ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೨
– ಸುದರ್ಶನ್ ರಾವ್
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೧
ನಾರದರಿಗೆ ಆಶ್ಚರ್ಯ…ಸಂಬಂಧದಲ್ಲಿ ನಾನು ಕಿರಿಯ, ಬ್ರಹ್ಮನ ಮಗನಾದ ನಾನು ಇವನಿಗೆ ಮೊಮ್ಮಗನಾಗಬೇಕು. ಯಾವಾಗಲೂ ನೀನು, ತಾನು ಎಂದು ಏಕವಚನದಲ್ಲಿ ಕರೆಯುತ್ತಿದ್ದ ಇವತ್ತು ನೀವು, ನಿಮಗೆ ಎಂಬ ಬಹುವಚನ ಪ್ರಯೋಗ ಮಾಡುತ್ತಿದ್ದಾನಲ್ಲ!, ತಲೆ ಬಿಸಿ ಆಗಿರಲೇ ಬೇಕು ಎಂದು ಅವರಿಗೆ ಗೊತ್ತಾಯಿತು.
ಕಬ್ಬಿಣ ಕಾದಿರುವಾಗಲೇ ಬಡಿಯಬೇಕೆಂದು ತಮ್ಮ ಎಂದಿನ ಧಾಟಿಯಲ್ಲಿ ಹೇಳಿದರು, “ಹೇ ಭಗವಂತಾ, ಬ್ರಹ್ಮಾಂಡವೇ, ಆ ದೇವನಾಡುವ ಬೊಂಬೆಯಾಟವಯ್ಯ, ಅಂಬುಜ ನಾಭನ, ಅಂತ್ಯವಿಲ್ಲದಾತನ ತುಂಬು ಮಾಯವಯ್ಯಾ… ಈ ಲೀಲೆಯು …ಎಂದು ನಾನು ನಿನ್ನನ್ನು ಯಾವತ್ತಿನಿಂದಲೂ, ಅದೆಷ್ಟು ಬಾರಿ ಸ್ತುತಿಸಿಲ್ಲ. ಈಗ ನೋಡಿದರೆ ಭೂಮಿಯಲ್ಲಿ ಬೇರೆಯೇ ಆಟ ನಡೆದಿದೆ. ಅಲ್ಲಿ, ಆ ಭೂಮಿಯಲ್ಲಿ, ನೀನು ಸೂತ್ರ ಕಟ್ಟಿರದ, ನಿನ್ನ ರಾಗದಾ ಭೋಗದಾ ಉರುಳಲ್ಲಿ ಸಿಕ್ಕಿರದ ಅದೆಷ್ಟೋ ಬೊಂಬೆಗಳು ಅವತರಿಸಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ.ಅವು ಇವರೆಲ್ಲರ ಕಾರ್ಯವಿಧಾನಕ್ಕೆ ಕೊಡಲಿ ಪೆಟ್ಟು ಕೊಡುತ್ತಿರುವುದೂ ನೋಡಿದ್ದೇನೆ. ಇದು ಹೀಗೇ ಮುಂದುವರಿದರೆ ನನ್ನ ಈ ಹಾಡಿಗೆ ಅರ್ಥವಿಲ್ಲದೆ ಹೋಗುತ್ತದೆ. ಅದರ ಸಾಹಿತ್ಯ ಬದಲಾಯಿಸಬೇಕಾಗುವುದು. ನಾನು ಕೇವಲ ಸುದ್ದಿಗಾರನಷ್ಟೇ. ನನಗೆ ಕಾರ್ಯಕಾರಣ ಸಂಬಂಧ ತಿಳಿಯದು. ಆದರೂ ಇದು ಮಾನವರು ಕಲಿತುಕೊಂಡಿರುವ ವೈದ್ಯವಿಜ್ಞ್ನಾನದ ಕರಾಮತ್ತೆಂದು ತೋರುತ್ತಿದೆ. ಯಾವುದಕ್ಕೂ ಅಶ್ವಿನೀ ದೇವತೆಗಳನ್ನು ಕರೆಸಿ ನೋಡು” ಎಂದರು. ಯಾವತ್ತಿನಂತೆ ಅಪೂರ್ಣ ಸಲಹೆ ನೀಡಿ ಮತ್ತಷ್ಟು ಮಜಾ ಪಡೆಯುವ ನಾರದರ ಬುದ್ಧಿ ಅಲ್ಲೂ ಸುಮ್ಮನಿರಲಿಲ್ಲ,. ಈ ನಾರದ ನನ್ನ ಪಾರಮ್ಯವನ್ನೇ ಪ್ರಶ್ನಿಸಬಲ್ಲ ಸನ್ನಿವೇಶದ ಮಾತಾನಾಡುತ್ತಿದ್ದಾನಲ್ಲ. ಇದೇನಿರಬಹುದು. ಸ್ವಲ್ಪ ಮೈಮರೆತಿದ್ದಕ್ಕೆ ಏನೇನೋ ನಡೆದು ಹೋಗಿದೆ ಎಂದು ಕಿರೀಟ ತೆಗೆದು, ತಲೆ ಕೆರೆದುಕೊಂಡು ಅಶ್ವಿನೀದೇವತೆಗಳನ್ನು ಕರೆಸಿದ.
ಮತ್ತಷ್ಟು ಓದು