ವಿಷಯದ ವಿವರಗಳಿಗೆ ದಾಟಿರಿ

Archive for

25
ಜುಲೈ

ಅತ್ಯಾಚಾರ: ಹುಯಿಲೆಬ್ಬಿಸುವುದೇಕೆ?

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ

Stop Rapeಕಳೆದ ಒಂದೆರಡು ವಾರಗಳಿಂದ ಯಾವ ಮಾಧ್ಯಮ ಓದಿದರೂ ನೋಡಿದರೂ ಅತ್ಯಾಚಾರದ್ದೇ ಸುದ್ದಿ. 2012ರಲ್ಲಿ ದೆಹಲಿಯಲ್ಲಿ ನಿರ್ಭಯಾಳ ಮೇಲೆ ನಡೆದ ಹೇಯ ಕೃತ್ಯದ ತರುವಾಯ ಇಂಥ ಪ್ರಕರಣಗಳು ನಿರ್ಭಯವಾಗಿ ಹೆಚ್ಚು ಸುದ್ದಿಯಾಗುತ್ತಿವೆ. ಇದು ಗುಣವೋ ದೋಷವೋ ಗೊತ್ತಿಲ್ಲ. ಈಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಮೇಲೆ ಕಾಕತಾಳೀಯವೋ ಎಂಬಂತೆ ಬೆಂಗಳೂರಿನಲ್ಲಿ ನಿತ್ಯ ಒಂದೆರಡು, ರಾಜ್ಯಾದ್ಯಂತ ಒಂದೇದಿನ ಎಂಟು ಇಂಥ ಪ್ರಕರಣಗಳು ವರದಿಯಾದವು. ಮಾಧ್ಯಮಗಳಂತೂ ಅತ್ಯಾಚಾರ ಎಲ್ಲಿಂದ ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾದು ಕೂತಿರುವವರಂತೆ ಅಲ್ಲೊಂದು ಅತ್ಯಾಚಾರವಂತೆ ಎಂಬ ಅಂತೆ ಕಂತೆಯನ್ನೂ ಅತ್ಯಾಚಾರವಾಗಿದೆ ಎಂದೇ ಬಿಂಬಿಸಿ ಅವಸರದಿಂದ ವರದಿ ಮಾಡಿಯೇ ಮಾಡಿದರು. ಕಳೆದವಾರ ಬೇರೆಲ್ಲ ಕಡೆಯಿಂದ ಇಂಥ ಸುದ್ದಿ ಬಂದಂತೆ ತುಮಕೂರಿನಿಂದಲೂ ಸುದ್ದಿ ಬಂತು. ದಿನ ಕಳೆದ ಮೇಲೆ ಆ ಹುಡುಗಿಯೇ ಠಾಣೆಗೆ ಹೋಗಿ ನನ್ನ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಿಕೆಕೊಟ್ಟಳು! ಸತ್ಯಾಸತ್ಯತೆ ಏನಿದೆಯೋ?

ಇಂಥ ಸುದ್ದಿಗಳ ಪ್ರಸಾರಕ್ಕೆ ಯಾಕಿಷ್ಟು ಅವಸರ? ಇದೊಂದು ಕ್ರೇಜು ಹುಟ್ಟಿಸುವ ಸಂಗತಿಯೇ? ಅಥವಾ ಇಂಥ ವರದಿಯಿಂದ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೂಡಲೇ ದೊರೆತೇಬಿಡುತ್ತದಾ? ಇಂಥ ವರದಿಯಿಂದ ಪ್ರಯೋಜನ ಯಾರಿಗೆ? ಕೆಲವರ ಸುದ್ದಿ ಚಪಲ ತೀರಬಹುದು ಅಷ್ಟೆ.

ಮತ್ತಷ್ಟು ಓದು »

25
ಜುಲೈ

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು – ಪುಸ್ತಕ ಪರಿಚಯ – ೩

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೧
ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳು-ಪುಸ್ತಕ ಪರಿಚಯ – ೨

ಹೊಸ ಶತಮಾನಕ್ಕೆ ಹೊಸ ಪರಿಭಾಷೆಗಳುದಾಖಲೆಗಳು 

   ಮೂಲ : ವಿನಯಲಾಲ್                                  ಕನ್ನಡಕ್ಕೆ : ಅಕ್ಷರ  ಕೆ.ವಿ

ನಾಗರಿಕತೆಗಳು, ದೇಶಗಳು, ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನೂ ಕೂಡಿದಂತೆ ಎಲ್ಲ ಸಂಗತಿಗಳ ‘ಪ್ರಗತಿ’ ಮತ್ತು ‘ಪತನಗಳನ್ನು’ ಅಳೆಯುವುದಕ್ಕೆ ನಾವು ಬಳಸುವ ದಾಖಲೆಗಳನ್ನು ಕುರಿತಂತೆ ಚಿತ್ರ ವಿಚಿತ್ರವಾದ ಹಲವಾರು ವಿಚಾರಗಳನ್ನು ಹೇಳಬಹುದು. ನಾಜಿಗಳು ಮೃತರಾದ ಖೈದಿಗಳನ್ನು ಕುರಿತಂತೆ ಇಟ್ಟಿರುವ ದಾಖಲೆಪುಸ್ತಕಗಳಲ್ಲಿ ಯಾವ ಯಾತನಾಶಿಬಿರಕ್ಕೆ ಯಾವ ರೈಲಿನ ಮೂಲಕ ಯಾವ ಯಾವ ಯಹೂದಿಗಳನ್ನು ಸಾಗಿಸಲಾಯಿತು, ಪ್ರತಿ ರೈಲಿನಲ್ಲಿದ್ದ ಯಹೂದಿಗಳ ಸಂಖ್ಯೆ, ವಿಷಾನಿಲ ಪ್ರಯೋಗದಿಂದ ಕೊಲ್ಲಲ್ಪಟ್ಟ ಯಹೂದಿಗಳ ಸಂಖ್ಯೆ ಈ ಎಲ್ಲವೂ  ವಿವವರವಾಗಿ ದೊರೆಯುತ್ತದೆ.

ಭಾರತವನ್ನಾಳಿದ ಬ್ರಿಟಿಷರಿಗೂ ಇಷ್ಟೇ ವಿಸ್ತಾರವಾದ ಆಡಳಿತಾತ್ಮಕ ದಾಖಲೆಗಳನ್ನು ಇಡುವ ಪರಿಪಾಠವಿತ್ತು. 19ನೆಯ ಶತಮಾನದ ತುದಿಯ ವರ್ಷಗಳಲ್ಲಿ ರಾಷ್ಟ್ರೀಯತಾವಾದವು ಪ್ರಬಲವಾಗುತ್ತಿದ್ದಂತೆ ಈ ದಾಖಲೆಗಳು ಇನ್ನೂ ಇನ್ನೂ ವಿವರಗಳನ್ನು ಸೇರಿಸಿಕೊಳ್ಳುತ್ತಾ ಹೋಯಿತು. ಸ್ಥಳಿಯರ ನಡವಳಿಕೆಗಳ ಬಗ್ಗೆ ಮುನ್ಸೂಚನೆ ನೀಡಿ ಅವರಲ್ಲಿ ದಂಗೆಕಾರರನ್ನು ಹತೋಟಿಯಲ್ಲಿಡಲಿಕ್ಕೂ ಇವೇ ದಾಖಲೆಗಳು ಸಹಾಯಕವಾಗುತ್ತದೆಂಬ ಹೊಸ ಭಾರವು ಆಗ ರಾಜ್ಯದ ಮೇಲೆ ಬಿತ್ತು. ಮುಂದೆ ಹೊಸದಾಗಿ ಅವಿಷ್ಕಾರಗೊಂಡ ರಾಷ್ಟ್ರಪ್ರಭುತ್ವವೂ ಇದೇ ಸಾಮ್ರಾಜ್ಯಶಾಹಿ ದಾಖಲೆ ವಿಧಾನವನ್ನು ಮುಂದುವರಿಸಿತು. ಇವತ್ತು ರಾಷ್ಟ್ರ ಪ್ರಭುತ್ವವೊಂದರ ಸೂಚಕ ಚಿನ್ಹೆಗಳಾಗಿ ಒಂದು ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರ ಭಾಷೆ ಇರುವಂತೆ ರಾಷ್ಟ್ರೀಯ ಪತ್ರಾಗಾರವೂ ಇದೆ. ಈ ರಾಷ್ಟ್ರೀಯ ದಾಖಲೆ ಸಂಗ್ರಹಾಲಯಗಳು ಆಯಾ ರಾಷ್ಟ್ರಗಳ ರಹಸ್ಯಗಳ,ದೌರ್ಜನ್ಯಗಳ ಮತ್ತು ದುಷ್ಕರ್ಮಗಳ ಅಡಗುದಾಣವೂ ಆಗಿರುತ್ತದೆ.

ಹಿಂದೂಗಳ ಸಾಂಸ್ಕೃತಿಕ ಸೃಷ್ಟಿ ಪುರಾಣಗಳಲ್ಲಿ ವರ್ಗೀಕರಣ ಮತ್ತು ಗಣನೆಗಳೆರೆಡೂ ತುಂಬಾ ಅತ್ಯಂತಿಕವಾದ ಒಂದು ಉಪಕರಣವೆಂದು ಭಾವಿಸಲ್ಪಟ್ಟಿದ್ದವು. ದೇವರಪೂಜೆಯಲ್ಲಿ, ಬಲಿಯ  ವಿಧಿಗಳಲ್ಲಿ, ಸಾಹಿತ್ಯ ಕೃತಿಗಳ ನಿರ್ಮಾಣದಲ್ಲಿ, ವಂಶವೃಕ್ಷಗಳ ನಿರೂಪಣೆಯಲ್ಲಿ , ಜ್ಯೋತಿಷ್ಯದಲ್ಲಿ ಮತ್ತು ಕಾಮಶಾಸ್ತ್ರದಲ್ಲಿಯೂ ಕೂಡ ಸಂಖ್ಯೆಗಳು ಬಳಕೆಯಾಗುತ್ತಿದ್ದವು. ಅಥರ್ವವೇದವು (ದಾಳಗಳನ್ನು ಉಪಯೋಗಿಸಿ) ಐವತ್ಮೂರು ಬಗೆಯ ಮಾಟ  ಮಂತ್ರಗಳನ್ನು ಮಾಡಬಹುದು ಎಂದೂ ಮತ್ತು ಸಾವಿನಲ್ಲಿ ಒಟ್ಟು 101 ಬಗೆಯ ಮರಣಗಳಿವೆಯೆಂದೂ ನಿಖರವಾಗಿ ಹೇಳುತ್ತದೆ. ಇಂಗ್ಲೇಡಿನಲ್ಲಿ  ಸಹ ಇನ್ನೊಂದು ಬಗೆಯ ಸಂಖ್ಯಾ ಸಂಗ್ರಹ ಕಾರ್ಯವನ್ನು ಮಾಡಲಾಗುತ್ತಿತ್ತು. ಅಲ್ಲಿ ಮೃತ ದೇಹಗಳನ್ನು  ಭರದಿಂದ ಎಣಿಸಲಾಗುತ್ತಿತ್ತು. ಒಂದು ವರ್ಷದ ಅವಧಿಯಲ್ಲಿ ರೂಢಿಗತ ಅಪರಾಧಿಗಳಿಗೆ ಎಷ್ಟು ಬಾರಿ ಛಡಿಯೇಟಿನ ಶಿಕ್ಷೆ ನೀಡಲಾಯಿತೆಂಬ ಅಂಕಿ ಅಂಶದಿಂದ ಆರಂಭಿಸಿ, ಜೈಲುಗಳಲ್ಲಿ, ಆಶ್ರಯಧಾಮಗಳಲ್ಲಿ ಎಷ್ಟು ಜನ ಕುಡುಕರು-ಹುಚ್ಚರು ಇದ್ದಾರೆಂಬ ಲೆಕ್ಕಾಚಾರದವರೆಗೆ-ನಾನಾ ಮಾದರಿಯ ಸಂಖ್ಯಾರಾಶಿಗಳನ್ನು ಇಂಗ್ಲೇಡಿನಲ್ಲಿ ಕಲೆಹಾಕಲಾಯಿತು. ಮುಂದೆ ನಡೆಯತೊಡಗಿದ ಅನಾಹುತಗಳ ದಾಖಲೆಗಳಿಗೆ ಈ ಗಣತಿಯೇ ಆರಂಭವೆಂದೂ ಬೇಕಿದ್ದರೆ ಹೇಳಬಹುದು. ಈ ದಾಖಲೆಗಳ ಮೂಲಕವೇ ಆ ಸಮಾಜವು ತನ್ನೊಳಗಿನ ಬಂಡುಕೋರರನ್ನು, ಬಹಿಷ್ಕೃತರನ್ನು, ದಲಿತ-ದಮನಿತರನ್ನು, ಅಪರಾಧಿಗಳನ್ನು, ಭಿನ್ನಮತೀಯರನ್ನು,ವಿರೋಧಿಗಳನ್ನು ಹೇಗೆ ಹತೋಟಿಯಲ್ಲಿಟ್ಟುಕೊಂಡು ನಿರ್ವಹಿಸಬೇಕೆಂಬ ಬಗ್ಗೆ ತಿಳಿಯುವ ಪ್ರಯತ್ನ ಮಾಡುತ್ತಿತ್ತು.

ಮತ್ತಷ್ಟು ಓದು »