ಭಾರತದ ಆಹಾರ ಕ್ಷೇತ್ರದಲ್ಲಿ ವಿದೇಶೀ ಬಹುರಾಷ್ಟ್ರೀಯ ಕಂಪನಿಗಳ ಕೈವಾಡ
– ಮಯೂರಲಕ್ಷ್ಮಿ,ಮೈಸೂರು
ಭಾರತಕ್ಕೆ ವಿಷವುಣಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ವಿದೇಶೀ ಬಹುರಾಷ್ಟ್ರೀಯ ಕಂಪನಿಗಳು ನಮ್ಮ ದೇಶಕ್ಕೆ ನೀಡುತ್ತಿರುವುದಾದರೂ ಏನನ್ನು? ಶಕ್ತಿಶಾಲಿ ರಾಷ್ಟ್ರವೆನಿಸಿ ವಿಶ್ವದ ನಾಯಕತ್ವ ಹೊಂದುವ ಸಾಮರ್ಥ್ಯವಿರುವ ಭಾರತೀಯರನ್ನು ಅತಿ ಸುಲಭವಾಗಿ ಕೇವಲ ‘ಗ್ರಾಹಕ’ರನ್ನಾಗಿಸಿ ಕೋಟಿಗಟ್ಟಲೆ ಲಾಭ ಪಡೆದು ತಮ್ಮ ದೇಶವನ್ನು ಸುಭಿಕ್ಷಗೊಳಿಸುವುದು ಮತ್ತು ಬಡರಾಷ್ಟ್ರಗಳನ್ನು ಗುರಿಯಾಗಿರಿಸಿಕೊಂಡು ವ್ಯಾಪಾರ ನಡೆಸಿ ಮೋಸಗೊಳಿಸಿವುದು!
ಸ್ವತಂತ್ರ ಪೂರ್ವದ ಭಾರತದಲ್ಲಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ, ಆದರೆ ವಿದೇಶೀ ಸಾಲವಿರಲಿಲ್ಲ, ಭಾರತದಲ್ಲಿ ಸ್ವದೇಶೀ ವಸ್ತುಗಳ ಬಳಕೆ, ಸಾವಯವ ಕೃಷಿ ಮತ್ತು ಉತ್ತಮ ಆಹಾರ ಹಾಗೂ ಮೌಲ್ಯಗಳಿಂದ ಕೂಡಿದ ಜೀವನಶೈಲಿ ನಮ್ಮದಾಗಿತ್ತು. ಆದರೆ ಕೇವಲ ವ್ಯಾಪಾರೀ ಮನೋಭಾವದಿಂದ ಕೂಡಿದ ಜಾಗತೀಕರಣ ಮತ್ತು ಉದಾರೀಕರಣ ನೀತಿಗಳನ್ನು ತನ್ನದಾಗಿಸಿಕೊಂಡ ಭಾರತಕ್ಕೆ ಲಗ್ಗೆಯಿಟ್ಟ ವಿದೇಶೀ ಕಂಪನಿಗಳು ಆಹಾರ ಮತ್ತು ಕೃಷಿ ಕ್ಷೇತ್ರಗಳಲ್ಲಿ ತಮ್ಮ ಕರಾಳ ಹಸ್ತಗಳನ್ನು ಚಾಚಿದವು. ಕೊಳ್ಳುಬಾಕ ಸಂಸ್ಕೃತಿಯನ್ನು ಹೇರುತ್ತಾ ಗ್ರಾಹಕರನ್ನು ಕೇವಲ ತಮ್ಮ ವಸ್ತುಗಳನ್ನೇ ಕೊಳ್ಳುವ ಸ್ಥಿತಿಗೆ ತಲುಪಿಸಿದವು.ಭಾರತದ ಆಹಾರ ಉದ್ಯಮದಲ್ಲಿ ತನ್ನ ಅಲ್ಪ ಬಂಡವಾಳವನ್ನು ಹೂಡಿ ವಹಿವಾಟು ನಡೆಸಿ ಲಾಭ ಪಡೆದುಕೊಳ್ಳುತ್ತಿರುವ ಎಲ್ಲಾ ವಿದೇಶೀ ಕಂಪನಿಗಳಿಂದಾಗುತ್ತಿರುವ ಪರಿಣಾಮಗಳು ಊಹಿಸಲಸಾಧ್ಯ! ಇಂದು ಹಿರಿಯರೆನಿಸಿರುವ ಅಂದಿನ ಮಕ್ಕಳಾಗಿದ್ದ, ಯುವಕರಾಗಿದ್ದ ನಮ್ಮ ದೇಶದ ಸಾಮಾನ್ಯ ನಾಗರೀಕರ ಬದುಕು ಸರಳ-ಸಜ್ಜನಿಕೆಯಿಂದ ಕೂಡಿತ್ತು…ಅರಿವೇ ಗುರು ನುಡಿ ಎನ್ನುವುದ ನಂಬಿತ್ತು.. ಎಲ್ಲಕ್ಕಿಂತಾ ಹೆಚ್ಚಾಗಿ ಆಯ್ಕೆಗಳು ಅತಿ ಕಡಿಮೆಯಿದ್ದವು.ಆರೋಗ್ಯಕರ ಆಹಾರವಲ್ಲದೇ ಯಾವುದೇ ‘ಫಾಸ್ಟ್ ಫುಡ್ಗಳು’ ನಿತ್ಯಜೀವನದ ಭಾಗವಾಗಿರಲಿಲ್ಲಾ! ಕ್ರಮೇಣ ಎಲ್ಲವೂ ಬದಲಾಗತೊಡಗಿದವು..
ಮತ್ತಷ್ಟು ಓದು