ಸುಳ್ಸುದ್ದಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿವಾದಕ್ಕೆ ಅನಿರೀಕ್ಷಿತ ತಿರುವು
– ಪ್ರವೀಣ್ ಕುಮಾರ್ ಮಾವಿನಕಾಡು
ಸೂರ್ಯ ನಮಸ್ಕಾರವನ್ನು ಮಾಡಿಯೇ ತೀರುತ್ತೇವೆ:ಅಸಾದುದ್ದೀನ್ ಒವೈಸಿ
ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನ ನಿಮಿತ್ತ ಭಾನುವಾರ ರಜೆ ದಿನದಂದು ಕಡ್ಡಾಯವಾಗಿ ಉರ್ದು ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳು ತೆರೆದಿದ್ದು, ಅಂದು ಬೆಳಗ್ಗೆ ಶಾಲೆಗಳಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗುವುದು ಎಂಬ ಸರ್ಕಾರದ ಆದೇಶಕ್ಕೆ ಹಲವಾರು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ವಿಶ್ವಹಿಂದೂ ಪರಿಷತ್,ಅಖಿಲ ಭಾರತೀಯ ಹಿಂದೂ ಮಹಾ ಸಭಾ,ಶ್ರೀರಾಮ ಸೇನೆ ಮೊದಲಾದ ಸಂಘಟನೆಗಳ ಮುಖಂಡರು ಸರಕಾರದ ಈ ಆದೇಶವು ನಮ್ಮ ಧಾರ್ಮಿಕ ನಂಬಿಕೆಗಳನ್ನು ಇತರ ಧರ್ಮದವರು ದುರುಪಯೋಗಪಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇತರ ಧರ್ಮದವರು ಏಕೇಶ್ವರವಾದಿಗಳಾಗಿದ್ದು, ಅವರುಗಳು ಕೇವಲ ಆ ದೇವರ ಎದುರು ಮಾತ್ರ ಬಾಗುತ್ತಾರೆ. ಆದ್ದರಿಂದ ನಾವು ದೇವರೆಂದು ಭಾವಿಸುವ ಸೂರ್ಯದೇವರಿಗೆ ಇತರ ಧರ್ಮದವರು ನಮಸ್ಕಾರ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಎದುರು ತಮ್ಮ ಅಸಮಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ರವರು, ಹಿಂದೂಗಳಲ್ಲದವರು ಸೂರ್ಯ ನಮಸ್ಕಾರ ಮಾಡುವುದನ್ನು ನಾವೆಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.
ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಹಿಂದೂಗಳು ಮಾತ್ರ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತಷ್ಟು ಓದು