ಆಳ್ವಾಸ್ ’ನುಡಿಸಿರಿ’ ಮತ್ತು ಪ್ರಗತಿಪರರ ’ಕಿರಿಕಿರಿ’
– ಹರಿಶ್ಚಂದ್ರ ಶೆಟ್ಟಿ
ಮೋಹನ ಆಳ್ವರ ನಾಡು ನುಡಿಯ ಕಂಪಿನ ಕನ್ನಡ ನುಡಿಸಿರಿ ಅದ್ದೂರಿಯ ಮುಕ್ತಾಯ ಕಂಡಿದೆ.ಒಬ್ಬ ವ್ಯಕ್ತಿ ತನ್ನ ಇಚ್ಛಾಶಕ್ತಿಯಿಂದ ಇಂತಹದೊಂದು ಕಾರ್ಯ ನಡೆಸುವುದು ಸಾಧ್ಯವೇ ಎನ್ನುವ ಸಾರ್ವಜನಿಕರ ಆಶ್ಚರ್ಯದ ನಡುವೆ ಕೆಲವು ಹುಳುಕಿನ ಮನಸ್ಸುಗಳು ತಮ್ಮ ವಿತಂಡ ವಾದವನ್ನು ಆಳ್ವರತ್ತ ಹರಿಸಿ ಬಿಟ್ಟಿವೆ.ಕಳೆದ ವರ್ಷ ಮೋಹನ ಆಳ್ವರಿಂದ ಸನ್ಮಾನ ಮಾಡಿಸಿಕೊಂಡು,ಶಾಲು ಹೊದಿಸಿಕೊಂಡು,ಒಟ್ಟಿಗೆ ನೋಟಿನ ದಪ್ಪ ಕಟ್ಟನ್ನು ಕಿಸೆಗೇರಿಸಿಕೊಂಡು ಹೋದ ಸಾರಸ್ವತ ಲೋಕದ ಮಹಾಶಯರೊಬ್ಬರು ನಂತರ ತಮ್ಮ ಅಸಲಿ ಬುದ್ಧಿಯ ” ಜಾತಿ” ವಾದವನ್ನು ಸಾಬೀತು ಪಡಿಸಿದ್ದರು…ಅಂತಹ ಸಾಹಿತಿಗೆ,” ಓತಿಕ್ಯಾತನಿಗೆ ಬೇಲಿ ಸಾಕ್ಷಿ ” ಎನ್ನುವಂತೆ,ಕಳೆದ ಹಲವಾರು ವರ್ಷಗಳಿಂದ ನುಡಿಸಿರಿಯ ಹೆಸರಿನಲ್ಲಿ ಕುತ್ತಿಗೆ ಮಟ್ಟ ತಿಂದು ತೇಗಿದ ಬುದ್ಧಿಜೀವಿಗಳು ಸಹಕಾರ ವಾಣಿಯನ್ನು ಒದಗಿಸಿದ್ದವು.ಈ ಸಲವೂ ಇವರುಗಳಿಗೆ ಏನೋ ಒಡಕು ಕಂಡಿದೆಯಂತೆ.ಆಳ್ವರ ಕನ್ನಡ ಮನಸ್ಸು ಪ್ರಿಯವಾಗುವ ಬದಲು ,ಅವುಗಳಿಗೆ ಎಲ್ಲೋ ಬಿದ್ದಿದ್ದ ಕೊಳಚೆ ಆಪ್ಯಾಯಮಾನವಾಗಿ ಕಂಡಿದೆ.ಜನಪದ ನೃತ್ಯಗಳೂ ಜಾತಿ ಪದ್ಧತಿಯ ಓಣಿಯಲ್ಲಿಯೇ ಸಾಗಬೇಕೆಂಬ ಇವುಗಳು ಮಾತ್ರ ಜಾತಿ ಪದ್ದತಿ ನಿವಾರಣೆಗೆ ತಾವೇನು ಘನ ಕಾರ್ಯ ಮಾಡಿದ್ದೇವೆ ಎಂದು ಹೇಳುವುದಿಲ್ಲ.ಇವರುಗಳ ಕೆಲಸ ಏನಿದ್ದರೂ ಬರವಣಿಗೆ ಮೂಲಕ ಘರ್ಷಣೆಯ ಕಿಡಿ ಹೊತ್ತಿಸುವುದು ಮತ್ತು ಆ ಮೂಲಕ ಉದರ ಪೋಷಣೆ ಮಾಡಿಕೊಳ್ಳುವುದು….