ಜನಮಾನಸದ “ಚಾಚಾ ಚೌಧರಿ” – ಪ್ರಾಣ್ ಕುಮಾರ್ ಶರ್ಮಾ
–ರಾಘವೇಂದ್ರ ಅಡಿಗ ಎಚ್ಚೆನ್.
(ಖ್ಯಾತ ವ್ಯಂಗ್ಯಚಿತ್ರಕಾರ, ‘ಚಾಚಾ ಚೌಧರಿ’, ‘ರಾಮನ್’, ‘ಶ್ರೀಮತಿ’, ‘ಪಿಂಕಿ’ ಇವೇ ಮೊದಲಾದ ಸದಾ ಕಾಲ ನೆನಪಿನಲ್ಲಿ ಉಳಿಯುವಂತಹಾ ಪಾತ್ರಗಳ ಸೃಷ್ಟಿಕರ್ತರಾಗಿದ್ದ ಪ್ರಾಣ್ ಕುಮಾರ್ ಶರ್ಮ ಇದೇ ಆಗಸ್ಟ್ ೦6 ರಂದು ದೆಹಲಿಯ ಗುರ್ಗಾಂವ್ ನಲ್ಲಿ ನಿಧನರಾಗಿದ್ದಾರೆ. ಈ ಸಮಯದಲ್ಲಿ ಪ್ರಾಣ್ ಎಂಬ ವ್ಯಂಗ್ಯಚಿತ್ರಕಾರನ ಬದುಕಿನ ಚಿತ್ರಣವನ್ನೊಮ್ಮೆ ಅವಲೋಕಿಸೋಣ……)
ಬಾಲ್ಯ – ವೃತ್ತಿ ಬದುಕು
ಇಂದಿನ ಪಾಕಿಸ್ತಾನದಲ್ಲಿನ ಲಾಹೋರ್ ಬಳಿಯ ಕಸೂರ್ ಎಂಬ ಚಿಕ್ಕ ಗ್ರಾಮದಲ್ಲಿ 1938, ಆಗಸ್ಟ್ 15 ರಂದು ಪ್ರಾಣ್ ಕುಮಾರ್ ಶರ್ಮಾರವರ ಜನನವಾಯಿತು. 1947 ರ ಬಳಿಕ ಪ್ರಾಣ್ ರವರ ಕುಟುಂಬ ಗ್ವಾಲಿಯರ್ ನಗರಕ್ಕೆ ತನ್ನ ವಾಸವನ್ನು ಬದಲಾಯಿಸಿತು.ಪ್ರಾಣ್ ರವರು ಗ್ವಾಲಿಯರ್ ನ ಇವ್ನಿಂಗ್ ಕ್ಯಾಂಪ್ ಕಾಲೇಜಿನಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಬಳಿಕ ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ಸ್ ನಲ್ಲಿ ನಾಲ್ಕು ವರ್ಷಗಳ ಫೈನ್ ಆರ್ಟ್ಸ್(ಚಿತ್ರಕಲಾ ತರಬೇತಿ) ಪದವಿ ಶಿಕ್ಷಣವನ್ನುಪಡೆದುಕೊಂಡರು.
ತಮ್ಮ ವೃತ್ತಿ ಬದುಕಿನ ಪ್ರಾರಂಭದಲ್ಲಿ ಕೆಲಕಾಲ ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡಿದ್ದ ಪ್ರಾಣ್ 1960 ರಲ್ಲಿ ದೆಹಲಿ ಮೂಲದ ‘ಮಿಲಾಪ್’ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಅಲ್ಲಿ ವರು ‘ಬಾಬು’ ಎನ್ನುವ ಪಾತ್ರವನ್ನು ಸೃಷ್ಟಿಸಿವ್ಯಂಗ್ಯಚಿತ್ರಗಳನ್ನು ರಚಿಸಿದ್ದರು. 1969 ರಲ್ಲಿ ಹಿಂದಿ ನಿಯತಕಾಲಿಕೆ ‘ಲಾಟ್ ಪಾಟ್’ ಗಾಗಿ ಅವರು ರಚಿಸಿದ ‘ಚಾಚಾ ಚೌಧರಿ’ ವ್ಯಂಗ್ಯಚಿತ್ರ ಪಾತ್ರವು ಅವರಿಗೆ ದೇಶ ವಿದೇಶಗಳಲ್ಲಿ ಖ್ಯಾತಿಯನ್ನು ತಂದುಕೊಟ್ಟಿತು. ಪ್ರಾಣ್ ಚಾಚಾ ಚೌಧರಿಯ ಪಾತ್ರವನ್ನು ಸೃಷ್ಟಿಸಿದವೇಳೆಯಲ್ಲಿ ದೇಶಾದ್ಯಂತ ಜನರು ಸೂಪರ್ ಮ್ಯಾನ್, ಪ್ಯಾಂಟಮ್ ನಂತಹಾ ವ್ಯಂಗ್ಯಚಿತ್ರ ಸರಣಿಯನ್ನು ಮೆಚ್ಚಿಕೊಂಡಿದ್ದರು. ಅವೆಲ್ಲವೂ ವಿದೇಶೀ ಮೂಲದ ವ್ಯಂಗ್ಯಚಿತ್ರಗಳಾಗಿದ್ದವು. ಆದರೆ ಪ್ರಾಣ್ ರವರ ‘ಚಾಚಾ ಚೌಧರಿ’ಪ್ರಾರಂಭವಾದ ಅತ್ಯಂತ ಶೀಘ್ರದಲ್ಲಿ ದೇಸವಿದೇಶಗಳ ಜನರು ಮೆಚ್ಚುವಂತಾಯಿತು. ಪ್ರಾಣ್ ರವರೇ ತಮ್ಮ ಒಂದು ಸಂದರ್ಶನದಲ್ಲಿ ಚಾಚಾ ಚೌಧರಿ ಪಾತ್ರದ ಕುರಿತು ಈ ರೀತಿಯಾಗಿ ಅಭಿಪ್ರಾಯ ಪಟ್ಟಿದ್ದಾರೆ – “Each family has its own wise old man. He solved his problems with common sense, but with a touch of humor. Humor is the basis of my cartoon.” ‘ರಾಮನ್’, ‘ಪಿಂಕಿ’, ‘ಬಿಲ್ಲೂ’, ‘ಶ್ರೀಮತಿ’ ಇವೇ ಮೊದಲಾದವು ಪ್ರಾಣ್ ಕುಮಾರ್ ಶರ್ಮಾರವರ ಇತರೆ ವ್ಯಂಗ್ಯಚಿತ್ರ ಪಾತ್ರಗಳಾಗಿದ್ದವು. ಮತ್ತಷ್ಟು ಓದು