲಿ ಪೇರಿಸುವ ಪ್ರಯತ್ನ ಲೇಖನ ಬರೆದಿರುವ ಬಿ. ಎಸ್. ವೆಂಕಟಲಕ್ಷ್ಮಿಯವರಿಗೆ  ‘…… ಕಾದಂಬರಿಯೊಂದನ್ನು ಉಲ್ಲಾಸಕ್ಕಾಗಿಯೋ ಅಥವಾ ತಮ್ಮ ವೈಚಾರಿಕತೆಯನ್ನು ಹಿಗ್ಗಿಸಿಕೊಳ್ಳುವ ಸಲುವಾಗಿಯೋ ಕೈಗೆತ್ತಿಕೊಳ್ಳುವ ಸಾಮಾನ್ಯ ಓದುಗರಿಗೆ ಕಾದಂಬರಿಯೊಂದು ಸಹಜವಾಗಿ ಓದಿಸಿಕೊಂಡಾಗ ಮಾತ್ರ ಒಂದು ಬಗೆಯ ತೃಪ್ತಿ …….. ಸಾರ್ಥಕ ಭಾವನೆ ಮೂಡುತ್ತದೆ……… ‘ಆವರಣ’ದಲ್ಲಿ ಯಾವೊಂದು ಕಥೆಯನ್ನೂ ಸುಸೂತ್ರವಾಗಿ ಹೇಳದೆ ಅಹಿತಕರ ಘಟನೆಗಳಿಗೆ ಮಾತ್ರ ಒತ್ತುಕೊಟ್ಟಿದೆ ‘ ಎಂಬ ಅಸಮಾಧಾನ. ಉಲ್ಲಾಸ, ಸುಸೂತ್ರವಾದ ಕಥೆ ಇವುಗಳ ಜತೆ ವೈಚಾರಿಕತೆಯನ್ನೂ ಬಯಸುವುದು ತೀರಾ ದುಬಾರಿಯಾಗುತ್ತದೆ. ಕಾದಂಬರಿಯೊಂದರಲ್ಲಿ ‘ವೈಚಾರಿಕತೆ’ ಎಂಬುದು ವಿಶಾಲ ವ್ಯಾಪ್ತಿಯ ಚರ್ಚೆಯನ್ನು ಬೇಡುವಂತಹುದು. ಈಗಾಗಲೇ ಭೈರಪ್ಪನವರ ಮೇಲೆ  ಅವರು  ತಮ್ಮ’ ವೈಚಾರಿಕತೆ ‘ಯನ್ನು ಓದುಗರಿಗೆ ಹೇಳುವುದುಕ್ಕೊಸ್ಕರ  ಕಾದಂಬರಿಯನ್ನು ಒಂದು ಸಾಧನವನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಆರೋಪ ನಮ್ಮ ಸಾಹಿತ್ಯವಲಯದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಓದುಗ ಬಯಸುವ ‘ವೈಚಾರಿಕತೆ’ ಯಾವ ರೀತಿಯದು ಎಂಬುದು ಸ್ಪಷ್ಟವಾಗಿಲ್ಲ. ‘ಆವರಣ’ದಮಟ್ಟಿಗೆ ಹೇಳುವುದಾದರೆ ವೆಂಕಟಲಕ್ಷ್ಮಿ ಅವರ ದೃಷ್ಟಿಯಲ್ಲಿ ಅಹಿತಕರ ಘಟನೆಗಳನ್ನು ಹೇಳುವುದು ವೈಚಾರಿಕತೆ ಅಲ್ಲ ಎಂಬುದು ಸ್ಪಷ್ಟವಾಗಿದೆ. ಕಾದಂಬರಿಯೊಂದರ ಓದು ಕಾಲ ಕಳೆಯಲು ಅಲ್ಲ ಎಂದು ಭಾವಿಸಿರುವವರಿಗೆ ವೆಂಕಟಲಕ್ಷ್ಮಿ ಅವರ ವಿಚಾರಗಳು ತೀರಾ ತೆಳುವಾದವುಗಳು ಎಂದು ಅನಿಸುತ್ತದೆ.

ಮತ್ತಷ್ಟು ಓದು »