ವಿಷಯದ ವಿವರಗಳಿಗೆ ದಾಟಿರಿ

Archive for

25
ಸೆಪ್ಟೆಂ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೯

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೬
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೭
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ ೮

ಆವರಣಎಂಬ ವಿಕೃತಿ (ವಿಮರ್ಶಾ ಸಂಕಲನ) ಸಂಗ್ರಹ: ಗೌರಿ ಲಂಕೇಶ್ – ಭಾಗ ೪ : ಆವರಣ ಮಾಧ್ಯಮ-ಮಂಥನ ಮತ್ತು ಬುದ್ಧಿಜೀವಿ ವರ್ಸಸ್ ಬೌದ್ಧಿಕ ಸ್ವಾತಂತ್ರ್ಯ 

ಆವರಣಎಂಬ ವಿಕೃತಿ:-ಮುಖಾಮುಖಿ -೮ (೩೦-೬-೧೪) ರಲ್ಲಿ ಹೇಳಿದಂತೆ ಈ ಭಾಗದಲ್ಲಿ ‘ಆವರಣ’ ಕಾದಂಬರಿಯನ್ನು ನೆಪಮಾತ್ರಕ್ಕೆ ಇಟ್ಟುಕೊಂಡು ಬರೆದಿರುವಂತಹ ಲೇಖನಗಳ ಬಗ್ಗೆ ನಮ್ಮ ಚರ್ಚೆಯನ್ನು ಮುಂದುವರಿಸೋಣ. ಇದು ‘ಆವರಣ’ ಎಂಬ ವಿಕೃತಿ ವಿಮರ್ಶಾಸಂಕಲನವನ್ನು ಕುರಿತ ಮುಖಾಮುಖಿಯ ಕೊನೆಯ ಭಾಗ.

ಬೊಳುವಾರು ಮಹಮದ್ ಕುಂಞ ಅವರ ‘ಅವರವರ ದೇವರುಗಳು’ … ಲೇಖನದಲ್ಲಿ ‘ಆವರಣ’ ಕಾದಂಬರಿಯ ಕಥಾವಸ್ತುವನ್ನು ಅವರ ಮಾವನವರನ್ನು(ಬೊಳುವಾರು ಅವರ ಹೆಂಡತಿಯ ತಂದೆ) ಕಾಡುತ್ತಿದ್ದ ಕ್ಯಾನ್ಸರ್ ಗೆ ಹೋಲಿಸಿದ್ದಾರೆ. ಆಪರೇಷನ್ ಆದ ನಂತರ ಅವರ ಮಾವನವರು ಗುಣಮುಖರಾಗಿ ಗೆಲುವಿನ ನಗೆ ಬೀರುತ್ತಿದ್ದಾರೆ. ಅದೇ ರೀತಿ ‘ಆವರಣ’ ಕಾದಂಬರಿ ಬರೆದ ನಂತರ ಭೈರಪ್ಪನವರೂ ಸಹ ಹತ್ತಾರು ವರ್ಷಗಳಿಂದ ತಮ್ಮನ್ನು ಹಿಂಸಿಸುತ್ತಿದ್ದ,ಕಾಡುತ್ತಿದ್ದ  ಚಿಂತನೆಗಳಿಂದ  ಮುಕ್ತರಾಗಿದ್ದಾರೆ. ಅವರವರು ನಂಬುವ ಅವರವರ ದೇವರುಗಳು ಅವರವರನ್ನು ಕಾಪಾದುತ್ತಿರಲಿ. ಆಮೆನ್ ……… ಎಂಬ ಹಿತೋಕ್ತಿಯಿಂದ ತಮ್ಮ ಲೇಖನವನ್ನು ಮುಗಿಸಿದ್ದಾರೆ.

ಇಬ್ರಾಹಿಂ ಸಾಹೇಬರ ಬಗ್ಗೆ ಭೈರಪ್ಪನ ಸುಳ್ಳು …  ಪೀರ್ ಬಾಷಾ ಅವರು ಸುಳ್ಳು ಹೇಳುತ್ತಿದ್ದಾರೋ ಅಥವಾ ತಮ್ಮ ಜನಾಂಗದವರ ಅಸಮಾಧಾನಕ್ಕೆ ಏಕೆ ಕಾರಣಕರ್ತನಾಗಬೇಕೆಂದು ಇಬ್ರಾಹಿಂ ಸಾಹೇಬರೇ ಸುಳ್ಳು ಹೇಳುತ್ತಿದ್ದಾರೋ ತಿಳಿಯದಾಗಿದೆ. (ತಮ್ಮ ಜನಾಂಗದ ಅಸಮಾಧಾನಕ್ಕೆ ಕಾರಣವಾಗುವ ಮಾತುಗಳನ್ನು ಆಡಲು, ಬರೆಯಲು ಹಿಂದೇಟು ಹಾಕುವ ಪ್ರವೃತ್ತಿಗೆ ಇತ್ತೀಚಿನ ಉದಾಹರಣೆಯಾಗಿ   ಕನ್ನಡದ  ‘ವರ್ತಮಾನ’ , ‘ಗುಜರಿ ಅಂಗಡಿ’ ಮತ್ತು ‘ಭೂತಗನ್ನಡಿ’ ಎಂಬ ಬ್ಲಾಗುಗಳಲ್ಲಿ ಪ್ರಕಟವಾದ ‘ಬುರ್ಖಾ’ ಕುರಿತ ಲೇಖನ ಮತ್ತು ಅದರ ಬಗ್ಗೆ ನಡೆದ ಚರ್ಚೆಯನ್ನು ಆಸಕ್ತರು ಗಮನಿಸಬಹುದು). ‘ಆವರಣ’ ಕಾದಂಬರಿಯ ಪ್ರವೇಶ ಎಂಬ ಭಾಗದಲ್ಲಿ ಭೈರಪ್ಪನವರು ಆ ಕಾದಂಬರಿ ಬರೆಯುವಾಗ ತಮಗೆ ಸಹಾಯ ಮಾಡಿದವರನ್ನು ಸ್ಮರಿಸಿಕೊಳ್ಳುವಾಗ  ‘ಶಿವಮೊಗ್ಗದ ಎಚ್ ಇಬ್ರಾಹಿಂ ಸಾಹೇಬರು ಎಷ್ಟೋ ಸೂಕ್ಷ್ಮಾಂಶಗಳನ್ನು ಹೇಳಿ ನನ್ನ ಮನಸ್ಸಿನ ಚಿತ್ರಗಳು ಸ್ಫುಟವಾಗಲು ಸಹಾಯಮಾಡಿದರು’ ಎಂದು ಹೇಳಿರುವ ಒಂದು ವಾಕ್ಯ ಪೀರ್ ಬಾಷಾ ಅವರ ಕೆಂಗಣ್ಣಿಗೆ,ಆಕ್ರೋಶಕ್ಕೆ ತುತ್ತಾಗಿದೆ. ಇದರ ಫಲವಾಗಿ ಆವೇಶದ,ನಾಲ್ಕನೇ ದರ್ಜೆಯ ಕೀಳು ಮಾತುಗಳು ಅವರ ಲೇಖನದಲ್ಲಿದೆ. ಜತೆಗೆ ತಮ್ಮ ಮಾತಿಗೆ ಸತ್ಯದ ಲೇಪ ಹಚ್ಚಲು ‘ಪಿ ಲಂಕೇಶರ ಮಿತ್ರರೂ,ಆಗಿದ್ದ ‘ಲಂಕೇಶ್’  ವಾರಪತ್ರಿಕೆಯ ಹಿತೈಷಿಯೂ ಆಗಿರುವ ಇಬ್ರಾಹಿಂ ಸಾಹೆಬರನ್ನೇ ಇದರ ಬಗ್ಗೆ ಕೇಳಿದೆ ‘ ಎಂದು  ಬರೆದಿರುವುದು  ಬಾಷಾ ಅವರ ಬಗ್ಗೆ ಮರುಕ ಹುಟ್ಟಿಸುತ್ತದೆ. ಏಕೆಂದರೆ ಇಲ್ಲಿ ಸಮಸ್ಯೆಯಿರುವುದು ಭೈರಪ್ಪನವರು ಮತ್ತು ಇಬ್ರಾಹಿಂ ಸಾಹೇಬರ ನಡುವೆ ಅಷ್ಟೇ. ಅದಕ್ಕೆ ಮೂರನೇ ವ್ಯಕ್ತಿ ಮತ್ತು ಅವರ ವಾರಪತ್ರಿಕೆಯ ಆಸರೆ ಏಕೆ ಬೇಕಾಗಿತ್ತು?  . ಇಬ್ರಾಹಿಂ ಸಾಹೇಬರಿಗೆ ಇನ್ನೂ ಕಾಲ ಮಿಂಚಿಲ್ಲ. ಈಗ ಬೇಕಾದರೂ ಸತ್ಯ ಹೇಳಬಹುದು. ತಾವು ಮುಸ್ಲಿಂ ಜನಾಂಗದ ರೀತಿ-ರಿವಾಜು,ನಂಬಿಕೆ, ಆಚರಣೆಗಳ ಬಗ್ಗೆ ಭೈರಪ್ಪನವರ ಜತೆ ಮಾತಾಡಿಲ್ಲ ಎಂದು ಪತ್ರಿಕೆಗಳಿಗೆ ಹೇಳಿಕೆ ಕೊಡಬಹುದು. ನಮ್ಮ  ಕನ್ನಡದ 24X7 ಸುದ್ದಿವಾಹಿನಿಗಳಿಗೆ ತಿಳಿಸಿದರೆ ಸಾಕು. ಅವರು ಒಂದಿಡೀ ದಿನ ಅದರ ಬಗ್ಗೆ ಕಾರ್ಯಕ್ರಮ ನಡೆಸುತ್ತಾರೆ. ಪೀರ್ ಬಾಷಾ ಅವರೂ  ಈ ನಿಟ್ಟಿನಲ್ಲಿ ಸಹಾಯ ಮಾಡಬಹುದು.

ಪಿ. ಲಂಕೇಶರ ಬರಡು ಮನಸ್ಸಿನ ತಡೆರಹಿತ ಅಶ್ಲೀಲತೆ  ಲೇಖನ ಭೈರಪ್ಪನವರ  ‘ಸಾರ್ಥ’  ಕಾದಂಬರಿಗೆ ಸಂಬಂಧಿಸಿದ್ದು. ತಮ್ಮ ತಂದೆಯವರ ಹೆಸರಿನ ಪ್ರಕಾಶನ ಸಂಸ್ಥೆಯಿಂದ ‘……….. ವಿಕೃತಿ’ ವಿಮರ್ಶಾ ಸಂಕಲನ ಪ್ರಕಟಿಸಿರುವುದರಿಂದ ಭೈರಪ್ಪನವರ ಬಗ್ಗೆ, ಅವರ  ಯಾವುದೇ ಕಾದಂಬರಿಯ ಬಗ್ಗೆ ಲಂಕೇಶ್ ಅವರು ಬರೆದ ಯಾವುದೇ ಲೇಖನ ಸೇರಿಸಲು, ಪ್ರಕಟಿಸಲು ಗೌರಿ ಲಂಕೇಶರು ಸ್ವತಂತ್ರರು. ಅದು ಅವರ ವಿವೇಚನೆಗೆ ಬಿಟ್ಟ ವಿಷಯ.  ಮತ್ತಷ್ಟು ಓದು »