ವಿಷಯದ ವಿವರಗಳಿಗೆ ದಾಟಿರಿ

Archive for

20
ಏಪ್ರಿಲ್

‘ಯಾನ’ ದಲ್ಲಿ ಒಂದು ಸುತ್ತು

– ಡಾ.ಸಂತೋಷ್ ಕುಮಾರ್ ಪಿ.ಕೆ

ಯಾನ‘ಯಾನ’ ಇತ್ತೀಚೆಗಷ್ಟೆ ಬಿಡುಗಡೆಯಾದ ಭೈರಪ್ಪನವರ ಕಾದಂಬರಿಯಾಗಿದೆ.ಹಾಟ್ ಕೇಕ್ ರೀತಿಯಲ್ಲಿ ಮಾರಾಟವಾದ ಪುಸ್ತಕ ಅವರ ಕಿರೀಟಕ್ಕೆ ದಕ್ಕಿದ ಮತ್ತೊಂದು ಗರಿ ಎಂದರೂ ತಪ್ಪಾಗಲಾರದು.ಮಾನವೀಯ ಸಂಬಂಧಗಳ ತಾಕಲಾಟವನ್ನು ಬಿಂಬಿಸುವ ಭೈರಪ್ಪನವರ ಹಲವಾರು ಕಾದಂಬರಿಗಳಲ್ಲಿ ಇದೂ ಸಹ ಒಂದಾಗಿದೆ. ಇಡೀ ಕಾದಂಬರಿ ಉತ್ತರಾ ಮತ್ತು ಸುದರ್ಶನ್ ಎಂಬ ಇಬ್ಬರು ಪ್ರಾಯೋಗಿಕ ಅಥವಾ ಎಕ್ಸ್ಪೆರಿಮೆಂಟ್ ದಂಪತಿಗಳ ಸಂಬಂಧದೊಳಗಿನ ತೊಳಲಾಟವನ್ನು ಅಂದವಾಗಿ ಚಿತ್ರಿಸುತ್ತದೆ. ಬೇರೊಂದು ಗ್ರಹಕ್ಕೆ (ಪ್ರಾಕ್ಸಿಮಾ ಸೆಂಟರ್) ಚಲಿಸುವ ಮತ್ತು ಎಂದೆಂದಿಗೂ ಭೂಮಿಗೆ ಹಿಂದಿರುಗದ ರಾಕೆಟ್ ಒಳಗೆ ಒಂದು ಲೋಕವನ್ನು ಸೃಷ್ಟಿಸಿ ಆಕಾಶ್ ಮತ್ತು ಮೇದಿನಿಯರ ಮೂಲಕ ಅವರ ಪೋಷಕರ ಜೀವನಗಾಥೆಯನ್ನು ಎಳೆಎಳೆಯಾಗಿ ಬಿಡಿಸುವ ಕಾರ್ಯವನ್ನು ಲೇಖಕರು ಮಾಡುತ್ತಾರೆ.

ಯಾನವು ವೈಜ್ಞಾನಿಕ ಪ್ರಯೋಗಕ್ಕಾಗಿ ಭೂಮಿಯಿಂದ ರಾಕೆಟ್ ಮೂಲಕ ಬೇರೊಂದು ನಕ್ಷತ್ರ/ಗ್ರಹಕ್ಕೆ ಪ್ರಯಾಣಿಸುವ ಕತೆಯಾಗಿದೆ. ಯಾನ ಎಂಬುದು ಇಲ್ಲಿ ಎರಡು ಅರ್ಥಗಳನ್ನು ಒಳಗೊಳ್ಳಬಹುದು, ಒಂದು, ಬೇರೆ ಗ್ರಹಕ್ಕೆ ಮಾಡುವ ಪ್ರಯಾಣ ಮತ್ತೊಂದು ಜೀವನದಲ್ಲಿ ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಮಾಡುವ ಪ್ರಯಾಣ. ವಿಜ್ಞಾನದ ಕುರಿತು ಕೆಲವೊಂದು ಉಪಯುಕ್ತ ಮಾಹಿತಿಗಳನ್ನೂ ಸಹ ಈ ಕಾದಂಬರಿ ಒದಗಿಸುತ್ತದೆ. ಅದರ ಜೊತೆಗೆ ಮನುಷ್ಯರ ಜೀವನದಲ್ಲಿ ಸಹಜವಾಗಿ ನಡೆಯುವ ಸರಸ ಸಲ್ಲಾಪ, ಅನ್ವೇಷಣಾ ಗುಣ, ವಿರಸ, ಆಧ್ಯಾತ್ಮ, ಶರಣಾಗುವಿಕೆ, ಅಹಂ ಇನ್ನೂ ಮುಂತಾದ ಸೂಕ್ಷ್ಮ ಸಂಗತಿಗಳನ್ನು ಹಲವಾರು ಘಟನೆಗಳ ಮೂಲಕ ಕಾದಂಬರಿ ಹೊರಗೆಡಹುತ್ತದೆ. ಒಟ್ಟಿನಲ್ಲಿ ಓದುಗಾಸಕ್ತರಿಗೆ ಎಲ್ಲಿಯೂ ಬೋರ್ ಮಾಡದ ರೀತಿಯಲ್ಲಿ ತನ್ನೊಂದಿಗೆ ಕೊಂಡ್ಯೊಯ್ಯುವ ಗುಣ ಯಾನದ ವೈಶಿಷ್ಟ್ಯವಾಗಿದೆ.

ಯಾನವು ಒಂದು ರೋಚಕ ಕತೆಯಾಗಿದೆ. ಏಕೆಂದರೆ ಓದುಗರಿಗೆ ಎರಡು ಪ್ರಶ್ನೆಗಳನ್ನು ಹಾಕಿಕೊಳ್ಳುವಂತೆ ಮಾಡುವ ಮೂಲಕ ಕೊನೆಯವರೆಗೂ ಉತ್ತರದ ರಹಸ್ಯವನ್ನು ಕಾಪಾಡಿಕೊಳ್ಳುತ್ತದೆ. ಆ ಪ್ರಶ್ನೆಗಳೆಂದರೆ, 1.ಆಕಾಶ್ ಮತ್ತು ಮೇದಿನಿ ಎಂಬ ಸಹೋದರ ಸಹೋದರಿಯರು ವಿವಾಹವಾಗಲು ಹೇಗೆ ಸಾಧ್ಯ? ಹಾಗೂ 2. ಆಕಾಶ್ನ ತಂದೆ ಯಾರು? ಈ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿಯೇ ಕಾದಂಬರಿ ಕೊನೆಯವರೆಗೂ ಕುತೂಹಲವನ್ನು ಉಳಿಸುತ್ತದೆ. ಕಾದಂಬರಿಯನ್ನು ಓದಲು ಪ್ರಾರಂಭಿಸಿದಾಗ, ಮುಂದೆ ಏನಾಗಬಹುದು ಎಂಬ ನಿರೀಕ್ಷೆಗಳೂ ಸಹ ಓದುಗರಿಗೆ ಹುಟ್ಟದೆ ಇರಲಾರದು. ಇದಿಷ್ಟು ಕಾದಂಬರಿಯ ಮೇಲ್ನೋಟದ ವೈಶಿಷ್ಟ್ಯಗಳು. ಈ ಕಾದಂಬರಿಯಲ್ಲಿ ಇನ್ನೊಂದು ವಿಶೇಷವಿದೆ ಅದು ಈ ಕೆಳಗಿನಂತಿದೆ.

ಮತ್ತಷ್ಟು ಓದು »