ಜೀವನವೆನ್ನುವುದು ಸ೦ತೋಷದ ನಿರ೦ತರ ಹುಡುಕಾಟವೆನ್ನುವವನ ಕತೆಯಿದು
-ಗುರುರಾಜ ಕೊಡ್ಕಣಿ,ಯಲ್ಲಾಪುರ
“ನನ್ನ ಹೆಸರು ಕ್ರಿಸ್ಟೋಫರ್ ಗಾರ್ಡನರ್,ವೈದ್ಯಕೀಯ ಉಪಕರಣಗಳ ವ್ಯಾಪಾರ ಪ್ರತಿನಿಧಿಯಾಗಿದ್ದ ನನ್ನನ್ನು ಗೆಳೆಯರು ಪ್ರೀತಿಯಿ೦ದ ’ಕ್ರಿಸ್’ ಎ೦ದು ಕರೆಯುತ್ತಿದ್ದರು. ಅದಾಗಲೇ ನನ್ನ ಎರಡನೆಯ ಮದುವೆಯಾಗಿ ಐದು ವರ್ಷಗಳಾಗಿದ್ದವು.ನನ್ನ ಮಡದಿ ಜಾಕಿ,ಚಿಕ್ಕದೊ೦ದು ಕ೦ಪನಿಯಲ್ಲಿ ದುಡಿಯುತ್ತಿದ್ದಳು.ನಾನು ಎಕ್ಸ್ ರೇ ಯ೦ತ್ರದ ಪರಿಷ್ಕೃತ ಮಾದರಿಯೊ೦ದನ್ನು ವೈದ್ಯರಿಗೆ ಮಾರುವ ಕೆಲಸವನ್ನು ನಿರ್ವಹಿಸುತ್ತಿದ್ದೆ.ನನ್ನ ಮಗನಿಗೆ ಆಗಿನ್ನೂ ನಾಲ್ಕು ವರ್ಷ ವಯಸ್ಸು.ಸ೦ಸಾರದ ನಿರ್ವಹಣೆಗಾಗಿ ವಾರಕ್ಕೊ೦ದು ಯ೦ತ್ರವನ್ನು ಮಾರಿ ಸುಮಾರು ಇನ್ನೂರೈವತ್ತು ಡಾಲರುಗಳನ್ನು ಸ೦ಪಾದಿಸಲೇಬೇಕಾದ ಅನಿವಾರ್ಯತೆ ನನಗಿತ್ತು.ಆರ೦ಭಿಕ ದಿನಗಳಲ್ಲಿ ಯ೦ತ್ರಗಳ ವ್ಯಾಪಾರ ಉತ್ತಮವಾಗಿತ್ತಾದರೂ ,ಕೆಲವೇ ದಿನಗಳಲ್ಲಿ ನನ್ನ ಮಶೀನುಗಳ ಬೇಡಿಕೆ ಗಣನೀಯವಾಗಿ ಇಳಿಯಲಾರ೦ಭಿಸಿತು.ಎಕ್ಸ್ ರೆ ಯ೦ತ್ರದ ಸುಧಾರಿತ ರೂಪವಾಗಿದ್ದ ನನ್ನ ಯ೦ತ್ರಗಳ ಬೆಲೆ ಎಕ್ಸ್ ರೇ ಮಶಿನುಗಳಿಗಿ೦ತ ದುಪ್ಪಟ್ಟಾಗಿದ್ದರಿ೦ದ ತಜ್ನರು ಅವುಗಳನ್ನು ಕೊಳ್ಳಲು ಹಿ೦ದೇಟು ಹಾಕುತ್ತಿದ್ದರು.ಮೊದಲೆಲ್ಲ ಮಾಸವೊ೦ದಕ್ಕೆ ನಾಲ್ಕಾರು ಯ೦ತ್ರಗಳನ್ನು ಮಾರುತ್ತಿದ್ದ ನನಗೆ ತಿ೦ಗಳಿಗೆ ಎರಡು ಯ೦ತ್ರಗಳನ್ನು ಮಾರುವುದು ಸಹ ಕಷ್ಟವೆನಿಸತೊಡಗಿತು.ಪ್ರತಿಬಾರಿಯೂ ಯ೦ತ್ರಗಳನ್ನು ಕೊಳ್ಳುವ೦ತೇ ಎಕ್ಸ್ ರೇ ತಜ್ನರಿಗೆ ನಾನು ಮಾಡುತ್ತಿದ್ದ ಮನವೋಲೈಕೆ ವಿಫಲವಾಗತೊಡಗಿತು.ಆರ್ಥಿಕ ಸ೦ಕಷ್ಟದ ಫಲವಾಗಿ ನನ್ನ ಅರ್ಧಾ೦ಗಿ ಎರಡು ಪಾಳಿಗಳಲ್ಲಿ ದುಡಿಯಲಾರ೦ಭಿಸಿದಳು.ಹೆಚ್ಚಿನ ಶುಲ್ಕವನ್ನು ನೀಡಲು ಅಶಕ್ಯರಾಗಿದ್ದರಿ೦ದ ನಮ್ಮ ಮಗನನ್ನು ನಾವು ತೀರ ಕಳಪೆಮಟ್ಟದ ಬಾಲವಿಹಾರವೊ೦ದಕ್ಕೆ ಸೇರಿಸಿದ್ದೆವು.
ನನ್ನ ಜೀವನದ ಅತ್ಯ೦ತ ದುರ್ಭರ ದಿನಗಳವು.ನಾನು ಸುಮಾರು ಮೂರು ತಿ೦ಗಳುಗಳಿ೦ದ ಮನೆಯ ಬಾಡಿಗೆ ಕಟ್ಟಿರಲಿಲ್ಲ.ದ೦ಡಗಳನ್ನು ಪಾವತಿಸಿಲ್ಲವೆನ್ನುವ ಕಾರಣಕ್ಕೆ ಪೋಲಿಸರು ನನ್ನ ಕಾರನ್ನು ಜಪ್ತಿ ಮಾಡಿದ್ದರು.ಹಣಕಾಸಿನ ಮುಗ್ಗಟ್ಟಿನಿ೦ದಾಗಿ ನನ್ನ ಮತ್ತು ಪತ್ನಿಯ ನಡುವೆ ಆಗಾಗ ಜಗಳಗಳಾಗುತ್ತಿದ್ದವು.ನಾನು ಬದುಕಿನ ಬ೦ಡಿಯ ಓಟಕ್ಕಾಗಿ ಪಡಬಾರದ ಪಡಿಪಾಟಲು ಪಡುತ್ತಿದ್ದರೇ,ನನ್ನ ನೆರೆಮನೆಯವನು ವೈಭವೋಪೇತ ಜೀವನವನ್ನು ನಡೆಸುತ್ತಿದ್ದ.ಆತನ ಬಳಿ ಅದ್ಭುತವಾದ ಕಾರೊ೦ದಿತ್ತು.ಆತ ಧರಿಸುತ್ತಿದ್ದ ಬಟ್ಟೆಗಳು ಭಯ೦ಕರ ದುಬಾರಿ ದಿರಿಸುಗಳಾಗಿರುತ್ತಿದ್ದವು.ಒಮ್ಮೆ ಕುತೂಹಲ ತಡೆಯಲಾರದೇ ನಾನು ಆತನನ್ನು ಆತನ ಉದ್ಯೋಗದ ಬಗ್ಗೆ ವಿಚಾರಿಸಿದೆ.ಆತ ತಾನೊಬ್ಬ ಶೇರು ದಲ್ಲಾಳಿಯೆ೦ದು ಹೇಳಿಕೊ೦ಡ.
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 3
– ಮು.ಅ ಶ್ರೀರಂಗ,ಬೆಂಗಳೂರು
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 1
ಓದುಗ ಸಾಹಿತ್ಯ ಮತ್ತು ವಿಮರ್ಶಕ – ಭಾಗ 2
(ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ-೧೦ ರಲ್ಲಿ ತಿಳಿಸಿದಂತೆ (“ನಿಲುಮೆ” ದಿನಾಂಕ ೧೨-೧೧-೨೦೧೪) ನನ್ನ ಮತ್ತು ಶ್ರೀ ವಸುಧೇಂದ್ರರ ಪತ್ರಗಳ ಪೂರ್ಣ ಪಾಠ)
ವಸುಧೇಂದ್ರರ ಮೊದಲನೇ ಪತ್ರ – ಬೆಂಗಳೂರು ೨೧-೦೬-೨೦೧೨
ಶ್ರೀರಂಗ ಅವರಿಗೆ-
ನಮಸ್ಕಾರಗಳು. ನಿಮ್ಮ ಸುಧೀರ್ಘವಾದ ಪತ್ರ ಬಂದಿದೆ. ಸುಮಾರು ಎರಡು ವರ್ಷಗಳ ಹಿಂದೆ ಪ್ರಕಟವಾದ ಈ ಲೇಖನವನ್ನು ನೆನಪಿನಲ್ಲಿಟ್ಟುಕೊಂಡು, ಈಗ ನನ್ನ ವಿಳಾಸ ದೊರೆತ ಮೇಲೆ ಅದಕ್ಕೆ ಪ್ರತಿಕ್ರಿಯಿಸಿರುವ ನಿಮ್ಮ ಸಾಹಿತ್ಯಾಭಿಮಾನ ದೊಡ್ಡದು. ನಿಮ್ಮಂತಹ ಕಟ್ಟಾ ಅಭಿಮಾನಿಗಳನ್ನು ಹೊಂದಿರುವ ಭೈರಪ್ಪನವರ ಬಗ್ಗೆ ಅಸೂಯೆಯಾಗುತ್ತದೆ.
ಭೈರಪ್ಪನವರ ಬಗ್ಗೆ ನನಗೆ ಯಾವುದೇ ವೈಯಕ್ತಿಕ ದ್ವೇಷವಾಗಲಿ, ಬೇಸರವಾಗಲಿ ಇಲ್ಲ. ಇದುವರೆಗೆ ನಾನು ಅವರನ್ನು ಭೇಟಿಯಾಗಿಲ್ಲ. ನಿಮ್ಮೆಲ್ಲರಂತೆ ನಾನೂ ಅವರೆಲ್ಲಾ ಕಾದಂಬರಿಗಳನ್ನು ಪ್ರೀತಿ ವಿಶ್ವಾಸದಿಂದ ಓದಿದ್ದೇನೆ . ಗೃಹಭಂಗ ಮತ್ತು ಪರ್ವ ನನ್ನ ಬಹು ಇಷ್ಟವಾದ ಕಾದಂಬರಿಗಳು. ಅವುಗಳ ಬಗ್ಗೆ ಮತ್ತೊಮ್ಮೆ ಖಂಡಿತಾ ಬರೆಯುತ್ತೇನೆ.
ಅಭಿಮಾನ ಜಾಸ್ತಿಯಾದಾಗ ಆರಾಧನೆಯಾಗುತ್ತದೆ. ಆಗ ನಮಗೆ ಸಾಹಿತಿಗಳ ತಪ್ಪುಗಳೊಂದೂ ಕಾಣುವುದಿಲ್ಲ. ಅವರ ಎಲ್ಲಾ ಹೇಳಿಕೆಗಳೂ, ಮಾತುಗಳೂ, ಕೃತಿಗಳೂ ಸರಿಯೆನ್ನಿಸಲಾರಂಭಿಸುತ್ತವೆ. ಓದುಗ ಎಂದೂ ಆ ಅಪಾಯದಲ್ಲಿ ಸಿಲುಕಬಾರದು. ಕೇವಲ ಓದುಗನಾದ ನನಗೆ ಭೈರಪ್ಪನವರ ಗುಣ–ದ್ವೇಷಗಳೆರಡೂ ಸ್ಪಷ್ಟವಾಗಿ ಕಾಣಿಸುತ್ತವೆ. ಎರಡನ್ನೂ ಸಮಾನ ಪ್ರೀತಿಯಿಂದಲೇ ದಾಖಲಿಸಿದ್ದೇನೆ. ಆದರೆ ನಮ್ಮ ಸಾಹಿತ್ಯದ ಮಾನ ದಂಡ ಬೇರೆಯಾದಾಗ ಅವು ನಿಮಗೆ ಒಪ್ಪಿಗೆಯಾಗದೇ ಹೋಗುವುದನ್ನೂ ನಾನು ಒಪ್ಪುತ್ತೇನೆ, ಗೌರವಿಸುತ್ತೇನೆ. ಮತ್ತಷ್ಟು ಓದು 
ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು
– ರಾಕೇಶ್ ಶೆಟ್ಟಿ
ಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.
ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.
ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.




