ವಿಷಯದ ವಿವರಗಳಿಗೆ ದಾಟಿರಿ

Archive for

31
ಜುಲೈ

ಮತ್ತೆ ಮತ್ತೆ ಬರಲಿ ಮಗಳ ದಿನ!

– ತುರುವೇಕೆರೆ ಪ್ರಸಾದ್

ಕಲ್ಪನಾ ಚಾವ್ಲಾಪ್ರತಿವರ್ಷ ಜ.12, ಸೆ.4 ಮತ್ತು ಸೆಪ್ಟೆಂಬರ್ ಕೊನೆಯ ಭಾನುವಾರ ಹೀಗೆ ವಿವಿಧ ದಿನಗಳನ್ನು ವಿವಿಧ ಸಂಘಟನೆಗಳು ಮಗಳ ದಿನವನ್ನಾಗಿ ಆಚರಿಸುತ್ತವೆ. ಆದರೆ ಭಾರತೀಯ ಸಾರ್ವಜನಿಕ ಸಂಪರ್ಕ ಸಮಿತಿ ಅಂತರರಾಷ್ಟ್ರೀಯ ಖ್ಯಾತಿಯ ಭಾರತೀಯ ಖಗೋಳ ವಿಜ್ಞಾನಿ ದಿ.ಕಲ್ಪಾನಾಚಾವ್ಲಾ ಹುಟ್ಟಿದ ದಿನವನ್ನು (ಜುಲೈ 1) ಮಗಳ ದಿನವನ್ನಾಗಿ ಆಚರಿಸುವಂತೆ 2006ರಲ್ಲಿ ಕರೆನೀಡಿತ್ತು. ಆ ವರ್ಷ ಬಹಳಷ್ಟು ಸಂಘ ಸಂಸ್ಥೆಗಳು ಜುಲೈ ತಿಂಗಳು ಪೂರಾ ಕಲ್ಪನಾ ಚಾವ್ಲಾ ಅವರ ಜನ್ಮದಿನೋತ್ಸವವನ್ನು ಮಗಳ ದಿನದ ರೂಪದಲ್ಲಿ ಆಚರಿಸಿದ್ದ ವರದಿಗಳನ್ನು ನಾನು ಪತ್ರಿಕೆಗಳಲ್ಲಿ ಓದಿದ್ದೆ. ಆದರೆ ಆ ನಂತರ ಆ ನಿಟ್ಟಿನಲ್ಲಿ ಯಾವುದೇ ಆಚರಣೆಗಳು ನಡೆದದ್ದು ನನ್ನ ಗಮನಕ್ಕೆ ಬಂದಿಲ್ಲ. ಇದಕ್ಕೆ ಆಡಳಿತಗಳಾಗಲೀ, ಸ್ಥಳೀಯ ಸಂಘ-ಸಂಸ್ಥೆಗಳಾಗಲೀ ಯಾವುದೇ ಮಹತ್ವ ನೀಡಿಲ್ಲ. ಹಾಗಾಗಿ ಈ ತಿಂಗಳಲ್ಲಿ ಮತ್ತೊಮ್ಮೆ ಕಲ್ಪನಾ ಚಾವ್ಲಾ ನೆನಪು ಮೂಡಿಸಿ ಕೋಟಿ ಕೋಟಿ ಹೆಣ್ಣುಮಕ್ಕಳಿಗೆ ಆಕೆ ಸ್ಪೂರ್ತಿಯ ಅನುಕರಣೀಯ ಮಾದರಿ ಆಗುವಂತೆ ಮಾಡಬೇಕಿದೆ.

ನಮ್ಮ ದೇಶದಲ್ಲಿ ಮಹಿಳಾ ಸಬಲೀಕರಣ ಕುರಿತ ನೂರಾರು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆ. ಮಹಿಳಾ ಆಯೋಗಗಳು ರಚನೆಯಾಗಿವೆ. ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಂತೆಯೇ ಕಾನೂನುಬದ್ಧ ಆಸ್ತಿ ಹಕ್ಕು ನೀಡಲಾಗಿದೆ. ಆದರೂ ಇಂದಿಗೂ ಹೆಣ್ಣು ಮಕ್ಕಳ ಸಾಮಾಜಿಕ ಹಾಗೂ ಕೌಟುಂಬಿಕ ಶೋಷಣೆ ನಿರಂತರವಾಗಿ ನಡೆಯುತ್ತಲೇ ಇದೆ. ಎಂತಹ ಕಠಿಣ ಕಾನೂನು ಮಾಡಿದರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಒಂದು ವರದಿ ಪ್ರಕಾರ ಭಾರತದಲ್ಲಿ ಪ್ರತಿ 22 ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣ ವರದಿಯಾಗುತ್ತಿದೆ. ಎಷ್ಟೋ ಸಾವಿರಾರು ಪ್ರಕರಣಗಳು ದಾಖಲೆಯೇ ಆಗದೆ ಅರೋಪಿಗಳು ಕಾನೂನಿನ ಕೈಯ್ಯಿಂದ ನುಣುಚಿಕೊಳ್ಳುತ್ತಿದ್ದಾರೆ. ಅಂತಸ್ತು ಗೌರವದ ಹೆಸರಿನಲ್ಲಿ ಮರ್ಯಾದೆ ಹತ್ಯೆಗಳು ನಡೆಯುತ್ತಿವೆ. ಮಹಿಳೆಯರಿಗೆ ರಾಜಕೀಯ ಶಕ್ತಿ ದೊರಕಿಸಿಕೊಡುವ ಶೇ.33 ಮೀಸಲಾತಿ ಮಸೂದೆ ವರುಷಗಳಿಂದ ನೆನೆಗುದಿಗೆ ಬಿದ್ದಿದೆ. ಏನೆಲ್ಲಾ ಹೋರಾಟದ ನಡುವೆಯೂ ಪುರುಷ ಪ್ರಧಾನ ವ್ಯವಸ್ಥೆಯ ಕಬಂಧ ಬಾಹುಗಳಿಂದ ಲಕ್ಷಾಂತರ ಮಹಿಳೆಯರು ಹೊರಬರಲಾಗಿಲ್ಲ. ಪರಿಪೂರ್ಣ ಸ್ವಾತಂತ್ಯ್ರದ ಬೆಳಕು ಕಾಣಲಾಗಿಲ್ಲ ಎಂಬುದೇ ದೊಡ್ಡ ದುರಂತ.

ಇದಕ್ಕೆಲ್ಲಾ ಕಾರಣ ಪರಂಪರಾಗತವಾಗಿ ಬಂದಿರುವ ಮನೋವೈಜ್ಞಾನಿಕ ಹಾಗೂ ಸಾಮಾಜಿಕ ಲಿಂಗತ್ವದ ಪರಿಕಲ್ಪನೆ. ನಮ್ಮ ವಿದ್ಯಾವಂತ ಸಮಾಜವೂ ಸಹ ಈ ಲಿಂಗತ್ವದ ಸಾಂಪ್ರದಾಯಿಕ ಪರಿಕಲ್ಪನೆಯಿಂದ ಹೊರಬರಲಾಗದೆ ತೊಳಲಾಡುತ್ತಿದೆ. ಖ್ಯಾತ ಸ್ತ್ರೀವಾದಿ ಆನ್ ಓಕ್ಲೆ ಪ್ರಕಾರ ಲಿಂಗ ಮತ್ತು ಲಿಂಗತ್ವದ ನಡುವಿನ ಸಂಬಂಧ ತೀರಾ ಅಸಹಜವಾದುದು. ಲಿಂಗತ್ವಕ್ಕೂ ಸಂಸ್ಕøತಿಗೂ ತಳುಕು ಹಾಕಿ ಅದನ್ನು ಸಂಪ್ರದಾಯದ ಹಿನ್ನಲೆಯಲ್ಲಿ ವರ್ಗೀಕರಿಸಿ ಸಾಂಸ್ಕøತಿಕ ಪರಿಭಾಷೆಯ ಚೌಕಟ್ಟಿನಲ್ಲಿ ತಾರತಮ್ಯದ ಜವಾಬ್ಧಾರಿಯನ್ನು ಆರೋಪಿಸಲಾಗಿದೆ. ಈ ಕಲ್ಪನೆಯ ಭಾಗವೇ ಗಂಡ್ತನ ಮತ್ತು ಹೆಣ್ತನ. ಪ್ರತಿಯೊಂದು ಸಮಾಜವೂ ವ್ಯವಸ್ಥಿತವಾಗಿ ಗಂಡು ಹೆಣ್ಣಿನಲ್ಲಿ ಈ ಲಿಂಗತ್ವದ ಗುಣಗಳನ್ನು ಹೇರಿ ಅವರ ಹಕ್ಕುಗಳು, ನೀರೀಕ್ಷೆಗಳು ಜವಾಬ್ಧಾರಿಗಳು ಎಲ್ಲದರಲ್ಲೂ ಶ್ರೇಷ್ಠ,ಕನಿಷ್ಟ ಎಂಬ ಭಾವನೆ ಮೂಡುವಂತೆ ಪರಿವರ್ತಿಸಲಾಗುತ್ತದೆ. ಇದಕ್ಕೇ ಸಂಸ್ಕøತಿ ಎಂಬ ಹೆಸರಿಟ್ಟು ಅವರ ವರ್ತನೆಗಳನ್ನು ಈ ಸಾಂಸ್ಕøತಿಕ ಮಾನದಂಡದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. ಸಾಂಸ್ಕøತಿಕ ಚಹರೆಗಳು,ಮಾನದಂಡಗಳು, ಸ್ಥಳದಿಂದ ಸ್ಥಳಕ್ಕೆ, ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಹಾಗಾಗಿ ಸಮಾಜ ಲಿಂಗದ ಸ್ಥಿರತೆಯನ್ನು ಒಪ್ಪಿಕೊಂಡಂತೆಯೇ ಲಿಂಗತ್ವದ ಬದಲಾಗುವ ಚಲನಶೀಲ ತಾರತಮ್ಯದ ಸ್ವರೂಪಗಳನ್ನೂ ಒಪ್ಪಿಕೊಳ್ಳುವುದು ಅನಿವಾರ್ಯವಾಗುತ್ತದೆ.

ಮತ್ತಷ್ಟು ಓದು »

28
ಜುಲೈ

ನಾಡು- ನುಡಿ: ಮರುಚಿಂತನೆ-‘ಕರ್ಣಾಟಕ’ ದ ಇತಿಹಾಸ’-ಭಾಗ 1

ಪ್ರೊ.ರಾಜಾರಾಮ್ ಹೆಗಡೆ, ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ.

Social Science Column Logo

ಕರ್ಣಾಟಕ ಶಬ್ದದ ವ್ಯುತ್ಪತ್ತಿ ಹಾಗೂ ಇತಿಹಾಸದ ಕುರಿತು ಏಕೀಕರಣ ಹೋರಾಟ ಕಾಲದಲ್ಲಿ ಶಂಬಾ ಜೋಶಿಯವರಾದಿಯಾಗಿ ಅನೇಕ ವಿದ್ವಾಂಸರು ಚರ್ಚಿಸಿದ್ದಾರೆ. ಈ ಶಬ್ದದ ಉಲ್ಲೇಖವನ್ನು ಬಹುಶಃ ಕ್ರಿಸ್ತಶಕದ ಆದಿಯಿಂದ ವಿಭಿನ್ನ ಸಂಸ್ಕೃತ ಗ್ರಂಥಗಳಲ್ಲಿ ಗುರುತಿಸಬಹುದು. ಕನ್ನಡ ಶಾಸನಗಳಲ್ಲಿ ಈ ಶಬ್ದವು ರಾಷ್ಟ್ರಕೂಟರ ಕಾಲದಿಂದ ಕಾಣಿಸಿಕೊಳ್ಳುವುದಾಗಿ ತಿಳಿದುಬರುತ್ತದೆ. ತದನಂತರ ಇಲ್ಲಿಯ ರಾಜರನ್ನು ಕರ್ಣಾಟ ರಾಜರೆಂದೂ, ಸೈನ್ಯವನ್ನು ಕರ್ಣಾಟ ಬಲವೆಂದೂ ಸಂಸ್ಕೃತದಲ್ಲಿ ಕರೆದರೆ, ಕನ್ನಡ ನುಡಿ, ಕನ್ನಡನಾಡು ಎಂಬುದಾಗಿ ಇಲ್ಲಿಯ ಜನರು ರಾಷ್ಟ್ರಕೂಟರ ಕಾಲದಿಂದಲೇ ಕನ್ನಡ ಸಾಹಿತ್ಯದಲ್ಲಿ ಈ ಶಬ್ದವನ್ನು ಬಳಸಿದ್ದಾರೆ. ತಮಿಳರು ಇವರನ್ನು ಕನ್ನಡಿ, ಕನ್ನಡಿ ಅರಸರ್ ಎಂದು ಕರೆದಿರುವುದೂ ಕಂಡುಬರುತ್ತದೆ. ಈ ಕುರಿತು ಇಲ್ಲಿ ನೀಡಿದ ವಿವರಗಳಿಗೆ ಇನ್ನಷ್ಟು ಈಚೆಗಿನ ಹಾಗೂ ಮುಂದಿನ ವಿವರಗಳು ಸೇರಿ ಈ ಶಬ್ದ ಇನ್ನೂ ಪ್ರಾಚೀನವೆಂದು ಸಿದ್ಧವಾಗಲೂಬಹುದು. ಅದರಿಂದ ಕರ್ನಾಟಕವೊಂದು ಭೂಪ್ರದೇಶ, ಹಾಗೂ ಅದರಲ್ಲಿ ಆಡುತ್ತಿದ್ದ ಭಾಷೆ ಕನ್ನಡ ಎಂಬ ಸತ್ಯಗಳಿಗೇನೂ ಕುಂದುಬರಲಾರದೆಂಬ ತರ್ಕದಿಂದ ಮುಂದುವರಿಯೋಣ.

ನಮಗೆ ಇಲ್ಲಿರುವ ಸಮಸ್ಯೆ ಎಂದರೆ ಈ ಶಬ್ದವನ್ನು ಇಂದಿನ ನಮ್ಮ ವ್ಶೆಜ್ಞಾನಿಕ ಇತಿಹಾಸದ ಪರಿಕಲ್ಪನೆಗೆ ನಾವು ಹೇಗೆ ಒಗ್ಗಿಸಿದ್ದೇವೆ ಹಾಗೂ ಅದು ಆ ಕಲ್ಪನೆಗೆ ಎಷ್ಟರಮಟ್ಟಿಗೆ ಒಗ್ಗುತ್ತದೆ ಎಂಬ ವಿಚಾರ. ಕರ್ನಾಟಕದ ಏಕೀಕರಣ ಕಾಲದಲ್ಲಿ ಕರ್ನಾಟಕದ ಇತಿಹಾಸವನ್ನು ವ್ಶೆಜ್ಞಾನಿಕವಾಗಿ ರಚಿಸಲಾಯಿತು. ಈ ರಚನೆಯಲ್ಲಿ ಇದ್ದ ಪೂರ್ವಗೃಹೀತಗಳೆಂದರೆ: 1) ಕನ್ನಡ ಭಾಷೆಯ ಮೂಲಕ ಒಂದು ಪ್ರದೇಶವನ್ನು ಕಲ್ಪಿಸಿಕೊಳ್ಳಲು ಸಾಧ್ಯ, ಅಂಥ ಪ್ರದೇಶವೇ ಕರ್ನಾಟಕವಾಗಿದೆ. ಕರ್ನಾಟಕ ಎಂಬುದು ಒಂದು ಪ್ರಕಾರದ ರಾಷ್ಟ್ರ ಕಲ್ಪನೆ ಹಾಗೂ ಅದು ಭಾರತ ಎಂಬ ರಾಷ್ಟ್ರದ ಅಂಗಭೂತವಾಗಿದೆ. 2) ಇದೊಂದು ಸಾಂಸ್ಕೃತಿಕ ಪ್ರಭೇದವಾಗಿದೆ ಹಾಗೂ ಇದು ಭಾಷೆಯನ್ನು ಆಧರಿಸಿದೆ, ಅಂದರೆ ಕನ್ನಡ ಬಾಷೆಯ ಮೂಲಕ ಕನ್ನಡ ಸಂಸ್ಸೃತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯ. 3) ಈಗ ಈ ಎರಡೂ ಸಂಗತಿಗಳನ್ನು ನಾವು ಮರೆತಿರುವುದರಿಂದ ಅವನ್ನು ಕಲ್ಪಿಸಿಕೊಳ್ಳುವ ಅವಸ್ಥೆ ಬಂದಿದೆ. ಆದರೆ ಅವು ಸತ್ಯವಾಗಿದ್ದಲ್ಲಿ ಅವು ಇತಿಹಾಸದಲ್ಲಿ ಸಿಕ್ಕಲೇಬೇಕು. 4) ಈ ಸಂಸ್ಕೃತಿ ಈ ಕರ್ನಾಟಕವೆಂಬ ಪ್ರದೇಶದ ಇತಿಹಾಸದ ಮೂಲಕ ಮೈದಳೆದಿರುವುದರಿಂದ ಇದರ ಇತಿಹಾಸವನ್ನು ತಿಳಿದುಕೊಂಡರೆ ಈ ಸಂಸ್ಕೃತಿಯನ್ನು ತಿಳಿದುಕೊಳ್ಳಲು ಸಾಧ್ಯ. 5) ಹಾಗಾಗಿ ಕರ್ನಾಟಕದ ಇತಿಹಾಸದ ಕುರಿತ ತಿಳುವಳಿಕೆಯಿಂದ ಅದರ ಸಂಸ್ಕೃತಿಯ ಕುರಿತ ಜಾಗೃತಿ ಮೂಡುತ್ತದೆ. 6) ಈ ಜಾಗೃತಿ ಏಕೆ ಬೇಕೆಂದರೆ: ಈ ಭಾಷೆ, ಪ್ರದೇಶ, ಸಂಸ್ಕೃತಿ ಹಾಗೂ ಇತಿಹಾಸದ ಆಧಾರದ ಮೇಲೆ ಒಂದು ಪ್ರಭುತ್ವವನ್ನು ರಚಿಸುವುದು ಸಾಧ್ಯ ಹಾಗೂ ಅಂಥ ಪ್ರಭುತ್ವವು ಈ ಭಾಷೆಯನ್ನಾಡುವ ಜನರ ಸರ್ವತೋಮುಖ ಏಳ್ಗೆಗೆ ಮಾರ್ಗವಾಗಲು ಸಾಧ್ಯ. ಈ ರೀತಿ ಇಲ್ಲಿಯ ಜನರ ಏಳ್ಗೆಗೂ ಇವರ ಇತಿಹಾಸಕ್ಕೂ ಅವಿನಾಭಾವಿ ಸಂಬಂಧ ಇದೆ ಎಂದು ನಂಬಿಕೊಂಡು ಕರ್ನಾಟಕದ ಇತಿಹಾಸದ ರಚನೆಯಾಯಿತು. ಮತ್ತಷ್ಟು ಓದು »

25
ಜುಲೈ

ಅತ್ಯಾಚಾರ: ಹುಯಿಲೆಬ್ಬಿಸುವುದೇಕೆ?

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ

Stop Rapeಕಳೆದ ಒಂದೆರಡು ವಾರಗಳಿಂದ ಯಾವ ಮಾಧ್ಯಮ ಓದಿದರೂ ನೋಡಿದರೂ ಅತ್ಯಾಚಾರದ್ದೇ ಸುದ್ದಿ. 2012ರಲ್ಲಿ ದೆಹಲಿಯಲ್ಲಿ ನಿರ್ಭಯಾಳ ಮೇಲೆ ನಡೆದ ಹೇಯ ಕೃತ್ಯದ ತರುವಾಯ ಇಂಥ ಪ್ರಕರಣಗಳು ನಿರ್ಭಯವಾಗಿ ಹೆಚ್ಚು ಸುದ್ದಿಯಾಗುತ್ತಿವೆ. ಇದು ಗುಣವೋ ದೋಷವೋ ಗೊತ್ತಿಲ್ಲ. ಈಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಮೇಲೆ ಕಾಕತಾಳೀಯವೋ ಎಂಬಂತೆ ಬೆಂಗಳೂರಿನಲ್ಲಿ ನಿತ್ಯ ಒಂದೆರಡು, ರಾಜ್ಯಾದ್ಯಂತ ಒಂದೇದಿನ ಎಂಟು ಇಂಥ ಪ್ರಕರಣಗಳು ವರದಿಯಾದವು. ಮಾಧ್ಯಮಗಳಂತೂ ಅತ್ಯಾಚಾರ ಎಲ್ಲಿಂದ ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾದು ಕೂತಿರುವವರಂತೆ ಅಲ್ಲೊಂದು ಅತ್ಯಾಚಾರವಂತೆ ಎಂಬ ಅಂತೆ ಕಂತೆಯನ್ನೂ ಅತ್ಯಾಚಾರವಾಗಿದೆ ಎಂದೇ ಬಿಂಬಿಸಿ ಅವಸರದಿಂದ ವರದಿ ಮಾಡಿಯೇ ಮಾಡಿದರು. ಕಳೆದವಾರ ಬೇರೆಲ್ಲ ಕಡೆಯಿಂದ ಇಂಥ ಸುದ್ದಿ ಬಂದಂತೆ ತುಮಕೂರಿನಿಂದಲೂ ಸುದ್ದಿ ಬಂತು. ದಿನ ಕಳೆದ ಮೇಲೆ ಆ ಹುಡುಗಿಯೇ ಠಾಣೆಗೆ ಹೋಗಿ ನನ್ನ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಿಕೆಕೊಟ್ಟಳು! ಸತ್ಯಾಸತ್ಯತೆ ಏನಿದೆಯೋ?

ಇಂಥ ಸುದ್ದಿಗಳ ಪ್ರಸಾರಕ್ಕೆ ಯಾಕಿಷ್ಟು ಅವಸರ? ಇದೊಂದು ಕ್ರೇಜು ಹುಟ್ಟಿಸುವ ಸಂಗತಿಯೇ? ಅಥವಾ ಇಂಥ ವರದಿಯಿಂದ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೂಡಲೇ ದೊರೆತೇಬಿಡುತ್ತದಾ? ಇಂಥ ವರದಿಯಿಂದ ಪ್ರಯೋಜನ ಯಾರಿಗೆ? ಕೆಲವರ ಸುದ್ದಿ ಚಪಲ ತೀರಬಹುದು ಅಷ್ಟೆ.

ಮತ್ತಷ್ಟು ಓದು »

25
ಜುಲೈ

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು – ಪುಸ್ತಕ ಪರಿಚಯ – ೩

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೧
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೨

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳುದಾಖಲೆಗಳು 

   ಮೂಲ : ವಿನಯಲಾಲ್                                  ಕನ್ನಡಕ್ಕೆ : ಅಕ್ಷರ  ಕೆ.ವಿ

ನಾಗರಿಕತೆಗಳು, ದೇಶಗಳು, ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನೂ ಕೂಡಿದಂತೆ ಎಲ್ಲ ಸಂಗತಿಗಳ ‘ಪ್ರಗತಿ’ ಮತ್ತು ‘ಪತನಗಳನ್ನು’ ಅಳೆಯುವುದಕ್ಕೆ ನಾವು ಬಳಸುವ ದಾಖಲೆಗಳನ್ನು ಕುರಿತಂತೆ ಚಿತ್ರ ವಿಚಿತ್ರವಾದ ಹಲವಾರು ವಿಚಾರಗಳನ್ನು ಹೇಳಬಹುದು. ನಾಜಿಗಳು ಮೃತರಾದ ಖೈದಿಗಳನ್ನು ಕುರಿತಂತೆ ಇಟ್ಟಿರುವ ದಾಖಲೆಪುಸ್ತಕಗಳಲ್ಲಿ ಯಾವ ಯಾತನಾಶಿಬಿರಕ್ಕೆ ಯಾವ ರೈಲಿನ ಮೂಲಕ ಯಾವ ಯಾವ ಯಹೂದಿಗಳನ್ನು ಸಾಗಿಸಲಾಯಿತು, ಪ್ರತಿ ರೈಲಿನಲ್ಲಿದ್ದ ಯಹೂದಿಗಳ ಸಂಖ್ಯೆ, ವಿಷಾನಿಲ ಪ್ರಯೋಗದಿಂದ ಕೊಲ್ಲಲ್ಪಟ್ಟ ಯಹೂದಿಗಳ ಸಂಖ್ಯೆ ಈ ಎಲ್ಲವೂ  ವಿವವರವಾಗಿ ದೊರೆಯುತ್ತದೆ.

ಭಾರತವನ್ನಾಳಿದ ಬ್ರಿಟಿಷರಿಗೂ ಇಷ್ಟೇ ವಿಸ್ತಾರವಾದ ಆಡಳಿತಾತ್ಮಕ ದಾಖಲೆಗಳನ್ನು ಇಡುವ ಪರಿಪಾಠವಿತ್ತು. 19ನೆಯ ಶತಮಾನದ ತುದಿಯ ವರ್ಷಗಳಲ್ಲಿ ರಾಷ್ಟ್ರೀಯತಾವಾದವು ಪ್ರಬಲವಾಗುತ್ತಿದ್ದಂತೆ ಈ ದಾಖಲೆಗಳು ಇನ್ನೂ ಇನ್ನೂ ವಿವರಗಳನ್ನು ಸೇರಿಸಿಕೊಳ್ಳುತ್ತಾ ಹೋಯಿತು. ಸ್ಥಳಿಯರ ನಡವಳಿಕೆಗಳ ಬಗ್ಗೆ ಮುನ್ಸೂಚನೆ ನೀಡಿ ಅವರಲ್ಲಿ ದಂಗೆಕಾರರನ್ನು ಹತೋಟಿಯಲ್ಲಿಡಲಿಕ್ಕೂ ಇವೇ ದಾಖಲೆಗಳು ಸಹಾಯಕವಾಗುತ್ತದೆಂಬ ಹೊಸ ಭಾರವು ಆಗ ರಾಜ್ಯದ ಮೇಲೆ ಬಿತ್ತು. ಮುಂದೆ ಹೊಸದಾಗಿ ಅವಿಷ್ಕಾರಗೊಂಡ ರಾಷ್ಟ್ರಪ್ರಭುತ್ವವೂ ಇದೇ ಸಾಮ್ರಾಜ್ಯಶಾಹಿ ದಾಖಲೆ ವಿಧಾನವನ್ನು ಮುಂದುವರಿಸಿತು. ಇವತ್ತು ರಾಷ್ಟ್ರ ಪ್ರಭುತ್ವವೊಂದರ ಸೂಚಕ ಚಿನ್ಹೆಗಳಾಗಿ ಒಂದು ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರ ಭಾಷೆ ಇರುವಂತೆ ರಾಷ್ಟ್ರೀಯ ಪತ್ರಾಗಾರವೂ ಇದೆ. ಈ ರಾಷ್ಟ್ರೀಯ ದಾಖಲೆ ಸಂಗ್ರಹಾಲಯಗಳು ಆಯಾ ರಾಷ್ಟ್ರಗಳ ರಹಸ್ಯಗಳ,ದೌರ್ಜನ್ಯಗಳ ಮತ್ತು ದುಷ್ಕರ್ಮಗಳ ಅಡಗುದಾಣವೂ ಆಗಿರುತ್ತದೆ.

ಹಿಂದೂಗಳ ಸಾಂಸ್ಕೃತಿಕ ಸೃಷ್ಟಿ ಪುರಾಣಗಳಲ್ಲಿ ವರ್ಗೀಕರಣ ಮತ್ತು ಗಣನೆಗಳೆರೆಡೂ ತುಂಬಾ ಅತ್ಯಂತಿಕವಾದ ಒಂದು ಉಪಕರಣವೆಂದು ಭಾವಿಸಲ್ಪಟ್ಟಿದ್ದವು. ದೇವರಪೂಜೆಯಲ್ಲಿ, ಬಲಿಯ  ವಿಧಿಗಳಲ್ಲಿ, ಸಾಹಿತ್ಯ ಕೃತಿಗಳ ನಿರ್ಮಾಣದಲ್ಲಿ, ವಂಶವೃಕ್ಷಗಳ ನಿರೂಪಣೆಯಲ್ಲಿ , ಜ್ಯೋತಿಷ್ಯದಲ್ಲಿ ಮತ್ತು ಕಾಮಶಾಸ್ತ್ರದಲ್ಲಿಯೂ ಕೂಡ ಸಂಖ್ಯೆಗಳು ಬಳಕೆಯಾಗುತ್ತಿದ್ದವು. ಅಥರ್ವವೇದವು (ದಾಳಗಳನ್ನು ಉಪಯೋಗಿಸಿ) ಐವತ್ಮೂರು ಬಗೆಯ ಮಾಟ  ಮಂತ್ರಗಳನ್ನು ಮಾಡಬಹುದು ಎಂದೂ ಮತ್ತು ಸಾವಿನಲ್ಲಿ ಒಟ್ಟು 101 ಬಗೆಯ ಮರಣಗಳಿವೆಯೆಂದೂ ನಿಖರವಾಗಿ ಹೇಳುತ್ತದೆ. ಇಂಗ್ಲೇಡಿನಲ್ಲಿ  ಸಹ ಇನ್ನೊಂದು ಬಗೆಯ ಸಂಖ್ಯಾ ಸಂಗ್ರಹ ಕಾರ್ಯವನ್ನು ಮಾಡಲಾಗುತ್ತಿತ್ತು. ಅಲ್ಲಿ ಮೃತ ದೇಹಗಳನ್ನು  ಭರದಿಂದ ಎಣಿಸಲಾಗುತ್ತಿತ್ತು. ಒಂದು ವರ್ಷದ ಅವಧಿಯಲ್ಲಿ ರೂಢಿಗತ ಅಪರಾಧಿಗಳಿಗೆ ಎಷ್ಟು ಬಾರಿ ಛಡಿಯೇಟಿನ ಶಿಕ್ಷೆ ನೀಡಲಾಯಿತೆಂಬ ಅಂಕಿ ಅಂಶದಿಂದ ಆರಂಭಿಸಿ, ಜೈಲುಗಳಲ್ಲಿ, ಆಶ್ರಯಧಾಮಗಳಲ್ಲಿ ಎಷ್ಟು ಜನ ಕುಡುಕರು-ಹುಚ್ಚರು ಇದ್ದಾರೆಂಬ ಲೆಕ್ಕಾಚಾರದವರೆಗೆ-ನಾನಾ ಮಾದರಿಯ ಸಂಖ್ಯಾರಾಶಿಗಳನ್ನು ಇಂಗ್ಲೇಡಿನಲ್ಲಿ ಕಲೆಹಾಕಲಾಯಿತು. ಮುಂದೆ ನಡೆಯತೊಡಗಿದ ಅನಾಹುತಗಳ ದಾಖಲೆಗಳಿಗೆ ಈ ಗಣತಿಯೇ ಆರಂಭವೆಂದೂ ಬೇಕಿದ್ದರೆ ಹೇಳಬಹುದು. ಈ ದಾಖಲೆಗಳ ಮೂಲಕವೇ ಆ ಸಮಾಜವು ತನ್ನೊಳಗಿನ ಬಂಡುಕೋರರನ್ನು, ಬಹಿಷ್ಕೃತರನ್ನು, ದಲಿತ-ದಮನಿತರನ್ನು, ಅಪರಾಧಿಗಳನ್ನು, ಭಿನ್ನಮತೀಯರನ್ನು,ವಿರೋಧಿಗಳನ್ನು ಹೇಗೆ ಹತೋಟಿಯಲ್ಲಿಟ್ಟುಕೊಂಡು ನಿರ್ವಹಿಸಬೇಕೆಂಬ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತಿತ್ತು.

ಮತ್ತಷ್ಟು ಓದು »

24
ಜುಲೈ

ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ …ನಮ್ಮ ಅಣ್ಣ….ಸಿದ್ರಾಮಣ್ಣ….!!

– ರಾಘವೇಂದ್ರ ನಾವಡ

Wake Up Sidಇತ್ತೀಚಿನ ಸಿದ್ರಾಮಣ್ಣನವರನ್ನು ನೋಡುತ್ತಿದ್ದರೆ, ನನಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿದ್ರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರೂ ಗಡದ್ದಾಗಿ ನಿದ್ರೆ ಮಾತ್ರ ಯಾಕೆ ಮಾಡ್ತಾರೆ? ದೊಡ್ಡ ಗೌಡರನ್ನೇ ತೆಗೆದುಕೊಳ್ಳಿ… ಪ್ರಧಾನಿಯಾಗಿದ್ದಾಗಲ೦ತೂ ಬಿಡಿ..ಸಿಕ್ಕಾಪಟ್ಟೆ ಕೆಲಸದ ಟೆನ್ಶನ್.. ಆದರೆ ಪಟ್ಟದಿ೦ದ ಇಳಿದ ೧೯೯೦ ರ ದಶಕದಿ೦ದ ಇಲ್ಲಿಯವರೆವಿಗೂ ಮಧ್ಯದಲ್ಲಿ ಎಲ್ಲಾದರೂ ಅಪರೂಪಕ್ಕೆ ಏಳ್ತಾರೆ! ಗದ್ದಕ್ಕೆ ಕೈಕೊಟ್ಟು ಗಡದ್ದಾಗಿ ನಿದ್ರೆ ಹೊಡಿತಾ ಕೂತು ಬಿಟ್ಟರೆ ಮುಗೀತು.. ಊರ ಗೌಡ ಏಕೆ.. ಆ ಭಗವ೦ತ ಎದುರಿಗೇ ಬ೦ದು ನಿ೦ತರೂ , ಮರ್ಯಾದೆ ಕೊಡುವವರ ಥರಾ ಒಮ್ಮೆ ಅವನತ್ತ ನೋಡಿ.. ಮತ್ತೆ ಕಣ್ಮುಚ್ಚಿ ಬಿಡ್ತಾರೆ! ಮೊನ್ನೆ ಅಧಿವೇಶನದಲ್ಲಿ ನಮ್ಮ ಮಾಜಿ ಮುಖ್ಯಮ೦ತ್ರಿ.. ದೊಡ್ಡಗೌಡರ ಪ್ರೀತಿಯ ಮಗ ಕುಮಾರಣ್ಣ ಅಪ್ಪ೦ದೇ ಶೈಲಿಯಲ್ಲಿ ಗದ್ದಕ್ಕೆ ಕೈಕೊಟ್ಟು ಅಲ್ಲಿಯೇ….. ದೊಡ್ಡಗೌಡರ ದೊಡ್ಡ ಮಗನವರೂ ಹಾಗೆಯೇ… ಹೀಗೆ ಮೊದಲಿನಿ೦ದಲೂ ಇದೇ ಗರಡಿಯಲ್ಲಿಯೇ ಅಣ್ಣತಮ್ಮ೦ದಿರ ಅಕ್ಕಪಕ್ಕವೇ ಬೆಳೆದು, ದೊಡ್ಡಗೌಡರ ಮಾನಸ ಪುತ್ರನೇ ಆಗಿ ಹೋಗಿದ್ದ ಸಿದ್ರಾಮಣ್ಣ, ಗೌಡ್ರ ಗರಡಿಯಿ೦ದ ಹೊರಗೆ ಬ೦ದ ಮೇಲೆ ಆ ದುಷ್ಟಬುಧ್ಧಿಯನ್ನು ಬಿಟ್ಟರೇನೋ ಎ೦ದು ಅ೦ದಾಜಿತ್ತು!

ಹೂ೦ ಹೂ೦.. ಎಲ್ಲಿ೦ದ ಬಿಡೋದು.. ಮುಖ್ಯಮ೦ತ್ರಿ ಆಗೋತನಕ ಬಿಟ್ಟಿದ್ರೇನೋ! ಒಮ್ಮೆ ಪಟ್ಟದ ಮೇಲೆ ಕುಳಿತರು ನೋಡಿ.. ಅಲ್ಲಿ೦ದ ಕು೦ಭಕರ್ಣನ ಅಪರಾವತಾರವೇ ಆಗಿಹೋಗಿದ್ದಾರೆ!!

ಮತ್ತಷ್ಟು ಓದು »

23
ಜುಲೈ

ಎಲ್ಲಾ ಅನಿಷ್ಟಗಳಿಗೂ ಶನೀಶ್ಚರ ಕಾರಣನಲ್ಲ!

– ರಾಘವೇಂದ್ರ ಅಡಿಗ ಎಚ್ಚೆನ್.

Stop Rapeಮೊನ್ನೆ ತಾನೇ ಕೋಲಾರದಲ್ಲಿ ನಡೆದ ಘಟನೆ.

ಆ ಮನೆಯಲ್ಲಿನ ಎರಡರಿಂದ ಎರಡೂವರೆ ವರ್ಷಗಳಿರಬಹುದಾದ ಹೆಣ್ಣು ಮಗುವೊಂದು ಜೋರಾಗಿ ಅಳುತ್ತಲಿತ್ತು. ಮಗುವಿನ ತಾಯಿ ಒಳಗೆಲ್ಲೋ ಇದ್ದವಳು ಬಂದು ನೋಡಿದಾಗ ಮಗುವಿನ ಮೈಮೇಲೆಲ್ಲಾ ಉಗುರಿನಿಂದ ಪರಚಿದಂತೆ ಗಾಯಗಳಾಗಿದ್ದವು. ಆ ತಾಯಿಗೆ ಮಗುವಿನ ಮೇಲೆ ಅತ್ಯಾಚಾರವಾಗಿರುವುದು ಖಚಿತವಾಯಿತು. ಮಗುವನ್ನು ಕೇಳಿದಳು.. “ಕಂದಾ ಏನಾಯ್ತು, ಯಾಕೆ ಅಳ್ತಾ ಇದ್ದೀಯಾ?”

ಮಗು ಮುಗ್ದತೆಯ ದನಿಯಲ್ಲಿ ಹೇಳಿತು, “ಅಮ್ಮಾ… ಅಣ್ಣ ಅಬ್ಬು ಮಾಡಿದ!”

ನಮ್ಮ ಸಾಮಾಜಿಕ ವ್ಯವಸ್ಥೆ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಇದೊಂದು ನಿದರ್ಶನ. ದೂರದ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣಗಳಂತಹಾ ಘಟನೆಗಳು ಇಂದು ದಿನನಿತ್ಯವೂ ನಮ್ಮ ರಾಜ್ಯದಲ್ಲಿಯೂ ನಡೆಯುತ್ತಿರುವುದು ಖಂಡಿತವಾಗಿಯೂ ಸುಸಂಸ್ಕೃತಿಗೆ ಹೆಸರಾದ ಕನ್ನಡಿಗರಿಗೆ ಶೋಭಿಸುವ ವಿಚಾರವಲ್ಲ.

ಇಷ್ಟಕ್ಕೂ ನಮ್ಮ ಯುವಜನತೆಯಲ್ಲಿ ಇಂತಹಾ ಕ್ರೌರ್ಯವು ಮೂಡುವಂತಾಗಲು ಮೂಲ ಪ್ರೇರಣೆ ಏನು? ಇಂದಿನ ಕುಟುಂಬದಲ್ಲಿಯೂ, ಮಾದ್ಯಮದಲ್ಲಿಯೂ, ಶಾಲಾ ಪರಿಸರದಲ್ಲಿಯೂ ಗಂಡಸಿಗೆ ಯಾವ ಬಗೆಯ ನೈತಿಕತೆಯ ಸಂದೇಶ ರವಾನಿಸಲಾಗುತ್ತಿದೆ? ಅತ್ಯಾಚಾರ ಪ್ರಕರಣಗಳು ವರದಿಯಾದಾಗ ಮೊದಲಿಗೆ ಎಲ್ಲರ ದೃಷ್ಟಿ ಬೀಳುವುದೂ ಸಹ ಅತ್ಯಾಚಾರಕ್ಕೊಳಗಾದ ಹೆಣ್ಣಿನ ಮೇಲೆ. ಅದಾಕ್ಷಣದಲ್ಲಿ ಅವಳ ಮೇಲೆ ಅನುಕಂಪ, ಕರುಣೆಗಳು ತಾನಾಗಿ ಉಕ್ಕಿ ಹರಿಯುತ್ತದೆ. ಅದೇನೋ ಸರಿಯಾದುದೆ, ಆದರೆ ಇದರ ಫಲಿತವು ಮಾತ್ರ ಶೂನ್ಯ. ಕಾರಣವೇನೆಂದರೆ ಜನರು ಅದಾವುದನ್ನೂ ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ! ಜನರ ಮನಸ್ಸು ಹೃದಯ ಅಷ್ಟೊಂದು ಕಠಿಣವಾಗಿದೆ, ಅಥವಾ ಅವರಿಗೆ ಅದರ ಬಗೆಗೆ ಚಿಂತಿಸಿ ಅದಕ್ಕೆ ತಕ್ಕ ಪರಿಹಾರ ಕಂಡುಕೊಳ್ಳುವಷ್ಟು ಸಮಯವಿಲ್ಲ! ಎಲ್ಲಕ್ಕಿಂತ ಮುಖ್ಯವಾಗಿ ಇಂದಿನ ಸಮೂಹ ಮಾದ್ಯಮಗಳು ಅವರನ್ನು ಆ ಮನಸ್ಥಿತಿಗೆ ತಂದು ನಿಲ್ಲಿಸಿವೆ!

ಮತ್ತಷ್ಟು ಓದು »

21
ಜುಲೈ

ಈ ಸಮಸ್ಯೆಗೆ ಉತ್ತರವಿದೆಯೋ ಇಲ್ಲವೋ?

– ರಾಘವೇಂದ್ರ ಸುಬ್ರಹ್ಮಣ್ಯ

Stop Rape(*) ಲೈಂಗಿಕ ಶಿಕ್ಷಣ ಕೊಟ್ರೆ ಅತ್ಯಾಚಾರಗಳು ಕಡಿಮೆಯಾಗುತ್ತವೆ ಅನ್ನೋದನ್ನ ನಾನೊಪ್ಪಲ್ಲ.
(*) ಹುಡುಗೀರು ಗಿಡ್ಡವಾದ, ಬಿಗಿಯಾದ ಉಡುಪು ತೊಡೋದನ್ನ ನಿಲ್ಲಿಸಿದ್ರೆ, ಮೊಬೈಲ್ ಉಪಯೋಗ ಕಡಿಮೆ ಮಾಡಿದ್ರೆ ಅತ್ಯಾಚಾರಗಳು ಕಡಿಮೆಯಾಗುತ್ತವೆ ಅನ್ನೋದನ್ನೂ ನಾನೊಪ್ಪಲ್ಲ.
(*) ಯಾವನೋ ಎರೆಕ್ಷನ್ ತಡೆಯಲಾಗದವ ಮಾತ್ರ ರೇಪ್ ಮಾಡ್ತಾನೆ ಅನ್ನೋದನ್ನೂ ನಾನೊಪ್ಪಲ್ಲ.

ಹೆಣ್ಣು ಬೈಕ್ ಓಡಿಸಿದ್ರೂ ಮರುಳಾಗ್ತಾಳೆ, ಡಿಯೋ ಹಾಕಿದ್ರೂ ಆಕರ್ಷಿತಳಾಗ್ತಾಳೆ, ಹೇರ್ ಜೆಲ್ ಹಾಕಿಯೂ ಹುಡುಗಿಯರನ್ನ ಪಟಾಯಿಸಬಹುದು ಅನ್ನೋ ಮೂರನೇ ದರ್ಜೆಯ ಜಾಹೀರಾತಿನ ಬಗ್ಗೆ ಕಮಕ್-ಕಿಮಕ್ ಎನ್ನದ ನಮ್ಮ ಮಹಿಳಾವಾದಿಗಳು ಹಾಗೂ ಬುದ್ಧಿಜೀವಿಗಳು, ಅತ್ಯಾಚಾರ ನಡೆದಾಗ ಮಾತ್ರ ಬೊಬ್ಬಿರಿಯುವುದನ್ನು ಸ್ವಲ್ಪ ಕಡಿಮೆ ಮಾಡಿದರೆ ನಮ್ಮ ಸಮಾಜ ಉದ್ಧಾರವಾಗುವುದರೆಡೆಗೆ ಮೊದಲ ಹೆಜ್ಜೆ ಇಡಬಹುದೇನೋ. ಇನ್ನು ನಮ್ಮ ಸಿನಿಮಾಗಳೋ, ಅದರ ಸೂಪರ್ ಸ್ಟಾರ್ ಕಪೂರ್, ಖಾನ್ ಮಹಾಶಯರ ಕಥೆಯಂತೂ ಕೇಳುವುದೇ ಬೇಡ. ಸಿನಿಮಾಗಳಲ್ಲಿ ತಮ್ಮ ಮಕ್ಕಳ ವಯಸ್ಸಿನ ಹೆಂಗೆಳೆಯರನ್ನು ಚೀಪ್-ಟ್ರಿಕ್ ಉಪಯೋಗಿಸಿ ಬಲೆಗೆ ಬೀಳಿಸುವುದಲ್ಲದೇ, ಚಡ್ಡಿ-ಬನಿಯಾನ್ ಜಾಹಿರಾತಿನಲ್ಲೂ ಹೆಣ್ಣುಗಳು ತಮ್ಮನ್ನು ಮುತ್ತುವುದರಂತಹ ಸಂದೇಶವನ್ನು ಜನರಿಗೆ ಕೊಡುತ್ತಾರೆ. ಇಂತಹ ಟೀವಿ ಜಾಹೀರಾತುಗಳು, ದ್ವಂದ್ವಾರ್ಥ ಸಂಭಾಷಣೆಯ ಚಿತ್ರಗಳನ್ನು ನೋಡಿ ಬೆಳೆದ ಮಕ್ಕಳು ಇನ್ನೆಂತಹ ಪಾಠ ಕಲಿಯಲು ಸಾಧ್ಯ!? ಸಧ್ಯಕ್ಕೆ ಲೈಂಗಿಕ ಶಿಕ್ಷಣಕ್ಕಿಂತ ಮುಖ್ಯವಾಗಿ ಬೇಕಿರುವುದು, ನಮ್ಮ ಕುಲಗೆಟ್ಟ ಟಿವಿ ಸಿನಿಮಾ ಮಾಧ್ಯಮದ ಮೇಲಿನ ಹಿಡಿತ ಹಾಗೂ ಸ್ವಲ್ಪ ನೈತಿಕತೆಯ ಪಾಠಗಳು.

ಇನ್ನೊಂದು ಮಾತು ತಿಳಿಯೋಣ. ಅತ್ಯಾಚಾರಿಯ ಮನಸ್ಸು ವಿಕೃತಿಯಿಂದ ತುಂಬಿರುವಂತದ್ದು. ಅದೊಂದು ಮಾನಸಿಕ ರೋಗಗಳ ಗೂಡು. ವಿಕ್ಷಿಪ್ತ ವಾಂಛೆಗಳ ಕೂಪ. ಆ ವ್ಯಕ್ತಿಗೆ ‘ಆ ಸಮಯಕ್ಕೆ’ ಏನೋ ಒಂದು ಸಿಕ್ಕಿದರಾಯ್ತು. ಮಗುವೋ, ಹೆಂಗಸೋ, ವೃದ್ಧೆಯೋ ಯಾವುದಾದರೂ ಸರಿ. ಅದು ಸಿಗಲಿಲ್ಲವೆಂದಾದಲ್ಲಿ ಗಂಡಸರ ಮೇಲೂ, ಪ್ರಾಣಿಗಳ ಮೇಲೂ ಏರಿದವರ ಬಗ್ಗೆ ನಾವು ಕೇಳಿದ್ದೇವೆ. ನಿಜವಾದ ಗಂಡಸು ಹೆಣ್ಣಿನ ಮೈಮೇಲೆ ಏರುವುದಿಲ್ಲ. ಮೃಗದಂತೆ ಬಳಸಿ ಬಿಸಾಡುವುದಿಲ್ಲ. ಆದ್ದರಿಂದ ನನ್ನ ಪ್ರೀತಿಯ ಮಹಿಳಾವಾದಿಗಳೇ….ಯಾವನೋ ಒಬ್ಬ ಝಿಪ್ ನಿಲ್ಲದವ ಪ್ಯಾಂಟ್ ಬಿಚ್ಚಿದ್ದಕ್ಕೆ ಇಡೀ ಗಂಡುಕುಲದ ಮೇಲೆ ಹರಿಹಾಯ್ದು, ಮನುಸ್ಮೃತಿಯನ್ನು ಚರ್ಚೆಗೆ ಎಳೆದು ನಿಲ್ಲಿಸುವ ಅಗತ್ಯವಿಲ್ಲ. ಯಾವುದೋ ಒಂದು ಹೆಣ್ಣು ರಾತ್ರಿ ಹನ್ನೆರಡಕ್ಕೆ ತನ್ನ ಗೆಳೆಯನೊಂದಿಗೆ ಮಾತನಾಡುತ್ತಾ ನಿಂತದ್ದಕ್ಕೆ ‘ರಾತ್ರಿ ಹನ್ನೆರಡಕ್ಕೆ ಗಂಡಸಿನೊಡನೆ ಮನೆಯ ಹೊರಗೆ ಇವಳಿಗೇನು ಕೆಲಸ!?’ ಎಂದು ಅನುಮಾನಿಸುವ ಅಗತ್ಯವೂ ಇಲ್ಲ. ಅತ್ಯಾಚಾರಕ್ಕೆ ಹೆಣ್ಣಿನ ಸ್ವಾತಂತ್ರ್ಯಹರಣ ಉತ್ತರವಲ್ಲ. ಹಾಗಂತ ಸ್ವಾತಂತ್ರ್ಯ ಹಾಗೂ ಸ್ವೇಚ್ಛೆಯ ಮಧ್ಯದ ಅಂತರವನ್ನೂ fairer sex ಅರ್ಥೈಸಿಕೊಳ್ಳಬೇಕು.

ಮತ್ತಷ್ಟು ಓದು »

18
ಜುಲೈ

ಐನೂರಾತೊಂಬತ್ತೇಳು ಅಡಿ ಎತ್ತರದ ಕನಸು ಮತ್ತದರ ಅಗತ್ಯತೆ:

– ರಾಘವೇಂದ್ರ ಸುಬ್ರಹ್ಮಣ್ಯ

Ek Bharath Shresht Bharathಮಾನವರು ಅನಾದಿಕಾಲದಿಂದಲೂ ದೇವರು, ಪ್ರಾಣಿಗಳು ಹಾಗೂ ಇನ್ನಿತರ ನಿರ್ಜೀವಿ ವಸ್ತುಗಳ ವಿಗ್ರಹ ಹಾಗೂ ಪ್ರತಿಮೆಗಳನ್ನು ಕಟ್ಟುತ್ತಲೇ ಬಂದಿದ್ದಾರೆ. 1939ರಲ್ಲಿ ಜರ್ಮನಿಯ ಗುಹೆಯೊಂದರಲ್ಲಿ ಪತ್ತೆಯಾದ ಜಗತ್ತಿನ ಅತ್ಯಂತ ಪುರಾತನವಾದ ‘ಸಿಂಹಮಾನವ (Lion Man)’ನ ವಿಗ್ರಹ ಸರಿಸುಮಾರು ನಲವತ್ತು ಸಾವಿರ ವರ್ಷಗಳಷ್ಟು ಹಳೆಯದು. ವಿಗ್ರಹ ಹಾಗೂ ಪ್ರತಿಮೆಗಳ ಬಗೆಗಿನ ನಮ್ಮ ಒಲವು ಎಷ್ಟು ಹಳೆಯದು ಎಂದು ಇದರಿಂದಲೇ ತಿಳಿದುಬರುತ್ತದೆ. ಅಂದಿನಿಂದಲೂ ನಾವು ಹಲವಾರು ಕಾರಣಗಳಿಗಾಗಿ ಪ್ರತಿಮೆಗಳನ್ನು ಕಟ್ಟುತ್ತಲೇ ಬಂದಿದ್ದೇವೆ.

ನಾಗರೀಕತೆ ಬೆಳೆದಂತೆ, ಮುಂದುವರೆದಂತೆ ಮಾನವರು ದೇವರಿಗೆ ಮಾತ್ರವಲ್ಲದೆ, ಕೆಲವೊಂದು ಐತಿಹಾಸಿಕ ಘಟನೆಗಳು (ಯುದ್ಧದ ಗೆಲುವು, ಸ್ವಾಂತತ್ರ್ಯ), ಗಣ್ಯವ್ಯಕ್ತಿಗಳು (ಚಿಂತಕರು, ಅತೀಂದ್ರೀಯ ಶಕ್ತಿಯುಳ್ಳವರು) ಹಾಗೂ ಸ್ಮರಣೀಯ ಪ್ರಾಣಿ (ಸ್ಫಿಂಕ್ಸ್, ಬ್ಯಾರಿ ದ ಸೈಂಟ್ ಬರ್ನಾರ್ಡ್)ಗಳ ನೆನಪು ದೀರ್ಘಕಾಲ ಉಳಿಯಲು, ಹಾಗೂ ಆ ನೆನಪುಗಳನ್ನು ಮುಂದಿನ ತಲೆಮಾರಿಗೆ ದಾಟಿಸಲು ಸಹ ಶಿಲ್ಪಕಲಾಕೃತಿಗಳು ಒಂದು ಒಳ್ಳೆಯ ಮಾರ್ಗ ಎಂಬುದನ್ನು ಅರಿತುಕೊಂಡರು. ಆ ಕಾರಣಕ್ಕಾಗಿಯೇ ಝೀಯಸ್ ನ ಮೂರ್ತಿ, ಲಿಬರ್ಟಿ ಪ್ರತಿಮೆ, ಸಾಂಚೀ ಸ್ತೂಪ, ಕಮಕೂರದ ಬುದ್ದ, ಕೋಪನ್ ಹೇಗನ್ನಿನ ಮತ್ಯಕನ್ಯೆ, ರೀಯೋದ ವಿಮೋಚಕ ಕ್ರಿಸ್ತ (ಇತ್ತೀಚಿನ ಉದಾಹರಣೆಯಲ್ಲಿ ಮಾಯಾವತಿ ಹಾಗೂ ಆಕೆಯ ಆನೆಗಳು ) ಮುಂತಾದುವು ಸೃಷ್ಟಿಸಲ್ಪಟ್ಟವು. ಮುಂದೆ ಲೋಹಯುಗದಲ್ಲಿ ಈ ಕಾರ್ಯಕ್ಕಾಗಿ ಕಲ್ಲಿನಬದಲು ಲೋಹವೂ ಉಪಯೋಗವಾಯಿತು. ನಾಗರೀಕತೆಯ ಮಟ್ಟ ಹಾಗೂ ಗಣ್ಯತೆಯ ಮಟ್ಟಕ್ಕನುಗುಣವಾಗಿ ಕಬ್ಬಿಣ, ಕಂಚು, ಉಕ್ಕು, ಹಾಗೂ ಚಿನ್ನ ಈ ಕೆಲಸಕ್ಕಾಗಿ ಬಳಕೆಯಾಗಲಾರಂಭಿಸಿದವು. ಪಿರಮಿಡ್ಡುಗಳಲ್ಲಿ ಫೆರ್ಹೋಗಳ ಪ್ರತಿಮೆಗಳು ಚಿನ್ನದಲ್ಲೂ, ಹಾಗೂ ಸೇವಕರು ಹಾಗೂ ಕಾವಲಿಗಾರರ ಪ್ರತಿಮೆಗಳು ಕಬ್ಬಿಣ/ಕಂಚಿನಲ್ಲಿ ಇರುವುದನ್ನು ನೀವು ಗಮನಿಸರಬಹುದು. ಹಲವಾರು ಬಾರಿ ನಾಗರೀಕತೆಯ ಚಿಂತನೆಗಳನ್ನೂ ಕೂಡ ಶಿಲ್ಪಗಳಲ್ಲಿ ಬೆಸೆಯಲು ಪ್ರಯತ್ನಗಳು ನಡೆದವು. ಉದಾಹರಣೆಗೆ, ಈಸ್ಟರ್ ದ್ವೀಪದಲ್ಲಿರುವ ನೂರಾರು ಮಾನವರೂಪಿ ನಿಗೂಡ ಶಿಲ್ಪಗಳು ಏನನ್ನೋ ಹೇಳಲು ಬಯಸುತ್ತಿವೆ ಎಂದು ನೋಡುಗರಿಗೆ ಅನಿಸಿದರೆ ಆಶ್ಚರ್ಯವೇನಿಲ್ಲ. ಒಟ್ಟಿನಲ್ಲಿ ಇತಿಹಾಸದುದ್ದಕ್ಕೂ ಒಂದು ನಗರದ, ದೇಶದ, ಹಾಗೂ ನಾಗರೀಕತೆಯ ಔನ್ನತ್ಯವನ್ನು ಪ್ರತಿಮೆ ಹಾಗೂ ಕಲಾಕೃತಿಗಳು ಸಾರಲು ಪ್ರಯತ್ನಿಸಿವೆ ಎಂದರೆ ತಪ್ಪೇನಿಲ್ಲ. ಹತ್ತಾರುಸಾವಿರ ವರ್ಷಗಳಿಂದ ಮಾನವರು, ನಾಗರೀಕತೆಗಳು, ದೇಶಗಳು ಹಾಗೂ ಪ್ರದೇಶಗಳು ತಮ್ಮ ಅಸ್ಮಿತೆಯನ್ನು ಕೆಲ ಪ್ರತಿಮೆಗಳ ಮೂಲಕ ಪ್ರಚುರಪಡಿಸಲು ಪ್ರಯತ್ನಿಸಿವೆ.

ಮತ್ತಷ್ಟು ಓದು »

17
ಜುಲೈ

ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ

– ರಾಕೇಶ್ ಶೆಟ್ಟಿ

Uniform Civil Codeದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’

ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.

ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.

ಮತ್ತಷ್ಟು ಓದು »

16
ಜುಲೈ

ಸಾಹಿತ್ಯಕ್ಷೇತ್ರದ ಒಳಹೊರಗು-6

– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ

ಕನ್ನಡ ಸಾಹಿತ್ಯಸಾಹಿತ್ಯ ಕ್ಷೇತ್ರದ ಒಳಹೊರಗು – 1
ಸಾಹಿತ್ಯ ಕ್ಷೇತ್ರದ ಒಳಹೊರಗು – 2
ಸಾಹಿತ್ಯ ಕ್ಷೇತ್ರದ ಒಳಹೊರಗು – 3
ಸಾಹಿತ್ಯ ಕ್ಷೇತ್ರದ ಒಳಹೊರಗು – 4

ಸಾಹಿತ್ಯ ಕ್ಷೇತ್ರದ ಒಳಹೊರಗು – 5

ನಾವಿಂದು ಬಹುಶಿಸ್ತು, ಬಹುಜ್ಞಾನದ ಯುಗದಲ್ಲಿದ್ದೇವೆ. ಅದರಲ್ಲೂ ಇದು ವಿಶೇಷಜ್ಞತೆಯ ಕಾಲ. ಎಲ್ಲದಕ್ಕೂ ಸ್ಪೆಶಲೈಸೇಶನ್ ಇರಬೇಕೆಂದು ಬಯಸುತ್ತೇವೆ. ಉಳಿದೆಲ್ಲ ಕ್ಷೇತ್ರಗಳಂತೆ ಸಾಹಿತ್ಯವನ್ನೂ ಇದು ಆವರಿಸಿದೆ. ಇಂಥ ವಿಶೇಷಜ್ಞತೆಯಲ್ಲಿ ಲಾಭವೂ ಇದೆ, ನಷ್ಟವೂ ಇದೆ. ಆಧುನಿಕ ಶಿಕ್ಷಣ ವ್ಯವಸ್ಥೆ ಬ್ರಿಟಿಷರ ಬಳುವಳಿಯಾಗಿ ನಮಗೆ ಬರುವವರೆಗೂ ಎಲ್ಲ ಜ್ಞಾನವನ್ನೂ ತತ್ತ್ವಶಾಸ್ತ್ರದ ಅಡಿಯಲ್ಲೇ ಅಧ್ಯಯನ ಮಾಡಲಾಗುತ್ತಿತ್ತು. ಆಗ ಗಣಿತ, ಸಾಹಿತ್ಯ, ಇತಿಹಾಸ, ಭಾಷೆ ಎಂದು ಬೇರ್ಪಡಿಸಿ ನೋಡುವ ಕ್ರಮ ಇರಲಿಲ್ಲ. ಇದರಿಂದ ಭಿನ್ನ ಜ್ಞಾನಗಳು ಒಂದೇ ಮರದ ವಿವಿಧ ಶಾಖೆಗಳಂತೆ ಪರಸ್ಪರ ಸಂಬಂಧವಿಟ್ಟುಕೊಳ್ಳಲು ಹಾಗೂ ಆ ಮೂಲಕ ಎಲ್ಲ ವಿಷಯಗಳಲ್ಲೂ ಮಾಹಿತಿ ಸಮವಾಗಿಯೂ ಸಮಗ್ರವಾಗಿಯೂ ಇರಲು ಅನುಕೂಲವಾಗುತ್ತಿತ್ತು. ಉದಾಹರಣೆಗೆ ಸಾಹಿತ್ಯ ಅಧ್ಯಯನದಲ್ಲಿ ಪ್ರಾಚೀನ ಕವಿಯೊಬ್ಬನ ಇತಿವೃತ್ತ ಹೇಳುವಾಗ ಅದಕ್ಕೆ ಇತಿಹಾಸ, ಹಸ್ತಪ್ರತಿಶಾಸ್ತ್ರ ಹಾಗೂ ಶಾಸನಶಾಸ್ತ್ರಗಳ ನೆರವು ಬೇಕೇ ಬೇಕು. ಸಾಹಿತ್ಯದ ವಿದ್ಯಾರ್ಥಿಗೆ ಈಗ ಬೇರೆಯಾಗಿರುವ ಈ ಎಲ್ಲ ಶಾಸ್ತ್ರಗಳ ಅರಿವೂ ಅಪೇಕ್ಷಣೀಯ. ಈಗೀಗ ಏನಾಗುತ್ತಿದೆ ನೋಡೋಣ. ವಿಶ್ವವಿದ್ಯಾನಿಲಯವೊಂದರಲ್ಲಿ ಇತಿಹಾಸ ವಿಭಾಗದ ಸಮ್ಮೇಳನವೋ ವಿಚಾರ ಸಂಕಿರಣವೋ ಅಥವಾ ಗೋಷ್ಠಿಯೋ ನಡೆಯುತ್ತದೆ. ಅದರಲ್ಲಿ ಇತಿಹಾಸ ವಿಭಾಗದವರದ್ದೇ ಮಾತು-ಚರ್ಚೆ. ಸಾಹಿತ್ಯ, ಶಾಸನಶಾಸ್ತ್ರ ವಿಭಾಗದವರು ಬೇಕಿದ್ದರೆ ತಾವೇ ಅಂಥದ್ದೊಂದು ಸಮ್ಮೇಳನ ಆಯೋಜಿಸಿಕೊಳ್ಳಬೇಕು. ತಮ್ಮ ಸಮ್ಮೇಳನಕ್ಕೆ ಬರಬೇಡಿ ಎಂದು ಇತಿಹಾಸದವರೇನೂ ಹೇಳುವುದಿಲ್ಲ. ಹಾಗಾಗಿ ಆ ಸಮ್ಮೇಳನದಲ್ಲಿ ಪ್ರೇಕ್ಷಕರಾಗಿ ಕುಳಿತೆದ್ದುಬರಬಹುದು. ವಿಜಯನಗರ ಅರಸರ ಕುರಿತ ಸಮ್ಮೇಳನವನ್ನು ಇತಿಹಾಸ ವಿಭಾಗ ಆಯೋಜಿಸಿದರೆ ಅಲ್ಲಿ ಶಾಸನತಜ್ಞರು, ಸಾಹಿತಿಗಳು ಇರಬೇಕಾದುದು ಅಗತ್ಯ. ಇಲ್ಲವಾದಲ್ಲಿ ಶಾಸನದವರು ತಮ್ಮ ಪಾಡಿಗೆ ಶಾಸನ ಓದಿ ಪಠ್ಯ ಬರೆದಿಡುವುದು, ಸಾಹಿತ್ಯದವರು ವಿಜಯನಗರ ಕಾಲದ ಸಾಹಿತ್ಯವನ್ನು ಸುಮ್ಮನೇ ಓದಿ ಇಡುವುದು, ಇತಿಹಾಸದವರು ಲಭ್ಯ ಐತಿಹಾಸಿಕ ದಾಖಲೆಗಳ ಪ್ರಕಾರ ತಮ್ಮ ಪಾಡಿಗೆ ತಾವು ಆ ಕಾಲದ ವಿಷಯವನ್ನು ದಾಖಲಿಸುವುದು ನಡೆದರೆ ಒಂದೊಂದು ವಿಷಯದಲ್ಲಿ ಒಂದೊಂದು ಮಾಹಿತಿಯ ಜೊತೆಗೆ ಅಸಮಗ್ರತೆಗೆ ದಾರಿಯಾಗಬಹುದು.

ಮತ್ತಷ್ಟು ಓದು »