ವಿಷಯದ ವಿವರಗಳಿಗೆ ದಾಟಿರಿ

Archive for

31
ಮಾರ್ಚ್

ಶೂದ್ರ ಶಂಬುಕ ಮತ್ತು ರಾಮಾಯಣ – ಒಂದು ಚರ್ಚೆ

– ರಾಘವೇಂದ್ರ ಸುಬ್ರಹ್ಮಣ್ಯ

ಶೂದ್ರ ಶಂಬುಕಹಲವಾರು ಜನ ಶಂಬುಕನ ಉದಾಹರಣೆ ಕೊಟ್ಟು ರಾಮನ ಮೇಲೆ ಅಧರ್ಮದ ಪಟ್ಟ ಹೊರಿಸ್ತಾರೋದು ನೋಡಿ, ನನ್ನ ದೃಷ್ಟಿಕೋನವನ್ನೂ ಹಂಚಿಕೊಳ್ಳೋಣವೆಂದು ನಿರ್ಧರಿಸಿದ್ದರಿಂದ,ಈ ಲೇಖನ.ಇದರ ಬಗ್ಗೆ ಒಂದು ಚರ್ಚೆ ಆದ್ರೆ ಚೆನ್ನಾಗಿರುತ್ತೆ ಅನ್ನಿಸ್ತು. ನಾನು ರಾಮಾಯಣನ್ನು ಧರ್ಮಗ್ರಂಥವಾಗಿ ಅಥವಾ ಪುರಾಣವನ್ನಾಗಿ ನೋಡುವುದಿಲ್ಲವಾದ್ದರಿಂದ, ರಾಮನೆಂಬ ‘ಮರ್ಯಾದಾ ಪುರುಷೋತ್ತಮ’ ಮಾಡಿದ್ದು ಸರಿಯೋ ತಪ್ಪೋ ಎಂಬ ವಿಮರ್ಷೆಗೆ ಕೈ ಹಾಕಲಾರೆ. ರಾಮನೆಂಬ ಪಾತ್ರ ಮಾಡಿದ್ದು ಸರಿಯೋ ಎಂದು ನೋಡುವ ಪ್ರಯತ್ನವಷ್ಟೇ.

ನನಗೆ ಗೊತ್ತಿದ್ದಂತೆ ಕಥೆ ಹೀಗಿದೆ (ತಪ್ಪಿದ್ದಲ್ಲಿ ದಯವಿಟ್ಟು ತಿದ್ದಿ):

“ರಾಮನ ಆಸ್ಥಾನಕ್ಕೆ ಒಬ್ಬ ಬ್ರಾಹ್ಮಣ ತನ್ನ ಮಗನ ಸಾವಿಗಾಗಿ ನ್ಯಾಯ ಕೇಳಲು ಬರುತ್ತಾನೆ. ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡನ ನನ್ನ ಮಗನ ಸಾವಾಗಿದೆ ಎಂದು ಆರೋಪಿಸುತ್ತಾನೆ. ನಾರದಮುನಿ ಇದರಬಗ್ಗೆ ಕೊಟ್ಟ ಹಿನ್ನೆಲೆ ಹಾಗೂ ಶಂಭುಕನ ತಪಸ್ಸಿನ ಬಗ್ಗೆ ತಿಳಿದು ರಾಮ ಶಂಬುಕನಿದ್ದಲ್ಲಿಗೆ ಪ್ರಯಾಣ ಬೆಳೆಸುತ್ತಾನೆ. ಶಂಬುಕನನ್ನು ಭೇಟಿ ಮಾಡಿ, ಅವನ ತಪಸ್ಸಿನ ಕಾರಣ ಕೇಳಲಾಗಿ, ಶಂಬುಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವನು. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು, ಈ ದೇಹದೊಂದಿಗೇ ಸ್ವರ್ಗವನ್ನು ಪ್ರವೇಶಿಸುವ ನಿರ್ಧಾರದಿಂದ ಈ ತಪಸ್ಸನ್ನು ಮಾಡುತ್ತಿದ್ದೇನೆ” ಎನ್ನುತ್ತಾನೆ. ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ ಕಾರಣದಿಂದ ಅವನ ಹರಣ ಮಾಡುತ್ತಾನೆ.
ಮತ್ತಷ್ಟು ಓದು »

31
ಮಾರ್ಚ್

ಸಾಮಾನ್ಯ ಓದುಗನ ಗ್ರಹಿಕೆಯಲ್ಲಿ ಭೈರಪ್ಪ

– ಎಸ್ ಎನ್ ಸಿಂಹ. ಮೇಲುಕೋಟೆ.

ಭೈರಪ್ಪಸೃಷ್ಟಿಯ ಆರಂಭದಿಂದ ಇಂದಿನವರೆಗೂ ಮನುಷ್ಯನ ಹೃದಯವನ್ನು ಅನೇಕ ಚಿಂತೆ ಸಂತಾಪಗಳು ಬಾಧಿಸುತ್ತಲೇ ಇವೆ. ಅವುಗಳನ್ನು ನೀಗಿ ಜೀವನವನ್ನು ನೇರ್ಪಡಿಸಿಕೊಳ್ಳುವ ಯತ್ನದಲ್ಲಿ ಆತ ಹಲವು ಸಾಮಗ್ರಿಗಳ ನೆರವನ್ನು ಅಪೇಕ್ಷಿಸುತ್ತಾನೆ. ಅವುಗಳ ನೆರವಿನಿಂದ ಸಂಪೂರ್ಣವಾಗಿ ಅಲ್ಲದಿದ್ದರೂ ತಾತ್ಕಾಲಿಕವಾಗಿಯಾದರೂ ಸಂತಾಪಶಮನವನ್ನು ಪಡೆಯುವಲ್ಲಿ ಸುಖಾಪೇಕ್ಷಿಯಾದ ಮಾನವ ಕೊಂಚಮಟ್ಟಿಗೆ ಯಶಸ್ವಿಯಾಗಿದ್ದಾನೆ.ಇಂತಹ ಸುಖವನ್ನು ಪಡೆಯುವ ನಿಟ್ಟಿನಲ್ಲಿ ಅಗತ್ಯವಾದ ಕನಿಷ್ಠ ಸಾಮಗ್ರಿಗಳು ಯಾವುವೆಂದು ಸೂಫಿ ಸಂತ ಉಮರ್ ಖಯ್ಯಮನು ತನ್ನೊಂದು ರುಬಾಯಿಯಲ್ಲಿ ಹಿಡಿದಿಟ್ಟಿದ್ದಾನೆ. ರಸಋಷಿ ಡಿ.ವಿ.ಜಿ. ಅವರು ಮಾಡಿರುವ ಅದರ ಸುಂದರವಾದ ಅನುವಾದ ಹೀಗಿದೆ..

ಅಲ್ಲಿ ಮರದಡಿಯಲ್ಲಿ ನಲ್ಗಾವ್ಯವೊಂದಿರಲು
ರೊಟ್ಟಿಯೊಂದಿನಿಸೊಂದು ಕುಡಿಕೆಯಲಿ ಮಧುವು |
ಮೇಣ್ ಮುಗುದೆ ನೀನೆನ್ನ ಬಳಿ ಕುಳಿತು ಪಾಡಲಹ
ಕಾಡಾದೊಡೇನದುವೆ ಸಗ್ಗಸುಖವೆನಗೆ ||
ಖಯ್ಯಮನಿಗಿಂತಲೂ ತುಂಬ ಹಿಂದೆಯೇ ನಮ್ಮ ಭರ್ತೃಹರಿ ಹೇಳುವುದಾದರೂ ಇದನ್ನೇ..

ಅಗ್ರೇ ಗೀತಂ ಸರಸ ಕವಯಃ ಪಾರ್ಶ್ವತೋ ದಾಕ್ಷಿಣಾತ್ಯಾಃ
ಪಶ್ಚಾಲ್ಲೀಲಾವಲಯರಣಿತಂ ಚಾಮರಗ್ರಾಹಿಣೀನಾಮ್ |
ಯದ್ಯಸ್ತ್ಯೇವಂ ಕುರು ಭವರಸಾಸ್ವಾದನೇ ಲಂಪಟತ್ವಂ
ನೋಚೇಚ್ಚೇತಃ ಪ್ರವಿಶ ಸಹಸಾ ನಿರ್ವಿಕಲ್ಪೇ ಸಮಾಧೌ ||
ಮತ್ತಷ್ಟು ಓದು »

30
ಮಾರ್ಚ್

ಹಿಂದೂ ಸಂಸ್ಕೃತಿಯ ಕುರಿತು ವಿವೇಕಾನಂದರ ವಿಚಾರಗಳು

– ಪ್ರೊ.ರಾಜಾರಾಮ ಹೆಗಡೆ,
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

Swami Vivekananda೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
೩.ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ

ವಿವೇಕಾನಂದರ ಗುರಿಯನ್ನು ಒಂದೇ ಸಾಲಿನಲ್ಲಿ ಹೇಳಬಹುದಾದರೆ ‘ಹಿಂದೂ ಸಂಸ್ಕೃತಿಯ ಉದಾತ್ತ ಧ್ಯೇಯಗಳ ಕುರಿತು ಜಾಗೃತಿ ಮೂಡಿಸುವುದು’ ಎನ್ನಬಹುದು. ಆದರೆ  ಈ ಒಂದು ಸಾಲೇ ನಮಗಿಂದು ಅರ್ಥವಾಗದ ಸ್ಥಿತಿಗೆ ಬಂದಿದ್ದೇವೆ ಎಂಬುದೊಂದು ವಿಪರ್ಯಾಸ. ಅದಕ್ಕೆ ಕಾರಣ ಕಳೆದ ನೂರು ವರ್ಷಗಳಲ್ಲಿ ಭಾರತೀಯ ರಾಜಕೀಯದಲ್ಲಿ ನಡೆದಿರುವ ಬೆಳವಣಿಗೆಗಳು. ಹಿಂದೂ ಎಂಬ ಶಬ್ದವನ್ನು ಇಂದು ನಿರ್ವಿಕಾರವಾಗಿ, ವಸ್ತುನಿಷ್ಠವಾಗಿ ನೋಡುವುದೇ ನಮಗೆ ಸಾಧ್ಯವಿಲ್ಲದಂತಾಗಿದೆ. ಒಂದೆಡೆ ಹಿಂದುತ್ವದ ರಾಜಕೀಯದಿಂದಾಗಿ ಅದನ್ನು ಭಾವನಾತ್ಮಕವಾಗಿ ಕ್ರೈಸ್ತ, ಇಸ್ಲಾಂ ಎಂಬ ಪ್ರಭೇದಗಳಿಗೆ ಪ್ರತಿಯಾಗಿ ನಮ್ಮೊಂದು ಅಹಂ ಎಂಬಂತೇ ನೋಡುವುದನ್ನು ಕಲಿತಿದ್ದೇವೆ,ಅಥವಾ ಪ್ರಗತಿಪರ ಚಳವಳಿಗಳ ರಾಜಕೀಯದಿಂದಾಗಿ ಅದಕ್ಕೆ ಇಲ್ಲದ ಹಲ್ಲು ಉಗುರುಗಳನ್ನು ಆರೋಪಿಸಿ ಅದರ ಕುರಿತು ಸಂದೇಹ ಹಾಗೂ ಭಯಗಳ ಮೂಲಕ ಪ್ರತಿಕ್ರಿಯಿಸುವುದನ್ನು ಕಲಿತಿದ್ದೇವೆ. ಎರಡೂ ಪಕ್ಷಗಳೂ ಈ ಶಬ್ದಕ್ಕೆ ನಿರ್ದಿಷ್ಟ ರಾಜಕೀಯ ಅರ್ಥಗಳನ್ನು ರೂಢಿಸಿಬಿಟ್ಟಿವೆ. ವಿವೇಕಾನಂದರ ಕುರಿತು ನಮ್ಮ ತಲೆಮಾರಿನವರ ಪ್ರತಿಕ್ರಿಯೆಗಳು ಈ ಅರ್ಥಗಳಿಂದ ಪ್ರಭಾವಿತವಾಗಿವೆ ಎಂಬುದು ಸ್ಪಷ್ಟ.

ಮತ್ತಷ್ಟು ಓದು »

28
ಮಾರ್ಚ್

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 2

– ರೋಹಿತ್ ಚಕ್ರತೀರ್ಥ

ಶ್ರೀ ರಾಮನವಮಿಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1

ಶ್ರೀ ರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ;
ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ

ಎಂದು ಶುರುವಾಗುತ್ತದೆ ಅಡಿಗರ ಕವಿತೆ. ರಾಮನ ಹುಟ್ಟುಹಬ್ಬ ಬೇಸಗೆಯಲ್ಲಿ ಬರುತ್ತದೆ ಎನ್ನುವುದನ್ನು ಹೇಳಲಿಕ್ಕೇ ಕವಿ ಎರಡು ಸಾಲುಗಳಲ್ಲಿ ಪಾನಕ, ಪನಿವಾರ, ಕೋಸಂಬರಿ, ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆಗಳನ್ನು ಹರಡಿ ಕೂತಿದ್ದಾರೆ! ಇಲ್ಲಿ ಪಾನಕ ಎಂದರೆ ಪಾನಕ, ಪನಿವಾರ ಎಂದರೆ ಪನಿವಾರ. ಅದಕ್ಕೆ ಎರಡನೆ ಅರ್ಥ ಇರುವ ಹಾಗೇನೂ ಕಾಣುತ್ತಿಲ್ಲ. ನಾನು ಈಗಾಗಲೇ ಹೇಳಿದ ಹಾಗೆ, ಅಡಿಗರು ಚಿತ್ರಕ ಶಕ್ತಿಯ ಕವಿ. ಒಂದು ಸಂಗತಿಯನ್ನು ವಿವರಿಸಲು ಎಷ್ಟು ಮೂರ್ತ ಉದಾಹರಣೆಗಳು ಸಾಧ್ಯವೋ ಅಷ್ಟನ್ನು ಎತ್ತಿಕೊಂಡು ಬರಬಲ್ಲ ಪ್ರತಿಭಾವಂತ. “ಬೇಸಗೆ” ಅಂದಿದ್ದರೆ ಸಾಕಿತ್ತು. ರಾಮನ ಬರ್ತ್‍ಡೇ ಸಮಯದಲ್ಲಿ ಸೆಕೆ ವಿಪರೀತ ಇರುತ್ತೆ ಎಂದಿದ್ದರೂ ನಡೆಯುತ್ತಿತ್ತು. ಆದರೆ, ಅಂತಹ ಯಾವ ಮಾತನ್ನೂ ಹೇಳದೆ ಪಾನಕ-ಕೋಸಂಬರಿಗಳ ಬಗ್ಗೆ ಹೇಳುತ್ತ ಅಡಿಗರು ಒಂದು ವಿಭಿನ್ನ ವಾತಾವರಣವನ್ನು ಸೃಷ್ಟಿಸುತ್ತಾರೆ. ಅದನ್ನು ಓದುವಾಗ ನಮಗೆ ಹಬ್ಬದ ವಾತಾವರಣ ಕಂಡಂತೆ ಆಗಬೇಕು. ಆ ಸಿಹಿಭಕ್ಷ್ಯಗಳನ್ನು ತಿಂದಹಾಗನಿಸಬೇಕು. ಕಾವ್ಯದ ಉದ್ಧೇಶ ರಸೋತ್ಪತ್ತಿಯಲ್ಲವೆ?

ಅದೆಲ್ಲ ಸರಿ, ಆದರೆ ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ – ಎಂಬ ಸಾಲಿಗೆ ಏನರ್ಥ? ಇಷ್ಟೆಲ್ಲ ಹಬ್ಬದ ವಾತಾವರಣ ಕಟ್ಟಿಕೊಡುವಾಗ ಮಧ್ಯದಲ್ಲಿ ಶಬರಿ ಯಾಕೆ ಬರಬೇಕು? ಅವಳು ಯಾಕೆ ಉರಿಯಬೇಕು? ವ್ಯಕ್ತಮಧ್ಯ ಎಂಬ ಪದವನ್ನು ಅಡಿಗರು ಎತ್ತಿಕೊಂಡಿರುವುದು (ಇತ್ತೀಚೆಗೆ ಕೆಲವು ಬುದ್ಧಿವಂತರು ಸುಡಬೇಕು ಎಂದು ಆದೇಶಿಸಿದ) ಭಗವದ್ಗೀತೆಯಿಂದ! ಅಲ್ಲಿ ಸಾಂಖ್ಯಯೋಗದಲ್ಲಿ ಮತ್ತಷ್ಟು ಓದು »

27
ಮಾರ್ಚ್

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1

– ರೋಹಿತ್ ಚಕ್ರತೀರ್ಥ

Gopala Krishna Adigaಗೋಪಾಲಕೃಷ್ಣ ಅಡಿಗರು ನನ್ನ ಮೆಚ್ಚಿನ ಕವಿ.ಲ್ಯಾಟಿನ್ ಜಗತ್ತಿಗೆ ನೆರೂಡ ಇದ್ದ ಹಾಗೆ, ಶಿಷ್ಟ ಅಮೆರಿಕಕ್ಕೆ ಎಲಿಯೆಟ್ ಇದ್ದ ಹಾಗೆ ಕನ್ನಡ ಜಗತ್ತಿಗೆ ಅಡಿಗರು. ಅವರನ್ನು ಕೇವಲ ಕನ್ನಡದ ನೆಲಕ್ಕೆ ಸೀಮಿತಗೊಳಿಸುವುದು ತಪ್ಪಾಗಬಹುದು. ಅಡಿಗರು ಇಂಗ್ಲೀಷಿನಲ್ಲಿ ಬರೆದಿದ್ದರೆ ಅಥವಾ ಅವರು ಬರೆದಿದ್ದನ್ನು ಅಷ್ಟೇ ಸಮರ್ಥವಾಗಿ ಇಂಗ್ಲೀಷಿಗೆ ಅನುವಾದಿಸುವುದು ಸಾಧ್ಯವಿದ್ದರೆ, ನಮಗೆ ಇನ್ನೊಂದು ನೊಬೆಲ್ ಅನಾಯಾಸವಾಗಿ ದೊರೆಯುತ್ತಿತ್ತು. ಅಡಿಗರ ಕಾವ್ಯಕೃಷಿಯ ಬಗ್ಗೆ ಗೊತ್ತಿಲ್ಲದ ಕನ್ನಡಿಗ ಸಿಗುವುದು ಅಪರೂಪ. ಅವರ ಹೆಸರು ತಿಳಿಯದವರು ಕೂಡ “ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು” ಎಂಬ ಹಾಡು ಕೇಳಿದರೆ, ಕೊರಳು ತುರಿಸಿಕೊಳ್ಳುವ ಬೆಕ್ಕಿನಂತೆ ಕಣ್ಣುಮುಚ್ಚಿ ಕಾವ್ಯಾರ್ಥವನ್ನು ಆನಂದಿಸುತ್ತಾರೆ. ನವ್ಯ ಎಂಬ ಒಂದು ಪಂಥವನ್ನೇ ಕನ್ನಡದಲ್ಲಿ ಸೃಷ್ಟಿಸಿದ, ಕಾವ್ಯಲೋಕದಲ್ಲಿ ಹೊಸದಾರಿ ಕೊರೆದ, ಒಂದು ಯುಗದ ಕಣ್ಣು ತೆರೆಸಿದ ಕವಿ ಎಂದು ಕರೆಸಿಕೊಂಡ ಅಡಿಗರು ಕನ್ನಡಿಗರಿಗೆ ಕೊಟ್ಟಿರುವ ಸಫಲ ಕವಿತೆಗಳ ಸಂಖ್ಯೆ ದೊಡ್ಡದು. ಕುಮಾರವ್ಯಾಸನನ್ನು ಓದಿಕೊಂಡರೆ ಹೇಗೋ ಹಾಗೆಯೇ ಅಡಿಗರನ್ನು ಓದಿಕೊಂಡರೂ ಶಬ್ದ ಮತ್ತು ಅರ್ಥಗಳ ದಾರಿದ್ರ್ಯ ಬರುವುದಿಲ್ಲ ಎಂದು ಧೈರ್ಯವಾಗಿ ಹೇಳಬಹುದು.

ಚೈತ್ರ ಮಾಸದ ಶುಕ್ಲಪಕ್ಷದ ಒಂಬತ್ತನೆ ದಿನ ನವಮಿ. ರಾಮನ ಬರ್ತ್‍ಡೇ. ರಾಮಾಯಣದ ನಾಯಕಮಣಿ, ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರನ ಬಗ್ಗೆ ಅಡಿಗರು ಒಂದು ಕವಿತೆ ಬರೆದಿದ್ದಾರೆ. ಉಡುಪಿಯ ರಥಬೀದಿಯ ಪರಿಸರದಲ್ಲಿ ಪ್ರತಿವರ್ಷದ ಬೇಸಗೆಯಲ್ಲಿ ನಡೆಯುವ ವಸಂತೋತ್ಸವದಲ್ಲೊಮ್ಮೆ ಅವರು ಈ ಕವನ ವಾಚಿಸಿದ್ದರಂತೆ. (ಪ್ರಾಸಂಗಿಕವಾಗಿ ಒಂದಷ್ಟು ಮಾತು: ಉಡುಪಿ ಮತ್ತು ಅಡಿಗರ ಸಂಬಂಧಕ್ಕೆ ಹಲವು ಕೊಂಡಿಗಳಿವೆ. ಅಡಿಗರು ಆಚಾರ್ಯ ಮಧ್ವರ ಮೇಲೆ “ಆನಂದತೀರ್ಥರಿಗೆ” ಎಂಬ ಕವಿತೆ ಬರೆದಿದ್ದಾರೆ. ಹಾಗೆಯೇ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕ ಮತ್ತು ಪ್ರಿನ್ಸಿಪಾಲ್ ಆಗಿಯೂ ಕೆಲವರ್ಷ ಕೆಲಸ ಮಾಡಿದ್ದಾರೆ. ಅವರ “ಸುವರ್ಣಪುತ್ಥಳಿ” ಕವನಸಂಗ್ರಹಕ್ಕೆ ಉಡುಪಿಯ ಜಿ. ರಾಜಶೇಖರ ಮುನ್ನುಡಿ ಬರೆದರು)

ಮತ್ತಷ್ಟು ಓದು »

27
ಮಾರ್ಚ್

ಶಿಕ್ಷಣ ಮತ್ತು ಧರ್ಮ: ಪರಸ್ಪರ ಪೂರಕ ಅಂಶಗಳು

– ಎಸ್.ಎನ್.ಭಾಸ್ಕರ್‍

right-to-education_3ಶಿಕ್ಷಣದ ಮೂಲ ಉದ್ದೇಶ ವ್ಯಕ್ತಿಯ ಪರಿಪೂರ್ಣ ವಿಕಾಸ. ಸಂಸ್ಕಾರ, ತಿಳುವಳಿಕೆ, ಜ್ಞಾನ, ಕೌಶಲ್ಯ ಇವು ಶಿಕ್ಷಣದ ಮೂಲಭೂತ ಅಂಶಗಳು. ಉತ್ತಮ ಮಟ್ಟದ ಶಿಕ್ಷಣ ವ್ಯವಸ್ಥೆಯು ಈ ಎಲ್ಲಾ ಅಂಶಗಳಲ್ಲೂ ವ್ಯಕ್ತಿಯನ್ನು ಶಿಕ್ಷಿತನನ್ನಾಗಿಸುತ್ತದೆ. ಪ್ರಾರಂಭಿಕ ಹಂತದಿಂದಲೇ ಮಕ್ಕಳಿಗೆ ಈ ಎಲ್ಲಾ ಪ್ರಕಾರಗಳಲ್ಲಿ ಶಿಕ್ಷಣವನ್ನು ಒದಗಿಸುವುದು ಶೈಕ್ಷಣಿಕ ವ್ಯವಸ್ಥೆಯೊಂದರ ಆದ್ಯತೆ – ಯಾಗಬೇಕಾಗುತ್ತದೆ. ಆದರೆ ಇಂದಿನ ಪರಿಸ್ಥಿತಿ ಬಿನ್ನವಾಗಿದೆ. ಪಾಶ್ಚಾತ್ಯ ಕ್ರಮಗಳ, ವಿಧಿ-ವಿಧಾನಗಳ ಅನುಕರಣೆಯಲ್ಲಿ ನಾ ಮುಂದು ತಾ ಮುಂದು ಎಂದು ಶಿಕ್ಷಣ ಸಂಸ್ಥೆಗಳು ಪೈಪೋಟಿಗೆ ಬಿದ್ದಿವೆ. ಕೇವಲ ಆಂಗ್ಲ ಭಾಷೆಯ ಕಲಿಕೆಯಿಂದ ಮಕ್ಕಳು ಸುಶಿಕ್ಷಿತರಾಗುತ್ತಾರೆ ಎಂಬುದು ಬಹುತೇಕ ಪೋಷಕರ ಅನಿಸಿಕೆಯಾಗಿದೆ, ಇದನ್ನು ಮನಗಂಡ ಹಲವಾರು ಖಾಸಗಿ ಶಾಲೆಗಳು ಅಂಗ್ಲ ಭಾಷೆಯನ್ನು ಮಕ್ಕಳ ಮೇಲೆ ಹೇರುವುದರ ಮೂಲಕ ಜನಪ್ರಿಯವಾಗುತ್ತಿವೆ. ತನ್ನದೇ ಮಾತೃಭಾಷೆಯಲ್ಲಿ ಉನ್ನತ ಮಟ್ಟದ ಪ್ರೌಢಿಮೆ ಗಳಿಸದೇ ಇರುವ ವ್ಯಕ್ತಿಯ ಶಿಕ್ಷಣವು ಪರಿಪೂರ್ಣವಾಗುವುದಾದರೂ ಹೇಗೆ..? ಮೇಲೆ ತಿಳಿಸಿದ ನಾಲ್ಕೂ ಅಂಶಗಳೂ ಶಿಕ್ಷಣದ ಆಧಾರ ಸ್ಥಂಭಗಳಿದ್ದಂತೆ. ಯಾವುದೇ ಒಂದು ಸ್ಥಂಭ ಕುಸಿದರೂ ವ್ಯಕ್ತಿಯ ಕಲಿಕೆ, ಶಿಕ್ಷಣ ಪರಿಪೂರ್ಣತೆಯನ್ನು ಪಡೆಯುವುದಿಲ್ಲ. ಹಾಗೆಯೇ ನಮ್ಮ ಧರ್ಮ, ಸಂಸ್ಕೃತಿಯ ಬಗ್ಗೆ ಸೂಕ್ತ ಅರಿವು ಅಧ್ಯಯನವಿಲ್ಲದೇ ಜ್ಞಾನಾರ್ಜನೆ ವಿಕಾಸವಾಗುವುದಿಲ್ಲ,  ನಮ್ಮ ಸಂಸ್ಕೃತಿಯ ಹಿನ್ನೆಲೆ ವ್ಯಾಪ್ತಿಗಳನ್ನು ಅರಿಯದೆಯೇ ಇದ್ದರೆ ಹೇಗೆ ತಾನೆ ಕಲಿಕೆ ಪೂರ್ಣತೆಯನ್ನು ಮುಟ್ಟಲು ಸಾಧ್ಯ..? ನಮ್ಮ ಸಂಸ್ಕೃತಿಯು ನಮ್ಮ ಬೇರುಗಳಿದ್ದ ಹಾಗೆ  ಮೂಡುವ ಪ್ರತೀ ಚಿಗುರಿಗೂ ಸತ್ವ ಬೇರುಗಳಿಂದಲೇ ಒದಗ ಬೇಕಾಗುತ್ತದೆ. ನಮ್ಮದೇ ಬೇರುಗಳ ಬಗ್ಗೆ ನಮ್ಮ ಮಕ್ಕಳು ಶಿಕ್ಷಿತರಾಗದಿದ್ದರೆ ಅವರ ಜ್ಞಾನ ಅರ್ಧ ಬೆಂದ ಮಡಿಕೆಯಾಗುವುದರಲ್ಲಿ ಸಂಶಯವೇ ಇಲ್ಲ.

ಮತ್ತಷ್ಟು ಓದು »

26
ಮಾರ್ಚ್

ಎದೆಗೆ ಬಿದ್ದ ಅಕ್ಷರ: ಸಮಾನತೆಯ ಕನಸು ಮತ್ತು ಕಾಣ್ಕೆ

– ರಾಜಕುಮಾರ.ವ್ಹಿ.ಕುಲಕರ್ಣಿ

ಮುಖ್ಯ ಗ್ರಂಥಪಾಲಕ, ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಬಾಗಲಕೋಟ

ಎದೆಗೆ ಬಿದ್ದ ಅಕ್ಷರ‘ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಇಂದಲ್ಲ ನಾಳೆ ಫಲ ಕೊಡುವುದು’ ದೇವನೂರ ಮಹಾದೇವರ ‘ಎದೆಗೆ ಬಿದ್ದ ಅಕ್ಷರ’ ಪುಸ್ತಕದ ಪುಟಗಳು ತೆರೆದುಕೊಳ್ಳುವುದೇ ಈ ಮೇಲಿನ ನುಡಿಯೊಂದಿಗೆ.ಪ್ರಕಟವಾದ ಕೆಲವೇ ತಿಂಗಳುಗಳಲ್ಲಿ ಅನೇಕ ಮುದ್ರಣಗಳನ್ನು ಕಂಡ ಪುಸ್ತಕವಿದು. ದೇವನೂರ ಮಹಾದೇವ ಕನ್ನಡ ಸಾಹಿತ್ಯ ಲೋಕದ ಅನನ್ಯ ಬರಹಗಾರ. ಅವರ ಅನೆಕ ಬಿಡಿ ಲೇಖನಗಳು ಮತ್ತು ಕಥೆಗಳು ಪ್ರಕಟವಾಗಿವೆಯಾದರೂ ಪುಸ್ತಕ ರೂಪದಲ್ಲಿ ಅವರು ಬರಹಗಳು ಬೆಳಕು ಕಂಡಿದ್ದು ಬಹಳಷ್ಟು ಕಡಿಮೆ ಎಂದೇ ಹೇಳಬಹುದು. 1973 ರಲ್ಲಿ ‘ದ್ಯಾವನೂರು’, 1982 ರಲ್ಲಿ ‘ಒಡಲಾಳ’, 1988 ರಲ್ಲಿ ‘ಕುಸುಮ ಬಾಲೆ’ಯ ನಂತರ ಪ್ರಕಟವಾದ ಕೃತಿ ಈ ‘ಎದೆಗೆ ಬಿದ್ದ ಅಕ್ಷರ’.

ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರಾದ ದೇವನೂರ ಮಹಾದೇವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರಿನವರು. ಆರಂಭದ ಕೆಲವು ವರ್ಷಗಳ ಕಾಲ ಅಧ್ಯಾಪಕರಾಗಿ ಕೆಲಸ ಮಾಡಿದ ಮಹಾದೇವ ಅದು ತಮ್ಮ ಜಾಯಮಾನಕ್ಕೆ ಒಗ್ಗದೇ ಹೋದಾಗ ಯಾವ ಮುಲಾಜಿಲ್ಲದೆ ನೌಕರಿಗೆ ರಾಜಿನಾಮೆಯಿತ್ತು ಕೃಷಿಯಲ್ಲಿ ತೊಡಗಿಸಿಕೊಂಡವರು.ಜೊತೆಗೆ ಜೊತೆಗೆ ದಲಿತ ಚಳುವಳಿ ಮತ್ತು ಬಂಡಾಯ ಸಾಹಿತ್ಯದೊಂದಿಗೂ ತಮ್ಮನ್ನು ಗುರುತಿಸಿಕೊಂಡವರು. ಹಾಗೆಂದು ದಲಿತ ಚಳುವಳಿಯ ಬಗ್ಗೆ ಅವರದು ಸಂಪೂರ್ಣ ಕುರುಡು ನಂಬಿಕೆಯಲ್ಲ. ದಲಿತ ಸಂಘರ್ಷ ಸಮಿತಿಯಲ್ಲಿನ ಒಳಜಗಳ ಹಾಗೂ ಒಡಕುಗಳ ಬಗ್ಗೆ ನಿಷ್ಠುರವಾಗಿ ಮಾತನಾಡುವ ಎದೆಗಾರಿಕೆ ಅವರದು. ಕುವೆಂಪು ಮತ್ತು ಬೇಂದ್ರೆ ಸಾಹಿತ್ಯದ ಜೊತೆಗೆ ಶೇಕ್ಸ್ ಪಿಯರ್ ಮತ್ತು ಟಾಲ್‍ಸ್ಟಾಯ್ ಅವರನ್ನೂ ಓದಿಕೊಂಡಿರುವ ದೇವನೂರ ಮಹಾದೇವ ಅಂಬೇಡ್ಕರರಷ್ಟೇ ಗಾಂಧಿಯನ್ನೂ ಪ್ರೀತಿಸಬಲ್ಲರು. ಅವರು ಗತದ ನೆನಪುಗಳೊಂದಿಗೆ ವರ್ತಮಾನದಲ್ಲಿ ಬದುಕುತ್ತ ನಾಳಿನ ಕನಸುಗಳನ್ನು ಕಾಣುವರು. ಅವರ ಈ ವ್ಯಕ್ತಿತ್ವಕ್ಕೊಂದು ನಿದರ್ಶನ ಕೊಡುವುದಾದರೆ ‘ಗಾಂಧಿಗೆ ಅಬ್ರಾಹಿಂ ಲಿಂಕನ್ ಸಿಕ್ಕಿದ್ರೆ ಭಾಳ ದೊಡ್ಡ ಸಂಗತಿಗಳು ಆಗ್ತಿದ್ವೇನೋ’ ಎನ್ನುವ ಅವರ ಹೇಳಿಕೆಯೇ ಒಂದು ದೃಷ್ಟಾಂತ. ತಳ ಸಮುದಾಯಗಳ ಬದುಕಿನ ತಲ್ಲಣಗಳನ್ನು ಬರವಣಿಗೆಯ ಮೂಲಕ ತೆರೆದಿಡುತ್ತಿರುವ ಮಹಾದೇವರ ಬರಹಗಳಲ್ಲಿ ಸಂವೇದನೆ ಹಾಗೂ ಸಮಾಜದ ಕುರಿತಾದ ಕಾಳಜಿ ಈ ಗುಣಗಳೇ ಎದ್ದು ಕಾಣುತ್ತವೆ. ‘ನನಗೆ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಎಂಬಂತೆ ಚಿಂತಿಸುವವರು ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ದೊಡ್ಡ ಚಿಂತಕರು’ ಸಂದರ್ಶನವೊಂದರಲ್ಲಿ ಶಂಕರ ಮೊಕಾಶಿ ಪುಣೇಕರ್ ಅವರು ಹೇಳಿದ ಈ ಮಾತು ದೇವನೂರ ಮಹಾದೇವರಿಗೆ ಹೆಚ್ಚು ಅನ್ವಯಿಸುತ್ತದೆ.

ಮತ್ತಷ್ಟು ಓದು »

26
ಮಾರ್ಚ್

ರೇಡಿಯೋ ಪುರಾಣ

– ಭರತೇಶ ಅಲಸಂಡೆಮಜಲು

ರೇಡಿಯೋರೇಡಿಯೋ ಅದೆನೋ ಆಯಾತಕಾರದ ಮಾತನಾಡುವ ಪೆಟ್ಟಿಗೆ. ನಮ್ಮ ಮನೆಯ ಸುರಕ್ಷಿತ ಜಾಗದಲ್ಲಿ ಪುಟಾಣಿಗಳಾದ ನಮಗೆ ಎಟುಕದ ಆಯಕಟ್ಟಿನ ಸ್ಥಳದಲ್ಲಿ ಹೆಚ್ಚಾಗಿ ಕಪಾಟಿನ ಮೇಲೆ ತಪಸ್ಸು ಮಾಡುತ್ತಾ ಕುಳಿತಿರುತಿತ್ತು. ಮನೆಯಲ್ಲಿ ಯಾರು ಮೊದಲು ಎದ್ದೇಳುತ್ತಾರೋ ಅವರು ರೇಡಿಯೊವನ್ನು ಚಾಲಿಸುವವರು. ಸಮಯ ಬೆಳಗ್ಗೆ 6 ಗಂಟೆ ಮೊದಲು ಕೊಯೋ ಎಂದು ಅರೆದುತ್ತಾ ಸದ್ದು ಮಾಡಿದರೆ 5:55 ಮಿನಿಟಿಗಾಗುವಾಗ ಅದೆನೋ ವಿಶೇಷ ಗುರುತು ಸಂಗೀತ(Signature ಟ್ಯೂನ್) ಕಾರ್ಯಕ್ರಮ  ಮುನ್ಸೂಚನೆಗಿರುವ ವಾದ್ಯಪ್ರಕಾರದ ಧ್ವನಿ ಬದಲಾಗುವುದು. ಸಮಯ 6 ಭಜಿಸಿತೆಂದರೆ ವಂದೇ ಮಾತರಂನೊಂದಿಗೆ ದಿನಚರಿ ಶುರು…

ಅಜ್ಜನಿಂದ ಬಳುವಳಿಯಾಗಿ ಬಂದಿದ್ದ ರೇಡಿಯೋ ನಮ್ಮದು, ಅದರ ಕೈಗೊಂದು ಉದ್ದ ಲಾಡಿ ಅಲ್ಲಿ ಇಲ್ಲಿ ನೇತಾಡಿಸಲು… ಅಪರೂಪಕ್ಕೆ ನನ್ನ ತಮ್ಮ ಬೀರ್ಯದಿಂದ ಬೊಂಡ ತೆಗೆದುಕೊಡುವುದ್ದಕ್ಕಾಗಿಯೋ, ಭರಣಿಯಲ್ಲಿ ಇದ್ದ ತಿಂಡಿ ನೋಡಿಯೋ ಹಠದಿಂದ ಅರಚುವುದು… ಮತ್ತೆ ಸಮಾಧಾನವಾಗಲು ಅಜ್ಜನ ರೇಡಿಯೋವೇ ಬೇಕಿತ್ತು. ತನ್ನ ಕುತ್ತಿಗೆಗೆ ಕಟ್ಟಿಕೊಂಡು ಮನೆಯೊಳಗೆ ಹೊರಗೆ ಓಡಾಡಿ ಮಂಕಟವಾಗುತ್ತಿದ್ದ ,ಅಗಾಗ ಕೋಪದಿಂದ ಉಂಬಿ ಕೆಳಗೆ ಹಾಕಿ, ಕೇಳದಂತೆಯು ಮಾಡುತಿದ್ದ.  ಕೆಲವೊಮ್ಮೆ ವಿಶೇಷ ಸಂದರ್ಭಗಳಲ್ಲಿ ಪೀಟಿಲು,

ಮತ್ತಷ್ಟು ಓದು »

25
ಮಾರ್ಚ್

ಸಲ್ಲದ ವಾದದಲ್ಲಿ ಬಂಧಿಯಾದ ಸಂಕಮ್ಮ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ

ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಮಲೆ ಮಾದೇಶ್ವರ ಕಾವ್ಯಕಥನದ ರೀತಿ, ಬೃಹತ್ತು-ಮಹತ್ತು ಮತ್ತು ಕಾವ್ಯಗುಣಗಳಿಂದ ಕನ್ನಡ ಜನಪದ ಮಹಾಕಾವ್ಯಗಳಲ್ಲಿ ಅಗ್ರಮಾನ್ಯವಾದ ಮಲೆಮಾದೇಶ್ವರ ಕಾವ್ಯದ ಅತ್ಯಂತ ಪ್ರಮುಖ ಭಾಗ ಸಂಕಮ್ಮನ ಸಾಲು. ಈ ಕಾವ್ಯ ಹಾಡುವವರು, ದೇವರಗುಡ್ಡರು ಅಥವಾ ಕಂಸಾಳೆಯವರು ಸಂಕಮ್ಮನ ಸಾಲನ್ನು ಸಾಮಾನ್ಯವಾಗಿ ಹಾಡಿಯೇ ಹಾಡುತ್ತಾರೆ. ಕೋರಣ್ಯಕ್ಕೆ ಬಂದಾಗ ಕೆಲವೊಮ್ಮೆ ಜನರೇ ಬೇಡಿಕೆ ಇಟ್ಟು ಈ ಸಾಲನ್ನು ಹಾಡಿಸುವುದೂ ಇದೆ. ಈ ಕಥೆಯನ್ನು ತನ್ಮಯರಾಗಿ ಕೇಳುವ ಜನ ಸಂಕಮ್ಮನ ಕಷ್ಟ ಕೋಟಲೆ ಕೇಳಿ ಕಣ್ಣೀರು ಇಡುವುದೂ ಇದೆ. ಈ ಕಾವ್ಯವನ್ನು ಮೊದಲ ಬಾರಿ ಸಮಗ್ರವಾಗಿ ಸಂಗ್ರಹಿಸಿದ ಪಿ ಕೆ ರಾಜಶೇಖರ್ ಅವರು ಕ್ಷೇತ್ರಕಾರ್ಯದ ಸಂದರ್ಭದಲ್ಲಿ ತಮಗಾದ ಇಂಥ ಅನುಭವವನ್ನು ತಮ್ಮ ಸಂಗ್ರಹದಲ್ಲಿ ದಾಖಲಿಸಿದ್ದಾರೆ.

ಕೇಳಲು ಕಷ್ಟವಾದರೂ ಜನಪದರು ಬೇಡಿ ಬಯಸುವ ವಿಶಿಷ್ಟ ಕಥಾ ಭಾಗ ಇದು ಎಂಬುದರಲ್ಲಿ ಅನುಮಾನವಿಲ್ಲ. ಮಾದೇಶ್ವರನ ಹುಟ್ಟಿನ ಸಾಲು, ಶ್ರವಣ ದೊರೆ ಸಾಲು, ಬೇವಿನ ಹಟ್ಟಿ ಕಾಳಮ್ಮನ ಸಾಲುಗಳೂ ಆಸಕ್ತಿದಾಯಕವಾದವಾದರೂ ಜನರಿಗೆ ಇವು ಸಂಕಮ್ಮನ ಸಾಲಿನಷ್ಟು ಪ್ರಿಯವಾಗಿಲ್ಲ. ಸಂಕಮ್ಮನಲ್ಲಿ ಒಂದು ಬಗೆಯ ಆದರ್ಶವನ್ನು ಜನಪದರು ಬಹುಶಃ ಕಂಡಿರುವುದೇ ಇದಕ್ಕೆ ಕಾರಣವಿರಬೇಕು. ಗಂಡ ನೀಲಯ್ಯನ ವಿರುದ್ಧ ಸಂಕಮ್ಮನೇನೂ ಬಂಡೇಳುವುದಿಲ್ಲ; ಅವನ ಕ್ರಿಯೆಗೆ ಪ್ರತಿಕ್ರಿಯೆಯನ್ನೂ ತೋರುವುದಿಲ್ಲ; ತಂತ್ರಕ್ಕೆ ಪ್ರತಿ ತಂತ್ರವನ್ನೂ ಹೆಣೆಯುವುದಿಲ್ಲ. ಆಕೆಯ ವೃತ್ತಾಂತದಲ್ಲಿ ಕಾಣುವುದು ಅವಳ ತಾಳ್ಮೆ, ಸಹನೆ ಮತ್ತು ಕ್ಷಮೆ. ಬಹುಶಃ ಜನಪದರು ಪ್ರತಿಪಾದಿಸುವ ಇಂಥ ಆದರ್ಶದ ಗುಣಗಳು ಈ ಸಾಲುಗಳಲ್ಲಿ ಚಿತ್ರಿತವಾದ ಕಾರಣ ಜನಪದರು ಇದನ್ನು ಹೆಚ್ಚಾಗಿ ಬಯಸಲು ಕಾರಣವಾಗಿರಬಹುದು.

ಮತ್ತಷ್ಟು ಓದು »

24
ಮಾರ್ಚ್

ಅಂದು “ಕೈ” ಗೆ ಜೈ ಎಂದ ಬುದ್ಧಿಜೀವಿಗಳು ಎಲ್ಲಿ ಅಡಗಿದ್ದಾರೆ?

– ರಾಕೇಶ್ ಶೆಟ್ಟಿ

Intelectuals“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಮ್ಮ ಸಂಪೂರ್ಣ ಬೆಂಬಲವಿದೆ.ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳವಿದೆ.ಆದರೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಕ್ಕೆ ಬದ್ಧವಾಗಿ ಆಡಳಿತ ನಡೆಸುವ ಹಿನ್ನೆಲೆ ಆ ಪಕ್ಷಕ್ಕಿದೆ. ಇಂತಹ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ.ಬಿಜೆಪಿಯ ದುರಾಡಳಿತ ಹಾಗೂ ನೈಸರ್ಗಿಕ ಸಂಪನ್ಮೂಲ ಲೂಟಿಗೆ ಬ್ರೇಕ್ ಹಾಕಿ ಕೋಮುವಾದಿ ಶಕ್ತಿಗಳ ನಿರ್ಮೂಲನೆಗೆ ಪರ್ಯಾಯವಾಗಿ ಉಳಿದಿರುವ ಶಕ್ತಿ ಕಾಂಗ್ರೆಸ್ ಮಾತ್ರ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಒಕ್ಕೊರಲ ನಿರ್ಧಾರ ಕೈಗೊಂಡಿದ್ದೇವೆ … “ ಎಂಬಂತಹ ಸಾಲುಗಳಿದ್ದ ಪತ್ರವೊಂದನ್ನು ಕಳೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯ ಸಮಯದಲ್ಲಿ ಬರೆದು ದಿ.ಯು.ಆರ್. ಅನಂತ ಮೂರ್ತಿ, ಕೆ.ಮರುಳಸಿದ್ದಪ್ಪ ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ.ಬಂಜಗೆರೆ ಜಯಪ್ರಕಾಶ್,ಮಾವಳ್ಳಿಶಂಕರ್,ಪ್ರೊ.ರವಿವರ್ಮಕುಮಾರ್ ಮುಂತಾದ ಕೆಲ ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸಿದ್ದವರು.’ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಯು.ಆರ್.ಅನಂತಮೂರ್ತಿ ಸೇರಿದಂತೆ ಕೆಲ ಸಾಹಿತಿಗಳು ಕಾಂಗ್ರೆಸ್ ಬೆಂಬಲಿಸಿದ್ದಾರೆ.ಇದಕ್ಕೆನನ್ನ ಸಹಮತವಿದೆ’ ಎಂದು ಹಿರಿಯ ಸಾಹಿತಿ ಚಂಪಾ ಅವರೂ ಹೇಳಿದ್ದರು.

ಆ ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಂದು,ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು.ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡ ನಂತರ,ಅಂದು ಬೆಂಬಲ ಪತ್ರದಲ್ಲಿ ಹೇಳಿದ್ದಂತೆ “ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಕ್ಕೆ ಬದ್ಧವಾಗಿ ಆಡಳಿತವನ್ನು ಕಾಂಗ್ರೆಸ್ಸ್ ಸರ್ಕಾರ ನಡೆಸಿದೆಯಾ ಮಾನ್ಯ ಸಾಹಿತಿಗಳೇ-ಬುದ್ಧಿಜೀವಿಗಳೇ? ಬಹಳಷ್ಟು ಹಿಂದೆಯೇನು ಹೋಗುವುದು ಬೇಡ.ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರು ವಿದ್ಯಾಮಾನವನ್ನೇ ತೆಗೆದುಕೊಳ್ಳೋಣ.

ಮತ್ತಷ್ಟು ಓದು »