ಭಿತ್ತಿ : ಭಾವಪ್ರಧಾನ ವ್ಯಕ್ತಿತ್ವದ ಕಥನ
– ರಾಜಕುಮಾರ.ವ್ಹಿ.ಕುಲಕರ್ಣಿ,ಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ,ಬಾಗಲಕೋಟ
‘ಚಿಕ್ಕ ಹುಡುಗನಾದ್ದರಿಂದ ಚಟ್ಟದ ಅಗತ್ಯವಿರಲಿಲ್ಲ. ನಾನೇ ಎತ್ತಿ ಎಡ ಹೆಗಲ ಮೇಲೆ ಹೊತ್ತುಕೊಂಡು ಬಲಗೈಲಿ ಬೆಂಕಿಯ ಮಡಕೆ ಹಿಡಿದು ಹೋಗುವುದೆಂದು ತೀರ್ಮಾನವಾಯಿತು. ಹೆಣ ಎತ್ತುವ ಮೊದಲು ಒಂದೊಂದು ಹಿಡಿಯಂತೆ ಒಟ್ಟು ಮೂರು ಹಿಡಿ ಅಕ್ಕಿ ಕಾಳು ನಾನು, ಅಜ್ಜಿ, ಲಲಿತ ಹೆಣದ ಬಾಯಿ ಮೇಲೆ ಸುರಿದ ನಂತರ ನಾನು ಮುಕ್ಕಿರಿದು ಎತ್ತಿ ಹೆಣವನ್ನು ಎಡ ಹೆಗಲ ಮೇಲೆ ಹಾಕಿಕೊಂಡು ಕೆಂಪು ಸೀರೆಯ ತುಂಡನ್ನು ಹೊದಿಸಿ ಮಡಕೆಯ ಬೆಂಕಿಯನ್ನು ಬಲಗೈಲಿ ಹಿಡಿದು ಬೀದಿಯಲ್ಲಿ ಹೊರಟೆ. ಏಳು ವರ್ಷದ ಹುಡುಗನ ಹೆಣದ ಭಾರಕ್ಕೆ ಎಡ ಹೆಗಲು ಸೇದಿ ನುಲಿಯತೊಡಗಿತು.ಅತ್ತಿತ್ತ ಹೊರಳಿಸಿ ಭಾರದ ಸ್ಥಾನವನ್ನು ಬದಲಿಸಿಕೊಳ್ಳಲು ಬಲಗೈ ಮುಕ್ತವಾಗಿರಲಿಲ್ಲ. ಅದಕ್ಕೆ ಕೂಡ ಬೆಂಕಿಯ ರಾವು ಹೊಡೆಯುತ್ತಿತ್ತು. ಸುಸ್ತಾಯಿತೆಂದು ಪದೇ ಪದೇ ಕೆಳಗಿಳಿಸಿ ಸುಧಾರಿಸಿಕೊಂಡು ಪಯಣವನ್ನು ಮುಂದುವರೆಸುವಂತೆಯೂ ಇಲ್ಲ. ಸ್ಮಶಾನಕ್ಕೆ ಹೋಗುವಷ್ಟರಲ್ಲಿ ನನ್ನ ಭುಜ ಮತ್ತು ಎದೆಗೂಡುಗಳು ಸತ್ತು ಹೋಗಿದ್ದವು. ನನ್ನ ಕಣ್ಣುದುರಿಗೇ ಕೃಷ್ಣಮೂರ್ತಿಯ ಹೆಣ ಕಪ್ಪು ತಿರುಗಿ ಚರ್ಮ ಸುಲಿದು ಬಿಳಿಯ ನೆಣ ಬಾಯ್ದೆರೆದು ತೊಟ್ಟಿಕ್ಕಿ ಅದೇ ಇಂಧನವಾಗಿ ಹೆಣವೇ ಹೊತ್ತಿಕೊಂಡಿತು’. ಓದಿದ ಆ ಕ್ಷಣ ಬುದ್ದಿಯನ್ನೇ ಮಂಕಾಗಿಸಿ ಮನಸ್ಸನ್ನು ಆರ್ದ್ರಗೊಳಿಸುವ ಈ ಸಾಲುಗಳು ನಾನು ಇತ್ತೀಚಿಗೆ ಓದಿದ ‘ಭಿತ್ತಿ’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.
‘ಭಿತ್ತಿ’ ಇದು ಕನ್ನಡ ಸಾಹಿತ್ಯಕ್ಕೆ ಕ್ಲಾಸಿಕ್ ಕಾದಂಬರಿಗಳನ್ನು ನೀಡಿರುವ ಶ್ರೇಷ್ಠ ಬರಹಗಾರ ಸಂತೇಶಿವರ ಲಿಂಗಣ್ಣ ಭೈರಪ್ಪನವರ ಆತ್ಮಕಥೆ. ಇಪ್ಪತ್ನಾಲ್ಕು ಕಾದಂಬರಿಗಳು, ಆತ್ಮವೃತ್ತಾಂತ, ನಾಲ್ಕು ಸಾಹಿತ್ಯ ಚಿಂತನ ಗ್ರಂಥಗಳು ಮತ್ತು ಎರಡು ಸಂಪಾದಿತ ಕೃತಿಗಳ ಲೇಖಕರಾದ ಎಸ್.ಎಲ್.ಭೈರಪ್ಪನವರು ಕನ್ನಡ ಮಾತ್ರವಲ್ಲದೆ ಇತರ ಭಾಷೆಗಳಲ್ಲೂ ಓದುಗರ ದೊಡ್ಡ ಸಮೂಹವನ್ನು ಹೊಂದಿರುವ ವಿಶಿಷ್ಟ ಬರಹಗಾರ. ಭೈರಪ್ಪನವರ ಕಾದಂಬರಿಗಳು ತೆಲುಗು, ಮರಾಠಿ, ಹಿಂದಿ ಭಾಷೆಗಳೂ ಸೇರಿ ಭಾರತದ ಎಲ್ಲ 14 ಭಾಷೆಗಳಿಗೂ ಅನುವಾದಗೊಂಡಿವೆ. ಭೈರಪ್ಪನವರ ಬದುಕು ಮತ್ತು ಸಾಹಿತ್ಯ ಕುರಿತೇ ಇಪ್ಪತ್ತಕ್ಕೂ ಹೆಚ್ಚು ಕೃತಿಗಳು ಬೇರೆ ಬೇರೆ ಲೇಖಕರಿಂದ ರಚನೆಗೊಂಡಿರುವುದು ಇನ್ನೊಂದು ವಿಶೇಷ. ಕಾಲಕಾಲಕ್ಕೆ ತಮ್ಮ ಬರವಣಿಗೆಯಿಂದ ಭೈರಪ್ಪನವರು ಕನ್ನಡದ ಓದುಗರನ್ನು ಚಿಂತನೆಗೆ ಹಚ್ಚುತ್ತಲೇ ಬಂದಿರುವರು. ಅವರ ಕೃತಿಗಳು ಮನೋರಂಜನೆಗಾಗಿಯೋ ಇಲ್ಲವೇ ಸಮಯ ಕಳೆಯುವುದಕ್ಕಾಗಿಯೋ ಓದುವಂಥ ಪುಸ್ತಕಗಳ ಸಾಲಿನಲ್ಲಿ ನಿಲ್ಲುವ ಕೃತಿಗಳಲ್ಲ. ಭೈರಪ್ಪನವರ ಕಾದಂಬರಿಯೊಂದನ್ನು ಓದಿದ ನಂತರ ಅದು ಓದುಗನ ಮನಸ್ಸನ್ನು ಅನೇಕ ದಿನಗಳವರೆಗೆ ಕಾಡುತ್ತ ಹೊಸ ಚಿಂತನೆಯನ್ನು ಸೃಷ್ಟಿಸಿ ಬದುಕಿನ ಪರಿವರ್ತನೆಗೆ ಕಾರಣವಾಗುತ್ತದೆ.
ಭಗವದ್ಗೀತೆ ಮತ್ತು ರಾಜಕಾರಣ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಅದೇಕೋ ಏನೋ,ಇತ್ತೀಚೆಗೆ ಭಗವದ್ಗೀತೆ ಪದೇ ಪದೇ ವಿವಾದಕ್ಕೀಡಾಗುತ್ತಿದೆ. ಮೊದಲು ಕೇ೦ದ್ರ ಮ೦ತ್ರಿ ಸುಷ್ಮಾ ಸ್ವರಾಜ್,’ಗೀತೆಯನ್ನು ರಾಷ್ಟ್ರೀಯ ಗ್ರ೦ಥವಾಗಿಸಬೇಕು’ ಎ೦ದೆನ್ನುವ ಮೂಲಕ ವಿವಾದಕ್ಕೆ ನಾ೦ದಿ ಹಾಡಿದರು.ಕೆಲವು ದಿನಗಳ ಹಿ೦ದೆ ಭಗವಾನ್ ಎನ್ನುವವರೊಬ್ಬರು ’ಗೀತೆಯನ್ನು ಸುಡುತ್ತೇನೆ’ ಎನ್ನುವ ಮೂಲಕ ವಿವಾದದಕಿಡಿಯನ್ನು ಹೆಚ್ಚಿಸಿದರು.ಈಗ ಅವರ ಹಿ೦ದೆ ಅಗ್ನಿ ಶ್ರೀಧರ ’ಜೀವನದಲ್ಲಿ ಎ೦ದಾದರೊ೦ದು ದಿನ ಗೀತೆಯನ್ನು ಸುಡುತ್ತೇನೆ’ ಎನ್ನುವ ಮೂಲಕ ಕಿಡಿಯನ್ನು ಜ್ವಾಲೆಯಾಗಿಸಿದ್ದಾರೆ.
ಮು೦ಚಿನಿ೦ದಲೂ ಭಗವದ್ಗೀತೆಯೆನ್ನುವುದು ಅನೇಕ ವಿವಾದಗಳಿಗೆ ಕಾರಣಿಕರ್ತ ಗ್ರ೦ಥ. ಗೀತೆಯ ಕುರಿತಾಗಿ ನಮ್ಮ ಸ೦ವಿಧಾನಶಿಲ್ಪಿ ಅ೦ಬೇಡ್ಕರ್,”ನನಗೆ ಆಶ್ಚರ್ಯ ಮೂಡಿಸುವ ಸ೦ಗತಿಯೆ೦ದರೇ ಭಗವದ್ಗೀತೆಯೆಡೆಗಿನ ವಿದ್ವಾ೦ಸರ ಭಿನ್ನಾಭಿಪ್ರಾಯಗಳು. ಗೀತೆಯಲ್ಲಿನ ಶ್ಲೋಕಗಳ ಬಗ್ಗೆ ಒಬ್ಬೊಬ್ಬ ಪ೦ಡಿತರದ್ದೂ ಒ೦ದೊ೦ದು ಬಗೆಯ ವ್ಯಾಖ್ಯಾನ.ಪ್ರತಿಯೊಬ್ಬರಿಗೂ ಭಗವದ್ಗೀತೆಯಲ್ಲಿ ವಿಭಿನ್ನವಾದ ಸತ್ಯದ ಸಾಕ್ಷಾತ್ಕಾರ.ನನ್ನ ಪ್ರಕಾರ ಭಗವದ್ಗೀತೆಯೆನ್ನುವುದು ಧಾರ್ಮಿಕ ಗ್ರ೦ಥವೂ ಅಲ್ಲ,ತತ್ವಶಾಸ್ತ್ರದ ಮಹಾಮೀಮಾ೦ಸೆಯೂ ಅಲ್ಲ.ವಿಚಿತ್ರ ನೋಡಿ, ಮಹಾಭಾರತದ ಭೀಷ್ಮಪರ್ವದಲ್ಲಿ ಕೃಷ್ಣನಿ೦ದ ,ಅರ್ಜುನನಿಗಾದ ಬೋಧನೆಯೆನ್ನಲಾಗುವ ಭಗವದ್ಗೀತೆಯಲ್ಲಿ ಪಾರ್ಥಸಾರಥಿ,ಮಧ್ಯಮ ಪಾ೦ಡವನನ್ನು ಯುದ್ದಕ್ಕಾಗಿ ಪ್ರೇರೇಪಿಸುತ್ತಾನೆ. ದೇಹಕ್ಕೆ ಮಾತ್ರ ಸಾವು ,ಆತ್ಮಕ್ಕೆ ಸಾವಿಲ್ಲ,ರಣರ೦ಗದಲ್ಲಿ ಶತ್ರುಗಳನ್ನು ಸದೆಬಡಿಯುವುದು ಕ್ಷತ್ರಿಯನ ಕರ್ತವ್ಯವೆನ್ನುತ್ತ ಭಗವ೦ತನೇ ಹಿ೦ಸೆಯ ಪರೋಕ್ಷ ಸಮರ್ಥಕನಾಗುವುದು ವಿಪರ್ಯಾಸವಲ್ಲವೇ?.ಸಾಮಾನ್ಯವಾಗಿ ಭಗವದ್ಗೀತೆಯ ಪ್ರತಿಪಾದಕರು ಗೀತೆಯ ಭಾಗವಾಗಿರುವ ’ಕರ್ಮಯೋಗ’ವನ್ನು ಮನುಷ್ಯನ ಕರ್ಮಗಳ ವಿವರಣೆಯ ಕುರಿತಾದ ಅಧ್ಯಾಯವೆ೦ದೂ, ’ಜ್ನಾನ ಯೋಗ’ವನ್ನು ಮನುಷ್ಯ ಜೀವನದ ಅ೦ತಿಮಜ್ನಾನದ ಬಗೆಗಿನ ವಿವರಣೆಗಳ ಅಧ್ಯಾಯವೆ೦ದೂ ವಿವರಿಸುತ್ತಾರೆ.ಆ ಮೂಲಕ ಭಗವದ್ಗೀತೆಯೆನ್ನುವುದು ಮಾನವ ಜನ್ಮದ ಜೀವನ ಸಾರವನ್ನು ಸಾರುವ ಮಹಾನ ಗ್ರ೦ಥವೆ೦ದು ವಾದಿಸುತ್ತಾರೆ.ಮೇಲ್ನೋಟಕ್ಕೆ ಇದು ಸರಿಯೆನಿಸಿದರೂ,ಕೂಲ೦ಕುಷ ಅಧ್ಯಯನದಿ೦ದ ಮಾತ್ರ ಭಗವದ್ಗೀತೆಯ ನಿಜವಾದ ತಾತ್ಪರ್ಯವನ್ನರಿಯಬಹುದು. ಮತ್ತಷ್ಟು ಓದು 
ವಿವೇಕಾನಂದರ ವಿಚಾರಗಳು: ಜಾತಿ ಪದ್ಧತಿ
– ಪ್ರೊ.ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ
ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
ಸಾಧಾರಣವಾಗಿ ಇಂದು ವಿವೇಕಾನಂದರ ಕುರಿತು ಒಂದು ಅಭಿಪ್ರಾಯ ಚಾಲ್ತಿಯಲ್ಲಿರುವುದು ಕಂಡುಬರುತ್ತದೆ. ಅದೆಂದರೆ ಅವರು ಜಾತಿ ಪದ್ಧತಿಯ ನಿರ್ಮೂಲನೆಗಾಗಿ ಹೋರಾಡಿದರು ಎಂಬುದು. ವಿವೇಕಾನಂದರ ಕುರಿತ ಈ ಚಿತ್ರವು ಇಂದು ಎಷ್ಟು ಗಟ್ಟಿಯಾಗಿದೆಯೆಂದರೆ ಅವರ ಅನುಯಾಯಿಗಳು ಕೂಡ ಅವರ ಕುರಿತು ಮಾತನಾಡುವಾಗ ಈ ಅಂಶವನ್ನೇ ಮೊದಲು ಒತ್ತಿ ಹೇಳುತ್ತಾರೆ. ವಿವೇಕಾನಂದರ ಪ್ರಸ್ತುತತೆಯನ್ನು ಮನದಟ್ಟು ಮಾಡಿ ಕೊಡುವಾಗ ಅವರು ಹಿಂದೂ ಧರ್ಮದ ಶ್ರೇಷ್ಟತೆಯನ್ನು ಎತ್ತಿಹಿಡಿದಿದ್ದರು ಎನ್ನುವುದು ಅನಿವಾರ್ಯ.
ಆ ಅಂಶವನ್ನಿಟ್ಟುಕೊಂಡೇ ಹಿಂದುತ್ವವಾದಿಗಳು ವಿವೇಕಾನಂದರನ್ನು ತಮ್ಮ ಮೂಲಪುರುಷರೆಂಬಂತೆ ಪರಿಗಣಿಸುತ್ತಾರೆ. ಹಾಗಾಗಿ ಬಹುಶಃ ಇಂದಿನ ಸೆಕ್ಯುಲರ್ ಚಿಂತಕರು ಅವರು ಜಾತಿಯ ಕುರಿತು ಮಾಡಿದ ಟೀಕೆಗಳನ್ನು ಪ್ರಧಾನವಾಗಿ ಇಟ್ಟು ಅವರ ವಿಚಾರಗಳನ್ನು ಪ್ರಸ್ತುತ ಪಡಿಸುವ ಉಪಾಯಗಳನ್ನು ಬೆಳೆಸಿರಲೂ ಬಹುದು. ಒಟ್ಟಿನಲ್ಲಿ ವಿವೇಕಾನಂದರ ಸೆಕ್ಯುಲರೀಕರಣದ ಒಂದು ಭಾಗವಾಗಿ ಈ ಅಭಿಪ್ರಾಯವು ಜನಪ್ರಿಯತೆಯನ್ನು ಪಡೆದಿದೆ.
ಕರ್ನಾಟಕದಲ್ಲಿ ಕುವೆಂಪು ಅವರು ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿದ್ದರು ಹಾಗೂ ಅವರ ಮೂಲಕ ವಿವೇಕಾನಂದರ ವಿಚಾರಗಳು ಶೂದ್ರ ಚಳವಳಿಯ ಒಂದು ಭಾಗವಾಗಿ ಕನ್ನಡ ಚಿಂತಕರಿಗೆ ಪರಿಚಯಿಸಲ್ಪಟ್ಟಿವೆ. ಹಿಂದುತ್ವದವರು ಬ್ರಾಹ್ಮಣರ ವಕ್ತಾರರು ಎಂದು ಈ ಚಿಂತಕರು ಪರಿಗಣಿಸಿರುವುದರಿಂದ ವಿವೇಕಾನಂದರ ಮೂಲ ಆಶಯವನ್ನು ಇವರು ತಿರುಚಬಹುದೆಂಬ ಆತಂಕ ಕೂಡ ಈ ಚಿಂತಕರಲ್ಲಿದೆ. ಹಾಗಾಗಿ ಕುವೆಂಪು ಅವರು ಹಿಂದೂ ಪರಂಪರೆಯ ಶ್ರೇಷ್ಟತೆಯ ಕುರಿತು ವ್ಯಕ್ತಪಡಿಸುವ ಚಿಂತನೆಗಳನ್ನು ಅವರ ಆರಾಧಕರು ಈಗ ಮೂಲೆಗೆ ಹಾಕಿದಂತಿದೆ. ಅವರನ್ನೂ ಕೂಡ ಇಂದಿನ ಪ್ರಗತಿಪರರ ಆಕಾರಕ್ಕೆ ಒಗ್ಗಿಸುವ ಪ್ರಯತ್ನವೇ ಎದ್ದುಕಾಣುವಂತಿದೆ. ಒಟ್ಟಿನಲ್ಲಿ ವಿವೇಕಾನಂದರು ಜಾತಿವಿರೋಧಿ ಎಂಬ ಚಿತ್ರಣವನ್ನು ತಮಗೆ ಬೇಕಾದಂತೆ ಕಲ್ಪಿಸಿಕೊಳ್ಳಲಾಗುತ್ತಿದೆ. ವಿವೇಕಾನಂದರು ಜಾತಿಯ ಕುರಿತು ಏನು ಹೇಳುತ್ತಾರೆ?
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೨
– ಸುದರ್ಶನ್ ರಾವ್
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ – ಭಾಗ ೧
ನಾರದರಿಗೆ ಆಶ್ಚರ್ಯ…ಸಂಬಂಧದಲ್ಲಿ ನಾನು ಕಿರಿಯ, ಬ್ರಹ್ಮನ ಮಗನಾದ ನಾನು ಇವನಿಗೆ ಮೊಮ್ಮಗನಾಗಬೇಕು. ಯಾವಾಗಲೂ ನೀನು, ತಾನು ಎಂದು ಏಕವಚನದಲ್ಲಿ ಕರೆಯುತ್ತಿದ್ದ ಇವತ್ತು ನೀವು, ನಿಮಗೆ ಎಂಬ ಬಹುವಚನ ಪ್ರಯೋಗ ಮಾಡುತ್ತಿದ್ದಾನಲ್ಲ!, ತಲೆ ಬಿಸಿ ಆಗಿರಲೇ ಬೇಕು ಎಂದು ಅವರಿಗೆ ಗೊತ್ತಾಯಿತು.
ಕಬ್ಬಿಣ ಕಾದಿರುವಾಗಲೇ ಬಡಿಯಬೇಕೆಂದು ತಮ್ಮ ಎಂದಿನ ಧಾಟಿಯಲ್ಲಿ ಹೇಳಿದರು, “ಹೇ ಭಗವಂತಾ, ಬ್ರಹ್ಮಾಂಡವೇ, ಆ ದೇವನಾಡುವ ಬೊಂಬೆಯಾಟವಯ್ಯ, ಅಂಬುಜ ನಾಭನ, ಅಂತ್ಯವಿಲ್ಲದಾತನ ತುಂಬು ಮಾಯವಯ್ಯಾ… ಈ ಲೀಲೆಯು …ಎಂದು ನಾನು ನಿನ್ನನ್ನು ಯಾವತ್ತಿನಿಂದಲೂ, ಅದೆಷ್ಟು ಬಾರಿ ಸ್ತುತಿಸಿಲ್ಲ. ಈಗ ನೋಡಿದರೆ ಭೂಮಿಯಲ್ಲಿ ಬೇರೆಯೇ ಆಟ ನಡೆದಿದೆ. ಅಲ್ಲಿ, ಆ ಭೂಮಿಯಲ್ಲಿ, ನೀನು ಸೂತ್ರ ಕಟ್ಟಿರದ, ನಿನ್ನ ರಾಗದಾ ಭೋಗದಾ ಉರುಳಲ್ಲಿ ಸಿಕ್ಕಿರದ ಅದೆಷ್ಟೋ ಬೊಂಬೆಗಳು ಅವತರಿಸಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ.ಅವು ಇವರೆಲ್ಲರ ಕಾರ್ಯವಿಧಾನಕ್ಕೆ ಕೊಡಲಿ ಪೆಟ್ಟು ಕೊಡುತ್ತಿರುವುದೂ ನೋಡಿದ್ದೇನೆ. ಇದು ಹೀಗೇ ಮುಂದುವರಿದರೆ ನನ್ನ ಈ ಹಾಡಿಗೆ ಅರ್ಥವಿಲ್ಲದೆ ಹೋಗುತ್ತದೆ. ಅದರ ಸಾಹಿತ್ಯ ಬದಲಾಯಿಸಬೇಕಾಗುವುದು. ನಾನು ಕೇವಲ ಸುದ್ದಿಗಾರನಷ್ಟೇ. ನನಗೆ ಕಾರ್ಯಕಾರಣ ಸಂಬಂಧ ತಿಳಿಯದು. ಆದರೂ ಇದು ಮಾನವರು ಕಲಿತುಕೊಂಡಿರುವ ವೈದ್ಯವಿಜ್ಞ್ನಾನದ ಕರಾಮತ್ತೆಂದು ತೋರುತ್ತಿದೆ. ಯಾವುದಕ್ಕೂ ಅಶ್ವಿನೀ ದೇವತೆಗಳನ್ನು ಕರೆಸಿ ನೋಡು” ಎಂದರು. ಯಾವತ್ತಿನಂತೆ ಅಪೂರ್ಣ ಸಲಹೆ ನೀಡಿ ಮತ್ತಷ್ಟು ಮಜಾ ಪಡೆಯುವ ನಾರದರ ಬುದ್ಧಿ ಅಲ್ಲೂ ಸುಮ್ಮನಿರಲಿಲ್ಲ,. ಈ ನಾರದ ನನ್ನ ಪಾರಮ್ಯವನ್ನೇ ಪ್ರಶ್ನಿಸಬಲ್ಲ ಸನ್ನಿವೇಶದ ಮಾತಾನಾಡುತ್ತಿದ್ದಾನಲ್ಲ. ಇದೇನಿರಬಹುದು. ಸ್ವಲ್ಪ ಮೈಮರೆತಿದ್ದಕ್ಕೆ ಏನೇನೋ ನಡೆದು ಹೋಗಿದೆ ಎಂದು ಕಿರೀಟ ತೆಗೆದು, ತಲೆ ಕೆರೆದುಕೊಂಡು ಅಶ್ವಿನೀದೇವತೆಗಳನ್ನು ಕರೆಸಿದ.
ಮತ್ತಷ್ಟು ಓದು 
ಸಂಸ್ಕಾರ ಮತ್ತು ವಂಶವೃಕ್ಷ: ಅಪೂರ್ಣದಿಂದ ಪೂರ್ಣದೆಡೆಗೆ
-ಎಸ್.ಎನ್.ಭಾಸ್ಕರ್, ಬಂಗಾರಪೇಟೆ.
ಓದುವ ಮುನ್ನ:
ಸಿದ್ದಾಂತ, ಬದ್ದತೆ, ನಿಷ್ಠೆ ಇವು ಹೆಚ್ಚು ಬಿಗಿಯಾದಷ್ಟೂ ಬೌದ್ದಿಕ ತಿಳುವು ಉಸಿರುಗಟ್ಟುತ್ತದೆ. ಗ್ರಹಿಕೆಯು ಪೂರ್ವಾಗ್ರಹಗಳಿಂದ ಹೊರತಾಗಿದ್ದಷ್ಟೂ ನಿಲುವು ಪರಿಪಕ್ವವಾಗುತ್ತದೆ. ಚಿಂತನೆ ಮತ್ತಷ್ಟು ವಿಕಸಿತವಾಗುತ್ತದೆ. ಸಾಹಿತ್ಯ, ಸೃಷ್ಟಿ ಅಥವಾ ಇಡೀ ಮನುಕುಲವೇ ಆಗಲೀ ಸತ್ಯಾನ್ವೇ಼ಣೆಯ ಹಾದಿಯಲ್ಲಿ, ಸತ್ಯ-ಅಸತ್ಯಗಳ ಪರಾಮರ್ಷೆಯಲ್ಲಿ ನಿತ್ಯ ಚಲನಶೀಲ, ಅಪೂರ್ಣದಿಂದ ಪೂರ್ಣದೆಡೆಗೆ. ಪೂರ್ಣತೆ ಎಂಬುದು ಅಂತ್ಯವಿಲ್ಲದ ಹಾದಿ, ಇದರೆಡೆಗಿನ ಪಯಣ ನಿರಂತರ. ಇಗೋ ಮುಟ್ಟಿದೆ ಇದೇ ಅಂತ್ಯ, ಇದೇ ಸತ್ಯ ಎಂದು ಗ್ರಹಿಸಿದ ಮರುಕ್ಷಣಕ್ಕೆ ಮತ್ತೊಂದು ಹಾದಿ ಕಾಲ ಬುಡದಿಂದ ಹಾಯುತ್ತಾ ಅನಂತದವರೆಗೆ ಹಾಸಿರುತ್ತದೆ. ಧುರ್ಗಮವೋ ಸುಗಮವೋ ಹೆಜ್ಜೆ ಇಟ್ಟ ನಂತರವಷ್ಟೇ ತಿಳಿಯುತ್ತದೆ. ಗ್ರಹಿಕೆಯಿಂದ ಅರಿವು, ಅರಿವಿನಿಂದ ಜ್ಞಾನ, ಹೀಗೆ ಮುಂದೆ ಮುಂದೆ ಸಾಗಿದಷ್ಟೂ ತಾತ್ಕಾಲಿಕವಾಗಿಯಾದರೂ ಪೂರ್ಣತೆಯ ಅನುಭವ ದೊರೆಯುತ್ತದೆ. ಇದೊಂದು ಅಂತ್ಯವಿಲ್ಲದ ಹಾದಿ, ಪರಿಪೂರ್ಣತೆಯ ಗಮ್ಯದೆಡೆಗೆ ಆತ್ಮದ ನಿತ್ಯಪಯಣ. ಇಲ್ಲಿ ಅನುಭೂತಿಯೆಲ್ಲವೂ ಅಮೃತ; ಗಳಿಸಿದ್ದೆಲ್ಲವೂ ಶಾಶ್ವತ.
ಕನ್ನಡ ಸಾಹಿತ್ಯ ಲೋಕದಲ್ಲಿ ಓದುಗರಿಂದ, ವಿಮರ್ಷಕರಿಂದ ಅತೀ ಹೆಚ್ಚು ಚರ್ಚೆಗಳಿಗೆ, ವಾದ ವಿವಾದಗಳಿಗೆ ಕಾರಣವಾದ ಕೃತಿಗಳಲ್ಲಿ ದಿವಂಗತ ಡಾ.ಯು.ಆರ್ ಅನಂತಮೂರ್ತಿಯವರು ಬರೆದಿರುವ ಸಂಸ್ಕಾರ ಕಾದಂಬರಿ ಪ್ರಮುಖವಾದುದು. ಈ ಕಾದಂಬರಿಯ ಕಥಾವಸ್ತುವೇ ವಿವಾದಕ್ಕೆ ಮೂಲವಾಗಿದೆ. ಹಲವಾರು ವೇದಿಕೆಗಳಲ್ಲಿ ಈಗಾಗಲೇ ಚಿಂತನ-ಮಂಥನಗಳಿಗೆ ಸಂಸ್ಕಾರ ಕಾದಂಬರಿ ವಿಷಯ ವಸ್ತುವಾಗಿದೆ. ಇನ್ನು ಎಸ್.ಎಲ್ ಬೈರಪ್ಪ ರವರ ವಂಶವೃಕ್ಷ ಕಾದಂಬರಿಯು ಸಹಾ ಬಹುಚರ್ಚಿತವಾದ ಕಾದಂಬರಿಯಾಗಿದೆ. ಎಸ್.ಎಲ್.ಬೈರಪ್ಪ ರವರ ಅನೇಕ ಕಾದಂಬರಿಗಳ ಪೈಕಿ ಇದುವರೆಗೂ ಸುಮಾರು ಐವತ್ತಕ್ಕೂ ಹೆಚ್ಚು ಮುದ್ರಣಗಳನ್ನು ಕಂಡಿರುವ ಈ ಕಾದಂಬರಿ ಹೆಚ್ಚು ಪ್ರಸಿದ್ದವಾದ ಕೃತಿಯಾಗಿದೆ. ಸಂಸ್ಕಾರ ಮತ್ತು ವಂಶವೃಕ್ಷ ಈ ಎರಡೂ ಕಾದಂಬರಿಗಳು ಕ್ರಮವಾಗಿ ೧೯೬೫ ಮತ್ತು ೧೯೬೬ ರಲ್ಲಿ ಪ್ರಥಮವಾಗಿ ಪ್ರಕಟಗೊಳ್ಳುತ್ತವೆ.
ನಿಲುಮೆ ಪ್ರಕಾಶನದ ಪುಸ್ತಕ ಬಿಡುಗಡೆ ಮತ್ತು ನಿಲುಮೆ ಫೌಂಡೇಶನ್ ನ ಉದ್ಘಾಟನಾ ಸಮಾರಂಭದ ವರದಿ
– ಹರೀಶ್ ಆತ್ರೇಯ,ಹರ್ಷಿತ್ ಜೋಸೆಫ್
ನಿಲುಮೆ ಪ್ರಕಾಶನದಿಂದ ದಿನಾಂಕ ೧ ಮಾರ್ಚ್ ೨೦೧೫ ರಂದು ಬೌದ್ಧಿಕ ದಾಸ್ಯದಲ್ಲಿ ಭಾರತ ಎಂಬ ಪುಸ್ತಕವು ಬೆಂಗಳೂರಿನ ಮಿಥಿಕ್ ಸೊಸೈಟಿಯಲ್ಲಿ ಬಿಡುಗಡೆಯಾಯಿತು. ಕಳೆದ ಐದು ವರ್ಷಗಳಿಂದ ಸತತವಾಗಿ ಬೌದ್ಧಿಕ ವಿಚಾರಗಳನ್ನು ಮಂಡಿಸುತ್ತಿದ್ದ ನಿಲುಮೆ ಬ್ಲಾಗ್ ಈಗ ಪ್ರಕಾಶನ ಸಂಸ್ಥೆಯ ಹೆಸರಿನಲ್ಲಿ ನಿಲುಮೆ ಫೌಂಡೇಶನ್ ಆಗಿ ಹೊರಹೊಮ್ಮಿದೆ, ಪುಸ್ತಕ ಬಿಡುಗಡೆಯ ಸಮಾರಂಭದಲ್ಲಿಯೇ ನಿಲುಮೆ ಫೌಂಡೇಶನ್ನಿನ ಉದ್ಘಾಟನೆಯಾಯಿತು.
ಬ್ರಿಟಿಷರ ಕೆಳಗೆ ದಾಸರಾಗಿ ಬಾಳಿದ (?) ಭಾರತೀಯರ ಚರಿತ್ರೆ (?) ನಮಗೆ ಗೊತ್ತಿದೆ. ರಾಜಕೀಯವಾಗಿ ನಮ್ಮನ್ನು ಆಳಿದುದು ಹೌದಾದರೂ ಬೌದ್ಧಿಕವಾಗಿ ನಾವು ಅವರಿಂದ ಆಳಿಸಿಕೊಳ್ಳಬೇಕಾದ ಸ್ಥಿತಿಗೆ ತಲುಪಿದ್ದು ಶೋಚನೀಯ. ಅವರಿಂದ ಭೌತಿಕವಾಗಿ ಆಳಿಸಿಕೊಳ್ಳುವ ಕಾಲಘಟ್ಟವನ್ನು ವಸಾಹತುಶಾಹಿ ಕಾಲವೆಂದು ಕರೆಯುವುದಾದರೆ, ಈಗಲೂ ಅವರ ಬೌದ್ಧಿಕ ಚಿಂತನೆಗಳ, ಆಲೋಚನಾ ಕ್ರಮಗಳ ರೂಪದಲ್ಲಿ ಅವರಿಂದ ಬೌದ್ಧಿಕವಾಗಿ ಆಳಿಸಿಕೊಳ್ಳುತ್ತಿದ್ದೇವೆ ಎನ್ನುವುದೂ ಸತ್ಯ. ಇವೆಲ್ಲದರಿಂದ ಹೊರಬರಬೇಕಾದರೆ ನಮ್ಮ ಸಂಸ್ಕೃತಿಯ , ಆಚರಣೆಗಳ ಅರಿವು ನಮಗೆ ಬೇಕಾಗುತ್ತದೆ. ಸತ್ಯವನ್ನು ತಿಳಿಯುವ ಮತ್ತು ತಿಳಿಸುವ ಹೊಣೆ ನಮ್ಮದಾಗಿರುತ್ತದೆ. ಇವೆಲ್ಲವನ್ನೂ ಪ್ರಚುರಪಡಿಸಲು ನಮಗೊಂದು ದಾರಿ,ಕ್ರಮ ಮತ್ತು ಮಾರ್ಗದರ್ಶನದ ಅವಶ್ಯಕತೆಯಿದೆ. ಹತ್ತು ಹಲವು ಪುಸ್ತಕಗಳು ನಮ್ಮ ಕಣ್ಣಿಗೆ ಕಾಣಬಹುದು ಮತ್ತು ನಾವು ಓದಬಹುದು ಆದರೆ ದುರದೃಷ್ಟವಶಾತ್ ಅವೆಲ್ಲವೂ ಪಾಶ್ಚಾತ್ಯದ ಕಂಗಳಿಂದ ಕಂಡ ದೃಶ್ಯಗಳಾಗಿವೆ. ಅವರು ಚಿಂತನ ಕ್ರಮವನ್ನು ಅಳವಡಿಸಿಕೊಂಡು ಲೇಖಿಸಿದ ಮಹಾ ಪ್ರಬಂಧಗಳು ನಮ್ಮ ಸಂಸ್ಕೃತಿಯ ಮೂಲವನ್ನು ಅರಿಯುವ ಪ್ರಯತ್ನವನ್ನು ಮಾಡಿಯಾವೇ? ಇದು ಪ್ರಶ್ನೆಯಾಗಿ ಉಳಿಯುತ್ತಿರುವ ಹಂತದಲ್ಲಿ ಪ್ರೊ|| ಬಾಲಗಂಗಾಧರ್ ಅವರ ಲೇಖನಗಳು ಮತ್ತು ಕ್ರಮ ಹೆಚ್ಚು ಮೌಲ್ಯಯುತವೂ ಮತ್ತು ಸರಿಯಾದ ಮಾರ್ಗವೂ ಆಗಿರುವುದು ನಿಜಕ್ಕೂ ಸಂತಸದ ಸಂಗತಿ. ಆಲೋಚನಾ ಕ್ರಮಕ್ಕೆ ಹೊಸದೊಂದು ಹೊಳಹನ್ನು ತಂದುಕೊಟ್ಟವರು ಪ್ರೊ ಬಾಲು ರವರು.
ಮತ್ತಷ್ಟು ಓದು 
ನಮ್ಮದು ಜ್ಞಾನ ಮಾರ್ಗ.ನಿಮ್ಮ ಮಾರ್ಗ ಯಾವುದು ಬುದ್ಧಿಜೀವಿಗಳೇ?
– ರಾಕೇಶ್ ಶೆಟ್ಟಿ
ಬುದ್ಧಿಜೀವಿ/ಸೆಕ್ಯುಲರ್/ಪ್ರಗತಿಪರರಿಗೆ ನಮಸ್ಕಾರ,
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದಿರುವ,ನಡೆಯುತ್ತಿರುವ ಬೌದ್ಧಿಕ ಫ್ಯಾಸಿಸಂನ ವಿರುದ್ಧ ನೀವೆಲ್ಲರೂ ಜನವರಿ ೩೦ನೇ ತಾರೀಖು ಬೆಂಗಳೂರಿನಲ್ಲಿ ಮೆರವಣಿಗೆ ಮತ್ತು ಬಹಿರಂಗ ಸಭೆಯೊಂದನ್ನು ಮಾಡಿದ್ದೀರಿ.ಆ ಸಭೆಯ ಕರಪತ್ರದ ಕೆಲವು ಸಾಲುಗಳ ಮೂಲಕ ನನ್ನ ಈ ಬಹಿರಂಗ ಪತ್ರವನ್ನು ಪ್ರಾರಂಭಿಸುತಿದ್ದೇನೆ.
“ತಾತ್ವಿಕವಾದ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಪರಸ್ಪರ ಗೌರವದಿಂದ ನಡೆದುಕೊಳ್ಳುವ ಸಂಸ್ಕೃತಿ ಕರ್ನಾಟಕದಲ್ಲಿತ್ತು. ಚಾರ್ವಾಕರಿಗೆ ಕೂಡ ನಮ್ಮ ಚರ್ಚೆಯ ಚಾವಡಿಯಲ್ಲಿ ಒಂದಿಷ್ಟು ಜಾಗವಿತ್ತು.ಆದರೆ ಈಗ ಇದ್ದಕ್ಕಿದ್ದ ಹಾಗೆ ಸಾಹಿತಿಗಳು, ಚಿಂತಕರು,ಬುದ್ಧಿಜೀವಿಗಳು,ಪತ್ರಕರ್ತರು ಹೋರಾಟಗಾರರಲ್ಲಿ ಒಬ್ಬೊಬ್ಬರನ್ನೇ ಆಯ್ದು ಹಂಗಿಸಿ,ನಿಂದಿಸಿ,ಅಪಹಾಸ್ಯ ಮಾಡಿ, ಸುಳ್ಳು ಆರೋಪಗಳ ಮೂಲಕ ಅವರ ಚಾರಿತ್ರ್ಯ ಹನನ ಮಾಡಲಾಗುತ್ತಿದೆ.ಇದು ಸತ್ಯ,ನ್ಯಾಯ ಮತ್ತು ನಿಜವಾದ ಧರ್ಮದ ಪರ ಮಾತನಾಡುವವರ ನೈತಿಕ ಸ್ಥೈರ್ಯ ಕುಸಿದುಹೋಗುವಂತೆ ಮಾಡುವ ಹುನ್ನಾರ.ಈ ಕುಟಿಲ ಉದ್ದೇಶಕ್ಕಾಗಿ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಜನವಿರೋಧಿ ನಿಲುವು ಹೊಂದಿರುವ ಹಿಡಿಯಷ್ಟಿರುವ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನೇ ಸಾರ್ವಜನಿಕ ಅಭಿಪ್ರಾಯವೆಂದು ಬಿಂಬಿಸಲು ಹೊರಟಿದ್ದಾರೆ.ಇದನ್ನೇ ಬಳಸಿಕೊಂಡು ಮಾಧ್ಯಮಗಳು ತಮ್ಮ ತೀರ್ಮಾನಗಳನ್ನು “ಜನಭಿಪ್ರಾಯ”ದ ಹೆಸರಲ್ಲಿ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಿವೆ…”
ಹೌದೇ? ನಿಜವಾಗಿಯೂ ಕರ್ನಾಟಕದಲ್ಲಿ ನಮ್ಮ ಸೆಕ್ಯುಲರ್ ‘ಆಪ್ತ ಮಿತ್ರ’ರು ಹೇಳುತ್ತಿರುವಂತೆ ಬೌದ್ಧಿಕವಾಗಿ ಉಸಿರು ಕಟ್ಟಿಸುವ ವಾತವರಣ ನಿರ್ಮಾಣವಾಗಿದೆಯೇ? ಅವರ ಆತಂಕ ಸಕಾರಣವೇ? ಹೌದು ಎನ್ನುವುದು ನನ್ನ ಅಭಿಪ್ರಾಯ.ರಾಜ್ಯದಲ್ಲಿ ನಡೆದ “ಬೌದ್ಧಿಕ ಫ್ಯಾಸಿಸಂ”ನ ಘಟನೆಗಳ ಉದಾಹರಣೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ.
ಮೊದಲನೆಯ ಉದಾಹರಣೆ :ಬೆಲ್ಜಿಯಂನ ಗೆಂಟ್ ವಿವಿಯ ಸಹಭಾಗಿತ್ವದಲ್ಲಿ ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಪ್ರೊ.ಎಸ್ ಎನ್ ಬಾಲಗಂಗಾಧರ ಅವರ ನೇತೃತ್ವದಲ್ಲಿ ಭಾರತೀಯ ಸಮಾಜ ಮತ್ತು ಸ್ಥಳಿಯ ಸಂಸ್ಕೃತಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದ “ಸ್ಥಳಿಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ(CSLC)”ವನ್ನು ಮುಚ್ಚಿಸಲಾಯಿತು.ಕಾರಣ ಆ ಸಂಸ್ಥೆ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣಿಯದೇ ತನ್ನ ಸಂಶೋಧನೆಯ ವಿಷಯಗಳನ್ನು ಮಂಡಿಸಿದ್ದು. ಮತ್ತಷ್ಟು ಓದು 
“ಬೌದ್ಧಿಕ ದಾಸ್ಯದಲ್ಲಿ ಭಾರತ” ಪುಸ್ತಕ ದೊರೆಯುವ ಬಗ್ಗೆ ಮಾಹಿತಿ
ಬೆಂಗಳೂರು :
1.ಅಂಕಿತ ಪುಸ್ತಕ,ಗಾಂಧಿ ಬಜಾರ್
2.ಸಾಹಿತ್ಯ ಗಂಗಾ,ಚಾಮರಾಜಪೇಟೆ (ಉಮಾ ಟಾಕೀಸ್ ಹಿಂದಿನ ರಸ್ತೆ)
3.ಸಾಹಿತ್ಯ ಸಿಂಧು,ನೃಪತುಂಗ ರಸ್ತೆ,ರಿಸರ್ವ್ ಬ್ಯಾಂಕ್ ಎದುರು (ಮಿಥಿಕ್ ಸೊಸೈಟಿಯ ನಂತರದ ಬಿಲ್ಡಿಂಗ್)
4.ರಾಷ್ಟ್ರೋತ್ಥಾನ ಸಾಹಿತ್ಯ,೩೬ನೇ ಕ್ರಾಸ್,೧೦ ನೇ ಮುಖ್ಯ ರಸ್ತೆ, ಜಯನಗರ ೪ನೇ ಬ್ಲಾಕ್ (ಬಿ.ಎಸ್.ಎನ್.ಎಲ್ ಆಫೀಸ್ ಹಿಂಬಾಗ )
5.ನಾಗಶ್ರೀ ಬುಕ್ ಹೌಸ್, ಜಯನಗರ ಬಿಡಿಎ ಕಾಂಪ್ಲೆಕ್ಸ್,ಜಯನಗರ ೪ನೇ ಬ್ಲಾಕ್.Tel: 26630993/26543465
6.ಟೋಟಲ್ ಕನ್ನಡ,ಜಯನಗರ ೪ನೇ ಬ್ಲಾಕ್,ಬೆಂಗಳೂರು
7.ರಾಕೇಶ್ ಶೆಟ್ಟಿ – 9964000058
8.ಸಂದೀಪ್ – 8147953299






