ರಾಷ್ಟ್ರದ ಹಿತ ದೃಷ್ಟಿಯಿಂದಾದರು ಈ ಭಯೋತ್ಪಾದನೆಯ ರಾಜಕೀಯಕ್ಕೆ ಅಂತ್ಯ ಹಾಡಬೇಕಲ್ಲವೇ?
– ಅನಿಲ ಚಳಗೇರಿ
ಡಿಸೆಂಬರ್ ೩೧ ರ ರಾತ್ರಿ ಶಂಕಿತ ಉಗ್ರರ ಹಡಗನ್ನು ನೌಕ ಪಡೆ ಪತ್ತೆ ಹಚ್ಚಿ ಅದನ್ನು ಹಿಂಬಾಲಿಸಿ ಹೋದಾಗ ಅದರಲ್ಲಿರುವವರು ಹಡಗನ್ನು ಸ್ಪೋಟಿಸಿದರು ಎನ್ನುವ ವಿಷಯ ತಿಳಿದೊಡನೆ ನಮ್ಮಲ್ಲಿ ಅನೇಕರಿಗೆ ನೌಕಾಪಡೆಗೆ ಒಂದು ಶಬ್ಭಾಶ್ ಹೇಳಬೇಕೆನ್ನಿಸಿರಬಹುದು, ಅದಾಗಲೇ ರಾಜಕೀಯ ಪಕ್ಷಗಳು ಇಂತಹ ಒಂದು ಹಡಗು ಇತ್ತಾ? ಅದರಲ್ಲಿ ನಿಜವಾಗಲು ಉಗ್ರರಿದ್ದರಾ ? ಅದು ಪಾಕಿಸ್ತಾನಕ್ಕೆ ಸೇರಿದ ಹಡಗಾಗಿತ್ತಾ ? ಹಾಗಿದ್ದರೆ ಅವುಗಳ ದಾಖಲೆ ವೀಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ, ನಮಗೆ ಇದರ ಮೇಲೆ ಶಂಕೆಯಿದೆಯೆಂದು ಪ್ರಶ್ನಿಸಲು ಪ್ರಾರಂಭಿಸಿದನ್ನು ನೋಡಿ ನೋಡಿ ನಮ್ಮಲ್ಲಿ ಅನೇಕರಿಗೆ ಬೇಜಾರಾಗಿರಬೇಕು. ಪ್ರತಿ ಬಾರಿ ಉಗ್ರಗಾಮಿಯೊಬ್ಬ ಸಿಕ್ಕಾಗ, ಬಾಂಬ್ ದಾಳಿಯಾದಾಗ ಅಥವಾ ಯಾವುದೇ ಉಗ್ರ ಚಟುವಟಿಕೆ ನಡೆದಾಗ, ತನಿಖೆಯ ಪ್ರಾರಂಭದಿಂದಲೇ ಒಂದಲ್ಲ ಒಂದು ರಾಜಕೀಯ ಪಕ್ಷಗಳು ಅಥವಾ ಬುದ್ಧಿ ಜೀವಿಗಳು ಈ ಶಕಿಂತ ಆರೋಪಿಗಳ ನಿಂತೇಬಿಡುತ್ತಾರೆ. ತನಿಖೆ ನಡೆಯುತ್ತಿರುವಾಗಲೇ ಕ್ಲೀನ್ ಚಿಟ್ ಕೊಡುವದು, ರಾಜಕೀಯ ಬಣ್ಣ ಕಟ್ಟಲು ಪ್ರಯತ್ನಿಸುವದು ಅಥವಾ ಇಂತಹ ಗಂಭೀರ ವಿಷಯದಲ್ಲಿ ಜಾತಿ ಅಥವಾ ಧರ್ಮದ ಮಾತುಗಳನ್ನು ಆಡುವದು ನೋಡುತ್ತಲೇ ಇರುತ್ತೇವೆ, ಕೆಲವಿರಿಗೆ ಇದು ಇದು ಓಲೈಕೆಯ ಒಂದು ಭಾಗವಾದರೆ ಇನ್ನು ಕೆಲವರಿಗೆ ಇದು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳಲು ಒಂದು ಗಿಮಿಕ್. ಇಂತಹ ಹೇಳಿಕೆಗಳನ್ನು IC – 814 ಹೈ ಜಾಕ್ ನಿಂದ ಹಿಡಿದು ಅಫ್ಜಲ್ ಗುರು, ಬಾಟ್ಲ ಹೌಸ್ ಎನ್ಕೌಂಟರ್, ಇಶ್ರಾತ್ ಜಹಾ ಎನ್ಕೌಂಟರ್, ಹೈದರಾಬಾದ್ ಬ್ಲಾಸ್ಟ್, ಜರ್ಮನ್ ಬೇಕರಿ ಬ್ಲಾಸ್ಟ್ ಹಾಗು ಮುಂಬೈ ತಾಜ್ ಅಟ್ಯಾಕ್ ಆದಗಲು ಕೇಳುತ್ತಲೇ ಬಂದಿದ್ದೇವೆ. ಪ್ರತ್ಯೇಕತೆಯ ಹೆಸರಿನಲ್ಲಿ ಉಗ್ರವಾದ, ನಕ್ಸಲ್ ಹೆಸರಿನಲ್ಲಿ ಉಗ್ರವಾದ ಹಾಗು ಮಾವೋವಾದಿಗಳ ಉಗ್ರ ಚಟುವಟಿಕೆಯನ್ನು ವಹಿಸಿಕೊಂಡು ಮಾತನಾಡುವಂತಹ ಬುದ್ಧಿ ಜೀವಿಗಳು ಇಡೀ ದೇಶದಲ್ಲಿ ತುಂಬಿದ್ದಾರೆ. ಕೆಲವೊಮ್ಮ ರಾಜಕೀಯ ಪಕ್ಷಗಳ ಜೊತೆ, ಕೆಲವೊಮ್ಮೆ ಮಾಧ್ಯಮಗಳ ಜೊತೆ ಇನ್ನು ಕೆಲವೊಮ್ಮೆ ಮಾನವ ಹಕ್ಕು ಹೋರಾಟದ ನೆಪದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ದಶಕಗಳ ಹಿಂದೆಯೇ ಧರ್ಮ ಮತ್ತು ರಾಜಕೀಯದ ಹೆಸರಿನಲ್ಲಿ ಇಂಥಹ ಸಂಘಟನೆಗಳನ್ನು ಸಮರ್ಥಿಸಿಕೊಂಡ ಪಾಕಿಸ್ತಾನ, ಆಫ್ತಾನಿಸ್ತಾನ, ಇರಾಕ್ ಹಾಗು ಇಂತಹ ಅನೇಕ ರಾಷ್ಟ್ರಗಳು ತಾವೇ ಬೆಳಸಿದ ಈ ಉಗ್ರರಿಂದ ತಮ್ಮ ದೇಶವನ್ನು ಕಾಪಾಡಿಕೊಳ್ಳಲು ಇಂದು ಕಷ್ಟಪಡುತ್ತಿರುವದನ್ನು ನಾವೆಲ್ಲ ನೋಡುತ್ತಿದ್ದೇವೆ.
ಮತ್ತಷ್ಟು ಓದು