ಮೂಢನಂಬಿಕೆ ನಿಷೇಧ ಕಾಯ್ದೆ ಮಂಡನೆಗೆ ಆಷಾಢಮಾಸ ಅಡ್ಡಿ!
– ಪ್ರವೀಣ್ ಕುಮಾರ್ ಮಾವಿನಕಾಡು
ಆಷಾಢಮಾಸ ಯಾವುದೇ ಶುಭ ಕಾರ್ಯಗಳಿಗೆ ಸೂಕ್ತವಲ್ಲ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ “ಮೂಢನಂಬಿಕೆ ಆಚರಣೆ ಪ್ರತಿಬಂಧಕ ವಿಧೇಯಕ”ವನ್ನು ಬರಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸದಿರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಈ ವಿಧೇಯಕವನ್ನು ಬರಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸುವ ಕುರಿತಂತೆ ಮೂಢ ನಂಬಿಕೆ ವಿರೋಧೀ ಹೋರಾಟ ಸಮಿತಿಯ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಾ ಮಾನ್ಯ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.ಇದೇ ಸಂಧರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,ತಾವು ಈಗಾಗಲೇ ನಗರದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿರುವ ಖ್ಯಾತ ಜ್ಯೋತಿಷಿಯೊಬ್ಬರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದು ಅವರೂ ಸಹ ಈ ಬಾರಿ ಅಧಿಕ ಆಷಾಢ ಬಂದಿರುವುದರಿಂದ ವಿಧೇಯಕ ಮಂಡನೆ ಬೇಡ ಎಂದು ತಮಗೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.ಅಲ್ಲದೇ ಹಾಗೊಂದು ವೇಳೆ ಆಷಾಢದಲ್ಲೇ ವಿಧೇಯಕ ಮಂಡಿಸಿದರೆ ತಮ್ಮ ಸ್ಥಾನಕ್ಕೆ ಕುತ್ತು ಬರಲಿದೆ ಮತ್ತು ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಗಳಾಗುವ ಸಂಭವವಿದೆ.ಹಾಗೇನಾದರೂ ಆದಲ್ಲಿ ತಾವು ಮುಖ್ಯಮಂತ್ರಿ ಹುದ್ದೆಗಾಗಿ ಪಕ್ಷಾಂತರ ಮಾಡಿ,ಹಲವು ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಯಿಂದ ಬೇರ್ಪಡಿಸಿ,ಇದುವರೆಗೆ ಮಾಡಿದ ರಾಜಕೀಯವೆಲ್ಲವೂ ವ್ಯರ್ಥವಾಗಲಿದೆ ಎಂದು ಎಚ್ಚರಿಸಿದ್ದಾರೆ. ಹಾಗಾಗಿ ಸಧ್ಯಕ್ಕೆ ಈ ವಿಧೇಯಕವನ್ನು ಮಂಡಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದರು.
ಮತ್ತಷ್ಟು ಓದು