ಕನ್ನಡನಾಡಿನ ಅನರ್ಘ್ಯ ರತ್ನಗಳು
– ರೋಹಿತ್ ಚಕ್ರತೀರ್ಥ
ನಮ್ಮ ನಾಡು ಕವಿಪುಂಗವರಿಗೆ, ಸಮಾಜಸುಧಾರಕರಿಗೆ, ಶಾಸ್ತ್ರಕೋವಿದರಿಗೆ ನೆಲೆ ಕೊಟ್ಟ ಪುಣ್ಯಭೂಮಿ. ಇಲ್ಲಿ ಶತಶತಮಾನಗಳಿಂದ ಅನೇಕಾನೇಕ ಸಂತರು, ಪ್ರಾಜ್ಞರು, ವಿಚಾರವಾಧಿಗಳು ಆಗಿಹೋಗಿದ್ದಾರೆ. ಈಗಿನ ಇಪ್ಪತ್ತೊಂದನೇ ಶತಮಾನದಲ್ಲೂ ಅಂತಹ ಪುಣ್ಯಪುರುಷರು ಮತ್ತೆಮತ್ತೆ ನಮ್ಮ ಈ ಕರುನಾಡಿನಲ್ಲಿ ಹುಟ್ಟಿಬರುತ್ತಲೇ ಇರುವುದು ನಮ್ಮೆಲ್ಲರ ಪೂರ್ವಜನ್ಮದ ಸುಕೃತ ಎಂದೇ ತಿಳಿಯಬೇಕು. ಇಂದಿನ ಈ ಸುದಿನದಂದು ಅಂತಹ ಕೆಲ ಪುಣ್ಯಪುರುಷ/ಮಹಿಳೆಯರನ್ನು, ಸಮಾಜದ ಚಿಂತನೆಯ ಧಾಟಿಯನ್ನೇ ಬದಲಾಯಿಸಬಲ್ಲ ಪ್ರವರ್ತಕರನ್ನು ನೆನೆಯೋಣ.
ಪ್ರೊ. ಭಗ್ವಂತ – ಇವರೊಬ್ಬ ಸಮಾಜಸುಧಾರಕ ಕಮ್ ಪಂಡಿತ ಕಮ್ ವಿಚಾರವಾದಿ ಕಮ್ ಜಾತ್ಯತೀತ ಕಮ್ ಇನ್ನೇನೇನೋ ಆಗಿರುವ ಪುಣ್ಯಪುರುಷರು. ಇವರು ಜಗತ್ತಿನ ಉಳಿದೆಲ್ಲಾ ದೇಶಗಳನ್ನು ಬಿಟ್ಟು ನಮ್ಮ ಭರತಖಂಡವನ್ನು, ಅದರಲ್ಲೂ ಕರ್ನಾಟಕವನ್ನು ತನ್ನ ಅವತಾರಕ್ಕಾಗಿ ಆರಿಸಿಕೊಂಡದ್ದೇ ನಮ್ಮೆಲ್ಲರ ಪುಣ್ಯ. ಭಗ್ವಂತ್ ಅವರು ತನ್ನ ದಿವ್ಯಚಕ್ಷುಗಳಿಂದ ಈ ಸಮಾಜದ ಧರ್ಮ-ಪಂಥಗಳಲ್ಲಿ ಅಡಗಿರುವ ವಾರೆಕೋರೆಗಳನ್ನು ಹೊರಗೆಳೆದುಹಾಕಿ ಸಮಾಜಕ್ಕೆ ಭರಿಸಲಾರದ ಸಹಾಯ ಮಾಡಿದ್ದಾರೆ. ಇವರಿಗೆ ಹಿಂದೂ ಧರ್ಮದ ಭಗವದ್ಗೀತೆ ಎಂದರೆ ತುಂಬಾ ಪ್ರೀತಿ. ಅದನ್ನು ನೂರಾರು ಸಲ ಪಾರಾಯಣ ಮಾಡಿ, ಇದುವರೆಗೆ ಪಂಡಿತವರೇಣ್ಯರಿಗೆ ಕಾಣದ ಅರ್ಥಗಳನ್ನು ಹುಡುಕಿ ಹೊರತೆಗೆದ ಸಾಹಸಿ ಅವರು. ಭಗ್ವಂತ್ ಭಾರತದಲ್ಲಲ್ಲದೆ ದೂರದ ಸೌದಿಯಲ್ಲೋ ವ್ಯಾಟಿಕನ್ನಲ್ಲೋ ಹುಟ್ಟಿ ಅಲ್ಲಿನ ಧರ್ಮಗ್ರಂಥಗಳನ್ನು ಈ ರೀತಿ ಹೊಗಳಿದ್ದರೆ ಅವರಿಗೆ ಅಲ್ಲಿನ ಮಠಾಧಿಪತಿಗಳು ಮತ್ತು ಸರ್ಕಾರಗಳು ಅಲೌಕಿಕ ಪ್ರಶಸ್ತಿಗಳನ್ನು ಕೊಟ್ಟು ಸನ್ಮಾನಿಸುತ್ತಿದ್ದವು. ಮತ್ತಷ್ಟು ಓದು
ಆಚಾರವಿಲ್ಲದ ನಾಲಿಗೆ…
– ಎಸ್.ಎನ್.ಭಾಸ್ಕರ್,ಬಂಗಾರಪೇಟೆ
“ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ” – ಪುರಂದರದಾಸರ ಈ ಪದ ನೆನಪಾಗುತ್ತಿದೆ. ಇತ್ತೀಚೆಗಷ್ಟೇ ಭಗವದ್ಗೀತೆಯನ್ನು ಸುಡುತ್ತೇನೆ ಎಂದು ಹೇಳಿ ಸುದ್ದಿ ಮಾಡಿದ್ದ ದೇವನಾಮಾಂಕಿತ ಬುದ್ದಿಜೀವಿಯೊಂದು ಮತ್ತೊಮ್ಮೆ ತನ್ನ ಎಲುಬಿಲ್ಲದ ನಾಲಿಗೆಯನ್ನು ಹರಿಬಿಟ್ಟು ಸುದ್ದಿ ಮಾಡಿದೆ. ನಿಜಕ್ಕೂ ಖೇದವೆನಿಸುತ್ತದೆ. ಒಂದಿಡೀ ಜನಾಂಗದ ಆರಾಧ್ಯ ದೈವವಾಗಿರುವ, ಮರ್ಯಾದ ಪುರುಷೋತ್ತಮ, ಆದರ್ಶ ಪುರುಷನಾಗಿ ದೈವಸ್ಥಾನದಲ್ಲಿ ಪ್ರತಿಷ್ಟಾಪಿಸಿ ಪೂಜಿಸಲಾಗುತ್ತಿರುವ ಶ್ರೀ ರಾಮನನ್ನು ಕುರಿತು ಈ ರೀತಿ ಅನಗತ್ಯವಾದ ಹೇಳಿಕೆಗಳನ್ನು ನೀಡುವುದರಿಂದ ಅವರಿಗೆ ಆಗುವ ಲಾಭವಾದರೂ ಏನೋ? ಆಗಸದೆಡೆ ಮುಖಮಾಡಿ ಉಗುಳಿದರೆ ನಷ್ಟ ಯಾರಿಗೆ?
ಅಲ್ಲಾ ಸ್ವಾಮಿ… ಈ ರೀತಿ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವಂತಹ ಹೇಳಿಕೆಗಳನ್ನು ನೀಡುವುದರ ಮೂಲಕ ಸ್ವಸ್ಥ ಸಮಾಜದಲ್ಲಿ ವಿಷ ಬೀಜ ಬಿತ್ತುತ್ತಿದ್ದೇನೆ ಎಂಬ ಅರಿವಾದರೂ ನಿಮಗುಂಟೆ ? ಅಥವಾ ಸೋ ಕಾಲ್ಡ್ ’ಸೆ(ಸಿ)ಕ್ಯುಲರ್” ಸಿದ್ದಾಂದತದೆಡೆಗೆ ತಮ್ಮ ಅತೀವ ಬದ್ದತೆಯನ್ನು ಈ ರೀತಿ ಸಮಾಜಕ್ಕೆ ತೋರ್ಪಡಿಸುತ್ತಿರುವಿರೇ? ವೇದಿಕೆಗಳ ಮೇಲೆ ನಿಂತು ಈ ರೀತಿ ಭಾಷಣ ಮಾಡಿ ಸುತ್ತ ನೆರೆದಿರುವ ಭಟ್ಟಂಗಿಗಳ ಚಪ್ಪಾಳಿ ಗಿಟ್ಟಿಸುತ್ತಾ ಸುದ್ದಿಯಾಗುವುದು ಯಾರನ್ನು ಓಲೈಸಲು? ಈ ರೀತಿ ಹೇಳಿಕೆ ನೀಡಿದವರ ವಿರುದ್ದ ಸರ್ಕಾರವೂ ಮೌನವಾಗಿರುವುದು ನಿಜಕ್ಕೂ ಸೋಜಿಗವೇ ಸರಿ. ಕ್ರಮ ಕೈಗೊಳ್ಳಲು ಯಾರಾದರೂ ದೂರು ನೀಡುವವರೆಗೆ ಕಾಯಬೇಕೆಂಬ ನಿಯಮವೇನೂ ಇಲ್ಲವಲ್ಲ. ಬಹು ಸಂಖ್ಯಾತ ಜನ ಸಮೂಹದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವ ಬಗ್ಗೆ ಸ್ವಯಂ ದೂರು ದಾಖಲಿಸಿ ಕ್ರಮ ಕೈಗೊಳ್ಳುವ ಕಾರ್ಯ ಏಕೆ ಸರ್ಕಾರದಿಂದ ಆಗುತ್ತಿಲ್ಲ. ಪ್ರಮೋದ್ ಮುತಾಲಿಕ್ ರವರ ಭಾಷಣಕ್ಕೆ ನಿಷೇಧ ಹೇರುವ ಸರ್ಕಾರ ಇವರಿಗೂ ಏಕೆ ನಿಷೇಧ ಹೇರಬಾರದು? ಜನರ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಬರದ ಹಾಗೆ ನೋಡಿಕೊಳ್ಳುವುದು ಸರ್ಕಾರದ ಹಾಗೂ ಕಾನೂನಿನ ವ್ಯಾಪ್ತಿಗೆ ಬರುತ್ತದೆ ಅಲ್ಲವೇ..? ಮತ್ತೇಕೆ ಈ ಮೌನ. ಯಾರ ಓಲೈಕೆಗಾಗಿ..?