ವಿಷಯದ ವಿವರಗಳಿಗೆ ದಾಟಿರಿ

Archive for

9
ಫೆಬ್ರ

ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ

– ಎಸ್.ಎನ್.ಭಾಸ್ಕರ್‍

NSC-Bose-Airಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧.

“ರಾಷ್ಟ್ರಂ ಧಾರಯತಾಂ ಧ್ರೃವಂ”

“ರಾಷ್ಟ್ರಂ ಅಶ್ವಮೇಧಃ”

ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ ವ್ಯಕ್ತಿ ಪದ್ಮಾಸನ ಹಾಕಿ ಕುಳಿತಿದ್ದಾರೆ. ಎಡಗೈನಲ್ಲಿ ಜಪಮಾಲೆ ಮನದಲ್ಲಿ ಪ್ರಣವಮಂತ್ರ. ಮುಚ್ಚಿದ ಕಣ್ಗಳ ಹಿಂದೆ ಅದೆಂತಹ ಉಜ್ವಲ ಭವಿತವ್ಯದ ನೋಟವಿತ್ತೋ..! ಅರಿಯಬಲ್ಲವರು ತಾನೇ ಯಾರಿದ್ದರು ?

ಮಂದಸ್ಮಿತ ಅಂತರ್ಮುಖಿಯಾದ ಮುಖಾರವಿಂದದ ನೆರಳಿನಲ್ಲಿ ಸ್ಪಷ್ಟ ನಿಲುವು ಅಪ್ರಯತ್ನಪೂರ್ವಕವಾಗಿ ನಳನಳಿಸುತಲಿತ್ತು. ಆಳವಾದ ಧ್ಯಾನ. ಜಪಮಾಲೆಯನ್ನು ಹಿಡಿದಿದ್ದ ಕೈ ಬೆರಳುಗಳನ್ನು ಹೊರತು ಪಡಿಸಿ ಇಡೀ ದೇಹ ನಿರ್ಲಿಪ್ತ. ಮನದಲ್ಲಿ ಜ್ವಾಲಾಮುಖಿಯೇ ಇದ್ದರೂ, ಹಿಮಾಲಯದ ಪರ್ವತದಂತೆ ಶಾಂತಸ್ಮಿತ. ಮುಂಜಾನೆಯ ಮೊಗ್ಗರಳುವಂತೆ ನಿಧಾನವಾಗಿ ಕಣ್ಣಗಳನ್ನು ತೆರೆಯುತ್ತಾರೆ. ಎದುರಿಗೆ ಗೋಡೆಯ ಮೇಲೆ ಸ್ವಾಮಿ ವಿವೇಕಾನಂದರ ಭಾವಚಿತ್ರ ಅದರ ಎಡಗಡೆಗೆ ರಾಮಕೃಷ್ಣ ಪರಮಹಂಸರು, ಬಲಗಡೆಗೆ ಮಹರ್ಷಿ ಅರವಿಂದರು. ತನ್ನೆರಡೂ ಕೈಗಳನ್ನೂ ಕಟ್ಟಿ ನಸುನಗುತ್ತಾ ನಿಂತಿದ್ದ ವಿವೇಕಾನಂದರ ಭಾವಚಿತ್ರವನ್ನೇ ನೋಡುತ್ತಾ ನಿಶ್ಚಲರಾಗಿ ಕುಳಿತೇ ಇದ್ದರು. ಅದೆಂತಹ ದಿವ್ಯ ಚೈತನ್ಯ, ದೇದೀಪ್ಯಮಾನವಾದ ಪ್ರಾಂಜ್ವಲ ಕಣ್ಗಳಲ್ಲಿ ಹೊಳೆಯುತ್ತಿದ್ದ ಅಚಲ ವಿಶ್ವಾಸ. ನೋಡುತ್ತಿದ್ದರೇ ಆ ಕಣ್ಗಳೆಂಬ ಸಾಗರದಲ್ಲಿ ಮುಳುಗೇ ಹೋಗುತ್ತೇವೆ. ಸೂಜಿಗಲ್ಲಿಗೆ ಸೆಳೆಯಲ್ಪಡುವ ಕಬ್ಬಿಣದ ಚೂರುಗಳಂತೆ ಸೆಳೆದು ಬಂಧಿಯಾಗುತ್ತೇವೆ. ಎಂತಹ ಆಕರ್ಷಣೀಯ ವ್ಯಕ್ತಿತ್ವ…!! ಕಣ್ತುಂಬಿ ಬಂತು ಮೂಡಿದ ಹನಿಗಳು ಧಳ ಧಳನೇ ಇಳಿಯತೊಡಗಿದವು ನೋಟ ಮಾತ್ರ ನಿಶ್ಚಲ..ನಿರ್ಲಿಪ್ತ. ರೋಮ ರೋಮಗಳಲ್ಲೂ ವಿದ್ಯುತ್ ಸಂಚಾರ. ಅವರ ನಿರ್ಧಾರ ಸಂಪೂರ್ಣವಾಗಿತ್ತು. ರೂಪುರೇಷೆಗಳು ಸಿದ್ದವಾಗಿದ್ದವು. ಇಟ್ಟ ಹೆಜ್ಜೆ ಹಿಂತೆಗೆದ ನಿದರ್ಶನ ಜಾಯಮಾನದಲ್ಲೇ ಇಲ್ಲವಲ್ಲ. “ರಾಷ್ಟ್ರಂ ಧಾರಯತಾಂ ದ್ರೃವಂ: ರಾಷ್ಟ್ರಂ ಅಶ್ವಮೇಧಃ:”.

ಮತ್ತಷ್ಟು ಓದು »