ವಿಷಯದ ವಿವರಗಳಿಗೆ ದಾಟಿರಿ

Archive for

24
ಏಪ್ರಿಲ್

ರಾಜ್ ಕುಮಾರ್: ನಾಡಿನ ಸೃಜನಶೀಲ ಆಯಾಮ

– ರಾಜಕುಮಾರ.ವ್ಹಿ.ಕುಲಕರ್ಣಿ,ಮುಖ್ಯಗ್ರಂಥಪಾಲಕ
 ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

Dr Raj‘ಐದು ಕೋಟಿ ಕನ್ನಡಿಗರನ್ನು ಜಾಗೃತಗೊಳಿಸಲು ಇಡೀ ಕನ್ನಡ ಸಾಹಿತ್ಯ ವಲಯಕ್ಕೆ ಸಾಧ್ಯವಾಗದೇ ಇದ್ದಾಗ,ಕಲಾವಿದನಾಗಿ ರಾಜ್ ಕುಮಾರ್ ಪ್ರತಿಯೊಬ್ಬ ಕನ್ನಡಿಗನ ಮನೆ ಮತ್ತು ಮನಸ್ಸನ್ನು ತಲುಪಿದರು’ ಕನ್ನಡದ ವರನಟ ರಾಜ್ ಕುಮಾರ್ ಕುರಿತು ಡಾ.ಯು.ಆರ್.ಅನಂತಮೂರ್ತಿ ಅವರು ಹೇಳಿದ ಮಾತಿದು.ಈ ಮಾತಿನಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಮತ್ತು ಇದು ಮುಖಸ್ತುತಿಯೂ ಅಲ್ಲ.

ನಿಜ.ಯಾರಿಗೂ ಸಾಧ್ಯವಾಗದೇ ಇರುವುದನ್ನು ರಾಜ್ ಕುಮಾರ್ ಒಬ್ಬ ಕಲಾವಿದನಾಗಿ ಸಾಧಿಸಿದರು.ರಾಜ್ ಕುಮಾರ್ ಎಂದರೆ ಕನ್ನಡ ಸಿನಿಮಾ ಎನ್ನುವಷ್ಟರ ಮಟ್ಟಿಗೆ ಅವರು ಅನಿವಾರ್ಯವಾದರು.ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ರಾಜ್ ಕುಮಾರ್ ಪೂರ್ವದಲ್ಲಿ ಮತ್ತು ರಾಜ್ ಕುಮಾರ್ ನಂತರ ಎನ್ನುವ ರೀತಿ ಕನ್ನಡ ಸಿನಿಮಾ ಪ್ರಪಂಚದ ಅವಿಭಾಜ್ಯ ಅಂಗವಾದರು.ಕನ್ನಡ ಚಿತ್ರರಂಗದ ಈ ಮೇರುನಟ ಎಪ್ರಿಲ್ ೧೨ ರಂದು ತೀವ್ರ ಹೃದಯಾಘಾತದಿಂದ ನಿಧನರಾದಾಗ ಸಿನಿಮಾ ಲೋಕ ಮಾತ್ರವಲ್ಲ ಇಡೀ ಕನ್ನಡ ನಾಡು ಆಘಾತದಿಂದ ತತ್ತರಿಸಿ ಹೋಯಿತು.ಬದುಕಿದ್ದರೆ ಈ ದಿನ (ಏಪ್ರಿಲ್ ೨೪) ತಮ್ಮ ೮೬ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು.ಆದರೆ ಸಾವಿನ ರೂಪದಲ್ಲಿ ಬಂದ ವಿಧಿ ಅದಕ್ಕೆ ಅವಕಾಶವನ್ನೇ ಕೊಡಲಿಲ್ಲ.

ಮತ್ತಷ್ಟು ಓದು »

24
ಏಪ್ರಿಲ್

ಈ ಭೂಮಿಯೆಂಬ ಗ್ರಹವೊಂದು ರಿಮ್ಯಾಂಡ್ ಹೋಮ್

– ಪ್ರೇಮಶೇಖರ

ಆತ್ಮವಿಶ್ವದಲ್ಲಿ ಮಾನವ ಏಕಾಂಗಿಯಲ್ಲ : ಒಂದು ಜಿಜ್ಞಾಸೆ – ಭಾಗ ೧
ಬೆತ್ತಲೆ ಅಲೆಮಾರಿ ಇದ್ದಕ್ಕಿದ್ದಂತೆ ನಾಗರಿಕ ಮಾನವನಾದ! – ಭಾಗ ೨
ಮಂಗಳನ ಅಂಗಳದಿಂದ ನೆಫಿಲಿಂ ನೆಲಕ್ಕೊಂದು ಯಾನ – ಭಾಗ ೩

ನಾನೊಬ್ಬ ಪ್ರವಾದಿಯಲ್ಲ.ನನಗೆ ಏಕಾಏಕಿ ಯಾವ ಜ್ಞಾನೋದಯವೂ ಆಗಿಲ್ಲ.ವೈಜ್ಞಾನಿಕವಾಗಿ ಸಾಬೀತಾದ ಸತ್ಯಗಳ ಅಧ್ಯಯನದ ಆಧಾರದ ಮೇಲೆ, ಹಲವು ವರ್ಷಗಳ ಚಿಂತನೆಯ ಮೂಲಕ ಮಾನವಜನ್ಮದ ಉದ್ದೇಶದ ಬಗ್ಗೆ ನನ್ನದೇ ಆದ ಕೆಲವೊಂದು ವಿಚಾರಗಳನ್ನು ರೂಪಿಸಿಕೊಂಡಿದ್ದೇನೆ.ಅವುಗಳನ್ನಿಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.ಸತ್ಕರ್ಮ ಹಾಗೂ ಕುಕರ್ಮಗಳಿಗನುಗುಣವಾಗಿ ಮರುಜನ್ಮವೆತ್ತುವ ಬಗ್ಗೆ ಹಿಂದೂಗಳು, ಬೌದ್ಧರು, ಜೈನರು ನಂಬಿಕೆಯನ್ನಿಟ್ಟಿದ್ದಾರೆ.ಈ ಮೂರು ಧರ್ಮಗಳ ತಳಹದಿಯೇ ಕರ್ಮ ಮತ್ತು ಕರ್ಮಕ್ಕನುಗುಣವಾಗಿ ಮರುಜನ್ಮ.  ಕ್ರಿಶ್ಚಿಯಾನಿಟಿ ಮತ್ತು ಇಸ್ಲಾಮ್ ಪುನರ್ಜನ್ಮವನ್ನು ತಿರಸ್ಕರಿಸುತ್ತವೆ.ಇರುವುದೊಂದೇ ಜನ್ಮ,ನಂತರದ್ದು ಅಂತಿಮ ತೀರ್ಪು, ಅದಕ್ಕನುಗುಣವಾಗಿ ಸ್ವರ್ಗ ಅಥವಾ ನರಕ ಎಂದು ಅವು ಹೇಳುತ್ತವೆ.ಆದರೆ ಬೈಬಲ್‍ನ ಎರಡೂ ಒಡಂಬಡಿಕೆಗಳಲ್ಲಿ ಪುನರ್ಜನ್ಮದ ಬಗ್ಗೆ ಉಲ್ಲೇಖಗಳಿದ್ದುವೆಂದೂ, ಅವುಗಳನ್ನು ಕ್ರಿ.ಶ. ನಾಲ್ಕನೆಯ ಶತಮಾನದಲ್ಲಿ ರೋಮನ್ ಚಕ್ರವರ್ತಿ ಕಾನ್‍ಸ್ಟಾಂಟೈನ್ ಮತ್ತವನ ತಾಯಿ ಉದ್ದೇಶಪೂರ್ವಕವಾಗಿ ತೆಗೆದುಹಾಕಿದರು ಎಂದು ಹೇಳಲಾಗುತ್ತದೆ.ಅವರದನ್ನು ಮಾಡಿದ್ದು ಸದುದ್ದೇಶದಿಂದಲೇ.ಈ ಜನ್ಮದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮುಂದಿನ ಜನ್ಮದಲ್ಲಿ ಅವಕಾಶವಿದೆ ಎಂದು ನಂಬಿದ ಜನರು ತಪ್ಪುಗಳನ್ನೆಸಗುವುದಕ್ಕೆ ಹಿಂಜರಿಯದಿರಬಹುದು, ಅದಕ್ಕೆ ಬದಲಾಗಿ ಇರುವೊಂದೇ ಜನ್ಮ, ತಪ್ಪೆಸಗಿದರೆ ತಿದ್ದಿಕೊಳ್ಳಲು ಅವಕಾಶವೇ ಇಲ್ಲ, ಅದಕ್ಕನುಗುಣವಾಗಿ ಶಿಕ್ಷೆಯೂ ಶತಸಿದ್ಧ ಎಂದು ನಂಬಿಸಿದರೆ ಜನರು ತಪ್ಪುಗಳನ್ನೆಸಗಲು ಹಿಂಜರಿದು ಸದ್ಗುಣಿಗಳಾತ್ತಾರೆಂದು ಕಾನ್‍ಸ್ಟಾಂಟೈನ್ ಮತ್ತವನ ತಾಯಿ ಆಶಿಸಿದ್ದರು.(ಇಷ್ಟಾಗಿಯೂ ಆವರ ಕಣ್ಣುತಪ್ಪಿಸಿ ಪುನರ್ಜನ್ಮದ ಬಗ್ಗೆ ಕೆಲ ಉಲ್ಲೇಖಗಳು ಬೈಬಲ್‍ನಲ್ಲಿ ಉಳಿದುಕೊಂಡಿವೆ.  ನೋಡಿ: ಮ್ಯಾಥ್ಯೂ 11:13-14, 17:10-13)

ಮತ್ತಷ್ಟು ಓದು »