ವಿಷಯದ ವಿವರಗಳಿಗೆ ದಾಟಿರಿ

Archive for

22
ಜೂನ್

ನಾಡು-ನುಡಿ ಮರುಚಿಂತನೆ : ಅಕ್ಷರಕ್ಕೂ,ಶಿಕ್ಷಣಕ್ಕೂ,ವಿದ್ಯೆಗೂ,ಜ್ಞಾನಕ್ಕೂ ಏನು ಸಂಬಂಧ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಜ್ಞಾನಸಾಧಾರಣವಾಗಿ ಪ್ರಾಚೀನ ಭಾರತೀಯ ಶಿಕ್ಷಣ ಪದ್ಧತಿಯ ಕುರಿತು ಒಂದು ಆರೋಪವನ್ನು ಪದೇ ಪದೇ ಮಾಡಲಾಗುತ್ತದೆ: ಅದೆಂದರೆ  ಬ್ರಾಹ್ಮಣರು ಶೂದ್ರರನ್ನು ಹಾಗೂ ಅಸ್ಪೃಶ್ಯರನ್ನು ಅಕ್ಷರ ಜ್ಞಾನದಿಂದ ವಂಚಿಸಿದ್ದಾರೆ. ಆಕಾರಣದಿಂದಾಗಿ ಅವರಿಗೆ ಜ್ಞಾನವನ್ನೂ, ವಿದ್ಯೆಯನ್ನೂ ನಿರಾಕರಿಸಿದ್ದರು ಅಂತ. ನಮ್ಮ ಜಾತಿ ವ್ಯವಸ್ಥೆಯಲ್ಲಿ ಶೋಷಣೆಯ ಒಂದು ಲಕ್ಷಣ ಎಂಬಂತೆ ಕೆಲವು ಹಿತಾಸಕ್ತಿ ಪೀಡಿತ ಗುಂಪುಗಳು ಈ ಸಂಗತಿಯನ್ನು ತಪ್ಪದೇ ಹೇಳುತ್ತಿರುತ್ತವೆ.

ಹೀಗೆ ಹೇಳುವವರು ಇಂದಿನ ಶಿಕ್ಷಣ ವ್ಯವಸ್ಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತಾರೆ. ಆಧುನಿಕ ಶಿಕ್ಷಣವು ಅಕ್ಷರಾಭ್ಯಾಸಕ್ಕೂ ಶಿಕ್ಷಣಕ್ಕೂ ಒಂದು ಅವಿನಾಭಾವಿಯಾದ ಸಂಬಂಧ ಕಲ್ಪಿಸುತ್ತದೆ. ಆ ಕಾರಣದಿಂದಲೇ ಸಂಪೂರ್ಣ ಸಾಕ್ಷರತೆಯ ಕಾರ್ಯಕ್ರಮವನ್ನು ನಮ್ಮ ಸರ್ಕಾರವು ಹಮ್ಮಿಕೊಂಡಿದೆ ಹಾಗೂ ವಿಶ್ವಸಂಸ್ಥೆ ಕೂಡಾ ಅಕ್ಷರವನ್ನು ಅಭಿವೃದ್ಧಿಯ ಮಾನದಂಡವನ್ನಾಗಿ ಸ್ವೀಕರಿಸಿದೆ. ವಯಸ್ಕರಿಗೆ ಕೂಡಾ ಅವರು ಸಾಯುವುದರ ಒಳಗೆ ಒಮ್ಮೆಯಾದರೂ ಅಕ್ಷರಾಭ್ಯಾಸವನ್ನು ಮಾಡಿಸುವುದು ನಿರ್ಣಾಯಕ ಎಂದು ಭಾವಿಸಲಾಗಿದೆ. ಈ ರೀತಿಯ ಶಿಕ್ಷಣ ಪದ್ಧತಿಯಲ್ಲಿ ಜ್ಞಾನವನ್ನು ಪುಸ್ತಕವನ್ನು ಓದುವ ಮೂಲಕವೇ ಪಡೆಯುವುದು ಅತ್ಯವಶ್ಯ. ಇದು ಪಾಶ್ಚಾತ್ಯ ಸಂಸ್ಕೃತಿಯ ಕ್ರಮ. ಅಲ್ಲಿ ಸತ್ಯದೇವನ ವಾಣಿಯು ಅಂತಿಮವಾದ ಸತ್ಯವಾಗಿದ್ದು ಅದು ಬರೆಹದ ಮೂಲಕವೇ ಲಭ್ಯವಿರುವುದರಿಂದ ಬರೆಹವನ್ನು ಕಲಿಯುವುದು ನಿರ್ಣಾಯಕ.

ಮತ್ತಷ್ಟು ಓದು »