ಪೌರಕಾರ್ಮಿಕರ ಸಮಸ್ಯೆಗಳು ಮತ್ತು ಶ್ರೇಣಿಕೃತ ಜಾತಿವ್ಯವಸ್ಥೆಯೆಂಬ ಮಿಥ್
– ರಾಕೇಶ್ ಶೆಟ್ಟಿ
‘ವಿಜಯವಾಣಿ’ ಪತ್ರಿಕೆಯಲ್ಲಿ ಅಕ್ಟೋಬರ್ ೧೪ನೇ ತಾರೀಖು ಪ್ರಕಟವಾದ, ಮಾಜಿ ಸಚಿವ ಬಿ.ಸೋಮಶೇಖರ್ ಅವರ “ಸ್ವಚ್ಚ ಮನಸ್ಸುಗಳಿಂದ ಸ್ವಚ್ಚ ಭಾರತ ನಿರ್ಮಾಣ” ಲೇಖನಕ್ಕೆ ನನ್ನ ಪ್ರತಿಕ್ರಿಯೆ.
ಸೋಮಶೇಖರ್ ಅವರು ಲೇಖನದಲ್ಲಿ ‘ಸ್ವಚ್ಚ ಭಾರತ ಅಭಿಯಾನ’ದ ಬಗ್ಗೆ ಮಾತನಾಡುತ್ತ ಮುಖ್ಯವಾಗಿ ಎರಡು ಅಂಶಗಳನ್ನು ದಾಖಲಿಸಿದ್ದಾರೆ.ಅದರಲ್ಲಿ ಮೊದಲನೆಯ ಅಂಶದಲ್ಲಿ, ಸರ್ವೇ ಸಾಧಾರಣವಾಗಿ ಭಾರತದ ಯಾವುದೇ ಬುದ್ಧಿಜೀವಿಯೋ ಅಥವಾ ರಾಜಕಾರಣಿಯೋ ಹೇಳುವಂತಹ “ಭಾರತೀಯ ಸಮಾಜ ಜಾತಿ ಆಧಾರಿತ,ಶ್ರೇಣಿಕೃತ” ಇತ್ಯಾದಿ.ಹಾಗೇ,ಸ್ವಚ್ಚಗೊಳಿಸುವ ಕೆಲಸಕ್ಕಾಗಿ ಇಲ್ಲಿ ಒಂದೇ ಜಾತಿ,ವರ್ಗವನ್ನು ಸೃಷ್ಟಿಸಲಾಯಿತು ಮತ್ತು ಅದಕ್ಕೆ ಧರ್ಮ-ಶಾಸ್ತ್ರಗಳ ಮೂಲಕ ಅಧಿಕೃತವನ್ನಾಗಿಸಲಾಯಿತು ಅಂತೆಲ್ಲ ಬರೆದುಕೊಂಡಿದ್ದಾರೆ. ಎರಡನೆಯ ಅಂಶ ಪೌರ ಕಾರ್ಮಿಕರ ಸಮಸ್ಯೆಗಳು,ಸ್ವಚ್ಚ ಭಾರತ ಅಭಿಯಾನದ ಅನುಷ್ಟಾನದ ಬಗ್ಗೆಯಾಗಿದೆ.
ಅವರ ಲೇಖನದ ಮೊದಲನೇ ಅಂಶದಲ್ಲಿ ಬರುವ ಶ್ರೇಣಿಕೃತ ಜಾತಿ ವ್ಯವಸ್ಥೆ,ಧರ್ಮ-ಶಾಸ್ತ್ರಗಳು ಇತ್ಯಾದಿ ವಾದಗಳಿಗೆ ಯಾವುದೇ ವೈಜ್ನಾನಿಕ ಆಧಾರಗಳು ಇಲ್ಲ.ಈ ವಾದಗಳು “ಅಡಗೂಲಜ್ಜಿ ಕತೆ”ಗಳಂತೆ ಹಳೆ ಕಾಲದಿಂದ ಕೇಳಿಸುತ್ತಲೇ ಬರುತ್ತಿವೆ.ಇತ್ತೀಚಿನ ಸಮಾಜ ವಿಜ್ನಾನದ ವಾದಗಳು ಭಾರತದಲ್ಲಿ ‘ಶ್ರೇಣಿಕೃತ ಜಾತಿ ವ್ಯವಸ್ಥೆ’ ಇಲ್ಲವೆಂದು ಹೇಳುತ್ತಿವೆ.
ಅಷ್ಟಕ್ಕೂ “ಶ್ರೇಣಿಕೃತ (Hierarchy)ವ್ಯವಸ್ಥೆ” ಎಂದರೇನು?
ಉದಾಹರಣೆಗೆ,ನಮಗೊಂದು ರಾಜ್ಯ ಸರ್ಕಾರವಿದೆ.ಅದಕ್ಕೊಬ್ಬರು ಮುಖ್ಯಮಂತ್ರಿ,ಅವರ ಕೆಳಗೆ ಮಂತ್ರಿಗಳು, ಶಾಸಕರು,ಮುಖ್ಯ ಕಾರ್ಯದರ್ಶಿಗಳು,ಅಧಿಕಾರಿಗಳು,ಜಿಲ್ಲಾಧಿಕಾರಿಗಳು,ತಹಶೀಲ್ದಾರರು ಹೀಗೆ ಒಂದು ವ್ಯವಸ್ಥೆ (System/Structure)ಇದೆ.ಇದೇ ರೀತಿಯ ವ್ಯವಸ್ಥೆಯೇನಾದರೂ ನಮ್ಮ ಸಮಾಜದಲ್ಲಿ ಕಾಣಬರುವ ಜಾತಿಗಳಲ್ಲಿ ಇವೆಯೇ?
ಕನ್ನಡ ಅಕ್ಷರ ಮಾಲೆಯ ಸೌಂದರ್ಯ ಅಭಿವ್ಯಕ್ತಗೊಳಿಸುವ ಕವನ
– ಡಾ. ಸುದರ್ಶನ ಗುರುರಾಜರಾವ್
”ಅ,ಆ ಇ,ಈ ಕನ್ನಡದಾ ಅಕ್ಷರಮಾಲೆ ಅಮ್ಮ ಎಂಬುದೆ ಕಂದನ ಕರುಳಿನ ಕರೆಯೋಲೆ” ಈ ಹಾಡನ್ನು ಕೇಳದ ಕನ್ನಡಿಗರಿಲ್ಲ. ಈ ಸುಂದರ ಗೀತೆ ಸ್ವರಗಳ ಸ್ತರದಲ್ಲಿ ಯೋಗವಾಹಗಳಾದ ಅಂ ಅಃ ಗಳೊಂದಿಗೆ ಮುಗಿಯುತ್ತದೆ. ಕರುಳಿನ ಕರೆ ಚಿತ್ರಕ್ಕಾಗಿ ಶ್ರಿ ಆರ್.ಎನ್. ಜಯಗೋಪಾಲ್ ಅವರು ರಚಿಸಿದ ಕನ್ನಡದ ಈ ಅನನ್ಯ ಗೀತೆ ಪ್ರತಿಯೊಂದು ಸ್ವರಕ್ಕೂ ಜೀವನದ ವಿವಿಧ ಹಂತ (ಸ್ತರ) ಗಳಲ್ಲಿ ಇರಬಹುದಾದ ಪ್ರಾಮುಖ್ಯತೆ ಯನ್ನು ತೊರುತ್ತದೆ. ’ಅ’ ಇಂದ ಅಮ್ಮಾ ಎನ್ನುವ ಮೊದಲ ಮಾತು ಶಿಶುವಾಗಿದ್ದಾಗ, ಆಟ ಊಟ ಓಟ ಗಳು ಬಾಲಕನಾಗಿದ್ದಾಗ,ಇನ್ನೂ ಬೆಳೆದ ನಂತರ ಮಾನವೀಯ ಮೌಲ್ಯಗಳ ಕಲಿಕೆ- ಇದ್ದವರು ಇಲ್ಲದವರಿಗೆ ನೀಡುವುದು, ಈಶ್ವರನಲ್ಲಿ ಭಕ್ತಿ ಇಡುವುದು ಮುಖ್ಯವಾಗುತ್ತದೆ;ಅಂದರೆ, “ನಾನು” ಎನ್ನುವ ಭಾವ ತೊಡೆಯುವುದು. ತರುಣರಾಗಿದ್ದಾಗ ಕಲಿಯುವ ಬಹು ಮುಖ್ಯ ನೀತಿ ಉಪ್ಪು ತಿಂದ ಮನೆಗೆ ಎರ್ಡ ಬಗೆಯದಿರುವ ಮನೋಭಾವ, ಸ್ವಾರ್ಥ ಸಾಧನೆಗಾಗಿ ಊರಿಗೆ ದ್ರೋಹ ಮಾಡದಿರುವ ( ವ್ಯಕ್ತಿಗತ ಹಿತಕ್ಕಿಂತ ಸಾಮಾಜಿಕ ಹಿತವನ್ನು ಪರಿಗಣಿಸುವ ಮನೋಭಾವನೆ) ವ್ಯಕ್ತಿತ್ವದ ಬೆಳವಣಿಗೆ, ಆನಂತರದಲ್ಲಿ ಓದು ಮುಗಿದು ಮಾಗಿದ ತಾರುಣ್ಯದ ವಯಸ್ಸಿನಲ್ಲಿ ದೇಶಸೇವೆ ಈಶ ಸೇವೆ ಎಂದು ಮಾಡಿದಾಗ ಜೀವನ ಆಹಾ ಆಃ ಆಃ ಎನ್ನುವಂತಿರುತ್ತದೆ ಎಂದು ಸುಂದರವಾಗಿ ಹೆಣೆದಿದ್ದಾರೆ. ಕನ್ನಡದ ಮುಂದಿನ ವರ್ಣಮಾಲೆಯಲ್ಲಿ ಬರುವ ವ್ಯಂಜನಗಳಿಗೂ ಅವುಗಳದ್ದೆ ಆದ ವೈಶಿಷ್ಟ್ಯ ಇದ್ದು ಇದು ಬಹಳ ಜನಕ್ಕೆ ತಿಳಿಯದು. ವ್ಯಂಜನಗಳಲ್ಲಿ ವರ್ಗೀಯ,ಅವರ್ಗೀಯ, ಅಲ್ಪಪ್ರಾಣ,ಮಹಪ್ರಾಣ ಹಾಗು ಅನುನಾಸಿಕಗಳೆಂಬ ಬಗೆಗಳಿವೆ ಇದು ಎಲ್ಲರಿಗೂ ತಿಳಿದ ವಿಚಾರ. ವರ್ಣಮಾಲೆಯ ಪ್ರತಿಯೊಂದು ಗುಂಪಿನ ಎಲ್ಲ ಸದಸ್ಯರು ನಮ್ಮ ಶ್ವಾಸ ಪ್ರಕ್ರಿಯೆಯ ವಿವಿಧ ಹಂತಗಳಿಂದ ಕ್ರಮವಾಗಿ ಮೂಡಿಬರುತ್ತವೆ. ಸ್ವರಗಳಿಂದ ಆರಂಭವಾಗುವ ಧ್ವನಿಗಳು ಹಂತ ಹಂತವಾಗಿ ಗಂಟಲಿನಿಂದ ಮೇಲೇರಿ ತುಟಿಯ ವರೆಗೂ ಬರುತ್ತವೆ. ಉದಾಹರಣೆಗೆ, ಅ,ಆ ಅಂದು ನೋಡಿ, ನಾಲಿಗೆಯ ಹಿಂದಿನ ಗಂಟಲ ಭಾಗದಿಂದ ಶಬ್ದ ಹೊರಡುತ್ತದೆ. ಕ,ಖ,ಗ ಗಳು ಅಲ್ಲಿಂದ ಮುಂದಕ್ಕೆ ಸರಿದು ನಾಲಿಗೆ ಮತ್ತು ಕಿರಿನಾಲಿಗೆಯ ಚಲನೆಯಿಂದ ಬರುತ್ತವೆ. ಹೀಗೆ ಪ.ಫ ಬ ದಲ್ಲಿ ಎರಡು ತುಟಿಗಳು ತಗುಲಿದಾಗ ಮಾತ್ರವೆ ಶಬ್ದ ಹೊರಡುವುದು. ಇಷ್ಟು ಸುಂದರವಾಗಿ, ವ್ಯವಸ್ಥಿತವಾಗಿ ಸಂಸ್ಕೃತದಿಂದ ಪ್ರೇರಿತವಾದ ಭಾರತದ ಭಾಷೆಗಳಲ್ಲದೆ ಬೇರೆ ಭಾಷೆಯಲ್ಲಿದೆಯೆಂದು ನನಗನಿಸದು. ಅದರಲ್ಲೂ, ಎಲ್ಲಾ ವರ್ಣಗಳಿಂದ ಸಮೃದ್ಧವಾದ ಕನ್ನಡ ಭಾಷೆಯಲ್ಲಿ ಈ ಬೆಡಗನ್ನು ಕಾಣಬಹುದು. ಈ ಭಾಷಾ ಸೌಂದರ್ಯವನ್ನು ಕವಿತೆಯಲ್ಲಿ ಹಿಡಿದಿಡುವ,ಅಭಿವ್ಯಕ್ತಗೊಳಿಸುವ ಅಭಿಲಾಷೆ ನನ್ನದು.
ಮತ್ತಷ್ಟು ಓದು
ಕನ್ನಡ – ಕನ್ನಡ
– ಭರತೇಶ ಅಲಸಂಡೆಮಜಲು
ಅ.. ಆ.. ಅ. ಆ..
ಇ.. ಈ.. ಇ.. ಈ..
ಅಆಇಈ ಕನ್ನಡದ ಅಕ್ಷರಮಾಲೆ
ಅ…. ಅಮ್ಮ ಎಂಬುವುದೇ ಕಂದನ ಕರುಳಿನ ಕರೆಯೋಲೆ
ಆ…. ಆಟ, ಊಟ, ಓಟ ಕನ್ನಡ ಒಂದನೇ ಪಾಠ
ಕನ್ನಡ ಭಾಷೆಯ ಕಲಿತವನ ಜೀವನವೇ ರಸದೂಟ…
ಇದು “ಕರುಳಿನ ಕರೆ” ಚಿತ್ರದ ಕನ್ನಡ ಭಾಷೆಯ ಬಗೆಗಿನ ಹೆಮ್ಮೆಯ ಹಾಡು, ಹೌದು ಜೀವಿಯೊಂದರ ಧ್ವನಿ ಪೆಟ್ಟಿಗೆಯಿಂದ ಉದ್ಭವಿಸಿದ ದನಿ ಗಾಳಿಯ ಒತ್ತಡಕ್ಕೆ ಸಿಳುಕಿ ಹಾರಾಡಿ ಅದು ತರಂಗಗಳಾಗಿ ತಮಟೆಗೆ ಬಡಿದು ಅನಾಥವಾದರೆ ಶಬ್ಧ, ಅದು ಅರ್ಥವಾದರೆ ಭಾಷೆಯಾಗುತ್ತದೆ. ಪ್ರತಿಯೊಬ್ಬರಿಗೂ ಭಾಷೆಯ ಬಗೆಗೆ ವಿಧ ವಿಧವಾದ ವ್ಯಾಖ್ಯಾನಗಳಿವೆ ಭಾಷೆ ಒಂದು ಸಂಸ್ಕಾರದ ಪರಿಶೋಧನೆಗೆ ಸಂಕೇತಗಳ ರೂಪ ನೀಡಿ ವ್ಯವಹರಿಸಲಿರುವ ವಿಶೇಷ ಸಾಮಥ್ರ್ಯ ಹಾಗೂ ಪಶು-ಪಕ್ಷಿಗಳಿಂದ ಪ್ರತ್ಯೇಕಿಸುವ ಘಟಕವೆಂದೆ ಬಿಂಬಿತವಾಗಿದೆ. ಭಾಷೆಯೆಂಬುದು ಆ ಪ್ರಾಂತ್ಯದ , ಜನ ಮಾನಸದ, ವ್ಯವಹಾರದ, ಸಮಾಜ ಸಂಸ್ಕ್ರತಿಯ ಸೊಗಡನ್ನು ಅಭಿವ್ಯಕ್ತಿ ಪಡಿಸುವ ರಾಯಭಾರಿಯಿದ್ದಂತೆ. ನಾವು ನಮ್ಮನ್ನು ಪರಿಚಯಿಸುವುದೇ ನಮ್ಮ ಭಾಷೆ, ನಮ್ಮ ನಾಡಿನ ಹೆಸರುಗಳ ಮೂಲಕ, ನಮ್ಮದು ಕನ್ನಡ ಭಾಷೆ ಅದರ ನವ್ಯತೆ, ನವಿರತೆ, ಮುಗ್ಧತೆ, ಸ್ಪಷ್ಟತೆ, ಉಚ್ಚರಣೆ, ಭಾವಾವಿಶೇಷಣಗಳು ಕನ್ನಡಿಗನೆನ್ನುವವನ ಮನ ಗೌರವವೆನಿಸುತ್ತದೆ.. ಅದಿ ದ್ರಾವಿಡ ಭಾಷೆಯಿಂದ ಕವಳೊಡೆದು ಒಸರಿನಂತೆ ಜಿನುಗಿ ಅದರ ಗಟ್ಟಿತನ , ಪ್ರಾಚೀನತೆ, ಸ್ವತಂತ್ರ ಪರಂಪರೆ, ಅಪಾರ ಸಾಹಿತ್ಯ ಬಿನ್ನತೆ, ಉನ್ನತ ಮಟ್ಟದ ಮೌಖಿಕ , ಶ್ರೇಷ್ಠ ಜಾನಪದ ನೆಲೆಯಲ್ಲಿ ಇಂದು ಕನ್ನಡ ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದೆ. ಕನ್ನಡದ ಕುಲಪುರೋಹಿತ ಅಲೂರು ವೆಂಕಟರಾಯರು ಹೇಳುತ್ತಾ ” ಭರತ ಖಂಡವಿಲ್ಲದೆ ಕರ್ನಾಟಕ ಮುಂತಾದ ಪ್ರಾಂತ್ಯಗಳು ಇಲ್ಲವೆಂಬುದು ಎಷ್ಟು ನಿಜವೋ, ಅಷ್ಟೇ ಕರ್ನಾಟಕ ಮುಂತಾದ ಪ್ರಾಂತ್ಯಗಳಿಲ್ಲದೆ ಭರತಖಂಡವಿಲ್ಲವೆಂಬುದೂ ನಿಜ !!!
ಮತ್ತಷ್ಟು ಓದು