ವಿಷಯದ ವಿವರಗಳಿಗೆ ದಾಟಿರಿ

Archive for

14
ಆಕ್ಟೋ

ನಮ್ಮ ನಮ್ಮ ಭಾಷೆಯ ಸಮಸ್ಯೆ

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.

ಕನ್ನಡ ಕಲಿವಾರಗಳ ಹಿಂದೆ ಭಾರತದ ಖಗೋಳ ವಿಜ್ಞಾನಿಗಳ ತಂಡ ಮಂಗಳನ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿತು. ಈ ಸಂದರ್ಭದಲ್ಲಿ ಬಹುತೇಕ ಕನ್ನಡ ವಾಹಿನಿಗಳು ಚರ್ಚೆಯನ್ನು ಏರ್ಪಡಿಸಿದ್ದವು. ಖಗೋಳ ಅನ್ನುತ್ತಿದ್ದಂತೆ ಈ ಕುರಿತ ಭಾರತದ ಪ್ರಾಚೀನ ಜ್ಞಾನವೇತ್ತರನ್ನು ಹಾಗೂ ಇಂದಿನ ವಿಜ್ಞಾನಿಗಳನ್ನು ಅಥವಾ ಅವರ ಪ್ರತಿನಿಧಿಗಳು ಅಂದುಕೊಂಡವರನ್ನು ಚರ್ಚೆಗೆ ಆಹ್ವಾನಿಸಬೇಕಲ್ಲ? ವಾಹಿನಿಗಳೂ ಹಾಗೆಯೇ ಮಾಡಿದವು. ಎರಡೂ ಕ್ಷೇತ್ರದವರನ್ನು ಜೊತೆಗೆ ನಡುವೆ ವಿಚಾರವಾದಿಗಳನ್ನು ಕರೆತಂದು ಕೂರಿಸಲಾಗಿದ್ದ ಚರ್ಚೆಯೊಂದನ್ನು ನೋಡುತ್ತಿದ್ದೆ. ಜ್ಯೋತಿಷಶಾಸ್ತ್ರದಲ್ಲಿ ಮಂಗಳನ ಬಗ್ಗೆ ಹೀಗೆ ಹೇಳಿದೆ, ಹಾಗೆ ಹೇಳಿದೆ. ಅದೇ ಸತ್ಯ; ಭಾರತೀಯ ಋಷಿ ಮುನಿಗಳು ಅಣುವಿನ ಬಗ್ಗೂ ಪ್ರಸ್ತಾಪಿಸಿದ್ದಾರೆ, ಅವರಿಗೆಲ್ಲ ತಿಳಿದಿತ್ತು ಎಂಬಂತೆ ಆ ಶಾಸ್ತ್ರದವರು ಅನ್ನುತ್ತಿದ್ದರೆ ಮತ್ತೊಂದೆಡೆ ಹಾಗಾದ್ರೆ ಅವರಿಗೆ ಅಣುಬಾಂಬ್ ತಿಳಿದಿತ್ತಾ? ಇದೆಲ್ಲ ನಾನ್ಸೆನ್ಸ್ ಎಂದು ಆಧುನಿಕ ಜ್ಞಾನ ಪ್ರತಿಪಾದಕರು ಬಿಸಿಬಿಸಿ ಚರ್ಚೆ ಮಾಡುತ್ತಿದ್ದರು.ತಮ್ಮ ತಮ್ಮ ಪ್ರತಿಪಾದನೆಗೆ ಎರಡೂ ಗುಂಪಿನವರೂ ಬಲವಾಗಿ ಅಂಟಿಕೊಂಡೇ ಇದ್ದರು. ಸಮಯವಾಯ್ತು, ಚರ್ಚೆ ನಿಂತಿತು. ಇಂಥ ಚರ್ಚೆಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ.

ಕಾರಣ ಇಷ್ಟೇ. ಭಾರತದ ಪ್ರಾಚೀನ ಜ್ಞಾನ ಅಂದರೆ ಇಲ್ಲಿ ಚಂದ್ರ, ಸೂರ್ಯ, ಮಂಗಳ ಮೊದಲಾದವುಗಳ ಬಗ್ಗೆ ಜ್ಯೋತಿಷಶಾಸ್ತ್ರದಲ್ಲಿ ಹೇಳಿರುವ ಮಾತುಗಳು ಅಥವಾ ಪಾರಂಪರಿಕ ಜ್ಞಾನ. ಇವುಗಳ ವಿವರ ಭಾಸ್ಕರಾಚಾರ್ಯ, ವರಾಹಮಿಹಿರ ಮೊದಲಾದವರ ಕೃತಿಗಳಲ್ಲಿ ತಕ್ಕಮಟ್ಟಿಗೆ ದೊರೆಯುತ್ತದೆ. ಇದನ್ನು ಇಂದಿನ ಜ್ಯೋತಿಷ್ಕರು ತುಸು ತಿಳಿದಿರುತ್ತಾರೆ. ಇನ್ನು ಆಧುನಿಕ ವಿಜ್ಞಾನ ಕುರಿತು ಮಾತನಾಡುವವರು ವಿಜ್ಞಾನಿಗಳ ಸಾಧನೆಯನ್ನು ಪತ್ರಿಕೆಗಳಲ್ಲಿ ಓದಿದವರೋ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪಾಠ ಮಾಡುವವರೋ ಆಗಿದ್ದವರು. ಇವರಲ್ಲಿ ಎರಡೂ ವರ್ಗದವರೂ ಈ ಎರಡೂ ಕ್ಷೇತ್ರದ ಜ್ಞಾನ ಸೃಷ್ಟಿಗೆ ಕಾರಣರಾದವರಲ್ಲ, ಬದಲಿಗೆ ಯಾರೋ ಮಾಡಿದ ಪ್ರಯೋಗ-ಅದರ ಫಲಿತಗಳ ಅಂತಿಮ ಫಲಾನುಭವಿಗಳು.

ಮತ್ತಷ್ಟು ಓದು »

13
ಆಕ್ಟೋ

ಕೈಲಾಶ್ ಸತ್ಯಾರ್ಥಿ : ಮಾನವತೆಯ ಕೈಲಾಸ ಪರ್ವತ

– ರಾಘವೇಂದ್ರ ಅಡಿಗ

ಕೈಲಾಶ್ ಸತ್ಯಾರ್ಥಿಭಾರತದ ಮಧ್ಯ ಪ್ರದೇಶದ ವಿದಿಶಾ ನಗರದಲ್ಲಿ ಹುಟ್ಟಿ “ಬಚಪನ್ ಬಚಾವೋ” ಆಂದೋಳನದ ಮೂಲಕ ಸಾವಿರಾರು ಮಕ್ಕಳನ್ನು ಜೀತ ವಿಮುಕ್ತಿಗೊಳಿಸಿದ ವ್ಯಕ್ತಿ 60 ರ ಪ್ರಾಯದ ಕೈಲಾಶ್ ಸತ್ಯಾರ್ಥಿಯವರ ಕುರಿತಾಗಿ ಮೊನ್ನೆ ನೋಬೆಲ್ ಶಾಂತಿ ಪಾರಿತೋಶಕ ಘೋಷಣೆ ಆಗುವವರೆಗೂ ನಮಗೆ ಯಾರೊಬ್ಬರಿಗೂ ಅವರ ಬಗೆಗೆ ತಿಳಿದಿರಲಿಲ್ಲ ಎನ್ನುವುದು ನಮ್ಮ ದೇಶದ ಸಾಧಕನೋರ್ವನ ಬಗೆಗೆ ನಮಗಿರುವ ಉದಾಸೀನತೆಗೆ ಸಾಕ್ಷಿಯಲ್ಲವೆ? ಭಾರತದ ಸಾಮಾನ್ಯ ಜನರಿಗಾಗಲೀ, ಭಾರತದ ಘನ ಸರ್ಕಾರಗಳಿಗಾಗಲೀ, ಸಾವಿರಾರು ಸಂಖ್ಯೆಯಲ್ಲಿರುವ ಸಂಘ ಸಂಸ್ಥೆಗಳಲ್ಲಿ ಯಾರೊಬ್ಬರಿಗೂ ಇವರ ಬಗೆಗೆ, ಇವರ ಸಾಮಾಜಿಕ ಕಳಕಳಿಯ ಕಾರ್ಯಗಳ ಬಗೆಗೆ ಯಾವೊಂದು ವಿಚಾರವೂ ತಿಳಿದಿರಲಿಲ್ಲ! “ಡರ್ಟಿ ಪಿಕ್ಚರ್” ನಂತಹಾ ಚಲನಚಿತ್ರಗಳಲ್ಲಿ ನಟಿಸಿದ ನಟಿಮಣಿಯರಿಗೆಲ್ಲ ಭಾರತದ ಉನ್ನತ ನಾಗರಿಕ ಗೌರವ “ಪದ್ಮಶ್ರೀ” ಪ್ಯ್ರಸ್ಕಾರವು ಸಂದಿರುವಾಗ ನಮ್ಮ ನಡುವೆಯೇ ಇದ್ದು ಸಾವಿರಾರು ಬಡ ಮಕ್ಕಳ ಉದ್ದಾರಕ್ಕಾಗಿ ಟೊಂಕಕಟ್ಟಿದ ಕೈಲಾಶ್ ರಂತಹವರನ್ನು ನಮ್ಮ ಸರ್ಕಾರಗಳು ಗುರುತಿಸದೇ ಹೋದುದು ತೀರಾ ಖೇದಕರ ಸಂಗತಿಯಲ್ಲವೆ? ಇನ್ನಾದರೂ ನಮ್ಮ ದೇಶದ ಸರ್ಕಾರಗಳು, ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಬೇಕಿದೆ. ಹಾಗಾದಾಗ ಮಾತ್ರವೇ ನಮ್ಮ ಸಮಾಜಕ್ಕೂ, ಜನತೆಗೂ ಮಾನವತೆಯ ಮೌಲ್ಯಗಳ ಅರಿವಿದೆ ಎಂದು ಇತರರಿಗೆ ತಿಳಿಸಿದಂತಾಗುತ್ತದೆ.

ಆ ಹುಡುಗನು ತಾನು ನಿತ್ಯವೂ ಶಾಲೆಗೆ ನಡೆದು ಹೋಗುತ್ತಿದ್ದಾಗ ತನ್ನದೇ ಓರಗೆಯ ಹುಡುಗನೋರ್ವನು ತನ್ನ ತಂದೆಯೊಡನೆ ಕುಳಿತು ಬೂಟು ರಿಪೇರಿ ಮಡುತ್ತಿದ್ದುದನ್ನು ಕಾಣುತ್ತಿದ್ದನು. ಅದಾಗೆಲ್ಲಾ ಈ ಹುಡುಗನ ಮನಸ್ಸಿನಲ್ಲಿ ‘ನಾನು ಉತ್ಸಾಹದಿಂದಲೂ ಸಂತೋಷದಿಂದಲೂ ಶಾಲೆಗೆ ಹೋಗುತ್ತಿದ್ದರೆ ಆ ಹುಡುಗ ಮಾತ್ರ ತನ್ನ ತಂದೆಯೊಂದಿಗೆ ಕುಳಿತು ಬೂಟು ಹೊಲಿಯುತ್ತಿದ್ದಾನೆ, ಅದೇಕೆ ಹೀಗೆ?’ಎನ್ನುವ ಆಲೋಚನೆ ಹುಟ್ಟುತ್ತಿತ್ತು.

ಅದೊಮ್ಮೆ ಅದೇ ಪ್ರಶ್ನೆಯನ್ನು ತನ್ನ ಶಾಲಾ ಉಪಾದ್ಯಾಯರ ಬಳಿ ಕೇಳಲಾಗಿ “ ಅವರ ಬಳಿ ಹಣವಿಲ್ಲ, ಅವರು ಬಡವರು. ವಿದ್ಯಾಭ್ಯಾಸ ಪಡೆದುಕೊಳ್ಳಲಿಕ್ಕೆ ಸಾಕಷ್ಟು ಧನಬಲವಿಲ್ಲದವರು.” ಎನ್ನುವ ಉತ್ತರ ದೊರಕಿತು.

ಮತ್ತಷ್ಟು ಓದು »

11
ಆಕ್ಟೋ

ಪ್ರತಿಭಟನೆ ಮಾಡಿದವರೆಲ್ಲ ಕೃತಿಯನ್ನು ಓದಿದ್ದರೇ?

– ವೃಷಾಂಕ ಭಟ್

ವಾಲ್ಮೀಕಿ ಯಾರುಡಾ.ಕೆ.ಎಸ್.ನಾರಾಯಣಾಚಾರ್ಯರು ಬರೆದ ‘ವಾಲ್ಮೀಕಿ ಯಾರು?’ ಎಂಬ ಪುಸ್ತಕದ ವಿರುದ್ಧ ಹಲವು ಪ್ರತಿಭಟನೆಗಳನು ನಡೆದವು. ನನಗೆ ಹೆಚ್ಚು ಹಾಸ್ಯಾಸ್ಪದವೆನಿಸಿದ್ದು ಸಿಪಿಎಂ ನಡೆಸಿದ ಪ್ರತಿಭಟನೆ. ದೇವರ ಅಸ್ಥಿತ್ವವನ್ನೇ ಒಪ್ಪದ ಎಡಪಂಥೀಯರು ರಾಮನನ್ನು ದೇವರೆಂದು ಬರೆದ ವಾಲ್ಮೀಕಿ ಪರ ವಕಾಲತ್ತು ವಸಿದ್ದಕ್ಕೆ ಏನು ಹೇಳಬೇಕು? ಓಟ್ ಬ್ಯಾಂಕ್ ಸೃಷ್ಟಿಸಲು ತಮ್ಮ ಸಿದ್ಧಾಂತವನ್ನೇ ಮರೆತ ಪಕ್ಷವಲ್ಲವೇ? ಅದೇನೇ ಇರಲಿ, ಕೃತಿಯೊಂದರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆಯಾದಾಗ, ಆ ಕೃತಿಯನ್ನೋದಬಯಸುತ್ತದೆ ಮನಸ್ಸು. ಹಿಂದೆ ‘ಡುಂಡಿ’ ಬಿಡುಗಡೆಯಾದಗಲೂ ಕದ್ದು ಓದುವ ಪ್ರಯತ್ನ ಮಾಡಿದ್ದೆ. ಕದ್ದು ಓದಿದ್ದೇಕೆಂದರೆ ಆ ಕೃತಿಯನ್ನು ನಿಷೇಸಲಾಗಿತ್ತು. ಹೀಗೆ ಕದ್ದು ಓದಲು ಯತ್ನಿಸಿದ ಡುಂಡಿಯನ್ನು ಹತ್ತು ಪುಟಕ್ಕಿಂತ ಹೆಚ್ಚು ಓದಲಾಗಲಿಲ್ಲ. ‘ವಾಲ್ಮೀಕಿ ಯಾರು’ ಕೃತಿಯೂ ಇದರಿಂದ ಹೊರತಾಗಿರದು ಎಂಬ ಪೂರ್ವಾಲೋಚನೆಯಲ್ಲಿದ್ದವನನ್ನು, ಕೃತಿ ಸೋಲಿಸಿತು!

ಈ ಕೃತಿಯ ವಿರುದ್ಧ ಹೋರಾಟನಡೆಸಿದವರಲ್ಲಿ ಹೆಚ್ಚಿನವರು ಕೃತಿಯನ್ನೇ ಓದಿರುವುದಿಲ್ಲ ಎಂದು ನಾನು ಪಂದ್ಯ ಕಟ್ಟಬಲ್ಲೆ. ಅದರಲ್ಲಿ ಹಂಗಿದೆಯಂತೆ, ಹಿಂಗಿದೆಯಂತೆ ಎಂದು ಹರಡುವ ಮಾತನ್ನೇ ನಂಬಿ ಕೆಲವರು ದೊಂಬಿ ಎಬ್ಬಿಸುತ್ತಾರೆ. ಉಳಿದವರು ಕುರಿಗಳಂತೆ ಸೇರಿಕೊಳ್ಳುತ್ತಾರೆ. ಆದರೆ ಈ ಲೇಖನ ಬರೆಯುವ ಮುನ್ನ ನಾನು ಕೃತಿಯನ್ನು ಸಂಪೂರ್ಣವಾಗಿ ಓದ್ದೇನೆ. ಓದಿದ್ದನ್ನು ನನ್ನ ಸಾಮರ್ಥ್ಯಕ್ಕೆ ನಿಲುಕುವಷ್ಟು ಅರ್ಥೈಸಿಕೊಂಡಿದ್ದೇನೆ. ಕೃತಿಯ ವಿರುದ್ಧ ಗಲಾಟಗಳಾದ ಕೂಡಲೇ ಈ ಲೇಖನವನ್ನು ಬರೆಯಬಹುದಿತ್ತು. ಆದರೆ ಪ್ರತಿಭಟನಕಾರರ ಮನಸ್ಸು ಇನ್ನೊಬ್ಬರ ಮಾತನ್ನು ಆಲಿಸುವಷ್ಟು ಮಟ್ಟಿಗೆ ಶಾಂತವಾಗುವ ತನಕ ಬರೆಯದೇ ಇರುವುದು ಲೇಸು ಎನ್ನಿಸಿತು. ಎಲ್ಲಕ್ಕೂ ಮಿಗಿಲಾಗಿ, ಈ ಕೃತಿಯ ಬಗ್ಗೆ ಇಷ್ಟೆಲ್ಲಾ ಗಲಾಟೆ ಇದ್ದರೂ, ಹೆಚ್ಚಿನವರಿಗೆ ಓದಲು ಈ ಪುಸ್ತಕ ಸಿಕ್ಕಿಲ್ಲ. ಅವರೆಲ್ಲರ ಕುತೂಹಲವೂ ತಣಿಯಬಹುದೆಂಬ ನಂಬಿಯಿದೆ.

ಮೊದಲಿಗೆ ಆಚಾರ್ಯರು ಬರೆದ ಯಾವ ಸಾಲುಗಳಿಂದ ವಾಲ್ಮೀಕಿ ಜನಾಂಗದವರಿಗೆ ನೋವುಂಟಾಗಿರಬಹುದೆಂಬುದನ್ನು ತಿಳಿಯಲು ಯತ್ನಿಸೋಣ.

1. ಪಾಮರನಾದ ಬೇಡನೊಬ್ಬ ದಿಢೀರನೆ ಕಾವ್ಯ ಬರೆದ ರೀತಿ ಇದೆಂದು ಹೇಳುವುದು ಹಾಸ್ಯಾಸ್ಪದವೇ ಆಗುತ್ತದೆ.
2. ವಾಲ್ಮೀಕಿಯ ವಾಗ್ವೈಭವಕ್ಕೆ ಈವರೆಗೆ ನಾವು ಅವನ ಪಾತ್ರರಚನೆ, ಪೋಷಣೆ, ವಾಕ್ಯಗಳ ವಿವರಣೆಗಳನ್ನು ಇತ್ತಿರುವುದೆಲ್ಲ ಸಾಕ್ಷಿ ಎಂದ ಮೇಲೆ ಹೆಚ್ಚು ಹೇಳುವುದೇನಿದೆ? ಪಾಮರನಿಗೆ ಇವೆಲ್ಲ ಶಕ್ಯವೇ?
3. ವಾಲ್ಮೀಕಿ ಬೇಡನೆಂಬುದಕ್ಕೆ ‘ಶ್ರೀ ವಾಲ್ಮೀಕಿ ರಾಮಾಯಣ’ದಲ್ಲಿ ಯಾವ ಆಧಾರಗಳೂ ಇಲ್ಲ.
4. ಕೃತಿಗಳನ್ನು ಓದದೆ ಕೇವಲ ಹೆಸರು ಅಂಟಿಸಿಕೊಂಡರೆ ಅವರಿಗೂ ಅಪಕೀರ್ತಿ, ನಿಮಗೂ ಹಾನಿ!
ಮತ್ತಷ್ಟು ಓದು »

8
ಆಕ್ಟೋ

ಭ್ರಷ್ಟ ಜಯಲಲಿತಾ ಯಾವೆಲ್ಲದರ ಫಲಿತಾಂಶ?

– ಚೇತನಾ ತೀರ್ಥಹಳ್ಳಿ    

Jayalilthaಅಧಿಕೃತವಾಗಿ ತನ್ನ ಸ್ವಂತದವರೆಂದು ಹೇಳಿಕೊಳ್ಳಲು ಮತ್ತೊಂದು ಜೀವ ಜೊತೆಗಿರದ ಜಯಲಲಿತಾ ಇವೆಲ್ಲವನ್ನೂ ಮಾಡಿಟ್ಟಿದ್ದು ಯಾಕಾಗಿ? ತನ್ನ ನೆಲದ ಬಡ ಜನರಿಗೆ ರೂಪಾಯಿಗೊಂದು ಇಡ್ಲಿ, ಕುಡಿಯುವ ನೀರು, ಸೂರು ಎಂದೆಲ್ಲ ಜನಪರ – ಜನಪ್ರಿಯ ಯೋಜನೆಗಳನ್ನು ರೂಪಿಸಿದ ಜಯಲಲಿತಾ ಅದೇ ಜನರ ತೆರಿಗೆ ಹಣವನ್ನು ನುಂಗಿ ಕೂತಿರುವುದು ಯಾಕೆ? ನಿಜಕ್ಕೂ ಈ ಪರಿಯ ಹಪಾಹಪಿ ಅವರಲ್ಲಿದೆಯೇ? ತುಸು ಜಂಭದ, ಆದರೆ ಅಪ್ರಮಾಣಿಕತೆ ಕಾಣದ ಅವರ ಮುಖ ಹಾಗೂ ನಿಲುವಿನಲ್ಲಿ ಮೋಸವಿದೆಯೇ? ಇಂದು ನಾವು ನೋಡುತ್ತಿರುವ ಭ್ರಷ್ಟ ರಾಜಕಾರಣಿ ಜಯಲಲಿತಾ ರೂಪುಗೊಂಡಿದ್ದು ಹೇಗೆ?

ಬದುಕನ್ನು ಗಂಡು – ಹೆಣ್ಣೆಂಬ ಭೇದ ಮೀರಿದ ದೃಷ್ಟಿಕೋನದಿಂದ ನೋಡಬೇಕೆನ್ನುವುದು ನಿಜವಾದರೂ ಅದರ ಹೊರಳಾಟಗಳನ್ನು ನೋಡುವಾಗ ಈ ಭೇದದ ಊರುಗೋಲು ಅಗತ್ಯವಾಗಿಬಿಡುತ್ತದೆ. ಏಕೆಂದರೆ, ಬದುಕು ಒಂದೇ ಆದರೂ ಅದನ್ನು ಹೆಣ್ಣು ಎದುರುಗೊಳ್ಳುವ ಬಗೆಯೇ ಬೇರೆ ಮತ್ತು ಗಂಡು ಒಳಗೊಳಿಸಿಕೊಳ್ಳುವ ಬಗೆ ಬೇರೆ. ಏಕೆಂದರೆ, ನಾಗರಿಕತೆಯ ಆರಂಭಕಾಲದಿಂದಲೂ ಗಂಡು ಹೆಣ್ಣಿಗೆ ಕೊಡಲಾಗಿರುವ ಅವಕಾಶಗಳು ಹಾಗಿವೆ.

ಸದ್ಯದ ಭಾರತೀಯ ರಾಜಕಾರಣದ ಮುಖ್ಯಧಾರೆಯಲ್ಲಿರುವ ಐವರು ಹೆಣ್ಣುಗಳ ಬದುಕು ಮತ್ತು ಸಾಧನೆಗಳು ವಿಶಿಷ್ಟವೇ. ಅವರ ಹಗರಣಗಳೂ ಕೂಡಾ. ಭ್ರಷ್ಟಾಚಾರದ ವಿಷಯಕ್ಕೆ ಬಂದಾಗ ಅಲ್ಲಿ ಕೂಡ ಲಿಂಗ ತಾರತಮ್ಯ ಇರುವುದಿಲ್ಲ. ವಿಚಾರಣೆ, ಶಿಕ್ಷೆ, ಪರಿಣಾಮಗಳಿಗೆ ಸಂಬಂಧಿಸಿದಂತೆ ಅದನ್ನು ತರತಮವಿಲ್ಲದೆಯೇ ನೋಡಬೇಕಾಗುತ್ತದೆ. ಈ ಸಾಮಾಜಿಕ ಆಯಾಮವನ್ನು ಮೀರಿ, ಮಾನಸಿಕ ಸ್ತರದಲ್ಲಿ ನೋಡುವಾಗ, ಮಾನವೀಯ ಚಿಂತನೆಗೆ ಹಚ್ಚಿ ನೋಡುವಾಗ ಬಿಚ್ಚಿಕೊಳ್ಳುವ ದೃಶ್ಯಗಳೂ ಬೇರೆಯೇ ಇರುತ್ತವೆ. ಅಲ್ಲಿ ಮಾಯಾವತಿಯ ಮೂರ್ತಿಗಳಿಗೆ, ಚಿನ್ನದ ಕತ್ತಿಗಳಿಗೆ ಬೇರೆಯೇ ಅರ್ಥ ಕಾದಿರುತ್ತದೆ. ಹಿಂಜಿಹೋದ ಕಾಟನ್‌ ಸೀರೆಯನ್ನಷ್ಟೆ ಉಡುವ ಮಮತಾ ಬ್ಯಾನರ್ಜಿಯ ಹೆಸರು ಯಾಕೆ ಚೀಟಿ ವ್ಯವಹಾರದಂಥದರಲ್ಲಿ ಕಾಣಿಸುತ್ತದೆ ಎಂಬುದರ ಅರಿವಾಗುತ್ತದೆ. ಯಾಕೆ ಉಮಾ ಭಾರತಿ ಹಾಗೆ ರಚ್ಚೆ ಹಿಡಿದ ಮಗುವಿನಂತಾಡುತ್ತಾರೆ ಎಂದರೆ ಅವರ ಸೋತ ಹೃದಯದ ನೋವು ಕೇಳಿಸುತ್ತದೆ. ಸೋನಿಯಾರ ನಗುವಿಲ್ಲದ ಮುಖವೂ ಅವರ ಪರಿವಾರದೊಂದಿಗೆ ಹೆಣೆದುಕೊಂಡ ಹಗರಣಗಳು, ಹಣದ ವ್ಯವಹಾರಗಳು ಮತ್ತೊಂದೇ ಕಥೆ ಹೇಳತೊಡಗುತ್ತವೆ. ಈ ಎಲ್ಲವನ್ನು ಆ ಎಲ್ಲರ ಅಪರಾಧಗಳ ಸಮರ್ಥನೆಗಾಗಿ ಖಂಡಿತ ಬಳಸಬಾರದು. ಆದರೆ ಅರ್ಥೈಸಿಕೊಳ್ಳಲು ಮತ್ತು ನಮ್ಮನಮ್ಮ ಸ್ತರಗಳಲ್ಲಿ ಅವನ್ನು ಅನ್ವಯಿಸಿಕೊಂಡು ನೋಡಲು ಇವು ಬೇಕಾಗುತ್ತವೆ.
ಮತ್ತಷ್ಟು ಓದು »

1
ಆಕ್ಟೋ

ಚರಿತ್ರೆ ಮತ್ತು ಗತಕಾಲ

ಭಗವದ್ಗೀತೆ“ಮನುಸ್ಮೃತಿ”ಯ ಕುರಿತ ಲೇಖನದಲ್ಲಿ ವಲವಿ,ಷಣ್ಮುಖ ಮತ್ತು ಶೆಟ್ಕರ್ ಅವರ ನಡುವೆ ನಡೆದ ಪ್ರತಿಕ್ರಿಯೆಗಳು ಹೆಚ್ಚು ಜನರಿಗೆ ತಲುಪಲಿ ಎಂದು ಅವುಗಳನ್ನು ಲೇಖನವಾಗಿ ಪ್ರಕಟಿಸುತಿದ್ದೇವೆ – ನಿಲುಮೆ ನಿರ್ವಾಹಕರು.

ವಲವಿ: ಷಣ್ಮುಖ ಅವರೆ,“ಈ ಜಾತಿ ಪದ್ಧತಿ ಯಾರಿಂದ ಭಾರತದಲ್ಲಿ ಬೇರೂರಿತು? ವೇದಕಾಲದಲ್ಲಿ ಇರಲಾರದ ಜಾತಿ ಯಾವ ಕಾಲದಲ್ಲಿ ಭಾರತದಲ್ಲಿ ಬಳಕೆಗೆ ಬಂತು? ಮತ್ತು ಅಸ್ಪೃಶ್ಯತೆ ಆಚರಣೆ ಯಾವಾಗ ಶುರುವಾಯಿತು? ಕಾರಣಗಳೇನು ವಿವರಿಸುವಿರಾ? ಈಗ ಸಧ್ಯಕ್ಕೆ ನೀವು ತಿಳಿದ ಮಟ್ಟಿಗಾದರೂ ಇವುಗಳ ಬಗ್ಗೆ ಬೆಳಕು ಚಲ್ಲಿದರೆ ಸಂತೋಷವಾಗುತ್ತದೆ.”

ಷಣ್ಮುಖ : ಮಾನ್ಯ ವಲವಿ ಯವರೇ, ಬಹಳವೇ ದೊಡ್ಡ ದೊಡ್ಡ ಪ್ರಶ್ನೆಗಳನ್ನು ಕೇಳ್ತಿದ್ದೀರಿ. ಆದರೆ ಸದ್ಯಕ್ಕೆ ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿನ ಸಮಸ್ಯೆಗಳನ್ನು ಮಾತ್ರ ಸಂಕ್ಷಿಪ್ತವಾಗಿ ಹೇಳ್ತೇನೆ ಆಗ ಈ ಪ್ರಶ್ನೆಗಳ ಸಮಸ್ಯೆಯನ್ನೋ ಅಥವಾ ಇಂತಹ ಪ್ರಶ್ನೆಗಳಿಗೆ ವೈಜ್ಞಾನಿಕ ಉತ್ತರದ ಸಾಧ್ಯತೆಯನ್ನೋ ಪರಿಶೀಲಿಸಿಕೊಳ್ಳಲಾದರೂ ನೆರವಾಗಬಹುದು.

ಮತ್ತಷ್ಟು ಓದು »