ವಿಷಯದ ವಿವರಗಳಿಗೆ ದಾಟಿರಿ

Archive for

23
ಮಾರ್ಚ್

ಸರ್ವಾಧಿಕಾರಿಗಳನ್ನೂ ಜನಶಕ್ತಿ ಮುಗಿಸಿಹಾಕಿದೆ, ನೆನಪಿರಲಿ!

– ರೋಹಿತ್ ಚಕ್ರತೀರ್ಥ

ಡಿ.ಕೆ ರವಿಮಹಾಭಾರತದಲ್ಲಿ ಬರುವ ಪ್ರಸಂಗ ಇದು. ಭೀಷ್ಮರ ಸೇನಾಧಿಪತ್ಯವನ್ನು ಕೊನೆಗಾಣಿಸಿ ಅವರನ್ನು ಪಾಂಡವರು ಶರತಲ್ಪದಲ್ಲಿ ಮಲಗುವಂತೆ ಮಾಡಿದ ಮೇಲೆ, ದುರ್ಯೋಧನ, ದ್ರೋಣನಿಗೆ ಸೇನೆಯ ಅಧಿಪತ್ಯ ವಹಿಸುತ್ತಾನೆ. ದ್ರೋಣ ಆದದ್ದಾಗಲಿ, ದೊಡ್ಡ ಮಿಕವನ್ನೇ ಬಲೆಗೆ ಕೆಡವಬೇಕು ಎಂದು ಯೋಚಿಸಿ ಚಕ್ರವ್ಯೂಹದ ರಚನೆ ಮಾಡುತ್ತಾನೆ. ಈ ವ್ಯೂಹಕ್ಕೆ ಅರ್ಜುನನಲ್ಲದೆ ಮತ್ಯಾರೂ ಎಂಟೆದೆಯಿಂದ ನುಗ್ಗುವುದಿಲ್ಲ; ಅವನೊಮ್ಮೆ ಒಳಬಂದರೆ ಸಾಕು ಒಂದೆರಡು ದಿನದ ಮಟ್ಟಿಗೆ ಅವನನ್ನು ಓಡಾಡಿಸಿ ಸುಸ್ತುಹೊಡೆಸಬಹುದು ಎನ್ನುವುದು ದ್ರೋಣನ ಲೆಕ್ಕಾಚಾರ. ಆದರೆ, ಅರ್ಜುನ ಸಂಶಪ್ತಕರೊಂದಿಗೆ ಹೋರಾಡಲು ಹೋದದ್ದರಿಂದ ಅವನ ಮಗ ಅಭಿಮನ್ಯು ಈ ಚಕ್ರವ್ಯೂಹದೊಳಕ್ಕೆ ನುಗ್ಗುತ್ತಾನೆ. ಆಗ ಅವನಿಗಿನ್ನೂ ಹದಿನಾರರ ಹರೆಯ. ವ್ಯೂಹವನ್ನು ಭೇದಿಸುವುದು ಹೇಗೆಂದು ತಿಳಿದಿದೆಯೇ ಹೊರತು ಹೊರಬರುವ ತಂತ್ರ ಅವನ ಕೈಯಲ್ಲಿಲ್ಲ. ಆದರೂ ಒಂದು ಕೈ ನೋಡೇಬಿಡಬೇಕು ಎಂಬ ಭಂಡಧೈರ್ಯದಲ್ಲಿ ನುಗ್ಗಿದ ಕೂಸು ಅದು. ಚಕ್ರವ್ಯೂಹವನ್ನು ಹೊಕ್ಕಮೇಲೆಯೇ ಅವನಿಗೆ ನಿಜಸ್ಥಿತಿಯ ಅರಿವಾಗುವುದು. ವ್ಯೂಹದ ರಚನೆ ಹೇಗಿರುತ್ತದೆಂದರೆ, ಎಷ್ಟೇ ಹೊತ್ತು ಕಾದಾಡಿದರೂ ಆ ಸೈನಿಕರು ವೃತ್ತಾಕಾರದಲ್ಲಿ ಸುತ್ತುತ್ತಿರುವುದರಿಂದ ಯುದ್ಧ ನಿಲ್ಲುವ ಪ್ರಶ್ನೆಯೇ ಇಲ್ಲ! ಅಭಿಮನ್ಯು ಎಲ್ಲರನ್ನೂ ಕೊಂದು ಹೊರಬರುವ ಯೋಚನೆಯನ್ನು ಬಿಟ್ಟೇಬಿಡಬೇಕು!

ಮತ್ತಷ್ಟು ಓದು »

20
ಮಾರ್ಚ್

ನಮಗೆ ಪೋಲಿಸರ ಮೇಲೆ ನಂಬಿಕೆಯಿದೆ; ನಿಮ್ಮ ಸರ್ಕಾರದ ಮೇಲಿಲ್ಲ ಸಿ.ಎಂ.ಸಿದ್ಧರಾಮಯ್ಯನವರೇ

– ರಾಕೇಶ್ ಶೆಟ್ಟಿ

DK Ravi N Siddaramayyaಸದನದಲ್ಲಿ ತನ್ನ ಹಟಮಾರಿ ಧೋರಣೆಯನ್ನು ಬಿಡದಿದ್ದ ಸರ್ಕಾರ,ನಿನ್ನೆಯ ಸಂಪುಟ ಸಭೆಯ ನಂತರವಾದರೂ ಬುದ್ಧಿ ಕಲಿತೀತು ಎಂಬ ಸಣ್ಣದೊಂದು ಆಸೆಯಿತ್ತು. ಆದರೆ,ಸಂಪುಟ ಸಭೆ ಮುಗಿದ ನಂತರ ಗೃಹ ಸಚಿವ ಜಾರ್ಜ್ ಸಾಹೇಬರು “ಸಿಬಿಐ ತನಿಖೆಯಿಲ್ಲ” ಎಂಬ ತಮ್ಮ ಹಳೇ ರಾಗವನ್ನೇ ಹಾಡಿದ್ದರು.ಇವತ್ತು ಸಂಜೆಯ ವೇಳೆಗೆ ಸಿಬಿಐ ತನಿಖೆಗೆ ಸೋಮವಾರ ಒಪ್ಪಿಸುತ್ತಾರೆ ಎಂಬ ಸುದ್ದಿಯೇನೋ ಹರಿದಾಡುತ್ತಿದೆ.ದಕ್ಷ ಯುವ ಅಧಿಕಾರಿಯ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಿ ಎಂಬುದು ಕೇವಲ ವಿರೋಧ ಪಕ್ಷಗಳ ಬೇಡಿಕೆಯಲ್ಲ ಮಿ.ಸಿ.ಎಂ ಸಿದ್ದರಾಮಯ್ಯನವರೇ. ಈ ಪ್ರಕರಣ ಬೆಳಕಿಗೆ ಬಂದ ತಕ್ಷಣ ಡಿ.ಕೆ ರವಿಯವರ ಬಗ್ಗೆ ತಿಳಿದುಕೊಂಡಿದ್ದ ಜನ ಸಾಮಾನ್ಯರು ಸಹ ಅದೇ ಬೇಡಿಕೆಯನ್ನಿಟ್ಟಿದ್ದರು. ಆದರೆ,ಇನ್ನು ಐದು ವರ್ಷ ಸರ್ಕಾರವನ್ನು ಯಾರೂ ಏನು ಮಾಡಲಾರರು ಎಂಬ ಧೋರಣೆಯಿರಬೇಕು ನಿಮ್ಮದು. ಪ್ರಜಾಪ್ರಭುತ್ವವೆಂದರೆ, ಪ್ರಭುಗಳು ಹೇಳಿದಂತೆ ಪ್ರಜೆಗಳು ಕೇಳಬೇಕು ಎಂಬುದು ಬಹುಷಃ ನಿಮ್ಮ ನಿಲುವಾಗಿರಬೇಕು.ಇಲ್ಲವಾಗಿದ್ದರೆ ನೀವು ಇಡೀ ರಾಜ್ಯದ ಜನತೆಯ ಬೇಡಿಕೆಯನ್ನು ಹೀಗೆ ಧಿಕ್ಕರಿಸುತ್ತಿರಲಿಲ್ಲ.ನಿಮಗೆ ಮತ್ತು ನಿಮ್ಮ ಪಕ್ಷಕ್ಕೇ ಮತ ನೀಡಿದ “ಪ್ರಜೆ” ಸೋತಿದ್ದಾನೆ ಸಿದ್ದರಾಮಯ್ಯನವರೇ.ಇನ್ನು ಮುಂದೆ ದಯವಿಟ್ಟು ಪ್ರಜಾಪ್ರಭುತ್ವದ ಬಗ್ಗೆ ನಮಗೆ ಲೆಕ್ಚರ್ ಮಾಡಲು ಬರಬೇಡಿ.

ಸಿಬಿಐ ತನಿಖೆಗೊಪ್ಪಿಸಿ ಎಂದ ತಕ್ಷಣವೇ,”ನಮ್ಮ ರಾಜ್ಯದ ಪೋಲಿಸರ ಶಕ್ತಿಯ ಬಗ್ಗೆ ಅನುಮಾನವೇ? ರಾಜ್ಯ ಪೋಲಿಸರ ಮೇಲೆ ನಂಬಿಕೆಯಿಡಿ” ಎಂದೆಲ್ಲಾ ಸಿನೆಮಾ ಡೈಲಾಗ್ ಹೇಳಬೇಡಿ ಮಿಸ್ಟರ್ ಸಿ.ಎಂ.ಸಿದ್ಧರಾಮಯ್ಯನವರೇ.ನಮಗೆ ಪೋಲಿಸರ ಮೇಲೆ ನಂಬಿಕೆಯಿದೆ; ನಿಮ್ಮ ಸರ್ಕಾರದ ಮೇಲೆ ನಂಬಿಕೆಯಿಲ್ಲ.ಅಷ್ಟಕ್ಕೂ ನಿಮ್ಮ ಮೇಲೆ ನಿಮ್ಮ ಸರ್ಕಾರದ ಮೇಲೆ ನಾವು ನಂಬಿಕೆಯಿಡುವುದಾದರೂ ಹೇಗೆ ಹೇಳಿ? ಡಿ.ಕೆ ರವಿಯಂತ ದಕ್ಷ ಅಧಿಕಾರಿಗಳಿಗೆ ಮಾತ್ರ ನಿಮ್ಮ ಘನ ಸರ್ಕಾರದಲ್ಲಿ ತೊಂದರೆಗಳಾಗಿಲ್ಲ.ಆ ಪಟ್ಟಿಗೆ ಸಾಲು ಸಾಲು ಅಧಿಕಾರಿಗಳು ಸೇರಿಕೊಳ್ಳುತ್ತಾರೆ.
ಮತ್ತಷ್ಟು ಓದು »

20
ಮಾರ್ಚ್

ಈ ಸಾವು ನಿಮ್ಮಲ್ಲಿ ವಿಷಾದ ಹುಟ್ಟಿಸಬೇಕಿತ್ತು

– ರೋಹಿತ್ ಚಕ್ರತೀರ್ಥ

DK Ravis Parentsಬಹಳ ಹಿಂದೆ ಓದಿದ ಸಾಲು ಅದು. ಒಬ್ಬಳು ಹೆಣ್ಣಿನ ಹತ್ಯೆಯಾಗಿದೆ. ಅದನ್ನು ಯಾರ್ಯಾರು ಯಾವ್ಯಾವ ಬಗೆಯಲ್ಲಿ ಬಳಸಿಕೊಳ್ಳಬಹುದು ಎನ್ನುವ ಬಗ್ಗೆ ಒಬ್ಬೊಬ್ಬರೂ ತಮ್ಮ ಮೂಗಿನ ನೇರಕ್ಕೆ ಸಲಹೆಗಳನ್ನು ಕೊಡುತ್ತಾ ಹೋಗುತ್ತಾರೆ. ಅವೆಲ್ಲ ಮಾತುಗಳು ನಿಂತ ಮೇಲೆ ರಾಜ್ಯದ ಮುಖ್ಯಮಂತ್ರಿ – ಇಷ್ಟೆಲ್ಲಾ ಹೇಳಿದಿರಿ, ಆದರೆ ಆಕೆಯ ಸಾವು ನಮ್ಮೊಳಗೆ ವಿಷಾದ ಹುಟ್ಟಿಸಬೇಕಾಗಿತ್ತು ಅಂತ ನಿಮಗ್ಯಾರಿಗೂ ಅನ್ನಿಸಲೇ ಇಲ್ಲವಲ್ಲ – ಎಂದು ಮರುಗುತ್ತಾನೆ. ಅವಸ್ಥೆ ಕಾದಂಬರಿಯಲ್ಲಿ ಬರುವ ಆ ಭಾಗವನ್ನು ಓದುವಾಗ ನನಗೇ ತಿಳಿಯದಂತೆ ಕಣ್ಣೀರಾಗಿಬಿಟ್ಟಿದ್ದೆ. ಹೌದಲ್ಲ, ಒಂದು ಸಾವು ನಮ್ಮನ್ನು ಕಾಡಬೇಕು; ನಮ್ಮ ಅಂತರಾತ್ಮವನ್ನು ಕಲಕಬೇಕು; ಸುತ್ತ ಗವ್ವೆನ್ನುವ ಕತ್ತಲೆ ಮುತ್ತಿದಾಗ ಒಂಟಿ ನಿಂತ ಮೇಣದಬತ್ತಿ ಸದ್ದಿಲ್ಲದೆ ಕರಗಿಹೋದಂತೆ ನಾವೂ ನಿಂತಲ್ಲೇ ಕಲ್ಲಾಗಬೇಕು, ಕರಗಬೇಕು.
ಮತ್ತಷ್ಟು ಓದು »

20
ಮಾರ್ಚ್

ಒಡೆಯನ ನಿಷ್ಠ ‘ಬ್ರೂನಿ’ಯ ಸ್ವಗತ

– ಚಕ್ರವರ್ತಿ ಸೂಲಿಬೆಲೆ

ಮಾನ್ಯ ಮುಖ್ಯಮಂತ್ರಿಗಳಿಗೆ ನಮಸ್ಕಾರ.

DK Ravi IAS_Brooniನನ್ನ ಯಜಮಾನನ ಸಾವಿಗೆ ನಾಲ್ಕು ದಿನ ಕಳೆದೇ ಹೋಯಿತು. ಮೊದಲ ದಿನದಿಂದಲೂ ಇದನ್ನು ಆತ್ಮಹತ್ಯೆಯೆಂದೇ ಸಾಬೀತು ಪಡಿಸಲು ಹೆಣಗಾಡುತ್ತಿದ್ದ ನಿಮಗೂ-ನಿಮ್ಮ ವ್ಯವಸ್ಥೆಗೂ ನಾಲ್ಕು ದಿನವಾದರೇನು? ನಲ್ವತ್ತು ದಿನವಾದರೇನು? ನನಗಿರುವ ನಿಯತ್ತಿನ ಹತ್ತು ಪರ್ಸೆಂಟು ನಿಮ್ಮ ವ್ಯವಸ್ಥೆಗೆ ಇದ್ದಿದ್ದರೆ ಇವತ್ತು ನಮ್ಮ ಯಜಮಾನರು ಸಾಯುವ ಸ್ಥಿತಿ ಬರುತ್ತಿರಲಿಲ್ಲ.

ನಮ್ಮ ಮನೆಗೆ ಬಂದಾಗಲೆಲ್ಲ ಅವರು ಮೊದಲು ನನ್ನತ್ತಲೇ ಬರಬೇಕಿತ್ತು. ಪ್ರೀತಿಯಿಂದ ನೇವರಿಸಿ ನನ್ನೊಡನೆ ಹತ್ತು ನಿಮಿಷ ಆಡಿದ ಮೇಲೆಯೇ ಮನೆಯೊಳಗೆ ಹೋಗುತ್ತಿದ್ದರು. ಅವರು ಮುಟ್ಟುವಾಗ,ಮುದ್ದಿಸುವಾಗ ಅವರೊಬ್ಬ ದೊಡ್ಡ ಅಧಿಕಾರಿ ಅಂತ ನನಗೆಂದೂ ಅನ್ನಿಸಲೇ ಇಲ್ಲ. ಕುಸುಮಕ್ಕ ಆಗಾಗ ದೊಡ್ಡ ಯಜಮಾನರ ಜೊತೆಗೆ ಸಾಹೇಬರ ಕುರಿತಂತೆ ಮಾತನಾಡುವುದನ್ನು ಕೇಳಿ ರೋಮಾಂಚನವಾಗುತ್ತಿದ್ದೆ. ನಿಷ್ಠೆಗೆ ಇನ್ನೊಂದು ಹೆಸರು ಅಂತ ನನಗೆ ಹೇಳುತ್ತಾರೆ ಅನ್ನೋ ಧಿಮಾಕು ನನಗಿತ್ತು. ಆದರೆ ರಾಷ್ಟ್ರನಿಷ್ಠೆಗೆ ನಮ್ಮ ಯಜಮಾನರೇ ನಿಜವಾದ ಸಂಕೇತ ಎನ್ನುವುದು ನನಗೆ ಖಾತ್ರಿಯಾಗಿತ್ತು. ಥೂ! ಬಿಡಿ ವೋಟಿಗಾಗಿ ದೇಶವನ್ನೂ ಮಾರಿಬಿಡುವವರಿಗೆ ರಾಷ್ಟ್ರನಿಷ್ಠೆಯೆಂಬುದೆಲ್ಲ ಹೇಗೆ ಅರ್ಥವಾಗಬೇಕು.
ಮತ್ತಷ್ಟು ಓದು »

19
ಮಾರ್ಚ್

ಡಿ.ಕೆ ರವಿಯವರ ಅಸಹಜ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸಹಿಸಂಗ್ರಹ ಅಭಿಯಾನ.ನೀವು ಪಾಲ್ಗೊಳ್ಳಿ

https://www.change.org/p/prime-minister-of-india-home-minister-of-india-make-cbi-probe-on-mysterious-death-of-ias-officer-d-k-ravi

DK Ravi

19
ಮಾರ್ಚ್

ಈ ಸಾವು ನ್ಯಾಯವೇ?

– ಶಿವಪ್ರಸಾದ್ ಭಟ್, ಪುತ್ತೂರು

DK Ravi IASಕೊಲೆ, ಆತ್ಮಹತ್ಯೆ, ಆಕ್ಸಿಡೆಂಟ್, ಸಹಜ ಸಾವು ಅಂತ ದಿನಾ ಈ ಜಗತ್ತಿನಲ್ಲಿ ಅದೆಷ್ಟು ಜನ ಸಾಯುತ್ತಾರೋ ಏನೋ? ಯಾರಿಗ್ಗೊತ್ತು? ಅದೆಲ್ಲಾ ಸುದ್ದೀನೇ ಆಗಲ್ಲಾ. ದಿನಾ ಸಾಯೋರಿಗೆ ಅಳೋರು ಯಾರು ಅಲ್ವಾ? ಆದರೆ ಕೆಲವೊಂದು ಸಾವು ತಣ್ಣಗೆ ಸುದ್ದಿ ಮಾಡುತ್ತವೆ. ನಮ್ಮ ಸಂಬಂಧಿಕರಲ್ಲದೇ ಇದ್ದರೂ ಅನುಕಂಪ ಹುಟ್ಟಿಸುತ್ತದೆ. ಕೇಡಿಗರ ಬಗೆಗೆ ಆಕ್ರೋಶವೆಬ್ಬಿಸುತ್ತದೆ.

ಘಟನೆ 1:

ಮಕ್ಕಳ ಭವಿಷ್ಯ ಚೆನ್ನಾಗಿ ರೂಪಿಸಬೇಕೆಂದು ಎಲ್ಲಾ ತಂದೆ ತಾಯಿಗೂ ಆಸೆ ಇರುತ್ತದೆ. ಅದಕ್ಕಾಗಿ ಅವರು ಬೇರೆ ಬೇರೆ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಹಾಗೆಯೇ ಈ ತಾಯಿ ತನ್ನ ಮಗಳ ಉಜ್ವಲ ಭವಿಷ್ಯ ರೂಪಿಸುವುದಕ್ಕಾಗಿ ಹಿಡಿದಿದ್ದು ಆಸ್ಟ್ರೇಲಿಯಾದ ಹಾದಿ. ‘ಮೈಂಡ್ ಟ್ರೀ’ ಕಂಪೆನಿಗೆ ದುಡಿಯುತ್ತಿದ್ದ ಪ್ರಭಾ ಅರುಣ್ ಕುಮಾರ್ ಮೂರು ವರ್ಷದಿಂದ ಸರಿಯಾಗಿ ಒಮ್ಮೆಯೂ ಭಾರತಕ್ಕೆ ಬರಲಿಲ್ಲ. ಮಗಳನ್ನು ಮತ್ತು ಗಂಡನನ್ನು ಕಾಣುವುದಕ್ಕಾಗಿ ಒಮ್ಮೆ ಬೆಂಗಳೂರಿಗೆ ಬಂದಿದ್ದೇ ಹೆಚ್ಚು. ಮತ್ತೆ ಬಂದಿದ್ದು ಹೆಣವಾಗಿ!

ಮಂಗಳೂರು ಮೂಲದ ಪ್ರಭಾ ಉದ್ಯೋಗಕ್ಕಾಗಿ ಮೈಂಡ್ ಟ್ರೀ ಅನ್ನೋ ಒಳ್ಳೆಯ ಕಂಪೆನಿಯನ್ನೇ ಆರಿಸಿಕೊಂಡಿದ್ದರು. ಮೂರು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಆಕೆಯ ಜೀವನ ಮೊನ್ನೆ ಮಾರ್ಚ್ ಏಳಕ್ಕೆ ಕೊನೆಯಾಯ್ತು. ಆಫೀಸಿನಿಂದ ಮನೆಗೆ ಬರುತ್ತಿದ್ದ ಆಕೆಯನ್ನು ದುಷ್ಕರ್ಮಿಗಳು ಹಿಗ್ಗಾಮುಗ್ಗ ಹಲ್ಲೆ ಮಾಡಿ ಕೊಂದೇ ಬಿಟ್ಟರು. ಕಾರಣ ಏನು? ಕೊಲೆಗೂ ಆಕೆಗೂ ಏನು ಸಂಬಂಧ? ಕೊಂದವರು ಯಾರು? ದರೋಡೆಕೋರರಾಗಿದ್ದರೆ ದರೋಡೆ ಮಾಡಿ  ಬಿಟ್ಟು ಬಿಡಬಹುದಿತ್ತಲ್ಲಾ? ಉತ್ತಮ ಸಂಪಾದನೆ ಮಾಡಿಕೊಂಡು ತನ್ನವರನ್ನು ಸೇರಿಕೊಂಡು ಉತ್ತಮ ಜೀವನ ರೂಪಿಸುವ ಕನಸು ಹೊತ್ತುಕೊಂಡು ಆಸ್ಟ್ರೇಲಿಯಾದ ವಿಮಾನವೇರಿದ್ದ ಪ್ರಭಾಗೆ ಇಂತಾ ಸಾವಾ? ಆಕೆ ಮಾಡಿರುವ ತಪ್ಪಾದರೂ ಏನು?

ಮತ್ತಷ್ಟು ಓದು »

17
ಮಾರ್ಚ್

ಈ ಸಾವು ನ್ಯಾಯವೇ?

– ರಾಕೇಶ್ ಶೆಟ್ಟಿ

ಡಿ.ಕೆ ರವಿಲ್ಯಾಂಡ್ ಮಾಫಿಯಾ,ಸ್ಯಾಂಡ್ ಮಾಫಿಯಾಗಳ ವಿರುದ್ಧ ಸಮರ ಸಾರಿ,ತನ್ನ ದಕ್ಷತೆಯ ಕಾರಣದಿಂದಲೇ ಕೋಲಾರ ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಿಸಲ್ಪಟ್ಟಿದ್ದ ದಕ್ಷ ಯುವ ಅಧಿಕಾರಿ ಡಿ.ಕೆ ರವಿಯಂತವರು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ? ನನಗಂತೂ ನಂಬಲಾಗುತ್ತಿಲ್ಲ.ನಿನ್ನೆ ಅವರ ಮರಣದ ಸುದ್ದಿ ತಿಳಿದಾಗಿನಿಂದ ಮನಸ್ಸು ಖಿನ್ನವಾಗಿದೆ.ಸತ್ಯ,ನ್ಯಾಯಕ್ಕಾಗಿ ಹೋರಾಡುವವರು ಹೀಗೆ ದುರಂತ ಅಂತ್ಯ ಕಾಣುತ್ತಾರೆಯೇ? ಅಂತವರ ಕುಟುಂಬದವರಿಗೆ ನೋವು ಕಟ್ಟಿಟ್ಟ ಬುತ್ತಿಯೇ?

ಕೋಲಾರದಿಂದ ರವಿಯವರನ್ನು ವರ್ಗಾವಣೆ ಮಾಡಿದಾಗ ಇಡೀ ಜಿಲ್ಲೆಯೇ ಬಂದ್ ಆಗಿತ್ತು.ಒಂದಿಡಿ ಜಿಲ್ಲೆಯ ಜನರ ಜೊತೆ ಅಧಿಕಾರಿಯೊಬ್ಬ ಬಾಂಧವ್ಯ ಈ ಮಟ್ಟಿಗಿರುವುದು ಇತ್ತೀಚಿನ ದಿನಗಳಲ್ಲಿ ಅಪರೂಪವೇ ಸರಿ.ಕೋಲಾರದಿಂದ ಎತ್ತಂಗಡಿಯಾಗಿ ಬಂದ ಮೇಲಾದರೂ ಈ ಮನುಷ್ಯ ತಣ್ಣಗಾಗುತ್ತಾರೆ ಎಂದುಕೊಂಡಿದ್ದವರಿಗೆ,ರವಿಯವರು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಹುದ್ದೆ ವಹಿಸಿಕೊಂಡ ಮೇಲೆ ನಡೆಸಿದ ದಾಳಿಗಳು ಮತ್ತೆ ನಿದ್ದೆಗೆಡಿಸಿದ್ದವೇನೋ! ಐದೂವರೆ ತಿಂಗಳ ಹಿಂದೆ ತೆರಿಗೆ ಇಲಾಖೆಗೆ ಬಂದ ರವಿಯವರು ಈ ಕಡಿಮೆ ಅವಧಿಯಲ್ಲಿ ದೊಡ್ಡ ದೊಡ್ಡ ಬಿಲ್ಡರ್ ಗಳ ತೆರಿಗೆ ವಂಚನೆಯನ್ನು ಬಯಲಿಗೆಳೆದಿದ್ದರು.ವೃತ್ತಿಯಲ್ಲಿ ಖಡಕ್ ಆಗಿದ್ದ ರವಿಯವರು ಜನರೊಂದಿಗೆ ಸಾಮಾನ್ಯರಂತೆ ಬೆರೆಯುತಿದ್ದವರು. ಮತ್ತಷ್ಟು ಓದು »

16
ಮಾರ್ಚ್

ವಿವೇಕಾನಂದರ ವಿಚಾರಗಳ ಐತಿಹಾಸಿಕ ಸಂದರ್ಭ

– ಪ್ರೊ.ರಾಜಾರಾಮ ಹೆಗಡೆ

ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ

೧.ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
೨.ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ

Swami Vivekanandaಕಳೆದೆರಡು ಅಂಕಣಗಳಲ್ಲಿ ವಿವೇಕಾನಂದರು ಸಮಾಜ ಸುಧಾರಣೆಯ ಕುರಿತು ಹಾಗೂ ಜಾತಿಯ ಕುರಿತು ಏನು ಹೇಳುತ್ತಾರೆ ಎಂಬುದನ್ನು ನೋಡಿದೆವು. ಪ್ರಗತಿಪರರು ಜಾತಿ ಪದ್ಧತಿಯ ಹಾಗೂ ಬ್ರಾಹ್ಮಣರ ಕುರಿತ ಅವರ ಟೀಕೆಗಳು, ಕ್ರೈಸ್ತ, ಇಸ್ಲಾಂ ಮತಗಳ ಕುರಿತು ಹೇಳಿದ ಸಕಾರಾತ್ಮಕ ಮಾತುಗಳನ್ನಷ್ಟೇ ಎತ್ತಿ ಹೇಳಿದ್ದಾರೆ. ಮತ್ತೊಂದು ಥರದ ಹೇಳಿಕೆಗಳನ್ನು ನಾನು ಪ್ರಸ್ತುತ ಪಡಿಸಿದ್ದೇನೆ. ಅಲ್ಲಿ ಅವರು ಸಮಾಜ ಸುಧಾರಕರನ್ನು ಟೀಕಿಸುತ್ತಾರೆ ಹಾಗೂ ಜಾತಿ, ಬ್ರಾಹ್ಮಣ ಇತ್ಯಾದಿಗಳ ಕುರಿತು ತುಂಬಾ ಹೆಮ್ಮೆಯಿಂದ ಮಾತನಾಡುತ್ತಾರೆ. ಈ ಎರಡೂ ರೀತಿಯ ಹೇಳಿಕೆಗಳನ್ನು ಯಾವ ರೀತಿ ಜೋಡಿಸಿಕೊಂಡರೆ ವಿವೇಕಾನಂದರು ಒಟ್ಟಾರೆಯಾಗಿ ಏನು ಹೇಳುತ್ತಿದ್ದಾರೆ ಎಂಬುದು ಅರ್ಥವಾಗಬಹುದು? ಅದಕ್ಕೆ ಅವರ ಕಾಲಕ್ಕೆ ಹೋಗಬೇಕು. ವಿವೇಕಾನಂದರು ತಮ್ಮ ಕಾಲದ ಯಾವ ಸವಾಲುಗಳಿಗೆ ಉತ್ತರಿಸುತ್ತಿದ್ದರು?

ವಿವೇಕಾನಂದರು ರಾಮಕೃಷ್ಣರ ಶಿಷ್ಯರಾಗುವ ವೇಳೆಗಾಗಲೇ ಬಂಗಾಲದಲ್ಲಿ ಆಧುನಿಕ ವಿಚಾರಧಾರೆಯು ವಿದ್ಯಾವಂತರಲ್ಲಿ ತನ್ನ ಪ್ರಭಾವವನ್ನು ಸಾಕಷ್ಟು ಬೀರಿತ್ತು. ಪಾಶ್ಚಾತ್ಯ ಶಿಕ್ಷಣವೆಂದರೆ ಈ ಪ್ರಪಂಚದ ಕುರಿತು ವೈಜ್ಞಾನಿಕ ಚಿತ್ರಣಗಳನ್ನು ತಿಳಿದುಕೊಳ್ಳುವುದು.ಈ ಚಿತ್ರಣಗಳನ್ನಾಧರಿಸಿ ಭಾರತದಲ್ಲಿ ಸಮಾಜ ಸುಧಾರಣೆಗಳು ಮೊದಲುಗೊಂಡವು. ಭಾರತೀಯ ಸಮಾಜದಲ್ಲಿ ಉಳಿದೆಲ್ಲ ಸಮಾಜಗಳಲ್ಲಿ ಇರುವಂತೆ ದೌರ್ಜನ್ಯಗಳು, ಕ್ರೂರ ಆಚರಣೆಗಳು ಎಲ್ಲ ಇದ್ದವು. ಆದರೆ ಬ್ರಿಟಿಷರು ಭಾರತದಲ್ಲಿ ಇರುವ ಕ್ರೂರ ಆಚರಣೆಗಳೆಲ್ಲವೂ ಹಿಂದೂಯಿಸಂ ಎಂಬ ಭ್ರಷ್ಟ ರಿಲಿಜನ್ನಿನ ಲಕ್ಷಣಗಳು, ಇವನ್ನೆಲ್ಲ ಬ್ರಾಹ್ಮಣರು ಬಹು ಹಿಂದೆಯೇ ಸ್ವಲಾಭಕ್ಕಾಗಿ ಹುಟ್ಟುಹಾಕಿದ್ದಾರೆ.ಈ ಆಚರಣೆಗಳೆಲ್ಲವೂ ಸ್ವಾರ್ಥದ ಮೌಢ್ಯದ ಅನೈತಿಕ ತಳಹದಿಯ ಮೇಲೆ ನಿಂತಿವೆ, ಇತ್ಯಾದಿಯಾಗಿ ಅದಕ್ಕೊಂದು ಕಾರಣವನ್ನು ನೀಡಿದರು.ಹಾಗಾಗಿ ಇಂಥ ಕ್ರೂರ ಆಚರಣೆಗಳನ್ನು ನಿಲ್ಲಿಸಬೇಕಾದರೆ ಈ ಸಮಾಜದ ತಳಹದಿಯನ್ನೇ ನಾಶಗೊಳಿಸಬೇಕು ಎಂಬ ಅಭಿಪ್ರಾಯವನ್ನು ವಿದ್ಯಾವಂತರಲ್ಲಿ ಹುಟ್ಟುಹಾಕಿದರು.ಅಂದರೆ ಭಾರತೀಯರ ರಿಲಿಜನ್ನೇ ಭ್ರಷ್ಟವಾಗಿದೆ, ಅಮಾನವೀಯವಾಗಿದೆ ಎಂಬುದು ಈ ವಿದ್ಯಾವಂತರ ಸಾಮಾನ್ಯ ಜ್ಞಾನವಾಯಿತು.

ಮತ್ತಷ್ಟು ಓದು »

13
ಮಾರ್ಚ್

ಪರ್ವ ಮತ್ತು ಮಹಾಭಾರತ

– ಮು.ಅ ಶ್ರೀರಂಗ 

ಪರ್ವಹರವು ಸ್ಫೂರ್ತಿ ಗೌಡ ಅವರು ‘ಅವಧಿ’ಯಲ್ಲಿ ೬-೩-೧೫ರಂದು ಬರೆದಿರುವ ‘ಭೈರಪ್ಪನವರಿಗೆ ಕೆಲವು ಪ್ರಶ್ನೆಗಳು’ ಲೇಖನದಲ್ಲಿ ಭೈರಪ್ಪನವರು ಮಹಾಭಾರತವನ್ನು ಆಧರಿಸಿ ಬರೆದಿರುವ ಪರ್ವ ಕಾದಂಬರಿಯ ಬಗ್ಗೆ  ಪ್ರಸ್ತಾಪಿಸಿರುಪ  ಪ್ರಶ್ನೆಗಳನ್ನು ಕುರಿತಂತೆ ಕೆಲವು ವಿಷಯಗಳನ್ನು ನಿಲುಮೆಯ ಓದುಗರ ಜತೆ ಹಂಚಿಕೊಳ್ಳುವುದು ಈ ನನ್ನ ಬರಹದ ಉದ್ದೇಶ. ಸ್ಪೂರ್ತಿ ಗೌಡ ಅವರ ಲೇಖನಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಅವುಗಳು ಸದ್ಯದ ನಮ್ಮ ಓದುಗರ ಮನೋಭಾವ, ಅವರ ಓದಿನ ರೀತಿ ನೀತಿ, ಕನ್ನಡ ಸಾಹಿತ್ಯದ ಸದ್ಯದ  ವಿಮರ್ಶೆಯ ವಾತಾವರಣ  ಇತ್ಯಾದಿಗಳ  ಪ್ರತಿಫಲನದಂತೆ ಇದೆ. ಇದು ಸಹಜ.ಆ ಪ್ರತಿಕ್ರಿಯೆಗಳ ಬಗ್ಗೆ ಇದಕ್ಕಿಂತ ಹೆಚ್ಚೇನು ಹೇಳುವುದು ಇಲ್ಲ.

ಸ್ಫೂರ್ತಿ ಗೌಡ ಅವರು ‘ಪರ್ವ’ದ ಬಗ್ಗೆ random ಆಗಿ ಎತ್ತಿರುವ  ಮೂರ್ನಾಲಕ್ಕು ಆಕ್ಷೇಪಣೆಗಳು ಮತ್ತು ಉಪ ಆಕ್ಷೇಪಣೆಗಳ relevanceಗೆ ಮಾತ್ರ ನನ್ನ ಈ ಬರಹ ಸೀಮಿತವಾಗಿದೆ. ಇತಿಹಾಸ, ಕಾವ್ಯ ಮತ್ತು ಪುರಾಣಗಳು ಬೆರೆತಿರುವ ಮಹಾಭಾರತದ ಕತೆಯನ್ನು ಈಗ ಚಾಲ್ತಿಯಲ್ಲಿರುವ ವಿಮರ್ಶೆಯ ಅಳತೆಗೋಲಿನಿಂದ ಅಳೆದು ಬೆಲೆ ಕಟ್ಟುವ ಕ್ರಿಯೆಯೇ ಸರಿಯಾದುದಲ್ಲ. ಇಂದು ನಮ್ಮ ಸಾಹಿತ್ಯದ ವಿಮರ್ಶಕ ಮತ್ತು ವಿಮರ್ಶಕಿಯರಿಗೆ  ಹಿಂದಿನ ಮತ್ತು ಇಂದಿನ ಕೃತಿಗಳಿಗೆ (ಅದು ಸಾಮಾಜಿಕ/ಐತಿಹಾಸಿಕ/ಪೌರಾಣಿಕ ಯಾವುದೇ ಆಗಿರಲಿ) ಪ್ರಗತಿಗಾಮಿ.ಪ್ರತಿಗಾಮಿ,ಮಹಿಳಾ ವಿರೋಧಿ,ವೈದಿಕ ಶಾಹಿ ಇತ್ಯಾದಿ ಹಣೆ ಪಟ್ಟಿಗಳನ್ನು ಕಟ್ಟಿ ಆ ಕೃತಿಗಳ  ಲೇಖಕರನ್ನು ಏರಿಸುವುದೋ ಇಳಿಸುವುದೋ ಮಾಡುವುದು ತುಂಬಾ ಖುಷಿ ಕೊಡುವ  ಕೆಲಸವಾಗಿದೆ. ಹಾಗೆ ನೋಡಿದರೆ ಇಂತಹ ವಿದ್ಯಮಾನ ಮೂವತ್ತು ನಲವತ್ತು ವರ್ಷಗಳಷ್ಟು ಹಳೆಯದೇ. ಈಗ  ಈ ಕೆಲಸ ಇನ್ನೂ ಜೋರಾಗಿದೆ ಅಷ್ಟೇ. ವಿಮರ್ಶೆಯ ಪರಿಭಾಷೆಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ; ಬದಲಾಗಬೇಕು ಎಂಬುದರ ಬಗ್ಗೆ  ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ ಬದಲಾಗುತ್ತಿರುವ ವಿಮರ್ಶೆಯ ಪರಿಭಾಷೆಗಳನ್ನು ಸಾಹಿತ್ಯ ಕೃತಿಯೊಂದಕ್ಕೆ ನಾವು ಯಾವ ರೀತಿ apply ಮಾಡಬೇಕು? ಆ ಪರಿಭಾಷೆಗಳ limits ಏನು? ಎಂಬುದರ ಬಗ್ಗೆ ನಾವು ಯೋಚಿಸದಿದ್ದರೆ ಆಭಾಸವಾಗುತ್ತದೆ. ಸ್ಪೂರ್ತಿಗೌಡ ಅವರು ಪರ್ವದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಮೂಲ ಕಾರಣ ಹೊಸ ವಿಮರ್ಶೆಯ ಪರಿಭಾಷೆಗಳ wrong application.
ಮತ್ತಷ್ಟು ಓದು »

12
ಮಾರ್ಚ್

ದ್ವೇಷ ಬಿತ್ತಿದ ಲೇಖಕರು

– ಸುದರ್ಶನ ಗುರುರಾಜ ರಾವ್

Agni Bhairappaಇತ್ತೀಚೆಗೆ ’ಅಗ್ನಿ’ ಎಂಬ ಸಂಸ್ಕೃತ ಪದದ ಹೆಸರುಳ್ಳ ಟ್ಯಾಬ್ಲಾಯ್ಡ್ ಮಾದರಿಯ ಪತ್ರಿಕೆಯೊಂದು ೧೯/೦೨ ರ ಸಂಚಿಕೆಯಲ್ಲಿ ಡಾ.ಎಸ್.ಎಲ್.ಭೈರಪ್ಪನವರ ಚಿತ್ರವೊಂದನ್ನು ಮುಖಪುಟದಲ್ಲಿಯೇ ಅಚ್ಚಿಸಿ ’”ದ್ವೇಷ ಬಿತ್ತುವ ಲೇಖಕ” ಎಂಬ ಶೀರ್ಷಿಕೆಯೊಂದಿಗೆ  ಪೂರ್ಣ ಸಂಚಿಕೆಯನ್ನೇ ಭೈರಪ್ಪನವರನ್ನು ನಿಂದಿಸಲು ಮೀಸಲಾಗಿಟ್ಟಿತು. ಆಶ್ಚರ್ಯವೆಂದರೆ ಆ ಪತ್ರಿಕೆಯ ಪ್ರತಿಗಳು ಚೆನ್ನಾಗಿ ಖಾಲಿಯಾಗಿದ್ದು, ಅದರ ನಿರ್ವಾಹಕರಿಗೆ ಸಂತೋಷ ತಂದಿತು.ಶ್ರವಣಬೆಳಗೊಳದ ಕನ್ನಡ ಮೇಳದಲ್ಲಿ ವೇದಿಕೆಯನ್ನು ಚರ್ಚೆಗೆ ವಿನಿಯೋಗಿಸದೆ ದುರ್ಬಳಕೆ ಮಾಡಿಕೊಂಡು, ಭೈರಪ್ಪನವರ ಮೇಲೆ ವಿನಾಕಾರಣ (ಅವರ ಪ್ರಕಾರ ಸಕಾರಣವೇ ಆಗಿದ್ದರೂ,ವಿಷಯಾಂತರ ಮಾಡಿದ್ದರಿಂದ ಅದೊಂದು ವಿನಾಕಾರಣ ಬೊಗಳೆ) ಹರಿಹಾಯ್ದು, ಬೊಬ್ಬಿರಿದು,ಎಗರಾಡಿ ತಮ್ಮ ನಾಲಿಗೆ ತುರಿಯನ್ನು ತೀರಿಸಿಕೊಂಡಿದ್ದ ಘನಂದಾರಿಗಳು ತಮ್ಮ ಕೈತುರಿಕೆಯನ್ನೂ ತೀರಿಸಿಕೊಳ್ಳಲು ’ಅಗ್ನಿ ’ ಪತ್ರಿಕೆಯ ಮೊರೆಹೋದರು. ಭೈರಪ್ಪ ದ್ವೇಷವನ್ನು ಅಕ್ಷರಗಳ ಬೀಜರೂಪದಲ್ಲಿ ಬಿತ್ತಲು ಡಾಕ್ಟರೇಟು ಪಡೆದ ಹಲವಾರು ಲೇಖಕರ ಜೊತೆಗೆ, ಯಾವರೇಟೂ ಇಲ್ಲದ ಇನ್ನು ಕೆಲವರು ಸೇರಿ ಇಡೀ ಸಂಚಿಕೆಯನ್ನು ಸಂಪನ್ನಗೊಳಿಸಿದರು. ಸಮಾನತೆಯ ಪ್ರತಿಪಾದಕರಾದ ಇವರುಗಳು ತಮ್ಮ ಅನಿಸಿಕೆಗಳನ್ನು ಬಿತ್ತರಿಸುವಲ್ಲಿ ತೋರಿದ ಮುಚ್ಚಟೆಯನ್ನು ವಿಭಿನ್ನ ಅಭಿಪ್ರಾಯವಿರುವ ಒಬ್ಬನೇ ಒಬ್ಬ ಲೇಖಕನನ್ನು ಆರೋಗ್ಯಕರ ಚರ್ಚೆಗೆ ಅಹ್ವಾನಿಸಲಿಲ್ಲ ಎಂಬುದು ಇವರ ಇಬ್ಬಂದಿ, ಎಡಬಿಡಂಗಿ,ಹಾಗೂ ಅಷಾಢಭೂತಿ ತನಕ್ಕೆ ಹಿಡಿದ ಕನ್ನಡಿಯಾಗಿದ್ದು ವಿಪರ್ಯಾಸ.

ಮೊದಲ ಲೇಖನ – “ಕೇಡಿನ ಕಿಡಿಯನ್ನು ಕಾಪಿಟ್ಟುಕೊಂಡ ಲೇಖಕ”- ದಲ್ಲಿ ಘೋಷಿಸಿದಂತೆ ಅಕ್ಷರವನ್ನು (ಅಷ್ಟೇಕೆ, ಇಡೀ ಸಂಚಿಕೆಯನ್ನು) ಒಂದು ಗುಂಪಿನ ಜನರು ಒಬ್ಬ ಸೃಜನಶೀಲ ಲೇಖಕನ ನಿಂದನೆಗೆ, ತಮ್ಮ ದ್ವೇಷ, ಹತಾಷೆ, ಅಸೂಯೆಗಳನ್ನು ಪ್ರಕಟಪಡಿಸಲು ಬಳಸಿದರೆ, ಅದನ್ನು ಪ್ರಶ್ನಿಸುವ ಹಕ್ಕು ಓದುಗನಿಗೆ ಇದೆ ಎಂಬ ಧೋರಣೆಯಿಂದಲೇ ಈ ಲೇಖನ ಸರಣಿಯನ್ನು ಬರೆಯುತ್ತಿದ್ದೇನೆ.ಒಬ್ಬ ಲೇಖಕ, ತಾನು ನಂಬಿದ ತತ್ವ ಆದರ್ಶಗಳನ್ನು ಆಧರಿಸಿ ಸಾಹಿತ್ಯ ರಚಿಸಿದರೆ ಮತ್ತು ಅದು ಯಶಸ್ವಿಯಾಗಿ ಜನಪ್ರಿಯವಾದರೆ ಅದರಲ್ಲೇನು ತಪ್ಪು? ಈ ಚಿಂತನೆಯ ಹಂತಕರ ಮನೋಭೂಮಿಕೆಗೆ ಅನುಸಾರವಾಗಿ ಬರೆಯಬೇಕೆಂಬ ನಿಯಮವೇನೂ ಇಲ್ಲವಲ್ಲ.ಅದಕ್ಕೆ ಸರಿಸಾಟಿಯಾದ ಸಾಹಿತ್ಯ ರಚನೆ ಈ ವಿಭಿನ್ನ ದೃಷ್ಟಿಕೋನದ ದ್ರಷ್ಟಾರರು ಏಕೆ ರಚಿಸಲು ಸಾಧ್ಯವಾಗದೆ ಹೆಣಗುತ್ತಿದ್ದಾರೆಂಬ ಪ್ರಶ್ನೆಯ ಮೂಲಕ ಮೊದಲನೆಯ  ”ಕೇಡಿನ ಕಿಡಿಯನ್ನು ಕಾಪಿಟ್ಟುಕೊಂಡ ಲೇಖಕ”   ಎಂಬ ಶೀರ್ಷಿಕೆ ಕೊಟ್ಟು ಬರೆದ ಲೇಖನದ ಮೂಲಕ ನನ್ನ ಪ್ರತಿಕ್ರಿಯೆಗಳನ್ನು ದಾಖಲಿಸುತ್ತಿದ್ದೇನೆ. ತಮ್ಮ ಕೆನ್ನಾಲಗೆಯ ಹುನ್ನಾರಿಕರು ತಮ್ಮ ಪುಸ್ತಕಗಳನ್ನೆಷ್ಟು ಮಾರಿಕೊಂಡಿದ್ದಾರೋ ನನಗೆ ತಿಳಿಯದು;ಆದರೆ ಭೈರಪ್ಪನವರ ದೂಷಣೆಯಿಂದ “ಅಗ್ನಿ”ಯ ವ್ಯಾಪಾರ ಲಾಭಕಂಡಿದ್ದಂತೂ ನಿಜ. ಶ್ರೀಹರಿಯನ್ನು ನಿಂದಿಸುತ್ತಲೇ ಕೈವಲ್ಯ ಪಡೆದ ಹಿರಣ್ಯ ಕಶ್ಯಪುವಿನಂತೆ!!.

ಮತ್ತಷ್ಟು ಓದು »