ವಿಷಯದ ವಿವರಗಳಿಗೆ ದಾಟಿರಿ

Archive for

19
ಮಾರ್ಚ್

ಡಿ.ಕೆ ರವಿಯವರ ಅಸಹಜ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸಹಿಸಂಗ್ರಹ ಅಭಿಯಾನ.ನೀವು ಪಾಲ್ಗೊಳ್ಳಿ

https://www.change.org/p/prime-minister-of-india-home-minister-of-india-make-cbi-probe-on-mysterious-death-of-ias-officer-d-k-ravi

DK Ravi

19
ಮಾರ್ಚ್

ಈ ಸಾವು ನ್ಯಾಯವೇ?

– ಶಿವಪ್ರಸಾದ್ ಭಟ್, ಪುತ್ತೂರು

DK Ravi IASಕೊಲೆ, ಆತ್ಮಹತ್ಯೆ, ಆಕ್ಸಿಡೆಂಟ್, ಸಹಜ ಸಾವು ಅಂತ ದಿನಾ ಈ ಜಗತ್ತಿನಲ್ಲಿ ಅದೆಷ್ಟು ಜನ ಸಾಯುತ್ತಾರೋ ಏನೋ? ಯಾರಿಗ್ಗೊತ್ತು? ಅದೆಲ್ಲಾ ಸುದ್ದೀನೇ ಆಗಲ್ಲಾ. ದಿನಾ ಸಾಯೋರಿಗೆ ಅಳೋರು ಯಾರು ಅಲ್ವಾ? ಆದರೆ ಕೆಲವೊಂದು ಸಾವು ತಣ್ಣಗೆ ಸುದ್ದಿ ಮಾಡುತ್ತವೆ. ನಮ್ಮ ಸಂಬಂಧಿಕರಲ್ಲದೇ ಇದ್ದರೂ ಅನುಕಂಪ ಹುಟ್ಟಿಸುತ್ತದೆ. ಕೇಡಿಗರ ಬಗೆಗೆ ಆಕ್ರೋಶವೆಬ್ಬಿಸುತ್ತದೆ.

ಘಟನೆ 1:

ಮಕ್ಕಳ ಭವಿಷ್ಯ ಚೆನ್ನಾಗಿ ರೂಪಿಸಬೇಕೆಂದು ಎಲ್ಲಾ ತಂದೆ ತಾಯಿಗೂ ಆಸೆ ಇರುತ್ತದೆ. ಅದಕ್ಕಾಗಿ ಅವರು ಬೇರೆ ಬೇರೆ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಹಾಗೆಯೇ ಈ ತಾಯಿ ತನ್ನ ಮಗಳ ಉಜ್ವಲ ಭವಿಷ್ಯ ರೂಪಿಸುವುದಕ್ಕಾಗಿ ಹಿಡಿದಿದ್ದು ಆಸ್ಟ್ರೇಲಿಯಾದ ಹಾದಿ. ‘ಮೈಂಡ್ ಟ್ರೀ’ ಕಂಪೆನಿಗೆ ದುಡಿಯುತ್ತಿದ್ದ ಪ್ರಭಾ ಅರುಣ್ ಕುಮಾರ್ ಮೂರು ವರ್ಷದಿಂದ ಸರಿಯಾಗಿ ಒಮ್ಮೆಯೂ ಭಾರತಕ್ಕೆ ಬರಲಿಲ್ಲ. ಮಗಳನ್ನು ಮತ್ತು ಗಂಡನನ್ನು ಕಾಣುವುದಕ್ಕಾಗಿ ಒಮ್ಮೆ ಬೆಂಗಳೂರಿಗೆ ಬಂದಿದ್ದೇ ಹೆಚ್ಚು. ಮತ್ತೆ ಬಂದಿದ್ದು ಹೆಣವಾಗಿ!

ಮಂಗಳೂರು ಮೂಲದ ಪ್ರಭಾ ಉದ್ಯೋಗಕ್ಕಾಗಿ ಮೈಂಡ್ ಟ್ರೀ ಅನ್ನೋ ಒಳ್ಳೆಯ ಕಂಪೆನಿಯನ್ನೇ ಆರಿಸಿಕೊಂಡಿದ್ದರು. ಮೂರು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಆಕೆಯ ಜೀವನ ಮೊನ್ನೆ ಮಾರ್ಚ್ ಏಳಕ್ಕೆ ಕೊನೆಯಾಯ್ತು. ಆಫೀಸಿನಿಂದ ಮನೆಗೆ ಬರುತ್ತಿದ್ದ ಆಕೆಯನ್ನು ದುಷ್ಕರ್ಮಿಗಳು ಹಿಗ್ಗಾಮುಗ್ಗ ಹಲ್ಲೆ ಮಾಡಿ ಕೊಂದೇ ಬಿಟ್ಟರು. ಕಾರಣ ಏನು? ಕೊಲೆಗೂ ಆಕೆಗೂ ಏನು ಸಂಬಂಧ? ಕೊಂದವರು ಯಾರು? ದರೋಡೆಕೋರರಾಗಿದ್ದರೆ ದರೋಡೆ ಮಾಡಿ  ಬಿಟ್ಟು ಬಿಡಬಹುದಿತ್ತಲ್ಲಾ? ಉತ್ತಮ ಸಂಪಾದನೆ ಮಾಡಿಕೊಂಡು ತನ್ನವರನ್ನು ಸೇರಿಕೊಂಡು ಉತ್ತಮ ಜೀವನ ರೂಪಿಸುವ ಕನಸು ಹೊತ್ತುಕೊಂಡು ಆಸ್ಟ್ರೇಲಿಯಾದ ವಿಮಾನವೇರಿದ್ದ ಪ್ರಭಾಗೆ ಇಂತಾ ಸಾವಾ? ಆಕೆ ಮಾಡಿರುವ ತಪ್ಪಾದರೂ ಏನು?

ಮತ್ತಷ್ಟು ಓದು »