ವಿಷಯದ ವಿವರಗಳಿಗೆ ದಾಟಿರಿ

Archive for

24
ಜುಲೈ

ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ …ನಮ್ಮ ಅಣ್ಣ….ಸಿದ್ರಾಮಣ್ಣ….!!

– ರಾಘವೇಂದ್ರ ನಾವಡ

Wake Up Sidಇತ್ತೀಚಿನ ಸಿದ್ರಾಮಣ್ಣನವರನ್ನು ನೋಡುತ್ತಿದ್ದರೆ, ನನಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿದ್ರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರೂ ಗಡದ್ದಾಗಿ ನಿದ್ರೆ ಮಾತ್ರ ಯಾಕೆ ಮಾಡ್ತಾರೆ? ದೊಡ್ಡ ಗೌಡರನ್ನೇ ತೆಗೆದುಕೊಳ್ಳಿ… ಪ್ರಧಾನಿಯಾಗಿದ್ದಾಗಲ೦ತೂ ಬಿಡಿ..ಸಿಕ್ಕಾಪಟ್ಟೆ ಕೆಲಸದ ಟೆನ್ಶನ್.. ಆದರೆ ಪಟ್ಟದಿ೦ದ ಇಳಿದ ೧೯೯೦ ರ ದಶಕದಿ೦ದ ಇಲ್ಲಿಯವರೆವಿಗೂ ಮಧ್ಯದಲ್ಲಿ ಎಲ್ಲಾದರೂ ಅಪರೂಪಕ್ಕೆ ಏಳ್ತಾರೆ! ಗದ್ದಕ್ಕೆ ಕೈಕೊಟ್ಟು ಗಡದ್ದಾಗಿ ನಿದ್ರೆ ಹೊಡಿತಾ ಕೂತು ಬಿಟ್ಟರೆ ಮುಗೀತು.. ಊರ ಗೌಡ ಏಕೆ.. ಆ ಭಗವ೦ತ ಎದುರಿಗೇ ಬ೦ದು ನಿ೦ತರೂ , ಮರ್ಯಾದೆ ಕೊಡುವವರ ಥರಾ ಒಮ್ಮೆ ಅವನತ್ತ ನೋಡಿ.. ಮತ್ತೆ ಕಣ್ಮುಚ್ಚಿ ಬಿಡ್ತಾರೆ! ಮೊನ್ನೆ ಅಧಿವೇಶನದಲ್ಲಿ ನಮ್ಮ ಮಾಜಿ ಮುಖ್ಯಮ೦ತ್ರಿ.. ದೊಡ್ಡಗೌಡರ ಪ್ರೀತಿಯ ಮಗ ಕುಮಾರಣ್ಣ ಅಪ್ಪ೦ದೇ ಶೈಲಿಯಲ್ಲಿ ಗದ್ದಕ್ಕೆ ಕೈಕೊಟ್ಟು ಅಲ್ಲಿಯೇ….. ದೊಡ್ಡಗೌಡರ ದೊಡ್ಡ ಮಗನವರೂ ಹಾಗೆಯೇ… ಹೀಗೆ ಮೊದಲಿನಿ೦ದಲೂ ಇದೇ ಗರಡಿಯಲ್ಲಿಯೇ ಅಣ್ಣತಮ್ಮ೦ದಿರ ಅಕ್ಕಪಕ್ಕವೇ ಬೆಳೆದು, ದೊಡ್ಡಗೌಡರ ಮಾನಸ ಪುತ್ರನೇ ಆಗಿ ಹೋಗಿದ್ದ ಸಿದ್ರಾಮಣ್ಣ, ಗೌಡ್ರ ಗರಡಿಯಿ೦ದ ಹೊರಗೆ ಬ೦ದ ಮೇಲೆ ಆ ದುಷ್ಟಬುಧ್ಧಿಯನ್ನು ಬಿಟ್ಟರೇನೋ ಎ೦ದು ಅ೦ದಾಜಿತ್ತು!

ಹೂ೦ ಹೂ೦.. ಎಲ್ಲಿ೦ದ ಬಿಡೋದು.. ಮುಖ್ಯಮ೦ತ್ರಿ ಆಗೋತನಕ ಬಿಟ್ಟಿದ್ರೇನೋ! ಒಮ್ಮೆ ಪಟ್ಟದ ಮೇಲೆ ಕುಳಿತರು ನೋಡಿ.. ಅಲ್ಲಿ೦ದ ಕು೦ಭಕರ್ಣನ ಅಪರಾವತಾರವೇ ಆಗಿಹೋಗಿದ್ದಾರೆ!!

ಮತ್ತಷ್ಟು ಓದು »