ವಿಷಯದ ವಿವರಗಳಿಗೆ ದಾಟಿರಿ

Archive for

17
ಜೂನ್

ನ್ಯಾಯಕ್ಕಾಗಿ ಶೋಷಿತ ಯುವಕನ ಜೀವಪರ ಹೋರಾಟ

– ಪ್ರವೀಣ್ ಕುಮಾರ್ ಮಾವಿನಕಾಡು

Sulsuddi - Terroristಬೆಂಗಳೂರು:  ಕೇವಲ ಭಯೋತ್ಪಾದಕ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಯುವಕನೋರ್ವನಿಗೆ ಮನೆಯನ್ನು ಬಾಡಿಗೆಗೆ ನೀಡುವುದಿಲ್ಲ ಎಂದು ನಿರಾಕರಿಸಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.ಹೈದರಾಬಾದ್ ಮೂಲದ ಮನೋಜ್ ಕುಮಾರ್(ಹೆಸರು ಮತ್ತು ಧರ್ಮ ಬದಲಿಸಿದೆ) ಎನ್ನುವ ಯುವಕ ತಾನು ಗೆರೆ ನಗರದ ಮನೆಯ ಮಾಲೀಕರೊಬ್ಬರ ಬಳಿ ಬಾಡಿಗೆಗೆ ಮನೆ ಬೇಕೆಂದು ಕೇಳಿದಾಗ ಅವರು ಕೆಲವಾರು ಭಯೋತ್ಪಾದನೆ ಪ್ರಕರಣಗಳಲ್ಲಿ ಆರೋಪಿಯಾಗಿರುವ (ಕೇವಲ ಆರೋಪಿಯಾಗಿರುವ) ನನ್ನನ್ನು ಗುರುತಿಸಿದರು ಮತ್ತು ನಾವು ನಿಮ್ಮಂತವರಿಗೆ ಮನೆ ನೀಡುವುದಿಲ್ಲ ಹೇಳಿ ಬಾಗಿಲು ಮುಚ್ಚಿಕೊಂಡರು ಎಂದು ಆರೋಪಿಸಿದ್ದಾನೆ.

ಇಂತಹಾ ಘಟನೆ ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ನಡೆದಿದ್ದು ದೇಶದಾದ್ಯಂತ ತೀವ್ರ ಸಂಚಲನ ಉಂಟುಮಾಡಿದೆ.

ನಿಜಕ್ಕೂ ಇದೊಂದು ದುರದೃಷ್ಟಕರ ಘಟನೆ ಎಂದು ಪ್ರತಿಕ್ರಿಯಿಸಿದ ಗೃಹ ಸಚಿವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮೂರು ದಿನಗಳ ಒಳಗಾಗಿ ತನಗೆ ವರದಿ ನೀಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,ತಪ್ಪಿತಸ್ತರು ಎಷ್ಟೇ ದೊಡ್ದವರಾಗಿದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮತ್ತಷ್ಟು ಓದು »