ವಿಷಯದ ವಿವರಗಳಿಗೆ ದಾಟಿರಿ

Archive for

29
ಆಕ್ಟೋ

ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿಹಾರ ಕಾಯಿದೆ,1989 – ಭಾಗ ೨

– ಷಣ್ಮುಖ ಎ

ಸಹಪ್ರಾದ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

ಕ್ಷೇತ್ರಾಧ್ಯಯನ ಆಧಾರಿತ ಮಾಹಿತಿಗಳು ಮತ್ತು ವಿಶ್ಲೇಷಣೆ:

The Scheduled Castes and Scheduled Tribes (Prevention of Atrocities) Act, 1989ಈ ಮೇಲಿನ ಪ್ರಶ್ನೆಯನ್ನು ಪರಿಶೀಲಿಸಲು ಒಂದು ಕ್ಷೇತ್ರಾಧಾರಿತ ಸಂಶೋಧನಾ ಪ್ರಾಜೆಕ್ಟ್‍ನ ಮಾಹಿತಿಗಳು ಕೆಲವು ವಿಶೇಷವಾದ ಆಸಕ್ತಿಕರ ಅಂಕಿ-ಅಂಶಗಳನ್ನು ಕೊಡುತ್ತವೆ. ಈ ಕ್ಷೇತ್ರಾಧ್ಯಯನದ ಮಾಹಿತಿಗಳು, ದಾಖಲಾಗುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಅವುಗಳು ಶಿಕ್ಷೆಯಾಗುವ ಪ್ರಕರಣಗಳ ಪ್ರಮಾಣದ ನಡುವಿನ ಅಂತರಕ್ಕೆ ಕಾರಣಗಳ ಬಗ್ಗೆ ಬೇರೆಯದೇ ರೀತಿಯಲ್ಲಿ ಯೋಚಿಸಲು ದಾರಿ ಮಾಡಿಕೊಡುತ್ತದೆ.

ಮೈಸೂರು ವಿಶ್ವವಿದ್ಯಾನಿಲಯದ ಆಂತ್ರೋಪಾಲಜಿ ವಿಭಾಗದ ಅಧ್ಯಾಪಕರೊಬ್ಬರು ತಮ್ಮ ಏಳುಜನ ಸಂಶೋದನಾ ಸಹಾಯಕರೊಂದಿಗೆ ಕರ್ನಾಟಕ ಸರ್ಕಾರದ ಪರವಾಗಿ ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಕೇಂದ್ರದ ವತಿಯಿಂದ ಒಂದು ಸಂಶೋಧನಾ ಅಧ್ಯಯನ ಕೈಗೊಂಡಿದ್ದರು. ಇದು ‘ಕರ್ನಾಟಕದಲ್ಲಿನ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಮತ್ತು ದೌರ್ಜನ್ಯಕ್ಕೆ ಬಲಿಯಾದವರಿಗೆ ನೀಡಲಾಗಿರುವ ಪರಿಹಾರಗಳ’ ಬಗ್ಗೆ ಮಾಡಲಾದ ಒಂದು ಮೌಲ್ಯಮಾಪನ ಅಧ್ಯಯನವಾಗಿದೆ. ಇದು ಬಾಗಲಕೋಟೆಯೊಂದನ್ನುಳಿದು ಉಳಿದ ಕರ್ನಾಟಕದ ಎಲ್ಲಾ 26 ಜಿಲ್ಲೆಗಳಿಂದ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿ ಪರಿಹಾರಗಳನ್ನು ಪಡೆದ ಫಲಾನುಭವಿ ದಲಿತರನ್ನು ಮತ್ತು ಅಪರಾಧಿಗಳನ್ನು ಗುರುತಿಸಿ ಅವರುಗಳಲ್ಲಿ ಪ್ರತಿಜಿಲ್ಲೆಯಿಂದ ಶೇ. 10ರಷ್ಟು ಜನರನ್ನು ಸಂದರ್ಶನ ನಡೆಸಿದ್ದಾರೆ.

ಮೊದಲಿಗೆ ಅವರ ಅಧ್ಯಯನದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಿಗೆ ಮೂಲಕಾರಣ (Root Cause) ವಾದ ಅಂಶಗಳಾವುವು ಮತ್ತು ಅವುಗಳಲ್ಲಿ ಯಾವ ಯಾವ ರೀತಿಯ ನಡವಳಿಕೆಗಳು ಬರುತ್ತವೆ ಎಂಬುದನ್ನು ಯಾವ ರೀತಿ ಗುರುತಿಸುತ್ತಾರೆ ಎನ್ನುವುದನ್ನು ನೋಡೋಣ.

ದಲಿತರ ಮೇಲಿನ ದೌರ್ಜನ್ಯಕ್ಕೆ ಮೂಲಕಾರಣಗಳು: ಈ ವರದಿಯಲ್ಲಿ ನಮೂದಿಸಿರುವಂತೆ ಪೋಲೀಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಕಾರಣಗಳು ಮತ್ತು ಅಧ್ಯಯನದ ಸಂದರ್ರ್ಭದಲ್ಲಿ ಸಂದರ್ಶಿತ ಮಾಹಿತಿದಾರರು ನೀಡಿದ ಕಾರಣಗಳನ್ನು ತುಲನೆ ಮಾಡಿ ಅವುಗಳನ್ನು ವರ್ಗೀಕರಿಸಿದ್ದಾರೆ. ಅವುಗಳೆಂದರೆ: ಸಾಮಾಜಿಕ ತಾರತಮ್ಯ, ಭೂವಿವಾದ, ರಾಜಕೀಯ ವೈಷಮ್ಯ, ಹಿಂದಿನ ವೈರತ್ವ, ಆರ್ಥಿಕ ವ್ಯವಹಾರಗಳು, ಕಾರ್ಮಿಕ ವ್ಯಾಜ್ಯಗಳು, ಮತ್ತು ಇತರೆ. ಅವುಗಳ ಕುರಿತು ಸಂಕ್ಷಿಪ್ರವಾಗಿ ನೋಡುವುದಾದರೆ,

  • ಸಾಮಾಜಿಕ ತಾರತಮ್ಯ (Social Discrimination): ಈ ವರ್ಗೀಕರಣದಡಿಯಲ್ಲಿ ಅಸ್ಪೃಷ್ಯತೆ ಆಚರಣೆಗಳು ಎನ್ನಬಹುದಾಂತಹ ಅಂಶಗಳನ್ನು ಪಟ್ಟಿಮಾಡಲಾಗಿದೆ ಎನ್ನುತ್ತದೆ ವರದಿ. ಮುಖ್ಯವಾಗಿ, ಸಮಾಜದ ಪ್ರತಿಯೊಂದು ಜಾತಿಗಳು ಪರಸ್ಪರ ವ್ಯವಹರಿಸುವಂತಹ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ಗ್ರಾಮ ಅಥವಾ ಪಟ್ಟಣ ಪಂಚಾಯಿತಿಗಳು, ಮತ್ತಿತರೆ ಕಾರ್ಯಕ್ಷೇತ್ರಗಳಲ್ಲಿ ಮೇಲ್ಜಾತಿಗಳ ಸದಸ್ಯರಿಂದ ಅಸ್ಪೃಷ್ಯತೆಯ ಆಚರಣೆಗಳೆಂದು ಕಂಡುಬಂದ ಅಂಶಗಳು. ಅವುಗಳೆಂದರೆ:
  1. ಶಾಲೆಗಳಲ್ಲಿ ಪರಿಶಿಷ್ಟಜಾತಿಯ ಮಕ್ಕಳನ್ನು ಪ್ರತ್ಯೇಕ ಬೆಂಚ್‍ಗಳಲ್ಲಿ ಕುಳಿತುಕೊಳ್ಳುವಂತೆ ಮಾಡಿರುವುದು.
  2. ವಿಶೇಷ ಸಮಾರಂಭಗಳು, ವಿಧಿ ಆಚರಣೆಗಳು ಹಬ್ಬಗಳ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ಊಟಕ್ಕೆ ಪ್ರತ್ಯೇಕ ಸಾಲಿನಲ್ಲಿ ಕೂರಿಸುವುದು.
  3. ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯದಂತೆ ಪರಿಶಿಷ್ಟ ಜಾತಿಯ ಸದಸ್ಯರನ್ನು ತಡೆಯುವುದು.
  4. ಗ್ರಾಮೀಣ ಪ್ರದೇಶಗಳ ಕೆಲವು ಹೊಟೇಲುಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರುಗಳಿಗೆ ಪ್ರತ್ಯೇಕ ಲೋಟ ಮತ್ತು ತಟ್ಟೆಗಳಲ್ಲಿ ಉಪಾಹಾರ ಪಾನಿಯಗಳನ್ನು ನೀಡಿರುವುದು.
  5. ಹಲವು ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿಯ ಸದಸ್ಯರನ್ನು ದೇವಾಲಯ ಪ್ರವೇಶಕ್ಕೆ ನಿರಾಕರಿಸುವುದು.
  6. ಸಾರ್ವಜನಿಕ ಕೊಳವೆಗಳಿಂದ ನೀರು ಪಡೆಯುವಾಗ ಉನ್ನತ ಜಾತಿಯ ಸದಸ್ಯರು ಪರಿಶಿಷ್ಟ ಜಾತಿಯ ಸದಸ್ಯರೊಂದಿಗೆ ಜಗಳವಾಡುವುದು ಕಂಡುಬರುತ್ತದೆ. ಮೇಲ್ಜಾತಿಯವರು ಕೆಳಜಾತಿಯವರಿಗೆ ಕೆಲವು ಪ್ರದೇಶಗಳಲ್ಲಿ ನೀರು ಹಿಡಿದುಕೊಳ್ಳಲು ಬಿಡುವುದಿಲ್ಲ.

ಮತ್ತಷ್ಟು ಓದು »