ವಿಷಯದ ವಿವರಗಳಿಗೆ ದಾಟಿರಿ

Archive for

31
ಡಿಸೆ

ಯಾನದ ಕಿಟಕಿಯಿಂದೊಂದು ಇಣುಕು ನೋಟ

ಭೈರಪ್ಪನವರ ಕಾದಂಬರಿಗಳು ವಸ್ತು ವಿಷಯದಿಂದಲೂ, ಕಥೆಯ ಗಂಭೀರ ಹಂದರದಿಂದಲೂ ಇತರರಿಗಿಂತ ಭಿನ್ನವಾಗಿರುವ ವಿಚಾರ ತಿಳಿಯದ್ದೇನಲ್ಲ. ಈ ಸರಣಿಗೆ ಮತ್ತೊಂದು ಸೇರ್ಪಡೆ ‘ಯಾನ’. ಇಂಗ್ಲೆಂಡಿನ ಸಾಹಿತ್ಯಾಸಕ್ತರು ಯಾನವನ್ನು ಓದಿ ವಿಮರ್ಶಿಸಿ ಬರೆದ ಲೇಖನಗಳ ಸರಣಿ ನಿಮ್ಮ ಮುಂದಿದೆ.

ಉಮಾ ವೆಂಕಟೇಶ್, ದಾಕ್ಷಾಯಿಣಿ, ಕೇಶವ್ ಕುಲಕರ್ಣಿ ಹಾಗೂ ಸುದರ್ಶನ ಗುರುರಾಜರಾವ್ ಬರೆದ ಇಣುಕು ನೋಟದ ಪರಿಚಯ ನಿಮಗೆ ನೀಡುತ್ತಿದ್ದೇವೆ,ಪ್ರಯಾಣದಲ್ಲಿ ಹೊರ ನೋಟದ ಅನುಭವ  ಕಣ್ಣಿಗೆ ಒಂದೇ ಆಗಿದ್ದರೂ, ಅನುಭಾವ ವಿಭಿನ್ನವೇ

 ಸುದರ್ಶನ ಗುರುರಾಜರಾವ್

ಯಾನಯಾನದಲ್ಲಿ ಬರುವ ಪ್ರಮುಖ ಪಾತ್ರಗಳಾದ ಉತ್ತರಾ (ಹೆಣ್ಣು) ಹಾಗೂ ಸುದರ್ಶನ (ಗಂಡು) ಎರಡೂ ನನಗೆ ಆತ್ಮೀಯವಾದ ಹೆಸರುಗಳೇ. ಉತ್ತರಾ ನನ್ನ ಜನ್ಮ ನಕ್ಷತ್ರದ ಹೆಸರಾದರೆ ಸುದರ್ಶನ ನನ್ನ ಹೆಸರೇ ಆಗಿದೆ. ಸ್ವನಾಮ ಪ್ರೇಮ, ಸ್ವನಾಮಾನುಕಂಪ ಹಾಗೂ ಪಕ್ಷಪಾತಗಳು ತಿಳಿಯದ್ದೇನಲ್ಲ. ಈ ಹಿನ್ನೆಲೆಯಲ್ಲಿ ಈ ಕಾದಂಬರಿಯ ಪಾತ್ರಗಳನ್ನು ನಿರೂಪಣೆಯನ್ನು ಹಾಗೂ ಕಥಾವಸ್ತುವನ್ನು ಅದಷ್ಟು ವಸ್ತುನಿಷ್ಠ ವಾಗಿ ಮಾಡಲು ಪ್ರಯತ್ನಿಸಿದ್ದೇನೆಂದು ಮೊದಲೇ ಘೋಷಿಸಿಬಿಡುತ್ತೇನೆ.

‘’ಯಾನ’’ ಭೂಮಿಯಿಂದ ಬೇರೊಂದು ಸೌರವ್ಯೂಹವನ್ನೇ ಹೊಕ್ಕು ಅಲ್ಲಿ ಜೀವಸಂಕುಲವನ್ನು ಬೆಳೆಸಬಲ್ಲ, ಪೋಷಿಸಬಲ್ಲ ಗ್ರಹವೊಂದನ್ನು ಹುಡುಕುವ ಮಾನವನ ಮಹದೋದ್ದೇಶದ ಪ್ರಯಾಣಕಥನ., ಪ್ರಯಾಣವೊಂದು ಧಿಢೀರ್ ಎಂದು ಪ್ರಾರಂಭವಾಗುವುದಿಲ್ಲವಷ್ಟೆ ; ಅದಕ್ಕೆ ತಯಾರಿ ಬೇಕು. ಆ ತಯಾರಿಯ ಹಂತದಲ್ಲಿ ಪಾತ್ರ ಪರಿಚಯಗಳಗ್ಗುವುದಲ್ಲದೆಅವರ ಜೀವನದ, ಆ ದೇಶ ಕಾಲಗಳ ವಿದ್ಯಮಾನಗಳ ಭೂಮಿಕೆ ಕಾದಂಬರಿಯಲ್ಲಿ ಸಿದ್ದಹವಾಗುತ್ತದೆ. ಕಥೆಯು ಭೂತ ವರ್ತಮಾನಗಳ ಮಧ್ಯೆ ತುಯ್ದಾಡುತ್ತಾ,ಪಾತ್ರಗಳ ಮನೋವ್ಯಾಪಾರವನ್ನು ಅವರು ನಂಬಿದ ತತ್ವಗಳ /ಮಾನಸಿಕ ಮಸೂರದ ಮೂಲಕ ಹಾಗೂ ಅವರುಗಳು ಇರುವ ದೇಶ ಕಾಲ ಧರ್ಮ ನಂಬಿಕೆಗಳ ಚೌಕಟ್ಟಿನಲ್ಲಿ ತಿಳಿಸುತ್ತಾ ಸಾಗುತ್ತದೆ. ಇಲ್ಲಿ ಅರಿವು ಮತ್ತು ನಂಬಿಕೆಗಳ ನಡುವಿನ ವ್ಯತ್ಯಾಸ ಗಮನಿಸಬೇಕು.ನಂಬಿಕೆ ಮತ್ತು ಆಯ್ಕೆಗಳ ನಡುವಿನ ತಾಕಲಟಗಳೂ ಬರುತ್ತವೆ. ಮಾನವನ ಜೀವನದ ವಿದ್ಯಮಾನಗಳು ಮತ್ತು ಅಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸರಳ ರೇಖಾತ್ಮಕವಾಗಿರದೆ ಎಡ ಬಲ ಊರ್ಧ್ವ ಹಾಗೂ ಅಧೋಮುಖಗಳಿಂದ ಬಂದು ಬಡಿಯುವ ಹಲಾವಾರು ಘಟನೆ,ಒತ್ತಡಗಳ ಸಂಕೀರ್ಣ ಉತ್ಪತ್ತಿ ಎಂಬುದು ಭೈರಪ್ಪನವರ ಎಲ್ಲ ಕಾದಂಬರಿಗಳಂತೆ ಇಲ್ಲಿಯೂ ಹಾಸು ಹೊಕ್ಕಾಗಿರುವ ಅಂಶ ;ಆದರೆ ಆಯಾಮ ಮಾತ್ರ ಬೇರೆ.

ಮೊದಲಿಗೆ ಪಾತ್ರಗಳನ್ನೂ ಕುರಿತು ನೋಡೋಣ.

ಮತ್ತಷ್ಟು ಓದು »

30
ಡಿಸೆ

ಮಳೆ

-ಗುರುರಾಜ ಕೊಡ್ಕಣಿ ಯಲ್ಲಾಪುರ

ಮಳೆಎದುರಿಗೆ ನಿ೦ತವರ ಮುಖವೂ ಕಾಣದಷ್ಟು ಗವ್ವ್ ಎನ್ನುವ ಕಗ್ಗತ್ತಲು ಆ ಮಲೆನಾಡಿನ ಕಾಡುಗಳ ಮಧ್ಯೆ. ಬೀಸುತ್ತಿರುವ ತ೦ಗಾಳಿಯ ಸದ್ದಿನ ಹೊರತಾಗಿ ಜಿರ್,ಜಿರ್,ಎನ್ನುವ
ಜೀರು೦ಡೆಗಳ ಸದ್ದು ಸಹ ಭಯ ಹುಟ್ಟಿಸುವ೦ತಹ ನೀರವ ರಾತ್ರಿ.ಕಾಡುಗಳ ನಡುವೆ ಅಲ್ಲಲ್ಲಿ ಕಾಣುವ ಹೊಲಗದ್ದೆಗಳು ಕತ್ತಲು ಹೊದ್ದು ಮಲಗಿದ೦ತೆ ಕಾಣಿಸುತ್ತಿದ್ದವು.ಆಗೊಮ್ಮೆ ಈಗೊಮ್ಮೆ ಕೇಳಿಸುತ್ತಿದ್ದ ಗುಡುಗಿನ ಸದ್ದು ರಾಕ್ಷಸ ಘರ್ಜನೆಯ೦ತೇ ಬೆದರಿಸುತ್ತಿತ್ತು.ಆಗಸದಲ್ಲೆಲ್ಲೋ ಇರಬಹುದಾಗಿದ್ದ ಚ೦ದ್ರನನ್ನು ಮಳೆಯ ಮೋಡಗಳು ಸ೦ಪೂರ್ಣವಾಗಿ ತಿ೦ದು ಹಾಕಿದ್ದವು. ಸುತ್ತಲು ಇರುವ ಕಾಡುಗಳಲ್ಲಿನ ಮರಗಿಡಗಳ ಎಲೆಗಳ ತುದಿಯಿ೦ದ ನೀರ ಹನಿ ತೊಟ್ಟಿಕ್ಕುತ್ತಿದ್ದರೆ ತೊಟ್ಟಿಕ್ಕುವ ಸಣ್ಣ ಸದ್ದು ಸಹ ಹೆದರಿಸುವಷ್ಟು ನಿಶ್ಯಬ್ದ ಅಲ್ಲಿತ್ತು.ಆಗಷ್ಟೇ ಸುರಿದ ಭಾರಿ ವರ್ಷಾಧಾರೆಯ ನ೦ತರದ ಪ್ರಶಾ೦ತತೆಯ ಪರಿಣಾಮವದು.ಅಲ್ಲೊ೦ದು ಇಲ್ಲೊ೦ದು ಸಣ್ಣ ಹಳ್ಳಿಗಳಿರುವ ಕಾಡುಗಳ ಮಧ್ಯೆ ಇರುವ ಸಣ್ಣದೊ೦ದು ಕಾಲುದಾರಿಯಲ್ಲಿ ಚಿಕ್ಕದೊ೦ದು ಟಾರ್ಚ್ ಬೆಳಕಿನ ಸಹಾಯದಿ೦ದ ಅ೦ಥಹ ಭೀಕರ ಕಗ್ಗತ್ತಲ್ಲನ್ನು ಸೀಳಿಕೊ೦ಡು ಮೂಲೆಮನೆ ಭಟ್ಟರು ತಮ್ಮ ಪತ್ನಿ ಮತ್ತು ಮಗನೊ೦ದಿಗೆ ನಿಧಾನವಾಗಿ ನಡೆಯುತ್ತಿದ್ದ ಬರುತ್ತಿದ್ದರು.

“ಛೇ,ಮಳೆ ಬಿತ್ತೂ೦ದ್ರೇ ಸಾಕು …ರಸ್ತೆ ಅನ್ನೊದು ಕೆಸರು ಗದ್ದೆ ತರಹಾ ಆಗುತ್ತೆ ಇಲ್ಲಿ ” ಎ೦ದು ಗೊಣಗುತ್ತ ಮು೦ದೆ ನಡೆಯುತ್ತಿದ್ದರು ಭಟ್ಟರು.

ಮತ್ತಷ್ಟು ಓದು »

29
ಡಿಸೆ

ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?

– ರಾಕೇಶ್ ಶೆಟ್ಟಿ

Conversionಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಜಾಹೀರಾತು ಎಂದುಕೊಂಡೆ.ಆದರೆ,ಇತ್ತೀಚೆಗೆ ದಿನ ಪತ್ರಿಕೆಗಳ ಮುಖಪುಟದಲ್ಲೂ ದೊಡ್ಡದಾಗಿ ಇದೇ ಜಾಹೀರಾತು “ಅನುಭವಿಸಿ ಬದಲಾಯಿಸುವ ಶಕ್ತಿ – ೧೫ ಕಥೆಗಳು ನಿಮ್ಮ ಜೀವನವನ್ನು ಬದಲಾಯಿಸುವುದು” ಎಂದು ಕಾಣಿಸಲಾರಂಭಿಸಿತು. ಪ್ರತಿದಿನ ಜಾಹೀರಾತು ಕೊಡುವಂತದ್ದು ಈ ಪುಸ್ತಕದಲ್ಲಿ ಅಂತದ್ದೇನಿದೆ ಎಂದು ಓದುವ ಕೂತುಹಲವಾಗಿ ಓದಿದೆ.ಮೂರ್ನಾಲ್ಕು ಪುಟ ಓದಿದಂತೆ ಪುಸ್ತಕದ ಮುಂದಿನ ಪುಟಗಳಲ್ಲಿ ಏನಿರಬಹುದು ಮತ್ತು ಈ ಪುಸ್ತಕ ಓದಿದವರು ಏನಾಗಿ ಬದಲಾಗಬೇಕು ಎಂಬ ಉದ್ದೇಶವಿದೆಯೆಂದು ಖುದ್ದು ಅನುಭವಿಸಿದೆ!

ಆ ಪುಸ್ತಕದಲ್ಲಿ ಬಾಲಿವುಡ್ ನಟ ಜಾನಿಲಿವರ್,ನಟಿ ನಗ್ಮಾ ಇನ್ನೂ ಹಲವರು ತಮ್ಮ ತಮ್ಮ ಕತೆಗಳನ್ನು ಹೇಳಿ ಕೊಂಡಿದ್ದಾರೆ.ಈ ಪುಸ್ತಕದ ಸರಳ ಸಾರಾಂಶವೇನೆಂದರೆ,”ಬೈಬಲ್ ಮತ್ತು ಜೀಸಸ್” ಮಾತ್ರ ಸತ್ಯ ಮತ್ತು ಅವು ಮಾತ್ರವೇ “ಪಾಪಿ”ಗಳಾದ ಮನುಷ್ಯ ಬದುಕಿನ ಬಿಡುಗಡೆಯ ಹಾದಿ ಎಂಬುದು!.ಅದೊಂದೇ ಮಾತ್ರ ಸತ್ಯವೆಂದಾದರೆ,ಉಳಿದ ರಿಲಿಜನ್ನುಗಳು, ಸಂಪ್ರದಾಯಗಳು ಮತ್ತು ಭಿನ್ನ ಹಾದಿಗಳೆಲ್ಲವೂ ಸುಳ್ಳು ಅಂತಾಯಿತಲ್ಲ! ಈ ಪುಸ್ತಕದ ಉದ್ದೇಶವನ್ನು ಇನ್ನೂ ಸರಳ ಮಾಡುವುದಾದರೆ ಅಥವಾ ಸಾಮಾನ್ಯಜನರ ಭಾಷೆಯಲ್ಲಿ ಹೇಳುವುದಾದರೆ,ಜನರನ್ನು ಕ್ರಿಸ್ತ ಮತಕ್ಕೆ ಬನ್ನಿ ಎಂದು ಕರೆಯುವ ಮತಾಂತರದ ಹೊಸ ತಂತ್ರವಷ್ಟೇ.ಈ ಬಗ್ಗೆ ಯಾವ ಮೀಡಿಯಾಗಳು,ಯಾವ ಸೆಕ್ಯುಲರ್ ನಾಯಕನೂ ಅಬ್ಬರಿಸಿ ಬೊಬ್ಬಿರಿಯಲಿಲ್ಲ,ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ಮೊಸಳೆ ಕಣ್ಣೀರೂ ಸುರಿಸಲಿಲ್ಲ.

ಮತ್ತಷ್ಟು ಓದು »

26
ಡಿಸೆ

ಭಗವದ್ಗೀತೆಯ ಕುರಿತ ಪರಕೀಯ ನಿರೂಪಣೆಗಳು/ನಿರ್ಣಯಗಳು…!

-ಡಾ. ಪ್ರವೀಣ್ ಟಿ. ಎಲ್.

ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ

ಭಗವದ್ಗೀತೆಭಗವದ್ಗೀತೆಯು ಸದಾ ಚರ್ಚೆಯಲ್ಲಿರುವ ವಸ್ತುವಿಷಯ. ಅದನ್ನು ಶಾಲೆಯಲ್ಲಿ ಭೋದಿಸುವ ಸಲುವಾಗಿ ಕಳೆದ ಬಾರಿ ಚರ್ಚೆಯಾಗಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ಅದನ್ನೊಂದು ರಾಷ್ಟ್ರೀಯ ಗ್ರಂಥ ಮಾಡುವ ಆಶಯ ವ್ಯಕ್ತಪಡಿಸಿದ ಕಾರಣಕ್ಕಾಗಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಹಲವು ಲೇಖನಗಳು ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಲೇ ಇವೆ. ಮುಖ್ಯವಾಗಿ ಪ್ರಜಾವಣಿಯ ‘ಸಂಗತ’ದಲ್ಲಿ ಪ್ರಕಟವಾದ ಪ್ರೊ. ಭಗವಾನ್‍ರ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಈ ಬರಹ. ಹಾಗೆಂದು ಭಗವದ್ಗೀತೆ ರಾಷ್ಟೀಯ/ಧರ್ಮ ಗ್ರಂಥವಾಗಬೇಕೆಂಬ ಆಶಯ ನನ್ನದಲ್ಲ. ಬದಲಾಗಿ ‘ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸುವ ಒಂದು ಅಪಾಯಕಾರಿ ಕೃತಿ’ ಎನ್ನುವ ಹಾಗೂ ‘ಧರ್ಮಗ್ರಂಥ’ ಮಾಡಬೇಕೆನ್ನುವ ಎರಡೂ ವಾದಗಳು ಹೇಗೆ ನಮಗೆ ಪರಕೀಯವಾಗಿವೆ ಎಂಬುದನ್ನು ತೋರಿಸುವುದು.

ಲೇಖಕರು ತಮ್ಮ ವಾದದ ಸಮರ್ಥನೆಗೆ ನೀಡಿದ ಅಂಶಗಳು ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸಿದೆ ಎಂಬುದನ್ನು ಸಾಭೀತುಪಡಿಸಲು ಯಶಸ್ವಿಯಾಗಿಲ್ಲ.

ಮತ್ತಷ್ಟು ಓದು »

23
ಡಿಸೆ

ಜಾತ್ಯತೀತರಿಗೆ ಈವರೆಗಿನ ಮತಾಂತರವೇಕೆ ಕಾಣಲಿಲ್ಲ?

ಡ್ಯಾನಿ ಪಿರೇರಾ

images
ಭಾರತದ ರಾಷ್ಟ್ರೀಯ ಜೀವನದಲ್ಲಿ ಅತಿ ದೀರ್ಘಕಾಲದಿಂದ ಘಾಸಿಗೊಳಿಸುತ್ತಿರುವ ಸಮಸ್ಯೆಗಳಲ್ಲಿ ಮತಾಂತರವೂ ಒಂದು. ಸೆಮೆಟಿಕ್ ಮೂಲವೆಂದು ಹೇಳಲಾಗುವ ಇಸ್ಲಾಂ ಮತ್ತು ಕ್ರೈಸ್ತ ಮತಗಳಲ್ಲಿ ನಡೆಯುತ್ತಿರುವ ಮತಾಂತರದ ಚಟುವಟಿಕೆಗಳು ನೂರಾರು ವರ್ಷಗಳಿಂದ ಈ ಸಮಸ್ಯೆ ಭಾರತವನ್ನು ಕಾಡುತ್ತಲೇ ಬಂದಿದೆ. ಇದಕ್ಕೆ ಬಲಿಯಾದವರ ಸಂಖ್ಯೆ ಭಾರಿಯೇ ಎನ್ನಬಹುದು. ಉತ್ತರ ಪ್ರದೇಶದಲ್ಲಿ 200 ಜನ 30 ವರ್ಷಗಳ ಹಿಂದೆ ಇಸ್ಲಾಮಿಗೆ ಮತಾಂತರಗೊಂಡು ನಂತರ ಹಿಂದೂ ಸಂಘಟನೆಗಳ ಪ್ರಯತ್ನದ ತರುವಾಯ ಮರಳಿ ಮಾತೃ ಧರ್ಮಕ್ಕೆ ಬಂದರೆ ದೇಶದ ಸೆಕ್ಯುಲರ್ ವಲಯಗಳಲ್ಲಿ ಚರ್ಚೆಯಾಗುತ್ತದೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಸ್ತಿತ್ವಕ್ಕೆ ಹೋರಾಡ ಬೇಕಾದ ಅನಿವಾರ್ಯತೆ ಉಂಟಾಗಿರುವ ರಾಜಕೀಯ ನಾಯಕರಿಗೆ ಮುಸ್ಲಿಮರು ಹಿಂದೂ ಧರ್ಮಕ್ಕೆ ಬಂದಿರುವುದು ಇವರ ಹೊಟ್ಟೆ ತೊಳೆಸಿಕೊಳ್ಳಲು ಶುರುವಾಗಿರುವ ಸಂಗತಿ ಗೋಚರವಾಗುತ್ತಿದೆ. ಹಾಗಾಗಿ ಕೇವಲ ಇನ್ನೂರು ಜನ ಮುಸ್ಲಿಮರು ಹಿಂದು ಧರ್ಮಕ್ಕೆ ಮತಾಂತರಗೊಳಿಸಿರುವುದರಿಂದ ಧಾರ್ಮಿಕ ಸಾಮರಸ್ಯ ಹಾಳಾಗುತ್ತದೆ ಎಂದು ಅರಚಲು ಶುರು ಮಾಡಿದ್ದಾರೆ. ಇಲ್ಲಿ ಒಂದು ವಿಷಯ ಹೇಳಲೇಬೇಕು. ಅದೆಂದರೆ ಇವರು ಯಾವ ಸಾಮರಸ್ಯದ ಬಗ್ಗೆ ಮಾತಾಡುತ್ತಿದ್ದಾರೆ ಎಂಬುದು!

ಹಾಗೆ ಹೇಳುವುದಾದರೆ ಮತಾಂತರ ಪ್ರಕ್ರಿಯೆಯೇ ಆತ್ಮಘಾತುಕತನದ್ದು. ‘ಮತಾಂತರ’ ಎನ್ನುವ ಶಬ್ದವೇ ಒಂದು ಧರ್ಮ ಮತ್ತೊಂದು ಧರ್ಮವನ್ನು ಕೆಣಕುವ ಅಥವಾ ಸಾಮರಸ್ಯದ ಬುಡಕ್ಕೆ ಬೀಳುವ ಕೊಡಲಿ ಪಟ್ಟು. ಒಬ್ಬ ವ್ಯಕ್ತಿ ತಾನು ಯಾವ ಧರ್ಮವನ್ನು ಆಚರಿಸಬೇಕು ಆಥವಾ ಬಿಡಬೇಕು ಎನ್ನು ತೀರ್ಮಾನ ಆತನದ್ದೇ. ಆ ಹಕ್ಕನ್ನು ನಮ್ಮ ದೇಶದ ಸಂವಿಧಾನ ಕೊಟ್ಟಿದೆ ನಿಜ. ಆದರೆ ಮತಾಂತರಿಸುವ ಸಮಾಜ ಅದು ಕ್ರೈಸ್ತ, ಮುಸ್ಲಿಂ ಅಥವಾ ಹಿಂದೂಗಳಾಗಲಿ, ಅವರವರ ಮತಗ್ರಂಥಗಳನ್ನು ಕೊಟ್ಟು ಇದನ್ನು ಓದು ಇದರಿಂದ ನಿನ್ನ ಮನಪರಿವರ್ತನೆಯಾದರೆ ನನ್ನ ಮತಕ್ಕೆ ಬಾ ಎಂದು ಹೇಳುವುದಿಲ್ಲ. ಹಾಗೆ ಮಾಡಿದ್ದರೆ ಖಂಡಿತ ಯಾರೂ ಆಕ್ಷೇಪಿಸುವುದಿಲ್ಲ. ಆದರೆ ಈ ಮತಾಂತರ ಪ್ರಕ್ರಿಯೆಯಲ್ಲಿ ಒಟ್ಟಾರೆ ಒಂದು ಧರ್ಮದ ನಂಬಿಕೆಗಳನ್ನು ಹೀಯಾಳಿಸಿ ತನ್ನ ಮತ ಶ್ರೇಷ್ಠ ಎನ್ನುವ ಭ್ರಮೆಯೊಂದಿಗೆ ಅಸಹಿಷ್ಣುತೆ ಬೆಳೆಸಲಾಗುತ್ತದೆ, ಜೊತೆಗೆ ಆಸೆ-ಆಮಿಷಗಳು! ಉತ್ತರ ಪ್ರದೇಶದಲ್ಲಿ ಮುಸ್ಲಿಂ ಕಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದನ್ನು ರಾಷ್ಟ್ರವ್ಯಾಪಿ ಚರ್ಚೆ ಮಾಡುವ ಸೆಕ್ಯುಲರ್ ನಾಯಕರು ಇದೇ ಮತಾಂತರಕ್ಕೆ ಲೆಕ್ಕವಿಲ್ಲದಷ್ಟು ಹಣ ಸುರಿಯುತ್ತಿರುವ ಕ್ರೈಸ್ತ ಮಿಶನರಿಗಳ ಮತ್ತು ಜಿಹಾದ್ ಹೆಸರಿನಲ್ಲಿ ನಡೆಯುವ ಮತಾಂತರದ ಬಗ್ಗೆ ಏಕೆ ಚಕಾರವೆತ್ತುವುದಿಲ್ಲ?! ಇದೇ ಮುಖವಾಡದ ಸೆಕ್ಯುಲರಿಷ್ಟರು ಹಿಂದೂ ಧರ್ಮೀಯರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುತ್ತಿರುವುದನ್ನೇಕೆ ಪ್ರಶ್ನಿಸುತ್ತಿಲ್ಲ! ಇಷ್ಟಕ್ಕೂ ಈ ಮಿಶನರಿಗಳು ಮಾಡುತ್ತಿರುವುದು ಧರ್ಮ ಬೋಧನೆಯಲ್ಲ! ತಮ್ಮ ಮತದ ಜನಸಂಖ್ಯೆ ಹೆಚ್ಚಳವಷ್ಟೇ. 2011ರ ಒಂದು ವರದಿಯ ಪ್ರಕಾರ ಪ್ರತಿವರ್ಷ ಹಿಂದುಗಳನ್ನು ಮತಾಂತರಿಸಲು 10,500ಕೋಟಿ ರೂ. ಹಣ ಅಮೆರಿಕಾ, ಜರ್ಮನಿ, ಯುಕೆ, ನೆದರಲ್ಯಾಂಡ್,ಸ್ಪೇನ್ ಇಟಲಿ ಮುಂತಾದ ಕಡೆಗಳಿಂದ ಹಣ ಸರಬರಾಜಗುತ್ತದೆ ಎಂದು ಹೇಳಲಾಗುತ್ತದೆ. ಸರ್ಕಾರವೇ ಹೇಳುವ ವರದಿಯಂತೆ ಕೆಲವು ಎನ್ ಜಿ ಒ ಗಳಿಗೆ ಕ್ರೈಸ್ತ ಮಿಶನರಿಗಳೇ ಅವರ ಖಾತೆಗೆ ಹಣ ಜಮೇಮಾಡಿವೆಯಂತೆ. ವರದಿಯಂತೆ ಮತಾಂತರಿಯು ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿಗಳಿಗೆ ಹೇಳಿದ್ದೇನೆಂದರೆ ಹಿಂದಿನ ಸರ್ಕಾರಗಳು ಅನುಸರಿಸಿದ ಕುರುಡು ನೀತಿಯು ಇದನ್ನೆಲ್ಲ ಮುಚ್ಚಿ ಹಾಕಿವೆ. ಇಲ್ಲಿ ರಾಜಕಾರಣಿಗಳ ಬಾಯಿ ಮುಚ್ಚಿಕೊಂಡಿರುವಂತೆ ಅವರ ಬಾಯಿಗೆ ಹಣ ಹಾಕಲಾಗುತ್ತದೆಯಂತೆ. ಬಲವಂತದ ಮತಾಂತರ ಶಿಕ್ಷಾರ್ಹ ಅಪರಾಧವಾಗಿರುವುದರಂದ ಬಾಯಿ ಮುಚ್ಚಿಕೊಂಡಿರಲು ಭಾರಿ ಮೊತ್ತವನ್ನು ವ್ಯಯಮಾಡಲಾಗುತ್ತದೆಯಂತೆ. ಆ ಐ.ಬಿ.ಅಧಿಕಾರಿ ಹೇಳುವಂತೆ- ‘ಸಾವಿರದಲ್ಲೊಬ್ಬ ಈ ಆಮಿಷದ ಮತಾಂತರದ ಬಗ್ಗೆ ದೂರು ನೀಡಲು ಬರುತ್ತಾನೆ. ಈ ಮಿಶನರಿಗಳು ಭಾರಿ ಹಣ ಬಳಸಿ ಅವರ ಬಾಯಿ ಮುಚ್ಚಿಸುತ್ತವೆ’ ಎಂದು. ಹಾಗಾದರೆ ಇದರಿಂದ ಸಮರಸ್ಯಕ್ಕೆ ಧಕ್ಕೆ ಬರುವುದಿಲ್ಲವೇ? ಇದೊಂದು ಜಾತ್ಯತೀತರ ಇಬ್ಬಗೆ ನೀತಿ ಎನ್ನುವುದು ಒಂದಷ್ಟು ವಿವೇಚನೆ ಇರುವಂತರಗೆ ಖಂಡಿತ ಅರ್ಥವಾಗುತ್ತದೆ ಎನ್ನುವಾಗ ಈ ಆಕ್ಷೇಪದ ಹಿಂದೆ ಒಂದಷ್ಟು ಹೊಲಸು ರಾಜಕಾರಣದ ವಾಸನೆಯಿದೆ ಎಂದೆನಿಸದಿರದು.

ಮತ್ತಷ್ಟು ಓದು »

19
ಡಿಸೆ

ಸಾಧನೆಗಳ ನ೦ತರವೂ ಸೃಷ್ಟಿಶಕ್ತಿಯೆದುರು ನಾವು ಚಿಕ್ಕವರೇ ಅಲ್ಲವೇ..?

– ಗುರುರಾಜ್ ಕೊಡ್ಕಣಿ

entropyನಿಮಗೆ ನೊಬೆಲ್ ಪ್ರಶಸ್ತಿಗಳ ಬಗ್ಗೆ ಗೊತ್ತಿರಬಹುದು.ಭೌತಶಾಸ್ತ್ರ,ರಸಾಯನಶಾಸ್ತ್ರ ,ವೈದ್ಯಕೀಯ, ಶಾ೦ತಿ,ಸಾಹಿತ್ಯ ಮತ್ತು ಅರ್ಥಶಾಸ್ತ್ರದ ಕ್ಷೇತ್ರಗಳಲ್ಲಿ ಗಮನಾರ್ಹ
ಸಾಧನೆಗಳನ್ನು ಮಾಡಿದ ಸಾಧಕರನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿ ವಿಶ್ವದ ಅತ್ಯ೦ತ ಪ್ರತಿಷ್ಠಿತ ಪ್ರಶಸ್ತಿ ಎನ್ನುವ ಹೆಗ್ಗಳಿಕೆಯನ್ನು ಹೊ೦ದಿದೆ.ವಿಶ್ವದ ಅತ್ಯುನ್ನತ ಶಾ೦ತಿ
ಗೌರವ ಪ್ರಶಸ್ತಿಯನ್ನು ಗೆದ್ದುಕೊ೦ಡ ಕೀರ್ತಿ ಈ ಬಾರಿ ಭಾರತಿಯನೊಬ್ಬನ ಪಾಲಾಯಿತು ಎನ್ನುವುದು ವಿಶೇಷ.ಮಕ್ಕಳ ಹಕ್ಕುಗಳ ಪರ ಅವಿರತ ಹೋರಾಟ ನಡೆಸುತ್ತಿರುವ
ಕೈಲಾಶ್ ಸತ್ಯಾರ್ಥಿ,ಪಾಕಿಸ್ತಾನದ ಹದಿನೇಳರ ಬಾಲಕಿ ಮಲಾಲಾ ಯೂಸುಫ್ ಝೈಯ ಜೊತೆಗೆ ಜ೦ಟಿಯಾಗಿ ನೊಬೆಲ್ ಶಾ೦ತಿ ಪ್ರಶಸ್ತಿಯನ್ನು ಹ೦ಚಿಕೊ೦ಡರು.ಸಾಹಿತ್ಯ
ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಪ್ರಶಸ್ತಿಯನ್ನು ಫ್ರಾನ್ಸ್ ದೇಶದ ಸಾಹಿತಿ ಪ್ಯಾಟ್ರಿಕ್ ಮೊಡಿಯಾನೊ ಗೆದ್ದುಕೊ೦ಡರು.ಆ ಮೂಲಕ ಹದಿನೈದನೇಯ ಬಾರಿ ಸಾಹಿತ್ಯಕ್ಕಾಗಿ
ನೊಬೆಲ್ ಪ್ರಶಸ್ತಿಯನ್ನು ಗಳಿಸಿಕೊ೦ಡ ಫ್ರೆ೦ಚ್ ಸಾಹಿತ್ಯ,ವಿಶ್ವಸ್ತರದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿತು.ಮಿದುಳಿನ ಆ೦ತರಿಕ ಸ೦ಚಾರ ಮಾರ್ಗದರ್ಶನ
ವ್ಯವಸ್ಥೆಯ ನಿಗೂಢ ಕಾರ್ಯವೈಖರಿ ಕುರಿತ ಸ೦ಶೋಧನೆಗೆ ಅಮೇರಿಕಾದ ವಿಜ್ನಾನಿಯಾಗಿರುವ ಜಾನ್ ಒ ಕೀಫ್ ರವರೊ೦ದಿಗೆ ಜ೦ಟಿಯಾಗಿ ವೈದ್ಯಕೀಯ ಕ್ಷೇತ್ರದ ನೊಬೆಲ್
ಪಾರಿತೋಷಕವನ್ನು ಹ೦ಚಿಕೊ೦ಡವರು ನಾರ್ವೆಯ ಎಡ್ವರ್ಡ್ ಮೊಸೆರ್ ಹಾಗೂ ಮೇಬ್ರಿಟ್ ಮೊಸೆರ್ ಎನ್ನುವ ವಿಜ್ನಾನಿ ದ೦ಪತಿಗಳು.’ಇನ್ನರ್ ಜಿಪಿಎಸ್’ ಎ೦ದು
ಇ೦ಗ್ಲೀಷಿನಲ್ಲಿ ಕರೆಯಲ್ಪಡುವ ನರವಿಜ್ನಾನ ಲೋಕದ ಈ ಮಹೋನ್ನತವಾದ ಸಾಧನೆಯ ಕುರಿತಾದ ಕೆಲವು ರೋಚಕ ವಿಷಯಗಳನ್ನು ಇ೦ದು ನಿಮ್ಮಮು೦ದೆ
ಹ೦ಚಿಕೊಳ್ಳಬೇಕೆನಿಸಿದೆ.
ಮತ್ತಷ್ಟು ಓದು »

18
ಡಿಸೆ

ಗೀತೆ ಅರ್ಥೈಸಿಕೊಳ್ಳಲು ತಯಾರಿಲ್ಲದವರ ವ್ಯರ್ಥ ವಿರೋಧ

– ಡಾ. ಬಿ.ಕೆ ಸುರೇಶ್,ಮಂಡ್ಯ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥ ಮಾಡಬೇಕೆಂಬ ಪರ ವಿರೋಧದ ವಿಮರ್ಶೆಗಳಲ್ಲಿ “ದಾಯಾದಿಗಳ ಕಥನ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂದು ವಿಶ್ಲೇಷಿಸಿರುವ ಶ್ರೀ ವೆಂಕಟೇಶ್ ಕೆ ಜನಾದ್ರಿ ಅವರ ಆಲೋಚನೆ ವಿಚಿತ್ರವಾಗಿದೆ. ಕುರುಕ್ಷೇತ್ರ ಕದನದಲ್ಲಿ ಬುದ್ದ, ಕ್ರಿಸ್ತ, ಬಸವಣ್ಣ, ಗಾಂಧೀಜಿ ಮೊದಲಾದವರನ್ನೆಲ್ಲಾ ಎಳೆದು ತಂದು ಅವರೆಲ್ಲಾ ಇದ್ದಿದ್ದರೆ ಏನೇನು ಆಡುತ್ತಿದ್ದರು? ಏನೇನು ಸಂಭವಿಸುತ್ತಿತ್ತು? ಎಂಬುದನ್ನು ತಿಳಿಸಿದ್ದಾರೆ. ಖಂಡಿತವಾಗಿಯೂ ಕೃಷ್ಣನನ್ನು ಹೊರತುಪಡಿಸಿ ಬೇರೆ ಯಾರೇ ಇದ್ದಿದ್ದರೂ ಭಗವದ್ಗೀತೆ ಹುಟ್ಟುತ್ತಿರಲಿಲ್ಲ. ಅರ್ಜುನ ಉಳಿಯುತ್ತಲೂ ಇರಲಿಲ್ಲ. ಮಹಾಭಾರತದ ಅಸ್ತಿತ್ವವೇ ಇರುತ್ತಿರಲಿಲ್ಲ. ಗೀತೆ ಮತ್ತು ಕೃಷ್ಣನ ಮಹತ್ತ್ವ ಇರುವುದೇ ಅಲ್ಲಿ. ಭಗವದ್ಗೀತೆಯನ್ನು ಏನಕೇನ ವಿರೋಧಿಸಲೇ ಬೇಕೆಂಬ ಒಂದೇ ಒಂದು ಕಾರಣಕ್ಕೆ ಲೇಖಕರು ಕಾಲಧರ್ಮಕ್ಕನುಗುಣವಾಗಿ ಮಹಾಪುರುಷರು ಸಮಾಜವನ್ನು ಉದ್ದರಿಸಿದ್ದ ಸಂಗತಿಯನ್ನು ಮರೆತಿದ್ದಾರೆ. ಬುದ್ದನ ಕಾಲ ಮತ್ತು ಕಾಲಧರ್ಮವೇ ಬೇರೆ ಮತ್ತು ಬಸವಣ್ಣ ಕಾಲ ಮತ್ತು ಕಾಲಧರ್ಮವೇ ಬೇರೆ ಎಂಬ ಸಂಗತಿಯನ್ನು ಅವರು ಮರೆತಿದ್ದಾರೆ ಅಥವಾ ಮರೆತಂತೆ ನಟಿಸಿದ್ದಾರೆ. ಮಹಾಭಾರತ ಕಾಲದಲ್ಲಿ ಧರ್ಮವನ್ನು(ಪೂಜಾ ವಿಧಾನ ಎಂದು ಅರ್ಥೈಸಿಕೊಳ್ಳಬಾರದು) ಪ್ರತಿಪಾದನೆ ಮಾಡಬೇಕಾದ ವಿಧಾನ ಕೃಷ್ಣನದ್ದಾದರೆ ಬುದ್ದನ ಕಾಲದಲ್ಲಿ ಅದರ ವಿಧಾನ ಭೀನ್ನವೇ ಆಗಿರುತ್ತದಲ್ಲಾ. ನಮ್ಮ ಕಾಲದಲ್ಲಿ ಸ್ಲೇಟು ಹಿಡಿದು ಶಾಲೆಹೋಗುತ್ತಿದ್ದೆವು. ಈಗ ಮಕ್ಕಳು ಟ್ಯಾಬ್ಲಟ್ ಹಿಡಿದು ಹೋಗಲಾಗುತ್ತಿದೆ. ಹಾಗಾಗಿ ಸ್ಲೇಟೇ ಸರಿ ಇಲ್ಲ ಎನ್ನಲಾಗುತ್ತದೆಯೇ? ಬುದ್ದ ಮತ್ತು ಕೃಷ್ಣ ಇಬ್ಬರನ್ನೂ ಅವತಾರಿ ಪುರುಷರು ಎನ್ನುವ ನೆಲದಲ್ಲಿ ಅವೆರಡೂ ವಿಧಾನಗಳನ್ನು ನಮ್ಮ ದೇಶ ಒಪ್ಪಿದೆ. ಒಪ್ಪದೇ ಇರುವ ಮಾನಸಿಕತೆ ನಮ್ಮಲ್ಲಿ ಆರಂಭವಾಗಿದ್ದು ಕಮ್ಯುನಿಷ್ಟ ಚಿಂತನೆ ಸಮಾಜದಲ್ಲಿ ಪ್ರಚಾರಕ್ಕೆ ಬಂದ ಮೇಲಷ್ಟೆ. ತಮ್ಮ ಮೂಗಿನ ನೇರಕ್ಕೆ ವಾದಗಳನ್ನು ಮಂಡಿಸುವ ಇಂಥ ವಿಧಾನಗಳು ಪ್ರಚಲಿತಕ್ಕೆ ಬಂದಿರುವುದೂ ಕೂಡ ಕಮ್ಯುನಿಷ್ಟ್ ಚಿಂತನೆಯ ಪ್ರಚಾರದ ತರುವಾಯ.

ಮತ್ತಷ್ಟು ಓದು »

17
ಡಿಸೆ

ಭಾರತೀಯ ಸಂಸ್ಕೃತಿ,ಪರಂಪರೆಯ ಚೇತನವಾದ ಭಗವದ್ಗೀತೆ, ಕೇವಲ ದಾಯಾದಿಗಳ ಕಲಹವೇ..?

– ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ

ಭಗವದ್ಗೀತೆಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವನ್ನಾಗಿ ಘೋಷಣೆ ಮಾಡುವ ಬಗ್ಗೆ ಪ್ರಸ್ತಾಪಿತವಾದ ಹಿನ್ನೆಲೆಯಲ್ಲಿ ದಿನಾಂಕ ೧೨-೧೨-೨೦೧೪ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ “ದಾಯಾದಿಗಳ ಕಲಹ ರಾಷ್ಟ್ರೀಯ ಗ್ರಂಥವಾಗಬೇಕೆ?” ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನವೊಂದು ಪ್ರಕಟವಾಗಿತ್ತು.

ಭಗವದ್ಗೀತೆಯ ವ್ಯಾಪ್ತಿಯ ಬಗ್ಗೆ, ಮಹತ್ವದ ಬಗ್ಗೆ ಸೂಕ್ತವಾದ ಅರಿವು ಇಲ್ಲದೇ ಬರೆದಂತಹ ಈ ಲೇಖನಕ್ಕೆ ಪ್ರತಿಕ್ರಿಯೆ ನೀಡುವ ನಿಟ್ಟಿನಲ್ಲಿ ಈ ಕೆಳಗಿನ ಲೇಖನವನ್ನು ಬರೆಯಲಾಗಿದೆ.

—————————————————————————————————-

“ಭಗವದ್ಗೀತೆಯನ್ನು ಅಭ್ಯಸಿಸಿ, ಭಗವಂತನ ಈ ಸೃಷ್ಠಿಯ ಪರಿಕಲ್ಪನೆಯನ್ನು ತಿಳಿದ ಅರಿವಿನ ಮುಂದೆ ಜಗತ್ತಿನಲ್ಲಿ ಅಸ್ಥಿತ್ವದಲ್ಲಿರುವ ಸಮಸ್ತ ಅಂಶಗಳು ಗೌಣವೆನಿಸುತ್ತವೆ” – ಆಲ್ಬರ್ಟ್ ಐನ್‌ಸ್ಟೈನ್.

“ಜೀವನದಲ್ಲಿ ಸಂದೇಹಗಳು ನನ್ನ ಕಾಡಿದಾಗ, ದುಃಖ, ಭ್ರಮನಿರಸನಗಳು ಎದುರಾದಾಗ, ಯಾವುದೇ ಆಶಾಕಿರಣಗಳು ಗೋಚರಿಸದಿದ್ದಾಗ, ಭಗವದ್ಗೀತೆಯ ಕಡೆ ನಾನು ಮುಖಮಾಡುತ್ತೇನೆ, ಮರುಕ್ಷಣ ದುಃಖ ದುಮ್ಮಾನಗಳು ಕರಗಿ, ಮನಸ್ಸಿನನಲ್ಲಿ ವಿಶ್ವಾಸದ ಮಂದಹಾಸ ಮೂಡುತ್ತದೆ. ಭಗವದ್ಗೀತೆಯನ್ನು ಧ್ಯಾನಿಸುವ ವ್ಯಕ್ತಿಯು ನಿರಂತರ ಸುಖಿಯಾಗುತ್ತಾನೆ, ಪ್ರತಿನಿತ್ಯವೂ ಜೀವನದ ಹೊಸ ಹೊಸ ಅರ್ಥಗಳನ್ನು ತಿಳಿಯುತ್ತಾನೆ” – ಮಹಾತ್ಮಾ ಗಾಂಧಿ.

ಮತ್ತಷ್ಟು ಓದು »

15
ಡಿಸೆ

ಚೀಟಿ ಪುರಾಣ…!!!

– ಭರತೇಶ ಅಲಸಂಡೆಮಜಲು 
ನೆನಪುಗಳುಹೌದು ಶಾಲೆಯೆಂದರೆ ಅಲ್ಲಿ ಮದುವೆಗೆ ಬಣ್ಣದ ಕಾಗದದ ತೋರಣ ಕಟ್ಟಿದಂತೆ ಸಾಲು ಸಾಲು ಪರೀಕ್ಷೆಗಳು,ಕಿರು ಪರೀಕ್ಷೆ, ಮಧ್ಯ ವಾರ್ಷಿಕ, ವಾರ್ಷಿಕ, ಸೆಮಿಸ್ಟರ್, ಮರುಪರೀಕ್ಷೆ, ಸಿದ್ದತಾ ಪರೀಕ್ಷೆ , ಗಣಿತದ ಸಾಧನೆಗಳು, ರಾಸಾಯನ ಶಾಸ್ತ್ರದ ಸೂತ್ರಗಳು, ಜೀವ ಶಾಸ್ತ್ರದ ವೈಜ್ಞಾನಿಕ ಹೆಸರುಗಳು, ವಾರದಲ್ಲೊಂದು ಪರೀಕ್ಷೆ, ಒಂದು ಪಾಠ ಅದ ಮೇಲೊಂದು ಪರೀಕ್ಷೆ ಅದು, ಇದು ಒಂದೇ , ಎರಡೇ , ಒಂದು ತರಗತಿಯಲ್ಲಿ ಕನಿಷ್ಠ 6 ಪಠ್ಯಗಳು, 8 ಪರೀಕ್ಷೆಗಳೆಂದು ಗುಣಿಸಿದ್ರೂ ಡಿಗ್ರಿ ಮುಗಿಯುವ ಹಂತಕ್ಕೆ 800 ಪರೀಕ್ಷೆಗಳನ್ನು ಗಡದ್ದಾಗಿ ಬರೆದಿರುತ್ತೇವೆ. ಇನ್ನೂ ಪೊಡಿ, ಪೊಡಿ ಪರೀಕ್ಷೆಗಳನ್ನು ಸಂಕಲನ ಮಾಡಿದರೆ 1400 ಗಡಿ ದಾಟಬಹುದು. ಇಷ್ಟೊಂದು ಪರೀಕ್ಷೆಗಳಿಗೆ ತಯಾರಿ ಹೇಗಿರಬೇಡ ಹ್ಹಹ್ಹಹ್ಹ ಅಷ್ಟೊಂದು ಕಕ್ಕುಬೇಕಾದರೆ ಎಷ್ಟು ತಿನ್ನಬೇಡ !!!
ಮನೆಯಲ್ಲಿ ಅಮ್ಮನ ಕಣ್ಣು ಕಟ್ಟಲು, ಪುಸ್ತಕ ಬಿಡಿಸಿ ಓದಿದಂತೆ ನಟಿಸಿ, ಮತ್ತೆ ಪರೀಕ್ಷೆಗೆ ತಯಾರಿ ನಡೆಸುವ ಪರಿಯೋ ಬ್ರಹ್ಮನಿಗೆ ಪ್ರೀತಿ, ಹೌದು ಅದೆಷ್ಟು ಚೀಟಿಗಳು, ಪೆನ್ಸಿಲ್ ಕೆತ್ತನೆಗಳು, ಗೋಡೆ ಬರಹ, ಅಂಗಿ ಅಕ್ಷರಗಳು, ಡೆಸ್ಕು ಸಾಹಿತ್ಯ, ಮಣಿಗಂಟು ಲೇಖನ, ಹಲವು ಬಗೆ , ಯಾರು ತರಗತಿಯಲ್ಲಿ ಓದುತ್ತಾನೆಯೋ ಅವನ ತಲೆಗೆ ದಂಡ ಪಾವತಿಸಿ  ಇಪಾರ್ಟಂಟ್ ಕ್ವೇಶನ್ ಕೇಳಿ ಗೆರೆ ಹಾಕಿಯೋ, ಅಲ್ಲಿ ಇಲ್ಲಿ ಬರೆದೋ, ಯುದ್ಧಕ್ಕೆ ಶಸ್ತ್ರಾಭ್ಯಾಸಕ್ಕೆ ಸಿದ್ಧ ಅಂಗೈ ಅಗಲದ ಸಾಮಾನು ಚೀಟಿ ಎತ್ತಿ ಭೂತಕನ್ನಡಿಯಿಟ್ಟು ನೋಡುವಸಷ್ಟು ಪುಟ್ಟ ಅಕ್ಷರಗಳಾದರೂ ಸ್ಪುಟ, ಸ್ಪಷ್ಟತೆಯಿಂದ ಎದ್ದು ಕಾಣುವಂತೆ ಬರೆದು ಸೋಲ್ಡಿ (ಲಕ್ಕಿಡಿಪ್ ಡ್ರಾ) ಹಾಕುವಂತೆ ಮಡಚಿ, ಉದ್ದ ತೋಳಿನ ಅಂಗಿಯ ಕೈಯಲ್ಲೋ, ಬೆಲ್ಟ್ ನ ಸೆರೆಯಲ್ಲೋ, ಡೆಸ್ಕಿನ ಎಡೆಯಲ್ಲೋ, ಕಿಟಕಿಯ ಮೂಲೆಯಲ್ಲೋ, ಪೆನ್ನಿನೊಳಗೋ, ಕಂಪಾಸ್ ಡಬ್ಬದೊಳಗೋ, ಲಾಗ್ ಪುಸ್ತಕದ ಮಧ್ಯದಲ್ಲೋ, ಖಾಸಗಿ ಜಾಗಗಳಲ್ಲೋ ಸುಲಭವಾಗಿ ಸಿಗುವಂತಹ, ಸುರಕ್ಷಾ ಸ್ಥಳಗಳಲ್ಲಿ ಇಟ್ಟು ಸಿದ್ಧಗೊಳ್ಳುವ ಪರಿಯೇ ಅಬ್ಬಾಬ್ಬಾ ಸೈನಿಕರನ್ನು ಮಿರಿಸುವ ಕರಾಮತ್ತು , ಚೀಟಿ ಬರೆದು ಸಿದ್ಧಪಡಿಸಿದರೆ ಸಾಕೇ… ಪರಿಕ್ಷೇಯಲ್ಲಿ ಬರುವ ಅಪರಿಚಿತ ಪ್ರಶ್ನೆಗಳಿಗೆ ಉತ್ತರಿಸಬೇಕಲ್ಲಾ ಅದಕ್ಕೂ ಪಂಚವಾರ್ಷಿಕ ಯೋಜನೆಯಂತೆ, ಯಾವ ಪಾಠಕ್ಕೆ ಯಾವ ಚೀಟಿಯೆಂದು ಸಾಲು ಕ್ರಮಸಂಖ್ಯೆಗಳು, ಯಾವ ಪ್ರಶ್ನೆಗೆ ಯಾವ ಉತ್ತರ.
ಇನ್ನೂ ಚೀಟಿ ಬಿಡಿಸಿ ನೋಡುವ ಕ್ರಮವೋ ವರ್ಣಿಸ ಹೊರಟರೆ ಪುಟಗಳು ಸಾಲದು..!! ನಮ್ಮ ಮನೆಬಿರುಕು ಮಾಡುವ ಧಾರಾವಾಹಿಯ ಸೊಸೆ, ಅತ್ತೆಯನ್ನು ಬಾಗಿಲ ಸಣ್ಣ ಸಂದಿನಿಂದ ನೋಡುವಂತೆ, ಕಣ್ಣಿನ ರೆಪ್ಪೆಗಳಿಗೆ ಕೋನ ನೀಡಿ, ಪಂಚೇಂದ್ರಿಯಗಳು ಸೈನಿಕನಂತೆ ಸೆಟೆದು ನಿಂತು ಜತನದಿಂದ ಶಿಕ್ಷಕರ ಧ್ವನಿ, ಶಿಕ್ಷಕಿಯ ಕಾಜಿಯ ಸಂಗೀತ, ಹೊಸ ಮದುವೆಯಾದ ಟೀಚರಿನ ಕಾಲಿನ ಗೆಜ್ಜೆನಾದ, ತಲೆಗೆ ಮೂಡಿದ ಹೂವಿನ ಪರಿಮಳ, ನಿದ್ದೆ ಮಾಡಿದಂತೆ ನಟಿಸುವ ಮಾಸ್ತ್ರರ ದೃಷ್ಠಿ, ಅಲ್ಲಾಡುವ ನೆರಳು,   ಗಾಳಿಯ ಒತ್ತಡವೆಲ್ಲವನ್ನು ಗ್ರಹಿಸಿಕೊಂಡು  ಕಾಪಾಡಿಕೊಳ್ಳಬೇಕು. ಮೊದಲ ದಿನದ ಪರೀಕ್ಷೆಯಲ್ಲಿ ಮೊಹರು ಹಾಕಿದ ಉತ್ತರಪತ್ರಿಕೆಯನ್ನು ತೆಗೆದುಕೊಂಡು ಪುಟ ತುಂಬಾ ಬರೆದು ಮರುದಿನದ ಪರೀಕ್ಷೆಯಲ್ಲಿ ಹಗ್ಗ ಕಟ್ಟುವುದು ಇದೆ, ಮತ್ತೆ ಪ್ರಶ್ನೆ ಪತ್ರಿಕೆಯ ಕೆಳಗೆ, ಕಾಂಪಾಸು ಡಬ್ಬದ ಒಳಗೆ, ಕ್ಯಾಲ್ಕುಲೇಟರ್ ನ ಮೇಲೆ, ಆಡಿಕೋಲುಗಳ ಅಡಿ ಭಾಗ, ಲಂಗದ ನಡುವೆ, ಹಳೆಯ ಪ್ರಶ್ನೆ ಪತ್ರಿಕೆಗಳಲ್ಲೇ ಇನ್ನೂ ಹಲವಾರು….ಇಷ್ಟು ಮಾಡಿ ಪರೀಕ್ಷೆಯಲ್ಲಿ ಅದೇ ಪ್ರಶ್ನೆ ಬಂದು ಬರೆದೆ ಅಂದ್ರೆ ಅಮ್ಮನ ಮೊದಲ ಪ್ರಸವದಷ್ಟು ಖುಷಿ… ಬರೀ ನಾವೇ ಬರೆದರಾಯಿತೆ !!
ದಾನಶೂರರಲ್ಲವೇ, ನಾವು ಬರೆಯುವುದ್ದಕ್ಕೂ ಸೈ ಮತೋಬ್ಬರನ್ನು ಪ್ರೋತ್ಸಾಹಿಸಲು ಜೈ ಯೆಂಬಂತೆ ಈ ಚೀಟಿಗಳನ್ನು ವರ್ಗಾಹಿಸುವುದೋ ಅದೊಂದು ಕಷ್ಟದ ಸನ್ನಿವೇಷ “ನನಗೆ ಬರೆದಾಗಲಿಲ್ಲ ಅವನದು ಕಿರಿಕಿರಿ” ಸಿಟ್ಟೋ ಸಿಟ್ಟು ಅದರು ಗೆಳೆಯನಲ್ಲವೇ ಕೊಡಬೇಕಲ್ವಾ !! .. ಅದಕ್ಕಾಗಿ ಕಣ್ಸನ್ನೆಗಳೆನು?, ಪೆನ್ನಿನ ಕಡೆಯಲ್ಲಿ ಕುಟ್ಟುವುದೇನು?, ಕಾಲು ಗುದ್ದುವುದೇನು, ಕೈ ಮೇಲೆತ್ತುವುದೇನು?, ರಬ್ಬರ್ ಗೆ ಕಟ್ಟಿ ಬಿಸಾಡುವುದೇನು? ಮತ್ತೆ ಅಪರೂಪಕ್ಕೆ ಮಾಸ್ಟ್ರು ನೋಡಿದರೆಂದರೆ ಮೆಲ್ಲಗೆ ಕಿಟಕಿಯಿಂದ ಹಾರಿಸುವುದೇನು, ಚಡ್ಡಿಯೊಳಗೆ ಹಾಕುವುದೇನು, ಕುಪ್ಪಸದೊಳಗೆ ತುರುಕಿಸುವುದೇನು, ಕಾಲುಚೀಲದೊಳಗೆ ನುಗ್ಗಿಸುವುದೇನು. ಬಾಯಲ್ಲಿ ಹಾಕಿ ಜಗಿಯುವುದೇನು? ಅಬ್ಬಾ ನಗೋದು ಬೇಡ.. ಓದುತಿರುವ ನೀವು ಅಪ್ಪ ಅಮ್ಮನಾಗಿದ್ದರೆ ಮಗನಿಗೋ, ಮಗಳಿಗೋ ಹೇಳಿ ಕೊಡಿ ಅವರು ಕಲಿಯಲಿ, ಶಾಲೆ- ಕಾಲೇಜಿಗೆ ಹೋಗುವವರಾಗಿದ್ದರೆ ಒಮ್ಮೆ ಪ್ರಯತ್ನಿಸಿ ನೋಡಿ ಒಳ್ಳೆ ಫಲಿತಾಂಶ ಬರಬಹುದು…. ಸಮಾಜಕ್ಕೆ , ನೌಕರಿಗೆ ಬೇಕಾಗಿರೊದು ನೀವು ಗಳಿಸಿದ ಅಂಕ, ಹೇಗೆ ಗಳಿಸಿದನೆ/ಳೆಂಬುವುದು ಮುಖ್ಯ ಅಲ್ಲ ಅಲ್ಲವೇ…
ಶುಭವಾಗಲಿ
12
ಡಿಸೆ

ಶರಿಯತ್ ಕಾನೂನಿನಡಿ ಮ್ಯುಚುಯಲ್ ಫಂಡ್ ಪ್ರಾರಂಭಿಸುವ ದರ್ದೇಕೆ?

– ಶ್ರೀನಿವಾಸ್ ರಾವ್

ಮ್ಯುಚುಯಲ್ ಫಂಡ್ಈ ದೇಶದಲ್ಲಿ ಸಂವಿಧಾನಕ್ಕೆ ಪರ್ಯಾಯವಾದ ಮತ್ತೊಂದು ಕಾನೂನು ಚಾಲ್ತಿಯಲ್ಲಿದ್ದರೂ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ದೇಶದ ಭದ್ರತೆಗೇ ಅಪಾಯವೊಡ್ಡುವ ಸ್ಥಿತಿ ಎದುರಾದಾಗ ಮಾತ್ರ ಅದರ ಬಗ್ಗೆ ಎಚ್ಚೆತ್ತುಕೊಳ್ಳುತ್ತೇವೆ. ಇಲ್ಲದಿದ್ದರೆ ಪರ್ಯಾಯ ಕಾನೂನಿನ ಪ್ರಕಾರ ಏನು ನಡೆದರೂ ಪಿಳಿಪಿಳಿ ನೋಡುತ್ತಾ ಕುಳಿತುಬಿಡುತ್ತೇವೆ. ಈ ಮಾತನ್ನು ಈಗೇಕೆ ಹೇಳಬೇಕಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ,ಎಸ್.ಬಿ.ಐ ಶರಿಯಾ ಕಾನೂನಿನ ಪ್ರಕಾರ ಮ್ಯುಚುಯಲ್ ಫಂಡ್ ಪ್ರಾರಂಭಿಸಲು ಹೊರಟಿರುವದರಿಂದ.

ಒಂದಷ್ಟು ಜನರು ಗುಂಪಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಪ್ರಕ್ರಿಯೆಯೇ ಮ್ಯುಚುಯಲ್ ಫಂಡಿಂಗ್. ಇದಕ್ಕಾಗಿಯೇ ಹೆಚ್.ಡಿ.ಎಫ್.ಸಿ ಸೇರಿದಂತೆ ಹಲವು ಕಂಪನಿಗಳಿರುತ್ತವೆ.ಹೂಡಿಕೆ ಮಾಡಿರುವವರ ಹಣವನ್ನು ಸರಿಯಾದ ರೀತಿಯಲ್ಲಿ ಷೇರುಪೇಟೆಯಲ್ಲಿ ತೊಡಗಿಸಿ ಲಾಭ ಗಳಿಸಿಕೊಡಲೆಂದೇ ಆ ಕಂಪನಿಗೋರ್ವ ಫಂಡಿಂಗ್ ಮ್ಯಾನೇಜರ್ ಇರುತ್ತಾನೆ. ಯಾವ ಕಂಪನಿಯ ಷೇರುಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಲಾಭ, ಎಷ್ಟು ಹೂಡಿಕೆ ಮಾಡಬೇಕು ಇತ್ಯಾದಿಗಳ ಪಕ್ಕಾ ಲೆಕ್ಕಾಚಾರದ ಕಸುಬು. ಗಮನಿಸಬೇಕಾದ ಮುಖ್ಯ ಅಂಶವೆಂದರೆ ಯಾವುದೇ ಮ್ಯುಚುಯಲ್ ಫಂಡಿಂಗ್ ಕಂಪನಿ ಇರಲಿ ಅದು ದೇಶದ  ಸಂವಿಧಾನಕ್ಕೆ, ಕಾನೂನಿಗೆ ಬದ್ಧವಾಗಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಆರ್.ಬಿ.ಐ, ಸೆಬಿ,(ಸೆಕ್ಯುರಿಟಿ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ)ನಿಂದ ಅನುಮತಿ ಪಡೆದು ನಿಬಂಧನೆಗಳಿಗೆ ಬದ್ಧವಾಗಿರಬೇಕಾಗುತ್ತದೆ. ವಿದೇಶಗಳಲ್ಲಿ ಹೂಡಿಕೆ ಮಾಡಿದ ಎನ್.ಆರ್.ಐ ಗಳು ಒಂದು ವರ್ಷದೊಳಗೆ ಮ್ಯುಚುಯಲ್ ಫಂಡ್ ಗಳನ್ನು ಮಾರಾಟ ಮಾಡಬೇಕು, ವಿದೇಶಗಳಲ್ಲಿ ಹೂಡಿಕೆ, ಹಿಂತೆಗೆತ ಸೇರಿದಂತೆ ಪ್ರತಿಯೊಂದಕ್ಕೂ ಸರಿಯಾದ ಲೆಕ್ಕ ಕೊಡಬೇಕು(ಭಾರತದಲ್ಲಿ ಹೂಡಿಕೆ ಮಾಡಿದರೆ ಲೆಕ್ಕ ಕೊಡಬೇಕಿಲ್ಲ ಎಂದಲ್ಲ, ವಿದೇಶದಲ್ಲಿ ಹೂಡಿದರೆ ವಿಶೇಷ ಎಚ್ಚರಿಕೆ ವಹಿಸಲಾಗುತ್ತದೆ ಅಷ್ಟೆ). ಹೀಗೆ ಹತ್ತು ಹಲವು ಷರತ್ತುಗಳು ವಿಧಿಸಲಾಗಿದೆ.
ಮತ್ತಷ್ಟು ಓದು »