ವಿಷಯದ ವಿವರಗಳಿಗೆ ದಾಟಿರಿ

Archive for

11
ನವೆಂ

ಕಾನೂನು Vs ಪ್ರತ್ಯೇಕತೆ – ಬದಲಾಗಬೇಕಾಗಿದ್ದು ಯಾರು ?

– ಶೈಲೇಶ್ ಕುಲ್ಕರ್ಣಿ

Jammu-Kashmirಕಾಲಕಾಲಕ್ಕೆ ಭಾರತದ ಕೆಲವೊಂದು ರಾಜ್ಯಗಳ ಆಡಳಿತಾರೂಢ ಜನಪ್ರತಿನಿಧಿಗಳೇ ಭಾರತವಿರೋಧಿ ಭಾವನೆಗಳನ್ನ ಸಾರ್ವಜನಿಕವಾಗಿ ಪ್ರದರ್ಶನಕ್ಕಿಡೋದು ಅವ್ಯಾಹತವಾಗಿ ನಡೆದುಕೊಂಡು ಬಂದಿದೆ.ಈಗ್ಗೆ ಸ್ವಲ್ಪ ಸಮಯದ ಕೆಳಗೆ ಜಮ್ಮುಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂವಿಧಾನದ ೩೭೦ನೆ ವಿಧಿ ಆ ರಾಜ್ಯದಲ್ಲಿ ಜಾರಿಗೊಂಡ ಪಕ್ಷದಲ್ಲಿ ಆ ರಾಜ್ಯ ಭಾರತದಭಾಗವಾಗಿ ಮುಂದುವರೆಯೋದಿಲ್ಲ ಅಂತ ಸಾರ್ವಜನಿಕವಾಗಿಯೇ ಹೇಳಿದ್ದರು.ಹೀಗೆ ಪ್ರತೀ ಬಾರಿ ಒಡಕಿನ ರಾಗ ಆಲಾಪಿಸಿದಾಗಲೂ ಅವರೆಲ್ಲರ ದುಃಖಕ್ಕೆ  AFSPA ನಂಥ  ಕಾನೂನನ್ನೇ  ಹೊಣೆಯಾಗಿಸೋದು ಮಾಮೂಲಿ ಸಂಗತಿ .

ಜಮ್ಮು-ಕಾಶ್ಮೀರದ ಜೊತೆಗೇ ಭಾರತದ ನೈಋತ್ಯದ ರಾಜ್ಯಗಳ(ಅಸ್ಸಾಂ, ಮಣಿಪೂರ್) ಕೆಲ ಚುನಾಯಿತ ಪ್ರತಿನಿಧಿಗಳು ತಮ್ಮ ರಾಜ್ಯಗಳಲ್ಲಿ ಭಾರತೀಯ ಸೈನ್ಯ AFSPA (ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ೧೯೫೮) ಕಾನೂನಿನ ಅಡಿಯಲ್ಲಿ ಇರೋದನ್ನ ಬಲವಾಗಿ ವಿರೋಧಿಸಿಕೊಂಡೆ ಬಂದಿದ್ದಾರೆ. ಈ ವಿಶೇಷಾಧಿಕಾರದ ಅನ್ವಯದಿಂದ ತಮ್ಮ ರಾಜ್ಯಗಳು ಸೈನ್ಯದ ಛಾಯೆಯಲ್ಲೇ ಬದುಕಬೇಕಾದ ಅನಿವಾರ್ಯಕ್ಕೆ ಸಿಲುಕಿವೆ. ಸಂಪೂರ್ಣರಾಷ್ಟ್ರವೇ ಮಿಲಿಟರಿಯ ಹಂಗಿಲ್ಲದೆ ಮನಸೋಇಚ್ಛೆ ಬಾಳ್ವೆ ನಡೆಸುತ್ತಿರುವಾಗ ಪ್ರಜಾತಂತ್ರದ ಹೆಸರಿನಡಿಯಲ್ಲಿ ಹಾಡುಹಗಲೇ ತಮ್ಮ ಸ್ವಾತಂತ್ರ್ಯಹರಣಕ್ಕೆ ಸೈನ್ಯದಬಳಕೆ ಪ್ರಜಾತಂತ್ರಕ್ಕೆ ಮತ್ತು ಮಾನವೀಯತೆಗೆ ಮಾಡಿದ ಅಪಚಾರ ಅನ್ನೋದು ಅವರ ವಾದ .
ಪರಿಸ್ಥಿತಿಯ ಲಾಭಪಡೆವ ಸೈನ್ಯ ಅಲ್ಲಿನ ಪ್ರಜೆಗಳ ಮೇಲೆ ದೌರ್ಜನ್ಯಕ್ಕೂ ಮುಂದಾಗುತ್ತದೆ ಅನ್ನೋದು ಆ ವಾದದ ಸರಣಿ. .

ಕೂಲಂಕುಶವಾಗಿ ಈ ಎಲ್ಲ ವಾದಗಳ ಮೂಲ ಕೆದಕಿದಲ್ಲಿ ಅಲ್ಲಿ ಅಡಗಿರೋದು ಕ್ಷುದ್ರರಾಜಕಾರಣವಲ್ಲದೆ ಜನಪರ ಕಾಳಜಿ ಅಥವ ಮಾನವಸಂವೇದನೆ ಖಂಡಿತ ಅಲ್ಲ ಅನ್ನೋದು ಸ್ಪಷ್ಟವಾಗಿ ಕಾಣಬಹುದು.

ಮತ್ತಷ್ಟು ಓದು »