ನಿಲುಮೆ ಪ್ರಕಾಶನ ಚೊಚ್ಚಲ ಪುಸ್ತಕ “ಬೌದ್ಧಿಕ ದಾಸ್ಯದಲ್ಲಿ ಭಾರತ” ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ
ನಿಲುಮೆಯ ಓದುಗರೇ,
ಮುಂದಿನ ಭಾನುವಾರ,ಮಾರ್ಚ್ ೧ರಂದು ಬೆಳಿಗ್ಗೆ ೧೦.೩೦ಕ್ಕೆ,ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ “ನಿಲುಮೆ ಪ್ರಕಾಶನ”ದ ಮೊದಲ ಪುಸ್ತಕ “ಬೌದ್ಧಿಕ ದಾಸ್ಯದಲ್ಲಿ ಭಾರತ” ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರೊ.ಬಾಲಗಂಗಾಧರ,ಶತಾವಧಾನಿ ಗಣೇಶ್,ಪ್ರೊ.ಪ್ರಧಾನ್ ಗುರುದತ್ತ,ಪ್ರೊ.ರಾಜಾರಾಮ್ ಹೆಗಡೆ ಹಾಗೂ ಇನ್ನಿತರ ಗಣ್ಯರು ನಮ್ಮೊಂದಿಗಿರಲಿದ್ದಾರೆ.
ಪುಸ್ತಕ ಬಿಡುಗಡೆಗೆ ಸರ್ವರಿಗೂ ಸುಸ್ವಾಗತ.
ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಮುಗಿದ ನಂತರ “ನಿಲುಮಿಗರ ದಿನ”ವಿರಲಿದೆ. ನಿಲುಮಿಗರ ದಿನದಲ್ಲಿ ಪಾಲ್ಗೊಳ್ಳುವವರು ತಮ್ಮ ಸ್ವ-ವಿವರಗಳನ್ನು ಈ http://goo.gl/X981PX ಕೊಂಡಿಯಲ್ಲಿ ದಾಖಲಿಸಿ.ನಮಗೆ ಕಾರ್ಯಕ್ರಮದ ತಯಾರಿಗೆ ಇದು ಅವಶ್ಯಕ.ಈ ವಿವರಗಳನ್ನು ದಾಖಲಿಸಲು ಕಡೆಯ ದಿನ ೨೫ನೇ ತಾರೀಖು.ಅದರಾಚೆಗೆ ಈ ಕೊಂಡಿ ಲಭ್ಯವಿರುವುದಿಲ್ಲ.
ಮಿಥಿಕ್ ಸೊಸೈಟಿ,ನೃಪತುಂಗ ರಸ್ತೆ.ತಲುಪುವ ಮಾರ್ಗ : ಮೆಜೆಸ್ಟಿಕ್ ಕಡೆಯಿಂದ ಬರುವುದಾದರೆ ಕೆ.ಆರ್ ಸರ್ಕಲ್ ನಲ್ಲಿ ಬಲ ತಿರುವು (ಕಬ್ಬನ್ ಪಾರ್ಕಿನೊಳಗಿನಿಂದ ಬಂದರೆ,ಕಾರ್ಪೊರೇಶನ್ ಸರ್ಕಲ್ ಕಡೆಗೆ ಎಡತಿರುವು) ತೆಗೆದುಕೊಂಡು ರಸ್ತೆಯ ಬಲಭಾಗದಲ್ಲೆ ಮುಂದುವರೆದರೆ ಸರ್ಕಾರಿ ವಿಜ್ನಾನ ಕಾಲೇಜಿನ ನಂತರದ ಕಟ್ಟಡವೇ ಮಿಥಿಕ್ ಸೊಸೈಟಿ (ಎದುರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೆ). ಬಸ್ಸಿನಲ್ಲಿ ಬರುವವರು ಬನ್ನಪ್ಪ ಪಾರ್ಕ್ ಬಸ್ ನಿಲ್ದಾಣದಲ್ಲಿ ಇಳಿದು ಸಿಟಿ ಸಿವಿಲ್ ಕೋರ್ಟ್ ರಸ್ತೆಯ ಕಡೆ ನಡೆದುಕೊಂಡು ಬಂದರೂ ತಲುಪಬಹುದು.(ಹತ್ತು-ಹದಿನೈದು ನಿಮಿಷದ ಹಾದಿ)
ನಿಮ್ಮ ಆಗಮನದ ನಿರೀಕ್ಷೆಯಲ್ಲಿ.
ನಿಮ್ಮೊಲವಿನ,
ನಿಲುಮೆ ಬಳಗ