ವಿಷಯದ ವಿವರಗಳಿಗೆ ದಾಟಿರಿ

Archive for

27
ಏಪ್ರಿಲ್

ರೈತರ ಆತ್ಮಹತ್ಯೆ, ಹೀಗೊಂದು ಚಿಂತನೆ

– ಭರತ್ ಎನ್ ಶಾಸ್ತ್ರಿ

ರೈತಆತ್ಮಹತ್ಯೆಗಳು ಘೋರನಿರ್ಧಾರಗಳು ಎನ್ನುವುದರಲ್ಲಿ ಸಂಶಯವಿಲ್ಲ. ಯಾವುದೇ ಸಾವು ತರುವ ಶೂನ್ಯತೆ, ಮತ್ತು ಬಂಧುಮಿತ್ರರಿಗೆ ಅಥವಾ ಪ್ರೀತಿಪಾತ್ರರಿಗೆ ತರುವ ಯಾತನೆ ಅನುಭವಿಸಿದವರಿಗೇ ಗೊತ್ತು. ಅದರಲ್ಲೂ ಆತ್ಮಹತ್ಯೆ ತರುವ ಸಂಕಟ ಮಾತ್ರ ಹಲವು ಆಯಾಮಗಳದ್ದು.

ಆದರೆ, ಭಾರತದಲ್ಲಿ ರೈತರ ಆತ್ಮಹತ್ಯೆಗಳು ವಿಚಿತ್ರಕಾರಣಗಳಿಂದ ಮಾಧ್ಯಮಗಳ ದೊಡ್ಡಗಂಟಲಿನಿಂದ ಜನರ ಗಮನ ಸೆಳೆಯುತ್ತವೆ. ರೈತರ ಆತ್ಮಹತ್ಯೆಗಳಿಗೆ ಕಾರಣ ಹುಡುಕಲು ನಡೆಸಿದ ವೈಜ್ಞಾನಿಕ ಮತ್ತು ಭಾವೋದ್ವೇಗರಹಿತ ಅಧ್ಯಯನಗಳು ಒಂದೋ ಅವಗಣಿಸಲ್ಪಟ್ಟಿವೆ, ಅಥವಾ ರಾಜಕೀಯ ಕಾರಣಗಳಿಂದ ಆಳುವವರ ಮತ್ತು ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾಗಿವೆ.

ಹೆಚ್ಚುತ್ತಿರುವ ಜನಸಂಖ್ಯೆ, ದುಡಿಯುವ ಯುವಜನತೆಯ ಕೈಗೆ ಉದ್ಯೋಗಗಳ ಅಭಾವ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಕುಸಿಯುತ್ತಿರುವ ಮಹಾನಗರ/ ನಗರಗಳು ಇವೆಲ್ಲ ಸಮಸ್ಯೆಯ ಜತೆ ಸಕ್ಷಮವಲ್ಲದ ಕೃಷಿಕ್ಷೇತ್ರ ಕೂಡ ಭಾರತದ ಹಿಂದುಳಿಕೆಯ ಕಾರಣವಾಗಿದೆ.

ಆತ್ಮಹತ್ಯೆಗಳ ಬಗ್ಗೆ ಭಾರತದ ಒಟ್ಟೂ ಪರಿಸ್ಥಿತಿಯನ್ನು ಅವಲೋಕಿಸುವುದಾದರೆ, ಮೂರುದಶಕಗಳ ಹಿಂದೆ ಸುಮಾರು ೪೦,೦೦೦(ಒಂದು ವರ್ಷಕ್ಕೆ) ದಷ್ಟಿದ್ದ ಆತ್ಮಹತ್ಯೆಗಳ ಸಂಖ್ಯೆ ೨೦೦೯ ಕ್ಕೆ ೧೨೭,೧೫೧ ಕ್ಕೆ ಏರಿತು. ಅದೇ ೨೦೧೩ ರಲ್ಲಿ ಒಟ್ಟು ಆತ್ಮಹತ್ಯೆಗಳ ಸಂಖ್ಯೆ ೧,೩೪,೭೯೯! ಈ ಐದು ವರ್ಷಗಳಲ್ಲಿ ಕರ್ನಾಟಕದ ಕೊಡುಗೆ ಹತ್ತಿರ ಹತ್ತಿರ ೮.೪%. ಕರ್ನಾಟಕದಲ್ಲಿ ೨೦೦೯ ರ ವರ್ಷದಲ್ಲಿ ಸಂಭವಿಸಿದ ಆತ್ಮಹತ್ಯೆಗಳು ಸುಮಾರು ೧೦,೬೮೦. ಇದರಲ್ಲಿ ರೈತರ ಸಂಖ್ಯೆ ೩೩೭, ಎಂದರೆ ೩.೧೫%. ಇದರ ಅರ್ಥ ಪ್ರತಿ ೩೦ ಆತ್ಮಹತ್ಯೆಗಳಲ್ಲಿ ಒಬ್ಬ ರೈತನ ಜೀವನಷ್ಟವಾಗಿದೆ. ಇನ್ನುಳಿದವರ ವೃತ್ತಿ ಏನಿತ್ತು? ಸೋಜಿಗವೆಂದರೆ ರೈತರ ಆತ್ಮಹತ್ಯೆಯ ಬಗ್ಗೆ ಅಂತರ್ಜಾಲದಲ್ಲಿ ಸುಲಭವಾಗಿ ಸಿಕ್ಕುವ ಮಾಹಿತಿ ಮಿಕ್ಕ ವೃತ್ತಿಯಲ್ಲಿರುವವರ ಬಗ್ಗೆ ಸಿಗುವುದಿಲ್ಲ. ಬೆಂಗಳೂರನ್ನೇ ಉದಾಹರಣೆಗೆ ತೆಗೆದುಕೊಳ್ಳುವುದಾದರೆ, ಸಾಫ್ಟ್ ವೇರ್ ಉದ್ಯಮದಲ್ಲಿ ಮಿತಿಮೀರಿದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ ಎಷ್ಟು ಎಂದು ನೀವು ಹುಡುಕಾಡಿದರೆ ಅಂಕಿ-ಅಂಶಗಳನ್ನು ಪಡೆಯಲು ಕಷ್ಟ ಪಡಬೇಕಾಗುತ್ತದೆ!

ಮತ್ತಷ್ಟು ಓದು »